Monday, June 15, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

  • Bengaluru Focus

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

  • Bengaluru Focus

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Vidhyarthi Bhavan Play | ಸವಿ ಸವಿ ನೆನಪು ಸಾವಿರ ನೆನಪು….! ಮಸಾಲೆದೋಸೆ ಸವಿರುಚಿಯ “ವಿದ್ಯಾರ್ಥಿ ಭವನ” ದ ಕಥೆಯೀಗ ರಂಗಪ್ರಯೋಗಕ್ಕೆ

ನೂರಾರು ಅವಿಸ್ಮರಣೀಯ ಅನುಭವಗಳಿಗೆ ಜೀವವಿತ್ತ ವಿದ್ಯಾರ್ಥಿ ಭವನ ಹೋಟೆಲ್, 8 ದಶಕಗಳಲ್ಲಿ ನಾಡಿನ ಲಕ್ಷಾಂತರ ಜನರ ನೆನಪಿನಲ್ಲಿ ಮಾಸದ ಅನುಭವಗಳನ್ನು ಶಾಶ್ವತವಾಗಿ ಉಳಿಸಿದೆ.

by Bengaluru Wire Desk
April 23, 2022
in Bengaluru Focus, Public interest
Reading Time: 2 mins read
0

ಬೆಂಗಳೂರು, (www.bengaluruwire.com) : ರಾಜಧಾನಿಯ ಸಾಂಸ್ಕೃತಿಕ ಸೊಗಡು ಹೊಂದಿದ ಬಸವನಗುಡಿ ಸೆರಗಿನಲ್ಲಿರುವ ಸಾವಿರಾರು ಬೆಂಗಳೂರಿಗರ ನಾಲಿಗೆಯ ಸವಿಗೆ ದೋಸೆ ರುಚಿ ಹತ್ತಿಸಿದ ‘ವಿದ್ಯಾರ್ಥಿ ಭವನ’ ಈಗ ಹೋಟೆಲ್ ಉದ್ಯಮದಿಂದ ರಂಗಭೂಮಿ ಕ್ಷೇತ್ರಕ್ಕೂ ಹೆಜ್ಜಿ ಇರಿಸುತ್ತಿದೆ. ಇದೇ ಮೇ 6ರಿಂದ 8ನೇ ತಾರೀಖಿನವರೆಗೆ ಮಲ್ಲೇಶ್ವರದ  ಚೌಡಯ್ಯ ಸ್ಮಾರಕ ಭವನದಲ್ಲಿ ಅರ್ಜುನ್ ನಿರ್ದೇಶನ ಹಾಗೂ ರಾಜೇಂದ್ರ ಕಾರಂತ್ ರಚನೆಯ ‘ವಿದ್ಯಾರ್ಥಿ ಭವನ’ ನಾಟಕ ಪ್ರದರ್ಶನ ಕಾಣಲಿದೆ.

ವಿದ್ಯಾರ್ಥಿ ಭವನ ನಾಟಕ ಪ್ರದರ್ಶನ ಕುರಿತ ಪೋಸ್ಟರ್ ವಿದ್ಯಾರ್ಥಿ ಭವನ ಹೋಟೆಲ್ ಮುಂಭಾಗ ಅನಾವರಣವಾದ ಕ್ಷಣ

ಈ ಕುರಿತಂತೆ ವಿದ್ಯಾರ್ಥಿ ಭವನದ ವ್ಯವಸ್ಥಾಪಕ ಅರುಣ್ ಅಡಿಗ ಬೆಂಗಳೂರು ವೈರ್ ಗೆ ಮಾಹಿತಿ ನೀಡಿದ್ದು, ‘ವಿದ್ಯಾರ್ಥಿ ಭವನ’ ಹೋಟೆಲ್ ಹೇಗೆ ಬಸವನಗುಡಿಯಲ್ಲಿ ಬೆಂಗಳೂರಿನ ಒಂದು ಸಂಸ್ಕೃತಿಯ ಭಾಗವಾಗಿ ಬೆಳವಣಿಗೆ ಹೊಂದಿ, 8 ದಶಕಗಳಲ್ಲಿ ಲಕ್ಷಾಂತರ ಜನರ ಅವಿಸ್ಮರಣೀಯ ನೆನಪುಗಳಿಗೆ ಸಾಕ್ಷಿಯಾಗಿತ್ತು. ಇಂತಹ ಸವಿ ಅನುಭವಗಳಿಗೆ ಜೀವಂತ ಉದಾಹರಣೆಯಾಗಿ ಉಳಿದ ‘ವಿದ್ಯಾರ್ಥಿ ಭವನ’ ತನ್ನಲ್ಲಿ ಸ್ವಾದಿಷ್ಟ ದೋಸೆಯು ನಾಡಿನ, ದೇಶ- ವಿದೇಶದ ಮನೆ-ಮನಗಳಲ್ಲಿ ಶಾಶ್ವತ ಸ್ಥಾನ ಪಡೆದು ಬೆಳೆದು ಬಂದ ಕಥೆಯನ್ನು ‘ವಿದ್ಯಾರ್ಥಿ ಭವನ’ ನಾಟಕದಲ್ಲಿ ಅನಾವರಣಗೊಳ್ಳಲಿದೆ ಎಂದು ವಿವರಿಸಿದರು.

ಇತ್ತೀಚೆಗೆ ಸಾಮಾಜಿಕ ಜಾಲ ತಾಣದಲ್ಲಿ ಮಲ್ಲೇಶ್ವರದಲ್ಲಿ ವಿದ್ಯಾರ್ಥಿ ಭವನ ಎಂದು ಪೋಸ್ಟರ್ ಹಾಕಿದ್ದ ಬಗ್ಗೆ ಸ್ಪಷ್ಟನೆ ನೀಡಿದ ಅರುಣ್ ಅಡಿಗ, ವಿದ್ಯಾರ್ಥಿ ಭವನ ಹೋಟೆಲ್ ಗೆ ಸಾವಿರಾರು ಗ್ರಾಹಕರಿದ್ದಾರೆ ಹಾಗೂ ಅಭಿಮಾನಿಗಳು ಇದ್ದಾರೆ. ಈ ಕುರಿತಂತೆ ಜನರ ಆಸಕ್ತಿ ಕೆರಳಿಸುವ ನಿಟ್ಟಿನಲ್ಲಿ ‘ಮಲ್ಲೇಶ್ವರದಲ್ಲಿ ವಿದ್ಯಾರ್ಥಿ ಭವನ’ ಎಂದು ಪೋಸ್ಟರ್ ಪೋಸ್ಟ್ ಮಾಡಲಾಗಿತ್ತು. ವಿದ್ಯಾರ್ಥಿ ಭವನ ಹೋಟೆಲ್ ಎಂಟು ದಶಕಗಳಲ್ಲಿ ನಾಡಿನ ಜನರಿಗೆ ಗುಣಮಟ್ಟದ ಆಹಾರವನ್ನು ನೀಡುತ್ತಾ ತನ್ನ ಕಾಯಕವನ್ನು ಮುಂದುವರೆಸಿದೆ.

ಆದರೆ ವಿದ್ಯಾರ್ಥಿ ಭವನ ಹೋಟೆಲ್ ಮಲ್ಲೇಶ್ವರಕ್ಕೆ ಬರುತ್ತಿಲ್ಲ. ಬದಲಿಗೆ ಹೋಟೆಲ್ ಉದ್ಯಮದ ಜೊತೆಗೆ ರಂಗಭೂಮಿಯ ಸಾಂಸ್ಕೃತಿಕ ಚಟುವಟಿಕೆಗಳಿಗೂ ಒತ್ತು ನೀಡಲು ಹೊರಟಿದೆ. ಅದರ ಭಾಗವಾಗಿ ಬೆಂಗಳೂರು ಥಿಯೇಟರ್ ಫೌಂಡೇಶನ್ ನೊಂದಿಗೆ ಸೇರಿ ‘ವಿದ್ಯಾರ್ಥಿ ಭವನ’ ನಾಟಕವನ್ನು ಪ್ರದರ್ಶನ ನೀಡುತ್ತಿದ್ದೇವೆ.

ರಾಜ್ಯದ ಹಿರಿಯ ಕಿರಿಯ ರಾಜಕೀಯ ನಾಯಕರು, ಸಿನಿಮಾ ಕಲಾವಿದರು, ಉದ್ಯಮಿಗಳು, ಅದೆಷ್ಟೋ ಗಣ್ಯರು ವಿದ್ಯಾರ್ಥಿ ಭವನ ಹೋಟೆಲ್ ಗೆ ಬಂದು ಮಸಾಲೆ ದೋಸೆ, ಒಂದು ಲೋಟ ಕಾಫಿ ಕುಡಿದು ಇಲ್ಲಿಯ ಸವಿಗೆ ಬೆರಗಾಗಿ ಹೋಗಿದ್ದಾರೆ. ಲೆಕ್ಕವಿಲ್ಲದಷ್ಟು ಜನರ ಸ್ನೇಹ ಸಂಬಂಧ ಗಟ್ಟಿಗೊಳ್ಳಲು, ನೆನಪಿನ ಜಾತ್ರೆಯಲ್ಲೊಂದು ತನ್ನದೇ ಸ್ಥಾನ ಪಡೆದು ಕೊಳ್ಳಲು ಕಾರಣವಾದ ವಿದ್ಯಾರ್ಥಿ ಭವನ ಹೋಟೆಲ್ ಕುರಿತ ಕಥೆಯು ನಾಟಕದಲ್ಲಿ ಪ್ರದರ್ಶನಗೊಳ್ಳಲಿದೆ. ಇದನ್ನು ಮತ್ತೊಂದು ಪೋಸ್ಟ್ ನಲ್ಲಿ ಪ್ರಕಟಿಸುವ ಉದ್ದೇಶ ಹೊಂದಿದ್ದೆವು. ಆದರೆ ಅದಕ್ಕೆ ಮುಂಚೆಯೇ ಮಲ್ಲೇಶ್ವರದಲ್ಲೂ ವಿದ್ಯಾರ್ಥಿ ಭವನ ಹೋಟೆಲ್ ಬರಲಿದೆ ಎಂಬ ಸುದ್ದಿ ಹರದಾಡಿದೆ. ಇದು ಕೇವಲ ಗಾಳಿಸುದ್ದಿಯಷ್ಟೆ. ರಂಗಭೂಮಿ ಕ್ಷೇತ್ರಕ್ಕೆ ಕಾಲಿಟ್ಟು ಬೆಂಗಳೂರಿನ ಸಾಂಸ್ಕೃತಿಕ ಲೋಕಕ್ಕೆ ತನ್ನದೇ ಕೊಡುಗೆ ನೀಡಲು ನಾವು ತುದಿಗಾಲಲ್ಲಿ ನಿಂತಿದ್ದೇವೆ ಎನ್ನುತ್ತಾರೆ ಅರುಣ್ ಅಡಿಗ.

ವಿದ್ಯಾರ್ಥಿ ಭವನ ಹೋಟೆಲ್ ಮಸಾಲೆದೋಸೆ

ವಿದ್ಯಾರ್ಥಿ ಭವನ ನಾಟಕದಲ್ಲಿ ಯಾರೆಲ್ಲಾ ಕಲಾವಿದರಿದ್ದಾರೆ? ಎಲ್ಲಿ ಟೆಕೆಟ್ ಲಭ್ಯವಿದೆ ?

ನಿರ್ದೇಶಕ ಅರ್ಜುನ್ ಕಬ್ಬಿಣ, ಸಿಹಿಕಹಿ ಚಂದ್ರು, ವೀಣಾ ಸುಂದರ್ ಮತ್ತಿತರರು ‘ವಿದ್ಯಾರ್ಥಿ ಭವನ’  ನಾಟಕದಲ್ಲಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಲಿದ್ದಾರೆ. ಪ್ರವೀಣ್ ಬಿ.ವಿ, ಪ್ರದೀಪ್ ಬಿ.ವಿ. ಜಂಟಿಯಾಗಿ ರಂಗಸಂಗೀತ ನೀಡಲಿದ್ದು, ಶ್ರೀಧರಮೂರ್ತಿ ರಂಗಸಜ್ಜಿಕೆ ಹಾಗೂ ಪರಿಕರಗಳ ಜವಾಬ್ದಾರಿ ಹೊತ್ತಿದ್ದಾರೆ. ಪ್ರದೀಪ್ ಬೆಳವಾಡಿ ಬೆಳಕು ಹಾಗೂ ವಿಜಯ್ ಕುಮಾರ್ ಬೆಣಚ ಪ್ರಸಾಧನ ಕಾರ್ಯ ನಿರ್ವಹಿಸಲಿದ್ದಾರೆ. ಮೇ 6,7 ಹಾಗೂ 8ರಂದು ಈ ನಾಟಕ ಪ್ರದರ್ಶನಗೊಳ್ಳಲಿದೆ. ಮೇ 6 ಮತ್ತು 7ರಂದು ಸಂಜೆ 6ಕ್ಕೆ, ಮೇ 8ರಂದು ಬೆಳಗ್ಗೆ 11.30 ಹಾಗೂ ಸಂಜೆ 6ಕ್ಕೆ ಪ್ರದರ್ಶನವಿರಲಿದ್ದು, ಪ್ರತಿ ಟಿಕೆಟ್ ಗೆ 249 ರೂ. ದರ ನಿಗಧಿಪಡಿಸಲಾಗಿದೆ. ಬುಕ್ ಮೈ ಶೋ ನಲ್ಲಿ ಸೋಮವಾರದಿಂದ ಟಿಕೆಟ್ ಲಭ್ಯವಿರಲಿದೆ. ಗಾಂಧಿ ಬಜಾರ್ ನಲ್ಲಿರುವ ವಿದ್ಯಾರ್ಥಿ ಭವನ ಹೋಟೆಲ್ ನಲ್ಲೂ ಟೆಕೆಟ್ ಪಡೆಯಬಹುದು.

ಗಾಂಧಿ ಬಜಾರ್- ವಿದ್ಯಾರ್ಥಿ ಭವನ ಅವಿನಾಭಾವ ಸಂಬಂಧ :

ಐತಿಹಾಸಿಕ ನಗರವಾದ ಬೆಂಗಳೂರಿನ ಬಡಾವಣೆಗಳ ಅತ್ಯಂತ ಹಳೆಯ ಜನಸಂಸ್ಕೃತಿ ಬೆಳದಿದ್ದು ಇದೇ ಬಸವನಗುಡಿಯಲ್ಲಿ. ಇದರ ಹಿಂದಿನ ಹೆಸರು ಸುಂಕೇನಹಳ್ಳಿ. ದೊಡ್ಡ ಗಣೇಶ ಮತ್ತು ದೊಡ್ಡ ಬಸವಣ್ಣ ಇಲ್ಲಿನ ಮೂಲ ನಿವಾಸಿಗಳ ಮನೆ ದೇವರು. ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿ ಇಲ್ಲಿಗೆ ಬಂದಿದ್ದರು ಎಂಬ ಬಗ್ಗೆ ಐತಿಹ್ಯವಿದೆ. ಈ ಸವಿನೆನಪಿನಲ್ಲಿ ಗಾಂಧಿ ಬಜಾರ್ ಜನ್ಮ ತಾಳಿತು. ಕಾರಂಜಿ ಆಂಜನೇಯ ದೇವಸ್ಥಾನದ ಆಸುಪಾಸಿನಲ್ಲಿದ್ದ ಈ ಪ್ರದೇಶ, ಕಡಲೆಕಾಯಿ ಪರಿಷೆಯಿಂದ ಸಾಂಸ್ಕೃತಿಕ ಉಡುಗೆ ಧರಿಸಿತು. ನ್ಯಾಷನಲ್ ಹೈಸ್ಕೂಲ್, ಆಚಾರ್ಯ ಪಾಠಶಾಲೆ, ಬಿ.ಎಂ.ಎಸ್.ಕಾಲೇಜು ಮುಂತಾದ ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಸಂಪತ್ತಿನ ನಡುವೆ ವಿದ್ಯಾರ್ಥಿ ಭವನ ಕಳೆದ 79 ವರ್ಷಗಳಿಂದ ನಾಡಿನ ಜನತೆಗೆ ಶುಚಿ- ರುಚಿಯಾದ ತಿಂಡಿಯನ್ನು ನೀಡಿ ಸೇವೆ ಸಲ್ಲಿಸುತ್ತಾ ಬಂದಿದೆ.

‘ವಿದ್ಯಾರ್ಥಿ ಭವನ’  ನಾಟಕದ ಪೋಸ್ಟರ್ ನಲ್ಲೂ ಬಸವನಗುಡಿ ಚಿತ್ರಣ :

ಬೆಂಗಳೂರಿನ ಗಾಂಧಿ ಬಜಾರ್ ನಲ್ಲಿ ಜನ್ಮತೆಳೆದ ವಿದ್ಯಾರ್ಥಿ ಭವನ ಕುರಿತಂತೆ ನಾಟಕ ಪೋಸ್ಟರ್ ನಲ್ಲೂ ಕಹಳೆಬಂಡೆ ಗೋಪುರ, ಕಡಲೇಕಾಯಿ ಪರಿಷೆ, ಹೂವು- ಹಣ್ಣಿನ ವ್ಯಾಪಾರಿಗಳು, ದೊಡ್ಡ ಬಸವಣ್ಣ, ನ್ಯಾಷನಲ್ ಹೈಸ್ಕೂಲ್, ಆಚಾರ್ಯ ಪಾಠಶಾಲೆ, ಸ್ವಾಮಿ ವಿವೇಕಾನಂದರ ಮೂರ್ತಿಗಳನ್ನು ಮೂಡಿಸಲಾಗಿದೆ.

WhatsApp Join our WhatsApp Channel
Previous Post

ಬೆಂಗಳೂರಿನಲ್ಲಿ ಒಂದು ವರ್ಷದಲ್ಲಿ 438 ಕೌಟುಂಬಿಕ ದೌರ್ಜನ್ಯ ಪ್ರಕರಣಗಳಷ್ಟೇ ದಾಖಲು – ಹೆಚ್ಚಿನ ಜಾಗೃತಿ ಅಗತ್ಯ: ಜೆ.ಮಂಜುನಾಥ್

Next Post

ಕೈಚೀಲದಲ್ಲಿ ಚಿನ್ನದ ಗಟ್ಟಿ ಅಡಗಿಸಿಟ್ಟು ಕಳ್ಳಸಾಗಾಣಿಕೆ : ಕಸ್ಟಮ್ಸ್ ಅಧಿಕಾರಿಗಳಿಂದ 192 ಗ್ರಾಂ ಚಿನ್ನ ವಶ

Next Post

ಕೈಚೀಲದಲ್ಲಿ ಚಿನ್ನದ ಗಟ್ಟಿ ಅಡಗಿಸಿಟ್ಟು ಕಳ್ಳಸಾಗಾಣಿಕೆ : ಕಸ್ಟಮ್ಸ್ ಅಧಿಕಾರಿಗಳಿಂದ 192 ಗ್ರಾಂ ಚಿನ್ನ ವಶ

ತ್ರಿಮತಸ್ಥ ಬ್ರಾಹ್ಮಣ ಸ್ವಾಮೀಜಿಗಳು ಒಗ್ಗೂಡುವ ಅವಶ್ಯಕತೆಯಿದೆ : ಖ್ಯಾತ ವಾಗ್ಮಿ ಡಾ.ಕೆ.ಪಿ.ಪುತ್ತೂರಾಯ

Please login to join discussion

Like Us on Facebook

Follow Us on Twitter

Recent News

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group