Wednesday, August 5, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

  • Bengaluru Focus

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

  • Bengaluru Focus

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BESCOM Transformer Campaign | ನಿಮ್ಮ ಏರಿಯಾದಲ್ಲಿ ಟ್ರಾನ್ಸ್ ಫಾರ್ಮರ್ ಕೈಕೊಟ್ಟಿದ್ಯಾ….? ಹಾಗಾದ್ರೆ ಹೀಗೆ ಮಾಡಿ….!

ಎರಡೇ ದಿನದಲ್ಲಿ ಬೆಸ್ಕಾಂನ 535 ಶಾಖೆಗಳಲ್ಲಿ 1146 ಪರಿವರ್ತಕಗಳ ದುರಸ್ತಿ | 2021-22ನೇ ಸಾಲಿನಲ್ಲಿ 35,987 ಟಿಸಿ ವಿಫಲ | ಮೇ 15ರ ತನಕ ನಡೆಯಲಿರುವ ಟ್ರಾನ್ಸ್ ಫಾರ್ಮರ್ ನಿರ್ವಹಣೆ ಅಭಿಯಾನ

by Bengaluru Wire Desk
May 8, 2022
in Bengaluru Focus, Public interest
Reading Time: 1 min read
1
ಬೆಸ್ಕಾಂ ಸಿಬ್ಬಂದಿ ವಿದ್ಯುತ್ ಪರಿವರ್ತಕವನ್ನು ಬದಲಾಯಿಸುತ್ತಿರುವ ದೃಶ್ಯ

ಬೆಸ್ಕಾಂ ಸಿಬ್ಬಂದಿ ವಿದ್ಯುತ್ ಪರಿವರ್ತಕವನ್ನು ಬದಲಾಯಿಸುತ್ತಿರುವ ದೃಶ್ಯ

ಬೆಂಗಳೂರು, ಮೇ.8, (www.bengaluruwire.com) : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ವ್ಯಾಪ್ತಿಯಲ್ಲಿ ವಿದ್ಯುತ್ ಪರಿವರ್ತಕಗಳ (Transformers) ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಇವುಗಳ ನಿರ್ವಹಣೆ ಮತ್ತು ಹಾಳಾದ ಟಿಸಿಗಳನ್ನು ದುರಸ್ತಿಪಡಿಸುವ ಕಾರ್ಯ ಭರದಿಂದ ಸಾಗಿದೆ. ಕೇವಲ ಎರಡು ದಿನಗಳಲ್ಲಿ ಬೆಸ್ಕಾಂ ವ್ತಾಪ್ತಿಯಲ್ಲಿ 1146 ಟಿಸಿಗಳ ನಿರ್ವಹಣೆ ಆಗಿದೆ ಎಂದು ಬೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಇಂಧನ ಇಲಾಖೆ ಕೈಗೆತ್ತಿಕೊಂಡಿರುವ ಟಿಸಿ ನಿರ್ವಹಣೆ ಅಭಿಯಾನಕ್ಕೆ ಮೇ 5 ರಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ಚಾಲನೆ ನೀಡಿದ್ದು, ಟಿಸಿ ಗಳ ನಿರ್ವಹಣೆ ಕಾರ್ಯವನ್ನು ಬೆಸ್ಕಾಂ ಏಕಕಾಲದಲ್ಲಿ 8 ಜಿಲ್ಲೆಗಳಲ್ಲಿ ಆರಂಭಿಸಿದೆ. ಬೆಸ್ಕಾಂ ನಿರ್ದೇಶಕ ರಾಜೇಂದ್ರ ಚೋಳನ್ ಅವರು ಕ್ವೀನ್ಸ್ ರಸ್ತೆಯ ಕೆ.ಪಿ.ಸಿ.ಸಿ. ಕಛೇರಿ ಸಮೀಪ ಪಾದಚಾರಿ ಮಾರ್ಗದಲ್ಲಿನ ಪರಿವರ್ತಕದ ನಿರ್ವಹಣೆಗೆ ಮೇ 5 ರಂದು ಚಾಲನೆ ನೀಡಿದ್ದರು.

ಎಲ್ಲಾ ಹಿರಿಯ ಅಧಿಕಾರಿಗಳನ್ನೊಳಗೊಂಡ ತಂಡ ಆಯಾ ಶಾಖಾ ವ್ಯಾಪ್ತಿಯಲ್ಲಿನ ನಿರ್ವಹಣಾ ಸ್ಥಳಕ್ಕೆ ಭೇಟಿ ನೀಡಿ ಟಸಿ ನಿರ್ವಹಣೆ ಕಾರ್ಯದ ಮೇಲುಸ್ತುವಾರಿ ವಹಿಸಿದ್ದಾರೆ. ಬೆಸ್ಕಾಂ ನ ಎಲ್ಲ 8 ಜಿಲ್ಲೆಗಳಲ್ಲೂ ಈ ಅಭಿಯಾನಕ್ಕೆ ಅವಶ್ಯವಾಗಿರುವ ಮಾನವ ಸಂಪನ್ಮೂಲ, ಸಾಮಗ್ರಿಗಳು ಮತ್ತು ಸಲಕರಣೆಗಳನ್ನು ನೀಡಲಾಗಿದ್ದು, ಎಲ್ಲಾ ಸುರಕ್ಷತಾ ಕ್ರಮಗಳೊಂದಿಗೆ ಕಾರ್ಯನಿರ್ವಹಣೆ ಮಾಡುವಂತೆ ಸೂಚನೆಗಳನ್ನು ನೀಡಲಾಗಿದೆ.

ಟಿಸಿ ನಿರ್ವಹಣೆ ಅಭಿಯಾನದಲ್ಲಿ ಎಲ್ಲಾ ಅಧಿಕಾರಿಗಳು, ತಾಂತ್ರಿಕ ಸಿಬ್ಬಂದಿ ಮತ್ತು ಪವರ್ ಮ್ಯಾನ್ ಗಳು ಭಾಗವಹಿಸಿ ಪಾಲನಾ ಕಾರ್ಯವನ್ನು ಸಂಪೂರ್ಣವಾಗಿ ಹಾಗೂ ಸುಸೂತ್ರವಾಗಿ ನಿರ್ವಹಿಸುತ್ತಿದ್ದಾರೆ. ಬೆಸ್ಕಾಂನ 535 ಶಾಖೆಗಳಲ್ಲಿ 1146 ಪರಿವರ್ತಕಗಳ ನಿರ್ವಹಣೆಯನ್ನು ಮಾಡಿರುವ ಕುರಿತು ಬೆಸ್ಕಾಂ ತಾಂತ್ರಿಕ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಖಚಿತ ಪಡಿಸಕೊಂಡಿದ್ದಾರೆ.

ಕರ್ತವ್ಯ ನಿರತ ಬೆಸ್ಕಾಂ ಸಿಬ್ಬಂದಿ ವಿದ್ಯುತ್ ಪರಿವರ್ತಕಗಳ ದುರಸ್ತಿ ಕಾರ್ಯದಲ್ಲಿ ತೊಡಗಿರುವುದು

ಇಂಧನ ಸಚಿವರು ಸೂಚಿಸಿರುವ ಟ್ರಾನ್ಸ್ ಫಾರ್ಮರ್ ಗಳ ನಿರ್ವಹಣಾ ಅಭಿಯಾನದಿಂದ ಆಗಾಗಿ ಟಿಸಿ ಹಾಳಾಗುವ ಪ್ರಕರಣಗಳನ್ನು ಕಡಿಮೆ ಮಾಡುವುದಲ್ಲದೇ, ವಿದ್ಯುತ್ ಅವಘಡಗಳನ್ನು ಕಡಿಮೆ ಮಾಡಲು ಅನುಕೂಲವಾಗುತ್ತದೆ. ಅಲ್ಲದೆ ಬೆಸ್ಕಾಂಗೆ ಆಗುವ ಆರ್ಥಿಕ ನಷ್ಟವನ್ನು ತಪ್ಪಿಸಬಹುದಾಗಿರುತ್ತದೆ. ಇದರಿಂದಾಗಿ ಗ್ರಾಹಕರಿಗೆ ನಿರಂತರ ಹಾಗೂ ಉತ್ತಮ ಗುಣಮಟ್ಟದ ವಿದ್ಯುತ್ ನೀಡಲು ಅನುಕೂಲವಾಗುತ್ತದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಅಭಿಯಾನಕ್ಕೆ ಚಾಲನೆ ದೊರಕಿದ ದಿನದಂದು (ಮೇ.5) 542 ಟಿಸಿ ಗಳ ನಿರ್ವಹಣೆ ಆಗಿದ್ದರೆ, ಮೇ 6 ರಂದು 604 ಟಿಸಿಗಳ ನಿರ್ವಹಣೆಯನ್ನು ಪೂರ್ಣಗೊಳಿಸಲಾಗಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಬೆಸ್ಕಾಂ ಟಿಸಿ ನಿರ್ವಹಣೆ ವಿವರ ಈ ರೀತಿಯಿದೆ :

ಬೆಂಗಳೂರು ಪಶ್ಚಿಮ ವೃತ್ತ- 105, ದಕ್ಷಿಣ ವೃತ್ತ- 94, ಪೂರ್ವ ವೃತ್ತ- 96, ಉತ್ತರ ವೃತ್ತ -135, ಬಿಆರ್ ಸಿ- 69, ರಾಮನಗರ- 122, ಕೋಲಾರ- 171, ತುಮಕೂರು- 154, ದಾವಣಗೆರೆ- 200 ಟಿಸಿಗಳ ನಿರ್ವಹಣೆ ಮಾಡಲಾಗಿದೆ.

ಈ ಅಭಿಯಾನ ಮೇ 15ಕ್ಕೆ ಪೂರ್ಣಗೊಳ್ಳಲಿದೆ.  ಟಿಸಿ ನಿರ್ವಹಣೆ ಅಭಿಯಾನದಲ್ಲಿ ದುಸ್ಥಿತಿಯಲ್ಲಿರುವ ಟಿಸಿಗಳ ಸಮರ್ಪಕ ನಿರ್ವಹಣೆ, ಹೊಸ ಟಿಸಿಗಳ ಅಳವಡಿಕೆ, ಸುರಕ್ಷಿತ ಸ್ಥಳ ಗಳಿಗೆ ಟಿಸಿಗಳ ಸ್ಥಳಾಂತರ ಮಾಡಲಾಗುತ್ತದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಬೆವಿಕಂ ವ್ಯಾಪ್ತಿಗೆ ಒಳಪಡುವ ಒಟ್ಟು 535 ಶಾಖೆಗಳಲ್ಲಿ ಸಂಬಂಧಪಟ್ಟ ಶಾಖಾಧಿಕಾರಿಯು ತಮ್ಮ ಕಾರ್ಯ ವ್ಯಾಪ್ತಿಯಲ್ಲಿ ಕಂಡುಬಂದಿರುವ ಅಪಾಯಕಾರಿ ಸ್ಥಿತಿಯಲ್ಲಿರುವ, ಶಿಥಿಲಾವಸ್ಥೆಯಲ್ಲಿರುವ ಅಥವಾ ಹಾನಿಯಾಗಿರುವ ಪರಿವರ್ತಕವನ್ನು ಶಾಖಾವಾರು ದಿನಕ್ಕೆ ಕನಿಷ್ಟ ಒಂದರಂತೆ ಗುರುತಿಸಿ ನಿರ್ವಹಣೆಯನ್ನು ಕೈಗೊಳ್ಳುವಂತೆ ಸೂಚಿಸಲಾಗಿರುತ್ತದೆ.

2021-22ನೇ ಸಾಲಿನಲ್ಲಿ 35,987 ಟಿಸಿ ವಿಫಲ :

ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳಲ್ಲಿ ಪ್ರಸ್ತುತ ಒಟ್ಟು 4.55 ಲಕ್ಷ ಟ್ರಾನ್ಸ್ ಫಾರ್ಮರ್ ಗಳಿವೆ. ಅಲ್ಲದೆ ಪ್ರತಿವರ್ಷ ಸರಾಸರಿಯಾಗಿ 38,500 ಹೊಸದಾಗಿ ಸೇರ್ಪಡೆ ಮಾಡಲಾಗುತ್ತದೆ. 2021-22ನೇ ಸಾಲಿನಲ್ಲಿ ಮಾರ್ಚ್ ಅಂತ್ಯದವರೆಗೆ 35,987 ಟಿಸಿಗಳು ಹಾಳಾಗಿರುವ ಬಗ್ಗೆ ದೂರುಗಳು ದಾಖಲಾಗಿದ್ದವು. ಅಂದರೆ ಶೇ.7.9ರಷ್ಟು ದೂರುಗಳು ದಾಖಲಾಗುತ್ತಿದೆ. ನಗರ ಪ್ರದೇಶಗಳಿಗಿಂತ ಗ್ರಾಮೀಣ ಭಾಗಗಳಲ್ಲಿ ಶೇ.93ರಷ್ಟು ಟಿಸಿಗಳ ಹಾಳಾಗುತ್ತವೆ. ಬೆಸ್ಕಾಂ ವ್ಯಾಪ್ತಿಯಲ್ಲಿ ತಾಲೂಕು ಮಟ್ಟದಲ್ಲಿ ಟ್ರಾನ್ಸ್ ಫಾರ್ಮರ್ ಗಳ ದುರಸ್ತಿಗಾಗಿ 45 ಕೇಂದ್ರಗಳನ್ನು ಈ ಹಿಂದೆಯೇ ಪ್ರಾರಂಭಿಸಲಾಗಿದ್ದು, ಆ ಕೇಂದ್ರದ ಮೂಲಕ ದುರಸ್ತಿ ಮತ್ತು ನಿರ್ವಹಣೆ ಕಾರ್ಯವು ನಡೆಯುತ್ತಿದೆ.  

ಬೆಸ್ಕಾಂ ವ್ಯಾಪ್ತಿಯಲ್ಲಿ ಯಾವುದೇ ವಿದ್ಯುತ್ ಸಂಬಂಧಿ ದೂರುಗಳು, ಸಲಹೆಗಳಿದ್ದಲ್ಲಿ ಗ್ರಾಹಕರು 1912 ಸಂಖ್ಯೆಗೆ ಕರೆ ಮಾಡಬಹುದು. ಟ್ರಾನ್ಸ್ ಫಾರ್ಮರ್ ಕೈಕೊಟ್ಟಿದ್ದರೂ ಬೆಸ್ಕಾಂ ಅಧಿಕಾರಿ ಮತ್ತು ಸಿಬ್ಬಂದಿ ನಿಮ್ಮ ನೆರವಿಗೆ ಧಾವಿಸಲಿದ್ದಾರೆ.

WhatsApp Join our WhatsApp Channel
Previous Post

BBMP Budget 2022-23 Approved | ರಾಜಧಾನಿಯ ಅಭಿವೃದ್ಧಿಗೆ 10,861.78 ಕೋಟಿ ರೂ. ಬಜೆಟ್ ಗೆ ರಾಜ್ಯ ಸರ್ಕಾರ ಒಪ್ಪಿಗೆ

Next Post

KSRTC Bus Accident | ಚಾಲಕನ ನಿಯಂತ್ರಣ ತಪ್ಪಿ ಕೆಎಸ್ ಆರ್ ಟಿಸಿ ಬಸ್ ಮೆಟ್ರೊ ಪಿಲ್ಲರ್ ಗೆ ಡಿಕ್ಕಿ ; 29 ಪ್ರಯಾಣಿಕರಿಗೆ ಗಾಯ

Next Post

KSRTC Bus Accident | ಚಾಲಕನ ನಿಯಂತ್ರಣ ತಪ್ಪಿ ಕೆಎಸ್ ಆರ್ ಟಿಸಿ ಬಸ್ ಮೆಟ್ರೊ ಪಿಲ್ಲರ್ ಗೆ ಡಿಕ್ಕಿ ; 29 ಪ್ರಯಾಣಿಕರಿಗೆ ಗಾಯ

SW Railway Solar Power | ನೈರುತ್ಯ ರೈಲ್ವೆ ಸೌರಫಲಕ ಅಳವಡಿಕೆ ಮೂಲಕ 1.96 ಕೋಟಿ ರೂ. ಉಳಿತಾಯ

Please login to join discussion

Like Us on Facebook

Follow Us on Twitter

Recent News

Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

August 4, 2026

ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

August 4, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

August 4, 2026

ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

August 4, 2026

ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

August 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group