Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home BW Special

BW Special | Varthur Flyover Signature Collection Movement | ವರ್ತೂರು ಎಲಿವೇಟೆಡರ್ ಕಾರಿಡಾರ್ ನಿರ್ಮಾಣ ವಿರೋಧಿಸಿ ಸ್ಥಳೀಯರಿಂದ ಸಹಿ ಸಂಗ್ರಹ ಚಳುವಳಿ

ವರ್ತೂರು ಮುಖ್ಯರಸ್ತೆಯಲ್ಲಿ ಎಲಿವೇಟೆಡ್ ಕಾರಿಡಾರ್ ನಿರ್ಮಾಣಕ್ಕೆ ಸ್ಥಳೀಯ ವಿರೋಧ | ಫ್ಲೈಓವರ್ ನಿರ್ಮಾಣದ ಬದಲು ರಸ್ತೆ ಅಗಲೀಕರಣ ಅಥವಾ ಅಂಡರ್ ಪಾಸ್ ನಿರ್ಮಿಸಲು ಸಹಿ ಸಂಗ್ರಹ ಚಳುವಳಿ | ಆರೇಳು ವರ್ಷದ ಹಿಂದೆ ಆರಂಭವಾಗಬೇಕಿದ್ದ ಯೋಜನೆಗೆ ಗ್ರಹಣ

by Bengaluru Wire Desk
January 12, 2023
in BW Special, Public interest
Reading Time: 1 min read
0
ಎಲಿವೇಟೆಡ್ ಕಾರಿಡಾರ್ ಯೋಜನೆ ಕೈಗೊಳ್ಳಲಿರುವ ವರ್ತೂರು ಮುಖ್ಯರಸ್ತೆಯ ದೃಶ್ಯ

ಎಲಿವೇಟೆಡ್ ಕಾರಿಡಾರ್ ಯೋಜನೆ ಕೈಗೊಳ್ಳಲಿರುವ ವರ್ತೂರು ಮುಖ್ಯರಸ್ತೆಯ ದೃಶ್ಯ

ಬೆಂಗಳೂರು, ಮೇ.12 (www.bengaluruwire.com) : ವರ್ತೂರಿನ ಕೆರೆ ಕೋಡಿಯಿಂದ ವರ್ತೂರಿನ ವಿಶಾಲ್ ಮಾರ್ಟ್ ವರೆಗೆ ಸುಗಮ ವಾಹನ ಸಂಚಾರಕ್ಕೆ ಅನುಕೂಲವಾಗಲೆಂದು ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ (KRDCL) ನಿರ್ಮಿಸಲು ಹೊರಟಿರುವ ಎಲಿವೇಟೆಡ್ ಕಾರಿಡಾರ್ ಮೇಲ್ಸೇತುವೆಗೆ ವರ್ತೂರು ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿ ಸಹಿ ಸಂಗ್ರಹ ಚಳುವಳಿ ಆರಂಭಿಸಿದ್ದಾರೆ.

482 ಕೋಟಿ ರೂ. ವೆಚ್ಚದ ಈ ಯೋಜನೆ ನಿರ್ಮಾಣದಿಂದ ವರ್ತೂರಿನ ಸುಮಾರು 20 ಸಾವಿರ ಗ್ರಾಮಸ್ಥರಿಗೆ ಯಾವುದೇ ರೀತಿಯ ಪ್ರಯೋಜನವಿಲ್ಲ. ಈ ಫ್ಲೈಓವರ್ ಮಾಡುವುದರಿಂದ ವರ್ತೂರಿನ ವ್ಯಾಪಾರ ವಹಿವಾಟಿಗೂ, ಭೂಮಿಯ ಬೆಲೆಗೂ ಕುತ್ತು ಬರಲಿದೆ. ಅಲ್ಲದೆ ವರ್ತೂರಿನ ಮುಖ್ಯರಸ್ತೆಯಲ್ಲಿರುವ ಪುರಾತನ ಇತಿಹಾಸಕ್ಕೂ ಧಕ್ಕೆಯಾಗಲಿದೆ. ಇನ್ನು ವರ್ತೂರಿನ ಸುಪ್ರಸಿದ್ಧ ಶ್ರೀ ಚನ್ನರಾಯಸ್ವಾಮಿ ಜಾತ್ರೆಯ ಹೆಸರುವಾಸಿ ರಥದ ಮೆರವಣಿಗೂ ಅಡ್ಡಿಯಾಗುತ್ತದೆ. ಮುಂದೊಂದು ದಿನ ವರ್ತೂರಿನ ಜನರಿಗೆ ಮೆಟ್ರೊ ರೈಲು ಮಾರ್ಗದ ಸೌಲಭ್ಯವೂ ಸಿಗದಂತಾಗುತ್ತದೆ ಎಂದು ಸಹಿ ಸಂಗ್ರಹ ಚಳುವಳಿಯಲ್ಲಿ ತೊಡಗಿರುವ ವರ್ತೂರು ರೈಸಿಂಗ್, ವರ್ತೂರು ನಾಗರೀಕ ರಕ್ಷಣಾ ವೇದಿಕೆ, ವೈಟ್ ಫೀಲ್ಡ್ ರೈಸಿಂಗ್ ಸಂಘಟನೆ ಸೇರಿದಂತೆ ಹಲವು ನಾಗರೀಕ ಸಂಘಟನೆಗಳು ಆತಂಕ ವ್ಯಕ್ತಪಡಿಸಿವೆ.

ರಸ್ತೆ ಅಗಲೀಕರಣ ಮಾಡಿ ಅಥವಾ ಅಂಡರ್ ಪಾಸ್ ನಿರ್ಮಿಸಿ :

ವರ್ತೂರು ನಾಗರೀಕರಿಂದ ಫ್ಲೈಓವರ್ ನಿರ್ಮಾಣ ವಿರೋಧಿಸಿ ಸಹಿಸಂಗ್ರಹ ಚಳುವಳಿ

ಈ ಫ್ಲೈಓವರ್ ಕಟ್ಟುವ ಬದಲು ವರ್ತೂರು ಮುಖ್ಯ ರಸ್ತೆಯಲ್ಲಿರುವ ಕಟ್ಟಡ ಮಾಲೀಕರ ಮನವೊಲಿಸಿ ರಸ್ತೆ ಅಗಲೀಕರಣ ಮಾಡಲಿ ಅಥವಾ ವರ್ತೂರು ಹೈಸ್ಕೂಲ್ ಮುಂಭಾಗ, ವರ್ತೂರು ಪೊಲೀಸ್ ಸ್ಟೇಷನ್ ಹಾಗೂ ಬಳಗೆರೆ ರಸ್ತೆ ಸಂಪರ್ಕಿಸುವ ಜಾಗದಲ್ಲಿ ಕುಂದಲಹಳ್ಳಿ ಜಂಕ್ಷನ್ ನಲ್ಲಿ ನಿರ್ಮಿಸಿರುವಂತಹ ಅಂಡರ್ ಪಾಸ್ ರಸ್ತೆ ನಿರ್ಮಾಣ ಮಾಡಲಿ. ಆಗ ಟ್ರಾಫಿಕ್ ಸಮಸ್ಯೆ ಪರಿಹಾರವಾಗಿ, ಹಾಲಿ ಮಹದೇವಪುರ ಶಾಸಕ ಅರವಿಂದ ಲಿಂಬಾವಳಿ ಆಸಕ್ತಿವಹಿಸಿ ನಿರ್ಮಾಣ ಮಾಡಲು ಹೊರಟಿರುವ ಫ್ಲೈಓವರ್ ಅವಶ್ಯಕತೆಯಿರುವುದಿಲ್ಲ. ವರ್ತೂರು ಮುಖ್ಯರಸ್ತೆಯಲ್ಲಿ ಯಾವುದೇ ಪಕ್ಷದ ಮುಖಂಡರು ಅಥವಾ ಕಾರ್ಯಕರ್ತರು ಎಲಿವೇಟೆಡ್ ಕಾರಿಡಾರ್ ನಿರ್ಮಾಣಕ್ಕೆ ಬೆಂಬಲ ನೀಡಿದರೂ ಅವರೆಲ್ಲ ವರ್ತೂರಿನ ಭವಿಷ್ಯದ ಅಭಿವೃದ್ಧಿಯನ್ನು ವಿರೋಧಿಸುವವರು ಎಂದು ತಿಳಿಯಬೇಕಾಗುತ್ತದೆ ಎಂದು ಸಹಿಸಂಗ್ರಹ ಚಳುವಳಿಯಲ್ಲಿ ತೊಡಗಿರುವವರು ಎಚ್ಚರಿಕೆ ನೀಡಿದ್ದಾರೆ.

ವರ್ತೂರು ಮುಖ್ಯ ರಸ್ತೆಯನ್ನು ಸಂಪರ್ಕಿಸುವ ಗ್ರಾಮಗಳಾದ ಸೋರಹುಣಸೆ, ಮಧುರಾನಗರ, ವಾಲೇಪುರ, ಮುತ್ಸಂದ್ರ, ಹಾರೋಹಳ್ಳಿ, ಬಳಗೆರೆ, ಹಲಸಹಳ್ಳಿ ಹಾಗೂ ತಿಪ್ಪಸಂದ್ರ ಗ್ರಾಮಗಳ ಅಭಿವೃದ್ಧಿಗೂ ಈ ಎಲಿವೇಟೆಡ್ ಕಾರಿಡಾರ್ ನಿಂದ ತೊಂದರೆಯಾಗಲಿದೆ. ಈ ಫ್ಲೈಓವರ್ ಒಂದೊಮ್ಮೆ ನಿರ್ಮಾಣವಾದರೆ ಅದರಿಂದ ವರ್ತೂರಿನ ನಾಗರೀಕರಿಗೆ ಪ್ರಯೋಜನವಾಗದು. ಬದಲಿಗೆ ವಿಶಾಲ್ ಮಾರ್ಟ್ ಆದ ನಂತರ ಇರುವ ಅಪಾರ್ಟ್ ಮೆಂಟ್ ಗಳಿಗೆ ಮಾತ್ರ ಅನುಕೂಲಕಾರಿಯಾಗಿದೆ.ವರ್ತೂರಿನ ಜನರನ್ನು ಓಟಿಗೆ ಮಾತ್ರ ಉಪಯೋಗಿಸಿಕೊಂಡು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತೆ ಇಲ್ಲಿನ ಜನಪ್ರತಿನಿಧಿಗಳು ಈ ವಿಚಾರದಲ್ಲಿ ವರ್ತಿಸುತ್ತಿದ್ದಾರೆ ಎಂದು ಸಹಿ ಸಂಗ್ರಹ ಚಳುವಳಿಯಲ್ಲಿ ತೊಡಗಿರುವ ನಾಗರೀಕರು ದೂರಿದ್ದಾರೆ.

ಅಭಿವೃದ್ಧಿಗೆ ವರ್ತೂರು ಗ್ರಾಮಸ್ಥರ ವಿರೋಧವಿಲ್ಲ. ಆದರೆ ಅಭಿವೃದ್ಧಿ ಹೆಸರಿನಲ್ಲಿ ವರ್ತೂರು ಮುಖ್ಯರಸ್ತೆಯಲ್ಲಿ ಅನಗತ್ಯವಾದ ಎಲಿವೇಟೆಡ್ ಕಾರಿಡಾರ್ ನಿರ್ಮಿಸಿ ವರ್ತೂರನ್ನು 50 ವರ್ಷಗಳ ಹಿಂದಕ್ಕೆ ತಳ್ಳುವುದು ಬೇಡ. ಸರ್ಜಾಪುರ, ಎಲೆಕ್ಟ್ರಾನಿಕ್ ಸಿಟಿಯಿಂದ ವೈಟ್ ಫೀಲ್ಡ್, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿರುವ ಈ ವರ್ತೂರು ಮುಖ್ಯರಸ್ತೆಯನ್ನು ಅಗಲೀಕರಣ ಮಾಡಿದರೆ ಸಾಕಷ್ಟು ಸಮಸ್ಯೆಗಳು ಪರಿಹಾರವಾಗಲಿದೆ. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕಿದೆ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಒಂದು ತಿಂಗಳವರೆಗೆ ನಡೆಯಲಿದೆ ಸಹಿಸಂಗ್ರಹ ಚಳುವಳಿ :

“ಎಲಿವೇಟೆಡ್ ಕಾರಿಡಾರ್ ನಿರ್ಮಾಣದಿಂದ ವರ್ತೂರು ಸುತ್ತಮುತ್ತಲಿನ ಊರಿನವರಿಗೆ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚಾಗಿದೆ. ಈ ಕುರಿತಂತೆ ಸರ್ಕಾರಕ್ಕೆ ನಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಲು ನಾಲ್ಕು ದಿನದಿಂದ ಎಲ್ಲಾ ನಾಗರೀಕ ಸಂಘಟನೆಗಳು ಜೊತೆಗೂಡಿ ಸಾರ್ವಜನಿಕರಿಂದ ಸಹಿಸಂಗ್ರಹ ಚಳುವಳಿ ಆರಂಭಿಸಿದ್ದೇವೆ. ಒಂದು ತಿಂಗಳ ಅವಧಿಯವರೆಗೆ ಈ ಅಭಿಯಾನ ನಡೆಯಲಿದೆ. ಬಳಿಕ ಮುಖ್ಯಮಂತ್ರಿಗಳು, ಸ್ಥಳೀಯ ಶಾಸಕರು ಹಾಗೂ ಸಂಬಂಧಿಸಿದ ಇಲಾಖೆಗಳಿಗೆ ಸಂಗ್ರಹಿಸಿದ ಸಹಿಯೊಂದಿಗೆ ತಮ್ಮ ಮನವಿ ನೀಡಲಿದ್ದೇವೆ. ಜನರಿಗೆ ಅನಗತ್ಯವಾದ ಎಲಿವೇಟೆಡ್ ಕಾರಿಡಾರ್ ಅನ್ನು ಬಲವಂತವಾಗಿ ನಿರ್ಮಿಸಲು ಹೊರಟಿರುವುದು ಏಕೆ?”

– ಜಗದೀಶ್ ರೆಡ್ಡಿ, ವರ್ತೂರು ರೈಸಿಂಗ್ ಸದಸ್ಯರು
ವರ್ತೂರು ಮುಖ್ಯ ರಸ್ತೆಯಲ್ಲಿ ಫ್ಲೈಓವರ್ ಗೆ ಪರ್ಯಾಯ ಪರಿಹಾರ

ಈ ಹಿಂದೆ ಕೆಆರ್ ಡಿಸಿಎಲ್ ವರ್ತೂರು ಮುಖ್ಯ ರಸ್ತೆಯಲ್ಲಿ 187 ಕೋಟಿ ರೂ. ವೆಚ್ಚದಲ್ಲಿ 1.3 ಕಿ.ಮೀ ಉದ್ದ ಎಲಿವೇಟೆಡ್ ಕಾರಿಡಾರ್ ನಿರ್ಮಾಣಕ್ಕೆ ಟೆಂಡರ್ ಕರೆದಿತ್ತು. ಆನಂತರ ಯೋಜನೆಯಲ್ಲಿ ಬದಲಾವಣೆ ಮಾಡಿ 1.92 ಕಿ.ಮೀ ಉದ್ದದ ಎಲಿವೇಟೆಡ್ ಫ್ಲೈಓವರನ್ನು 482 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಹೊರಟಿದೆ. ಈ ಯೋಜನೆ ಅನುಷ್ಠಾನ ವಿಚಾರದಲ್ಲಿ ಸ್ಥಳೀಯ ಸಾರ್ವಜನಿಕರಿಂದ ಆಕ್ಷೇಪಣೆ, ಸಲಹೆ- ಸೂಚನೆ ಪಡೆಯದೇ ಕೇವಲ ಕೆಲವು ಪಕ್ಷಗಳ ಕಾರ್ಯಕರ್ತರು, ಮುಖಂಡರನ್ನು ಮಾತ್ರ ಸಂಪರ್ಕಿಸಿ ಯೋಜನೆ ಜಾರಿಗೆ ತರಲು ಹೊರಟಿದ್ದಾರೆ. ಫ್ಲೈಓವರ್ ನಿರ್ಮಾಣಕ್ಕೆಂದು ಮುಖ್ಯರಸ್ತೆಯಲ್ಲಿರುವ ಶೇ.30ರಷ್ಟು ಮಂದಿಗೆ ಮಾತ್ರ ರಸ್ತೆ ಅಗಲೀಕರಣಕ್ಕೆ ಆಸ್ತಿ ಬಿಟ್ಟು ಕೊಡಲು ನೋಟಿಸ್ ನೀಡಲಾಗಿದೆ. ಯೋಜನೆಯಿಂದ ಆಸ್ತಿ ಕಳೆದುಕೊಳ್ಳುವವರಿಗೆ ಪರಿಹಾರ ಮತ್ತು ಪುನರ್ವಸತಿ ಕಲ್ಪಿಸುವ ವಿಚಾರದಲ್ಲೂ ಕೆಆರ್ ಡಿಸಿಎಲ್ ಆಗಲಿ, ಜನಪ್ರತಿನಿಧಿಗಳಾಗಲಿ ಪಾರದರ್ಶಕತೆ ಕಾಯ್ದುಕೊಳ್ಳುತ್ತಿಲ್ಲ ಎಂದು ವರ್ತೂರಿನ ಜನತೆ ಅಲವತ್ತುಕೊಂಡಿದ್ದಾರೆ.

ವರ್ತೂರು ಫ್ಲೈಓವರ್ ಯೋಜನೆ ಹಾಗೂ ನಾಗರೀಕರ ಸಹಿ ಸಂಗ್ರಹ ಚಳುವಳಿ ಕುರಿತಂತೆ ಕೆಆರ್ ಡಿಸಿಎಲ್ ಮುಖ್ಯ ಎಂಜಿನಿಯರ್ ಆರ್.ಪ್ರಸಾದ್ ಹಾಗೂ ಮಹದೇವಪುರ ಶಾಸಕ ಅರವಿಂದ ಲಿಂಬಾವಳಿಯವರನ್ನು ಸಂಪರ್ಕಿಸಲು ಪ್ರಯತ್ನಿಸಿದರೂ ಪ್ರತಿಕ್ರಿಯೆಗೆ ಲಭ್ಯರಾಗಲಿಲ್ಲ.

2016-17ರಲ್ಲೇ ಆರಂಭವಾಗಬೇಕಿದ್ದ ಯೋಜನೆಗೆ ಗ್ರಹಣ :

ಕೆಆರ್ ಡಿಸಿಎಲ್ ಸಂಸ್ಥೆಯು 35 ಅಡಿಯಿಂದ 60 ಅಡಿ ಅಗಲವಿರುವ ವರ್ತೂರು ಮುಖ್ಯರಸ್ತೆಯನ್ನು 150 ಅಡಿಯಷ್ಟು ಅಗಲೀಕರಣ ಮಾಡಿ ಫ್ಲೈಓವರ್ ನಿರ್ಮಿಸುವ ಉದ್ದೇಶ ಹೊಂದಿತ್ತು. 2016-17ರಲ್ಲೇ ಆರಂಭವಾಗಬೇಕಿದ್ದ ವರ್ತೂರು ಫ್ಲೈಓವರ್ ಕಾಮಗಾರಿ ಸ್ಥಳೀಯರ ವಿರೋಧ, ಜನಪ್ರತಿನಿಧಿಗಳ ಹಸ್ತಕ್ಷೇಪ, ಯೋಜನೆಯಲ್ಲಿ ಸಾಕಷ್ಟು ಬದಲಾವಣೆಗಳ ಕಾರಣಕ್ಕೆ ಯೋಜನೆ ಅನುಷ್ಠಾನ ಮಾಡುವಲ್ಲಿ ಸೋತಿದೆ. ಇತ್ತ ಸ್ಥಳೀಯರ ಬೇಡಿಕೆಯಂತೆ ರಸ್ತೆ ಅಗಲೀಕರಣವೂ ಆಗಿಲ್ಲ. ಅತ್ತ ವರ್ತೂರು ಎಲಿವೇಟೆಡ್ ಕಾರಿಡಾರ್ ಯೋಜನೆಯು ಅಂದುಕೊಂಡಂತೆಯೂ ಸಾಗುತ್ತಿಲ್ಲ. ಇದರ ಮಧ್ಯೆ ದಿನೇ ದಿನೇ ಇಲ್ಲಿನ ಸಂಚಾರ ದಟ್ಟಣೆ ಹೆಚ್ಚುತ್ತಿದ್ದು, ವಾಹನ ಸವಾರರು ಪ್ರತಿ ನಿತ್ಯ ಪರದಾಡುವಂತಾಗಿದೆ.

WhatsApp Join our WhatsApp Channel
Previous Post

RR Nagar Zone City Rounds | ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ರಾಜರಾಜೇಶ್ವರಿ ನಗರ ವಲಯದಲ್ಲಿ ಸಿಟಿ ರೌಂಡ್ಸ್

Next Post

BDA Shivarama karanth Layout | ಡಾ.ಶಿವರಾಮ ಕಾರಂತ ಲೇಔಟ್ 480 ಅಕ್ರಮ ಕಟ್ಟಡಗಳ ಸಕ್ರಮಕ್ಕೆ ಸುಪ್ರೀಂಕೋರ್ಟ್ ಒಪ್ಪಿಗೆ

Next Post
Supreme Court

BDA Shivarama karanth Layout | ಡಾ.ಶಿವರಾಮ ಕಾರಂತ ಲೇಔಟ್ 480 ಅಕ್ರಮ ಕಟ್ಟಡಗಳ ಸಕ್ರಮಕ್ಕೆ ಸುಪ್ರೀಂಕೋರ್ಟ್ ಒಪ್ಪಿಗೆ

ದೊಡ್ಡ ಆಲದ ಮರದ ಭಾಗವೊಂದು ಮಳೆ-ಗಾಳಿಗೆ ನೆಲಕ್ಕುರುಳಿರುವುದು

Bengaluru Big Banyan Tree | 400 ವರ್ಷಗಳ ಪುರಾತನ ದೊಡ್ಡ ಆಲದ ಮರಕ್ಕೆ ಕುತ್ತು – ಮಳೆಗಾಳಿಗೆ ಮುರಿದು ಬಿತ್ತು ಬೀಳಲು ಬೇರಿನ ಸಮೂಹ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group