Thursday, June 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW SPECIAL | BDA Land Acquisition Section Corruption Part-2 | ಸರ್ವೆ ಇಲಾಖೆ ವಾಪಸ್ ಕರೆಸಿಕೊಂಡ್ರೂ ಬಿಡಿಎ ಬಿಟ್ಟು ಹೋಗದ ಸರ್ವೆಯರ್ ಗಳು ; ಕಮಾಯಿಗಾಗಿ ಬೃಹತ್ ಡಿಮ್ಯಾಂಡ್ ಅಥಾರಿಟಿಯಾಗಿದ್ಯಾ ಬಿಡಿಎ?

ಹಲವು ವರ್ಷಗಳಿಂದ ಸೀಟಿಗೆ ಫೆವಿಕಲ್ ಹಾಕಿಕೊಂಡು ಬಿಡಿಎನಲ್ಲಿ ಕೂತಿರೋರು ಯಾರು? ಯಾರು? ಬಿಡಿಎನಲ್ಲಿ ವಾಸ್ತವಾಗಿ ಮಂಜೂರಾಗಿಯಾಗಿರೋದು ಎಷ್ಟು ಹುದ್ದೆ? ಅಸಲಿಗೆ ಸರ್ವೆ ಸೂಪರ್ ವೈಸರ್ ಹುದ್ದೆ ಬಿಡಿಎನಲ್ಲಿದ್ಯಾ? ಈ ಕುರಿತಂತೆ ಕರ್ನಾಟಕ ರಾಜ್ಯಪತ್ರದಲ್ಲೇನಿದೆ? ಇಲ್ಲಿದೆ ನೋಡಿ ವಿಶೇಷ ವರದಿ.

by Bengaluru Wire Desk
January 12, 2023
in Bengaluru Focus, BW Special, Public interest
Reading Time: 2 mins read
0
ಬಿಡಿಎ ಕೇಂದ್ರ ಕಚೇರಿ ಚಿತ್ರ

ಬಿಡಿಎ ಕೇಂದ್ರ ಕಚೇರಿ ಚಿತ್ರ

ಬೆಂಗಳೂರು, ಜೂ.14 www.bengaluruwire.com : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(BDA)ದಲ್ಲಿನ ಭೂಸ್ವಾಧೀನ ವಿಭಾಗದಲ್ಲಿ ಸರ್ವೆಯರ್ ಗಳು ನಡೆಸುತ್ತಿರುವ ಅಕ್ರಮಗಳ ವಿವರವನ್ನು ಜೂ.8ರಂದು ಪ್ರಸಾರ ಮಾಡಿದ ವಿಶೇಷ ವರದಿಯಲ್ಲಿ ಬೆಂಗಳೂರು ವೈರ್ ವಿಸ್ತ್ರತವಾಗಿ ತಿಳಿಸಿತ್ತು. ಈ ಭಾಗದಲ್ಲಿ ಎಷ್ಟು ಸರ್ವೆಯರ್ ಗಳ ಹುದ್ದೆ ಬಿಡಿಎನಲ್ಲಿ ಅಸಲಿಗೆ ಮಂಜೂರಾತಿಯಾಗಿದೆ. ಎಷ್ಟು ಮಂದಿ? ಎಷ್ಟು ವರ್ಷದಿಂದ ಸೀಟಿಗೆ ಫೆವಿಕಾಲ್ ಹಾಕ್ಕೊಂಡು ಕೂತಿದ್ದಾರೆ? ಬಿಡಿಎ ನಲ್ಲಿನ ಸರ್ವೆ ಸೂಪರ್ ವೈಸರ್ ಹುದ್ದೆ ಅಧಿಕೃತವಾ? ಈ ಹುದ್ದೆಯಲ್ಲಿರುವವರು ಎಷ್ಟು ಮಂದಿ? ಅವರೆಲ್ಲಾ ಹೇಗೆ ಸಂಬಳ ಪಡೆಯುತ್ತಿದ್ದಾರೆ? ಇದೆಲ್ಲದರ ಬಗ್ಗೆ ಇಲಾಖೆಯ ಮುಖ್ಯಸ್ಥರು ಹೇಳೋದೇನು? ಇಲ್ಲಿದೆ ಸ್ಪೆಷಲ್ ರಿಪೋರ್ಟ್.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ವಾಸ್ತವವಾಗಿ 10 ಸರ್ವೇಯರ್ ಗಳ ಹುದ್ದೆ ಮಂಜೂರಾತಿಯಾಗಿದ್ದರೂ 2017 ಇಸವಿಯಿಂದ 2021ರ ಇಸವಿಯವರೆಗೆ 17 ಮಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಇನ್ನು ಸರ್ವೆ ಸೂಪರ್ ವೈಸರ್ ಗಳ ಹುದ್ದೆಗೆ ಅನುಮೋದಿತ ವೃಂದ ಮತ್ತು ನೇಮಕಾತಿ ನಿಯಮವಳಿ (C & R Rule) ಅನ್ವಯ ಮಂಜೂರಾತಿಯೇ ಇಲ್ಲದಿದ್ದರೂ ನಾಲ್ವರು ಸರ್ವೇ ಸೂಪರ್ ವೈಸರ್ ಗಳು ಹಲವು ವರ್ಷಗಳಿಂದಲೇ ಸರ್ವೆಯರ್ ಹುದ್ದೆಯ ಕೆಲಸಗಳನ್ನು ಕಾರ್ಯನಿರ್ವಹಿಸುತ್ತಿದ್ದಾರೆ. ಆ ಪೈಕಿ ಇಬ್ಬರು ಸರ್ವೆ ಸೂಪರ್ ವೈಸರ್ ಗಳು 2006 ಹಾಗೂ 2010ರಿಂದ ಬಿಡಿಎನಲ್ಲಿ ಕೆಲಸ ಮಾಡುತ್ತಿದ್ದಾರೆ. 17 ಮಂದಿ ಸರ್ವೆಯರ್ ಗಳಲ್ಲಿ 5 ಹುದ್ದೆಯಲ್ಲಿರುವವರು ತಾವು ಕಾರ್ಯನಿರ್ವಹಿಸುತ್ತಿರುವ ಹುದ್ದೆಗಿಂತ ಹಿರಿಯ ದರ್ಜೆಯಲ್ಲಿರುವವರಾಗಿದ್ದಾರೆ. ಹೀಗಾಗಿ ಅವರಿಗೆ ಮಂಜೂರಾತಿ ಹುದ್ದೆಗೆ ನಿಗಧಿಪಡಿಸಿದ ವೇತನಕ್ಕಿಂತ ಹೆಚ್ಚಿನ ಸಂಬಳ ನೀಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದು ಬಿಡಿಎ ಉನ್ನತ ಮೂಲಗಳು ತಿಳಿಸಿವೆ.

ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಭೂಮಾಪಕರು ಮತ್ತು ಸರ್ವೆ ಸೂಪರ್ ವೈಸರ್ ಗಳ ಹೆಸರು, ಪ್ರಾಧಿಕಾರದಲ್ಲಿ ಯಾವಾಗಿನಿಂದ ಕಾರ್ಯನಿರ್ವಹಿಸುತ್ತಿದ್ದಾರೆ ನೀವೇ ನೋಡಿ :

ಭೂಮಾಪನಾ ಇಲಾಖೆಯಿಂದ ಮೊದಲ ದರ್ಜೆಯ 10 ಸರ್ವೆಯರ್ ಗಳನ್ನು ನಿಯೋಜನೆ ಮೇಲೆ ಬಿಡಿಎ ಬಳಸಿಕೊಳ್ಳುವಂತೆ 12 ಮಾರ್ಚ್ 2009ರಂದು ಕರ್ನಾಟಕ ರಾಜ್ಯಪತ್ರದಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಹೀಗಿದ್ದರೂ 17 ಸರ್ವೆಯರ್ ಗಳು ಬಿಡಿಎನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಕುರಿತ ದಾಖಲೆ ಬೆಂಗಳೂರು ವೈರ್ ಗೆ ಲಭ್ಯವಾಗಿದೆ.

ಕರ್ನಾಟಕ ರಾಜ್ಯಪತ್ರದಲ್ಲಿ ಬಿಡಿಎನಲ್ಲಿ ನಿಯೋಜನೆ ಮೇಲೆ 10 ಸರ್ವೆಯರ್ ಗಳ ಹುದ್ದೆ ಮಂಜೂರಾತಿ ಕುರಿತಂತ ಪ್ರಕಟವಾಗಿರುವ ಮಾಹಿತಿ

ಮಂಜೂರಾತಿ ಹುದ್ದೆ ಇಲ್ಲದಿದ್ದರೂ ಪ್ರತಿ ತಿಂಗಳು ಬಿಡಿಎನಿಂದ 5 ಸರ್ವೆಯರ್ ಗಳು ಹಾಗೂ 4 ಸೂಪರೈವೈಸರ್ ಗಳಿಗೆ ವೇತನ ತಪ್ಪದೇ ಪಾವತಿಯಾಗುತ್ತಿದೆ. ಈ ಬಗ್ಗೆ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಆಗಲಿ, ಆಯುಕ್ತರಾದ ರಾಜೇಶ್ ಗೌಡ ಅವರಾಗಲಿ ಕ್ರಮ ಕೈಗೊಳ್ಳಲು ಮುಂದಾಗಿಲ್ಲ.

ಭೂಮಾಪನಾ ಇಲಾಖೆಯಿಂದ ಬಿಡಿಎಗೆ ನಿಯೋಜನೆಗೊಂಡ ಕೆಲವು ಸರ್ವೆಯರ್ ಗಳು ಮತ್ತು ಸರ್ವೆ ಸೂಪರ್ ವೈಸರ್ ಗಳು ಎಷ್ಟು ಪ್ರಭಾವಿಗಳೆಂದರೆ ಭೂಮಾಪನಾ ಇಲಾಖೆ ಆಯುಕ್ತರು ತಮ್ಮ ಇಲಾಖೆಗೆ ವಾಪಸ್ ಕರೆಸಿಕೊಳ್ಳಲು ಸಾಕಷ್ಟು ಆದೇಶಗಳನ್ನು ಹೊರಡಿಸಿದ್ದಾಗ್ಯೂ, ನ್ಯಾಯಾಲಯದ ಮೊರೆ ಹೋಗಿ, ಜನಪ್ರತಿನಿಧಿಗಳಿಂದ ಒತ್ತಡ ತಂದು ಅದೇ ಜಾಗದಲ್ಲಿ ಬೀಡು ಬಿಟ್ಟಿದ್ದಾರೆ. ಈ ಕಾರಣಕ್ಕೆ ಭೂಸ್ವಾಧೀನ ವಿಭಾಗದಲ್ಲಿನ ಅಕ್ರಮಗಳನ್ನು ಮಟ್ಟ ಹಾಕಲು ಈತನಕ ಸಾಧ್ಯವಾಗಿಲ್ಲ. ಇಲ್ಲಿ ನಡೆಯುವ ಅಕ್ರಮ- ಅನಾಚಾರಣಗಳು ಬುಡಸಮೇತ ಆಚೆ ಬಂದಲ್ಲಿ ಬಹುಶಃ ಬೆಂಗಳೂರಿನಲ್ಲಿ ನಡೆದ ಅತಿದೊಡ್ಡ ಭ್ರಷ್ಟಾಚಾರಗಳು ಈ ವಿಭಾಗದ ಮುಂದೆ ಏನೇನು ಅಲ್ಲ ಎಂದು ಹೇಳುತ್ತಾರೆ ಬಿಡಿಎ ಅಧಿಕಾರಿಯೊಬ್ಬರು.

ಇದನ್ನೂ ಓದಿ : BW SPECIAL | BDA Land Acquisition Section Corruption | ಬಿಡಿಎ ನಲ್ಲಿದ್ದಾರೆ ಭ್ರಷ್ಟ ಭೂಸ್ವಾ(ಹಾ)ಧೀನ ಸರ್ವೆಯರ್ ಗಳು…! ಇಲ್ಲಿ ಅಕ್ರಮಗಳು ಹೇಗೆಲ್ಲಾ ನಡೆಯುತ್ತೆ ಗೊತ್ತಾ?

ಸಾಕಷ್ಟು ಬಾರಿ ಆದೇಶಿಸಿದರೂ ಮಾತೃ ಇಲಾಖೆಗೆ ವಾಪಸ್ ಬರಲ್ಲ :

“ಭೂಮಾಪನಾ ಇಲಾಖೆಯಿಂದ ಬಿಡಿಎಗೆ ನಿಯೋಜನೆ ಮೇಲೆ ವರ್ಗಾವಣೆಯಾದ ಸರ್ವೆಯರ್ ಮತ್ತು ಸರ್ವೆ ಸೂಪರ್ ವೈಸರ್ ಗಳನ್ನು ಮತ್ತೆ ಮಾತೃ ಇಲಾಖೆಗೆ ಕರೆಸಿಕೊಳ್ಳಲು ಸಾಕಷ್ಟು ಬಾರಿ ಆದೇಶ ಮಾಡಲಾಗಿದೆ. ಆದರೆ ಬಿಡಿಎ ಅವರನ್ನು ಸೇವೆಯಿಂದ ಬಿಡುಗಡೆಗೊಳಿಸಿ ವಾಪಸ್ ನಮ್ಮ ಇಲಾಖೆಗೆ ಕಳುಹಿಸಿಕೊಡುತ್ತಿಲ್ಲ. ಇನ್ನೊಂದೆಡೆ ಕರ್ತವ್ಯಲೋಪ ಎಸಗಿದ ಸರ್ವೆಯರ್ ಗಳನ್ನು ಅಮಾನತ್ತುಗೊಳಿಸಿ ಅವರ ವಿರುದ್ಧ ಇಲಾಖೆ ವಿಚಾರಣೆ ನಡೆಸಿ, ಬೇರೆಡೆ ವರ್ಗಾವಣೆ ಮಾಡಿದರೂ ಪುನಃ ನ್ಯಾಯಾಲಯದ ಆದೇಶ ತಂದು ಬಿಡಿಎ ಭೂಸ್ವಾಧೀನ ವಿಭಾಗದಲ್ಲೇ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಡಿಎನಲ್ಲಿ ಮಂಜೂರಾತಿಗಿಂತಲೂ ಹೆಚ್ಚಿಗೆ ಸರ್ವೆಯರ್ ಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಇವರೆಲ್ಲ ಸಾಕಷ್ಟು ಪ್ರಭಾವಿಗಳು. ಹಾಗಾಗಿ ಏನೂ ಮಾಡದ ಸ್ಥಿತಿಯಲ್ಲಿದ್ದೇವೆ.”

– ಮೊನಿಷ್ ಮೌದ್ಗಿಲ್, ಆಯುಕ್ತರು, ಭೂ ಮಾಪನಾ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆ

        ದೀರ್ಘಾವಧಿಯಿಂದ ಸೇವೆ ಸಲ್ಲಿಸುತ್ತಿರುವ ಸರ್ವೆಯರ್ ಗಳ ಟ್ರಾನ್ಸ್ ಫರ್ ಆಗ್ತಾರಾ?

ಮಂಜೂರಾತಿ ಹುದ್ದೆಗಳಿಗಿಂತ ಹೆಚ್ಚು ಜನರು ಸರ್ವೆಯರ್ ಗಳಾಗಿ ಕಾರ್ಯನಿರ್ವಸುತ್ತಿರುವ ಬಗ್ಗೆ ಹಾಗೂ ಸಿಎಂಡ್ ಆರ್ ರೂಲ್ಸ್ ನಲ್ಲಿ ಮಂಜೂರಾತಿಯಿಲ್ಲದೆ ಸರ್ವೆ ಸೂಪರ್ ವೈಸರ್ ಗಳು ಬಿಡಿಎನಲ್ಲಿ ಕೆಲಸ ಮಾಡುತ್ತಿರುವ ಬಗ್ಗೆ ಬಿಡಿಎ ಆಯುಕ್ತ ರಾಜೇಶ್ ಗೌಡ ಅವರನ್ನು ಸಂಪರ್ಕಿಸಿದಾಗ ಅವರು ಹೇಳಿದ್ದು ಹೀಗೆ :

“ಬೆಂಗಳೂರು ದಿನೇ ದಿನೇ ಬೆಳವಣಿಗೆ ಹೊಂದುತ್ತಿದೆ. ಬಿಡಿಎನಲ್ಲಿ ಈಗಿರುವ ಸರ್ವೆಯರ್ ಗಳು ಯಾತಕ್ಕೂ ಸಾಲದಾಗಿದೆ. ಇನ್ನು ಹೆಚ್ಚಿನ ಸರ್ವೆಯರ್ ಗಳನ್ನು ಮಂಜೂರು ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚಿಸುತ್ತೇನೆ. ಹಲವು ವರ್ಷಗಳಿಂದ ಕಾನೂನು ಉಲ್ಲಂಘಿಸಿ ಕೆಲಸ ನಿರ್ವಹಿಸುತ್ತಿರುವ ಭೂಮಾಪಕರನ್ನು ಬದಲಾಯಿಸಿ ಬೇರೆಯವರನ್ನು ಇಲ್ಲಿಗೆ ಕರೆಯಿಸಿಕೊಳ್ಳುತ್ತೇವೆ. ಹಾಗೂ ಭೂಸ್ವಾಧೀನ ವಿಭಾಗದಲ್ಲಿ ಮಂಜೂರಾತಿಯಿಲ್ಲದೆ ಸರ್ವೆ ಸೂಪರ್ ವೈಸರ್ ಗಳು ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಭೂಸ್ವಾಧೀನ ವಿಭಾಗದ ಉಪ ಆಯುಕ್ತರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ.”

–   ರಾಜೇಶ್ ಗೌಡ, ಬಿಡಿಎ ಆಯುಕ್ತರು

ಬಿಡಿಎನಲ್ಲಿ ಸಾಮಾನ್ಯ ಜನರು, ಮುಗ್ಧ ರೈತರು- ಸ್ವತ್ತಿನ ಮಾಲೀಕರು ಸರ್ವೆ ಕೆಲಸಗಳಿಗೆಂದು ಸರ್ವೆಯರ್ ಗಳ ಬಳಿ ಸಿಲುಕಿಕೊಂಡ್ರೆ ಆ ವಿಷ ವರ್ತುಲದಿಂದ ಆಚೆ ಬರೋದು ಅಷ್ಟು ಸುಲಭವಲ್ಲ. ಒಂದೋ ಸರ್ವೆಯರ್- ಬಿಡಿಎ ಎಂಜಿನಿಯರ್ ಹಾಗೂ ಬ್ರೋಕರ್ ಗಳ ಹೇಳಿದಷ್ಟು ಲಂಚ ಕೊಡಬೇಕು. ಇಲ್ಲವಾದ್ರೆ ವರ್ಷಗಟ್ಟಲೆ ಬಿಡಿಎಗೆ ತಮ್ಮ ಸ್ವತ್ತು ಪಡೆಯಲು, ಭೂಸ್ವಾಧೀನಗೊಂಡ ಭೂಮಿಗೆ ಪರಿಹಾರ ಪಡೆಯಲು ಚಪ್ಪಲಿ ಸವೆಸೋದು ತಪ್ಪಲ್ಲ. ಹಲವು ವರ್ಷಗಳಿಂದ ಬೇರು ಬಿಟ್ಟಿರುವ ಸರ್ವೆಯರ್ ಮತ್ತು ಸರ್ವೆ ಸೂಪರ್ ವೈಸರ್ ಗಳನ್ನು ಸರ್ಕಾರ ಈ ಕೂಡಲೇ ವರ್ಗಾವಣೆ ಮಾಡಬೇಕು. ಆ ಮೂಲಕ ಭೂಸ್ವಾಧೀನ ವಿಭಾಗದಲ್ಲಿನ ಭ್ರಷ್ಟಾಚಾರವೆಂಬ ಕೊಳಕನ್ನು ತೊಡೆದು ಹಾಕಿ ಪಾರದರ್ಶಕ ಆಡಳಿತ, ಉತ್ತರದಾಯಿತ್ವಯಾಗುವ ರೀತಿ ಬದಲಾಯಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯಾವ ರೀತಿ ಕ್ರಮ ಕೈಗೊಳ್ಳುತ್ತಾರೆ ಎಂದು ಕಾಲವೇ ಉತ್ತರಿಸಬೇಕಿದೆ.

WhatsApp Join our WhatsApp Channel
Previous Post

BW Special | #Bhogeshwara Elephant | ಕಬಿನಿ ಹಿನ್ನೀರಿನಲ್ಲಿ ಅತಿ ಉದ್ದದ ದಂತವಿರುವ ದೈತ್ಯಾಕಾರದ ಇನ್ನೆರಡು ಸಲಗಗಳು ಪತ್ತೆ….!!

Next Post

Opportunities In Telecom For Agniveers | ಭವಿಷ್ಯದಲ್ಲಿ ಮೂರು ಸೇನೆಗಳ ಅಗ್ನಿವೀರರ ಸೇವೆ ಬಳಸಿಕೊಳ್ಳಲು ದೂರಸಂಪರ್ಕ ಸಚಿವಾಲಯ ಮಹತ್ವದ ಸಭೆ

Next Post
ಡ್ರಿಲ್ ಮಾಡುತ್ತಿರುವ ಸೇನಾ ಯೋಧರ ಸಾಂದರ್ಭಿಕ ಚಿತ್ರ

Opportunities In Telecom For Agniveers | ಭವಿಷ್ಯದಲ್ಲಿ ಮೂರು ಸೇನೆಗಳ ಅಗ್ನಿವೀರರ ಸೇವೆ ಬಳಸಿಕೊಳ್ಳಲು ದೂರಸಂಪರ್ಕ ಸಚಿವಾಲಯ ಮಹತ್ವದ ಸಭೆ

Karnataka ACB Raid | ರಾಜ್ಯಾದ್ಯಂತ 21 ಸರ್ಕಾರಿ ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ : ಮನೆಯ ಶೌಚಾಲಯದಲ್ಲೂ ಕಂತೆ ಕಂತೆ ಹಣ ಪತ್ತೆ

Please login to join discussion

Like Us on Facebook

Follow Us on Twitter

Recent News

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group