Saturday, May 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

  • Bengaluru Focus

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

    ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

    ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

    Vidhana Soudha

    ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

  • Bengaluru Focus

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

    ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

    ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

    Vidhana Soudha

    ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

National Film Awards | 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ – ನಟ ಸೂರ್ಯ ಹಾಗೂ ಅಜಯ್ ದೇವಗನ್ ಗೆ ಅತ್ಯುತ್ತಮ ನಟ ಪ್ರಶಸ್ತಿಗೆ ಆಯ್ಕೆ

ತಮಿಳು ಚಿತ್ರ ಸೂರರೈ ಪೊಟ್ರುಗೆ ಐದು ವಿಭಾಗಗಳಲ್ಲಿ ಪ್ರಶಸ್ತಿ | ಕನ್ನಡ ಭಾಷೆಯ ಮೂರು ಚಲನಚಿತ್ರಗಳಿಗೆ ನಾಲ್ಕು ವಿಭಾಗಗಳಲ್ಲಿ ಪ್ರಶಸ್ತಿ ಲಭಿಸಿದೆ

by Bengaluru Wire Desk
October 1, 2022
in News Wire, Public interest
Reading Time: 1 min read
0
ನಟರಾದ ಅಜಯ್ ದೇವಗನ್ ಮತ್ತು ಸೂರ್ಯ ಚಿತ್ರ (ಎಡದಿಂದ ಬಲಕ್ಕೆ)

ನಟರಾದ ಅಜಯ್ ದೇವಗನ್ ಮತ್ತು ಸೂರ್ಯ ಚಿತ್ರ (ಎಡದಿಂದ ಬಲಕ್ಕೆ)

ನವದೆಹಲಿ, ಜು.22 www.bengaluruwire.com : 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಶಸ್ತಿ ಇಂದು ಪ್ರಕಟಗೊಂಡಿದೆ. ತಮಿಳು ಚಿತ್ರ ಸೂರರೈ ಪೊಟ್ರು ಐದು ವಿಭಾಗಗಳಲ್ಲಿ ಪ್ರಶಸ್ತಿಯನ್ನು ಬಾಚಿಕೊಂಡಿದೆ. ಅತ್ಯುತ್ತಮ ಚಿತ್ರ, ಕಥಾವಸ್ತು ಹಾಗೂ ಹಿನ್ನಲೆ ಸಂಗೀತ, ಅತ್ಯುತ್ತಮ ನಟ ಹಾಗೂ ನಟಿ ಪ್ರಶಸ್ತಿಯು ಆ ಚಿತ್ರದ ಪಾಲಾಗಿದೆ.

ಅತ್ಯುತ್ತಮ ನಟಿ ಅಪರ್ಣ ಬಾಲಮುರುಳಿ
ಡಾ.ವೆಂಕಟೇಶ್ ಕುಮಾರ್ ಸಂಗೀತ ಸುಧೆಯ ಒಂದು ಝಲಕ್

ಈ ಬಾರಿ 2020ರ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯ ಅತ್ಯುತ್ತಮ ನಟ ವಿಭಾಗದಲ್ಲಿ ಇಬ್ಬರು ಸ್ಟಾರ್ ನಟರು ಪ್ರಶಸ್ತಿಯನ್ನು ಹಂಚಿಕೊಂಡಿದ್ದಾರೆ. ಸೂರರೈ ಪೊಟ್ರು ಚಿತ್ರಕ್ಕಾಗಿ ತಮಿಳು ನಟ ಸೂರ್ಯ ಹಾಗೂ ತಾನ್ಹಾಜಿ ಚಿತ್ರದ ಅಭಿನಯಕ್ಕಾಗಿ ಅಜಯ್ ದೇವಗನ್ ಅತ್ಯುತ್ತಮ ನಟ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಇನ್ನು ಸೂರರೈ ಪೊಟ್ರು ಚಿತ್ರದಲ್ಲಿನ ಅಭಿನಯಕ್ಕಾಗಿ ನಟಿ ಅಪರ್ಣ ಬಾಲಮುರಳಿಗೆ ಅತ್ಯುತ್ತಮ ನಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅತ್ಯುತ್ತಮ ಮನರಂಜನಾ ಚಿತ್ರಕ್ಕಾಗಿ ಅಜಯ್ ದೇವಗನ್ ನಿರ್ಮಾಣದ ತಾನ್ಹಾಜಿ ಚಿತ್ರವು ಪ್ರಶಸ್ತಿ ಗಿಟ್ಟಿಸಿಕೊಂಡಿದೆ.

ಕನ್ನಡ ಭಾಷೆಯ ಮೂರು ಚಲನಚಿತ್ರಗಳು ನಾಲ್ಕು ವಿಭಾಗಗಳಲ್ಲಿ ಪ್ರಶಸ್ತಿಯನ್ನು ಬಾಚಿಕೊಂಡಿದೆ. ಕನ್ನಡದ ಅತ್ಯುತ್ತಮ ಚಿತ್ರ ಹಾಗೂ ಅತ್ಯುತ್ತಮ ಧ್ವನಿಹೊಂದಿದ ಚಿತ್ರವಾಗಿ ಡೊಳ್ಳು ಚಿತ್ರ ಆಯ್ಕೆಯಾಗಿದೆ. ಅದೇ ರೀತಿ ಅತ್ಯುತ್ತಮ ಕಲೆ ಮತ್ತು ಸಂಸ್ಕೃತಿಯ ಚಿತ್ರವಾಗಿ ನಾದದ ನವನೀತ ಡಾ.ಪಿ.ಟಿ.ವೆಂಕಟೇಶ್ ಕುಮಾರ್ ಚಿತ್ರ ಪ್ರಶಸ್ತಿ ಪಡೆದುಕೊಂಡಿದೆ. ಕರ್ನಾಟಕ ವಾರ್ತಾ ಮತ್ತು ಪ್ರಸಾರ ಇಲಾಖೆ ನಿರ್ಮಾಣದ ಈ ಚಿತ್ರವನ್ನು ಗಿರೀಶ್ ಕಾಸರವಳ್ಳಿ ನಿರ್ದೇಶಿಸಿದ್ದಾರೆ. ಈ ಚಿತ್ರವು ರಜತ ಕಮಲ ಪ್ರಶಸ್ತಿಗೆ ಭಾಜನವಾಗಿದೆ. ಇನ್ನು ಅತ್ಯುತ್ತಮ ಪರಿಸರ ಸಂರಕ್ಷಣಾ ಚಿತ್ರಕ್ಕಾಗಿ ಕನ್ನಡದ ತಲೆದಂಡ ಚಿತ್ರವು ಆಯ್ಕೆಯಾಗಿದೆ. ಅತ್ಯುತ್ತಮ ತುಳುಚಿತ್ರದ ಪ್ರಶಸ್ತಿಯು ಸಂತೋಷ್ ಮಾದ ನಿರ್ದೇಶನದ ಜೀತಿಗೆ ಚಿತ್ರದ ಪಾಲಾಗಿದೆ.

2020ನೇ ಸಾಲಿನ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯ ಫಲಿತಾಂಶವನ್ನು ಘೋಷಿಸುವ ಮುನ್ನ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಅವರಿಗೆ ಪ್ರಶಸ್ತಿಗಳ ಪಟ್ಟಿಯನ್ನು 10 ಜನ ಜ್ಯೂರಿ ಸದಸ್ಯರ ನೇತೃತ್ವ ವಹಿಸಿದ್ದ ಚಿತ್ರ ನಿರ್ಮಾಣಕಾರರಾದ ವಿಪುಲ್ ಷಾ ಹಸ್ತಾಂತರಿಸಿದರು.

ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಪ್ರಶಸ್ತಿ ಪುರಸ್ಕೃತರು ಹಾಗೂ ಪ್ರಶಸ್ತಿ ಆಯ್ಕೆ ಸಮಿತಿಯ ಜ್ಯೂರಿಗಳಿಗೂ ಅಭಿನಂದನೆ ಸಲ್ಲಿಸಿದ್ದಾರೆ. ಇದೇ ವೇಳೆ 2020ನೇ ವರ್ಷವು ಕೋವಿಡ್ ಸೋಂಕಿನ ಕಾರಣದಿಂದ ಚಲನಚಿತ್ರ ಕ್ಷೇತ್ರಕ್ಕೆ ಸಾಕಷ್ಟು ತೊಂದರೆಯಾಗಿತ್ತು. ರಾಷ್ಟ್ರ ಚಲನಚಿತ್ರ ಪ್ರಶಸ್ತಿ ನಾಮನಿರ್ದೇಶನಕ್ಕೆ ಸಾಕಷ್ಟು ಅತ್ಯುತ್ತಮ ಚಿತ್ರಗಳು ಬಂದಿದ್ದವು ಎಂದು ಸಚಿವ ಠಾಕೂರ್ ಹೇಳಿದರು.

ಮದ್ಯಪ್ರದೇಶ ರಾಜ್ಯವು ಚಲಚಿತ್ರ ಸ್ನೇಹಿ ರಾಜ್ಯವಾಗಿ ಹೊರಹೊಮ್ಮಿದೆ. ಎಕೆ ಅಯ್ಯಪ್ಪನುಮ್ ಕೋಶಿಯಮ್ ಮಲೆಯಾಳಮ್ ಚಿತ್ರಕ್ಕಾಗಿ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಗೆ ಆ ಚಿತ್ರದ ನಿರ್ದೇಶಕ ಕೆ.ಆರ್.ಸಚ್ಚಿದಾನಂದನ್ ಅವರು ಪಾತ್ರರಾಗಿದ್ದಾರೆ. ಉತ್ತಮ ಸಾಮಾಜಿಕ ಕಳಕಳಿ ಹೊಂದಿದ ಚಿತ್ರಕ್ಕಾಗಿ ಬಂಗಾಳಿ ಬಾಷೆಯ ತ್ರೀ ಸಿಸ್ಟರ್ಸ್ ಹಾಗೂ ಹಿಂದಿಯ ಜಸ್ಟೀಸ್ ಡಿಲೇಯ್ಡ್ ಬಟ್ ಡಿಲಿವರ್ಡ್ ಎರಡು ಚಿತ್ರಗಳು ಜಂಟಿಯಾಗಿ ಪ್ರಶಸ್ತಿಗೆ ಭಾಜವಾಗಿವೆ.

WhatsApp Join our WhatsApp Channel
Previous Post

Namma Metro #5GNetwork | ನಮ್ಮ ಮೆಟ್ರೊ ಸ್ಟೇಷನ್ ನಲ್ಲಿ 5G Network ಯಶಸ್ವಿ ಕಾರ್ಯನಿರ್ವಹಣೆ

Next Post

BW SPECIAL | BBMP NEWS | ಬೆಂಗಳೂರಿನಲ್ಲಿ ನಾಗರೀಕರು ನಕ್ಷೆ ಉಲ್ಲಂಘಿಸಿ ಕಟ್ಟಡ ಕಟ್ಟಿದರೆ ಅಧಿಕಾರಿಗಳಿಗೂ ಕಾದಿದೆ ಶಿಕ್ಷೆ : ಬಿಬಿಎಂಪಿ ಮುಖ್ಯ ಆಯುಕ್ತರ ನೂತನ ಸುತ್ತೋಲೆಯಲ್ಲೇನಿದೆ?

Next Post
ಬೆಂಗಳೂರಿನ ಸಾಂದರ್ಭಿಕ ಚಿತ್ರ

BW SPECIAL | BBMP NEWS | ಬೆಂಗಳೂರಿನಲ್ಲಿ ನಾಗರೀಕರು ನಕ್ಷೆ ಉಲ್ಲಂಘಿಸಿ ಕಟ್ಟಡ ಕಟ್ಟಿದರೆ ಅಧಿಕಾರಿಗಳಿಗೂ ಕಾದಿದೆ ಶಿಕ್ಷೆ : ಬಿಬಿಎಂಪಿ ಮುಖ್ಯ ಆಯುಕ್ತರ ನೂತನ ಸುತ್ತೋಲೆಯಲ್ಲೇನಿದೆ?

ರಾಷ್ಟ್ರಧ್ವಜದ ಸಾಂದರ್ಭಿಕ ಚಿತ್ರ

National Flag Code Amend | ಧ್ವಜ ಸಂಹಿತೆಗೆ ತಿದ್ದುಪಡಿ : ದೇಶದ ಪ್ರತಿಯೊಬ್ಬ ನಾಗರೀಕನೂ ಹಗಲು – ರಾತ್ರಿ ರಾಷ್ಟ್ರಧ್ವಜ ಹಾರಿಸಲು ಅವಕಾಶ

Please login to join discussion

Like Us on Facebook

Follow Us on Twitter

Recent News

ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

May 2, 2026

ಬೆಂಗಳೂರಿನಲ್ಲಿ ದೇಶದ ಮೊದಲ ‘ಬಾಹ್ಯಾಕಾಶ ತಂತ್ರಜ್ಞಾನ ಶ್ರೇಷ್ಠತಾ ಕೇಂದ್ರ’ ಉದ್ಘಾಟನೆ

May 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

May 2, 2026

ಬೆಂಗಳೂರಿನಲ್ಲಿ ದೇಶದ ಮೊದಲ ‘ಬಾಹ್ಯಾಕಾಶ ತಂತ್ರಜ್ಞಾನ ಶ್ರೇಷ್ಠತಾ ಕೇಂದ್ರ’ ಉದ್ಘಾಟನೆ

May 1, 2026

ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

May 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group