Wednesday, April 29, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

#HarGharTiranga | ರಾಜ್ಯದಲ್ಲಿ 75 ಲಕ್ಷ ಮನೆಗಳ ಮೇಲೆ ತ್ರಿವರ್ಣ ಧ್ವಜಾರೋಹಣ : ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್

by Bengaluru Wire Desk
August 3, 2022
in News Wire
Reading Time: 1 min read
0

ಬೆಂಗಳೂರು, ಆ.3 www.bengaluruwire.com : ಸ್ವಾತಂತ್ರ್ಯದ ಅಮೃತೋತ್ಸವ ವರ್ಷದ ಹಿನ್ನೆಲೆಯಲ್ಲಿ ಆಗಸ್ಟ್ 13ರ ಸೂರ್ಯೋದಯದಿಂದ 15ರ ಸೂರ್ಯಾಸ್ತದ ವರೆಗೆ ರಾಜ್ಯದ ಕನಿಷ್ಠ 75 ಲಕ್ಷ ಮನೆಗಳ ಮೇಲೆ ತ್ರಿವರ್ಣ ಧ್ವಜಾರೋಹಣ ನೆರವೇರಿಸುವ ಗುರಿಯನ್ನು ಕರ್ನಾಟಕ ಬಿಜೆಪಿ ಹೊಂದಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ತಿಳಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 224 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕನಿಷ್ಠ ತಲಾ 35,000 ಮನೆಗಳಂತೆ ಅಂದರೆ 75 ಲಕ್ಷಕ್ಕೂ ಹೆಚ್ಚು ಮನೆಗಳಲ್ಲಿ ರಾಷ್ಟ್ರ ಧ್ವಜಾರೋಹಣ ನಡೆಯಲಿದೆ ಎಂದು ಹೇಳಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಡೀ ದೇಶದಲ್ಲಿ 20 ಕೋಟಿಗಿಂತ ಹೆಚ್ಚು ಮನೆಗಳಲ್ಲಿ ಧ್ವಜಾರೋಹಣ ನೆರವೇರಿಸಬೇಕು. 75ನೇ ಸ್ವಾತಂತ್ರ್ಯದ ಹಬ್ಬವನ್ನು ಸಂಭ್ರಮದಿಂದ ಪ್ರಜಾಪ್ರಭುತ್ವದ ಅತ್ಯಂತ ದೊಡ್ಡ ರಾಷ್ಟ್ರೀಯ ಹಬ್ಬವಾಗಿ ಬೃಹತ್ ಪ್ರಮಾಣದಲ್ಲಿ ಆಚರಿಸಲು ಪ್ರಧಾನಿಯವರು ಕರೆ ಕೊಟ್ಟಿದ್ದಾರೆ ಎಂದರು.

58 ಸಾವಿರಕ್ಕೂ ಹೆಚ್ಚಿನ ಬೂತ್‍ಗಳಲ್ಲಿ ಬೂತ್ ಸಮಿತಿ ಸಭೆ :
ಆಗಸ್ಟ್ 4ರಿಂದ ಮೂರು ದಿನಗಳಲ್ಲಿ ರಾಜ್ಯದ 58 ಸಾವಿರಕ್ಕೂ ಹೆಚ್ಚಿನ ಬೂತ್‍ಗಳಲ್ಲಿ ಪಕ್ಷದ ಬೂತ್ ಸಮಿತಿಗಳ ಸಭೆ, ಹಾಗೆಯೇ ಶಕ್ತಿ ಕೇಂದ್ರ, ಮಹಾಶಕ್ತಿ ಕೇಂದ್ರ, ಮಂಡಲ ಹಾಗೂ ಜಿಲ್ಲಾ ಮಟ್ಟಗಳಲ್ಲಿ ವಿವಿಧ ಮೋರ್ಚಾ-ಪ್ರಕೋಷ್ಠಗಳು, ಪಕ್ಷದ ಶಾಸಕರು ಹಾಗೂ ಸಂಸದರ ನೇತೃತ್ವದಲ್ಲಿ ಸಭೆಗಳನ್ನು ನಡೆಸಿ ಎಲ್ಲಾ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲು ಪೂರ್ವ ತಯಾರಿಯನ್ನು ಮಾಡಲಾಗುವುದು ಎಂದು ವಿವರಿಸಿದರು.

ರಾಷ್ಟ್ರಧ್ವಜದ ಸಾಂದರ್ಭಿಕ ಚಿತ್ರ

75 ತಾಲ್ಲೂಕು ಕೇಂದ್ರಗಳಲ್ಲಿ ಬೃಹತ್ ತ್ರಿವರ್ಣ ಧ್ವಜ ಯಾತ್ರೆ :
ಧ್ವಜದ ಜೊತೆ ಕೋಲನ್ನು ಹೊಂದಿಸಿಕೊಳ್ಳುವುದು, ಧ್ವಜವನ್ನು ಸರಿಯಾಗಿ ಹಾರಿಸಲು ತರಬೇತಿಯನ್ನು ಪ್ರತಿ ಮಂಡಲದಲ್ಲಿ ಏರ್ಪಡಿಸಲು ಸೂಚಿಸಲಾಗಿದೆ. ಧ್ವಜ ಗೌರವವನ್ನು ಕಾಪಾಡಲು ಎಲ್ಲ ಮಂಡಲಗಳಲ್ಲಿ ಧ್ವಜದ ಶ್ರೇಷ್ಠತೆ ಕುರಿತು ಕಾರ್ಯಕರ್ತರಿಗೆ ತಿಳಿಸಲಾಗುತ್ತಿದೆ. 75 ತಾಲ್ಲೂಕು ಕೇಂದ್ರಗಳಲ್ಲಿ ಬೃಹತ್ ತ್ರಿವರ್ಣ ಧ್ವಜ ಯಾತ್ರೆ ನೆರವೇರಲಿದ್ದು, ಸಾವಿರಾರು ಕಾರ್ಯಕರ್ತರು ಭಾಗವಹಿಸಲಿದ್ದಾರೆ. 175 ಕಡೆಗಳಲ್ಲಿ ಸೈಕಲ್ ಜಾಥಾ ಹಾಗೂ ಬೈಕ್ ಜಾಥಾವನ್ನು ಯುವ ಮೋರ್ಚಾ ವತಿಯಿಂದ ನಡೆಸಲಾಗುತ್ತದೆ.

ರೈತಮೋರ್ಚಾದಿಂದಲೂ ಎತ್ತಿನಬಂಡಿಯಲ್ಲಿ ಧ್ವಜಯಾತ್ರೆ :
ರೈತ ಮೋರ್ಚಾ ವತಿಯಿಂದ 75 ಕಡೆಗಳಲ್ಲಿ ಅಲಂಕೃತ ಎತ್ತಿನ ಬಂಡಿಯಲ್ಲಿ ತ್ರಿವರ್ಣ ಧ್ವಜಯಾತ್ರೆಯು ನಡೆಯಲಿದೆ. ಮಹಿಳಾ ಮೋರ್ಚಾ ನೇತೃತ್ವದಲ್ಲಿ 175 ಕಡೆಗಳಲ್ಲಿ ಕಿತ್ತೂರ ರಾಣಿ ಚನ್ನಮ್ಮ, ರಾಣಿ ಅಬ್ಬಕ್ಕ, ಒನಕೆ ಓಬವ್ವ ಮತ್ತಿತರರ ಭಾವಚಿತ್ರದೊಂದಿಗೆ ತ್ರಿವರ್ಣ ಧ್ವಜದ ಮಹಿಳಾ ಜಾಥಾ ಏರ್ಪಡಿಸಲಾಗುವುದು ಎಂದು ತಿಳಿಸಿದರು.

ಸ್ವಾತಂತ್ರ್ಯ ಹೋರಾಟಗಾರರ ಸಂಬಂಧಿಗಳ ಮನೆಗಳಿಗೆ ಭೇಟಿ :
ಬೆಳಗಾವಿ, ಚಿತ್ರದುರ್ಗ, ವಿದುರಾಶ್ವತ್ಥ, ಮಂಗಳೂರು, ಕಲಬುರ್ಗಿಯ ಸುರಪುರ, ಬಾಗಲಕೋಟೆ ಜಿಲ್ಲೆಯಲ್ಲಿ ಬೃಹತ್ ಕಾರ್ಯಕ್ರಮವನ್ನು ಸಂಭ್ರಮದಿಂದ ಸ್ವಾತಂತ್ರ್ಯೋತ್ಸವವನ್ನು ವಿಶಿಷ್ಟವಾಗಿ ಹಮ್ಮಿಕೊಳ್ಳಲಾಗುವುದು. ಅಲ್ಲಿ ಭಾರತೀಯ ಪರಂಪರೆಯನ್ನು ಪ್ರತಿಬಿಂಬಿಸುವ ತಮಟೆ ಮತ್ತಿತರ ವಾದ್ಯಗಳ ನಾದದೊಂದಿಗೆ ಬೃಹತ್ ತ್ರಿವರ್ಣಧ್ವಜ ಯಾತ್ರೆ ನಡೆಸಲಿದ್ದೇವೆ. ಈ ಸ್ಥಳಗಳಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಸಂಬಂಧಿಗಳ ಮನೆಗಳಿಗೆ ಭೇಟಿ ಮಾಡಲಿದ್ದೇವೆ ಎಂದು ರವಿಕುಮಾರ್ ಹೇಳಿದರು.

ಸ್ವದೇಶಿ ಖಾದಿ, ಹತ್ತಿ ಮತ್ತಿತರ ಉಡುಪುಗಳನ್ನು ಧರಿಸಿ ಎಲ್ಲ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಇದು ಸ್ವದೇಶಿ ಚಳವಳಿ, ಆರ್ಥಿಕತೆಗೆ ಬಲ ತುಂಬಲಿದೆ. ಆಗಸ್ಟ್ 10ರಿಂದ ಮೂರು ದಿನಗಳ ಕಾಲ ಪಥ ಸಂಚಲನ, ಪ್ರಭಾತ್ ಪೇರಿ, ಮ್ಯಾರಥಾನ್, ವಾಕಥಾನ್, ಸೈಕ್ಲೋಥಾನ್, ಭಾರತ್ ಮಾತಾ ಪೂಜನಾ ನಡೆಯಲಿದೆ. ನಗರ ಹಾಗೂ ಹಳ್ಳಿಗಳಲ್ಲಿನ ವೃತ್ತಗಳನ್ನು ಅಲಂಕಾರಿಸಲಾಗುತ್ತೆ. ಅಲ್ಲದೆ ಸ್ವಾತಂತ್ರ್ಯ ಹೋರಾಟಗಾರರ ಪ್ರತಿಮೆ, ಪುತ್ಥಳಿಗಳ ಸ್ವಚ್ಛತೆ ಹಾಗೂ ಮಾಲಾರ್ಪಣೆ ನಡೆಸಲಾಗುವುದು ಎಂದು ತಿಳಿಸಿದರು.

ರಾಜ್ಯ ಸರಕಾರ “ಅಮೃತ ಭಾರತಿಗೆ ಕನ್ನಡದಾರತಿ” ಅಡಿಯಲ್ಲಿ ಬಿಡುಗಡೆಗೊಳಿಸಿದ ಸ್ವಾತಂತ್ರ್ಯದ ಹೋರಾಟ ಕುರಿತ 75 ಪುಸ್ತಕಗಳನ್ನು ಶಿಕ್ಷಣ ಸಂಸ್ಥೆಗಳು, ಜನರಿಗೆ ತಲುಪಿಸಲಾಗುತ್ತದೆ. ಇಂದಿನಿಂದ‌ ಸಾಧ್ಯವಾದಷ್ಟು ಎಲ್ಲ ರೀತಿಯ ಗುಂಪುಗಳು, ಸಂಘ- ಸಂಸ್ಥೆಗಳನ್ನು ಸಂಪರ್ಕಿಸಿ ಧ್ವಜಾರೋಹಣ ನೆರವೇರಿಸಲು ಮನವಿ ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್, ರಾಜ್ಯ ಕಾರ್ಯದರ್ಶಿ ವಿನಯ್ ಬಿದರೆ ಮತ್ತು ಜಿಲ್ಲಾ ಪ್ರಭಾರಿ ವಿಕಾಸ್ ಕುಮಾರ್ ಪಿ. ಅವರು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

BBMP NEWS | ಸಾರ್ವಜನಿಕರ ಸಮಸ್ಯೆ ಪರಿಹಾರಕ್ಕೆ ವೇದಿಕೆಯಾಗುತ್ತಿದೆ “ಮುಖ್ಯ ಆಯುಕ್ತರ ನಡೆ ವಲಯದ ಕಡೆ” ಕಾರ್ಯಕ್ರಮ

Next Post

JWST Jupitar Images | ಜೇಮ್ಸ್ ವೆಬ್ ಸ್ಪೇಸ್ ದೂರದರ್ಶಕದಲ್ಲಿ ಸೆರೆಯಾಯ್ತು ಗುರುಗ್ರಹದ ಅಪರೂಪ ಚಿತ್ರಗಳು…! : ಈ ಫೊಟೊಗಳಿಂದ ಆಗುವ ಅನುಕೂಲಗಳೇನು?

Next Post

JWST Jupitar Images | ಜೇಮ್ಸ್ ವೆಬ್ ಸ್ಪೇಸ್ ದೂರದರ್ಶಕದಲ್ಲಿ ಸೆರೆಯಾಯ್ತು ಗುರುಗ್ರಹದ ಅಪರೂಪ ಚಿತ್ರಗಳು...! : ಈ ಫೊಟೊಗಳಿಂದ ಆಗುವ ಅನುಕೂಲಗಳೇನು?

ವಿಧಾನಸೌಧದ ಸಾಂದರ್ಭಿಕ ಚಿತ್ರ

#BbmpElection | ಬಿಬಿಎಂಪಿ ಚುನಾವಣೆಗೆ ಕೆಲವೇ ಹೆಜ್ಜೆ ಬಾಕಿ - ಪಾಲಿಕೆ ವಾರ್ಡ್ ಮೀಸಲಾತಿ ಪಟ್ಟಿ ಪ್ರಕಟ

Please login to join discussion

Like Us on Facebook

Follow Us on Twitter

Recent News

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group