Friday, August 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

  • Bengaluru Focus

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

  • Bengaluru Focus

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

KARNATAKA RAIN DAMAGES | ಎರಡು ಹೆಚ್ಚುವರಿ ರಾಜ್ಯ ವಿಪತ್ತು ಸ್ಪಂದನಾ ಪಡೆ ರಚನೆ : ಅಧಿಕಾರಿಗಳಿಗೆ ಸೂಚಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

by Bengaluru Wire Desk
August 6, 2022
in News Wire
Reading Time: 1 min read
0

ಬೆಂಗಳೂರು, ಆ.6 www.bengaluruwire.com :
ರಾಜ್ಯದಲ್ಲಿ ಪ್ರಕೃತಿ ವಿಕೋಪ ಸಂದರ್ಭದಲ್ಲಿ ರಕ್ಷಣಾ ಕಾರ್ಯಾಚರಣೆ ವ್ಯವಸ್ಥೆಯನ್ನು ಬಲಪಡಿಸಲು ಇನ್ನೂ ಎರಡು ರಾಜ್ಯ ವಿಪತ್ತು ಸ್ಪಂದನಾ ಪಡೆ (SDRF) ತಂಡಗಳನ್ನು ರಚಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಅವರು ಇಂದು ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಸಚಿವರು ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಈ ಸಂದರ್ಭದಲ್ಲಿ ವಿವಿಧ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ, ಭೂಕುಸಿತ, ಬೆಳೆಹಾನಿ ಮೊದಲಾದ ವಿಷಯಗಳ ಕುರಿತು ಮಾಹಿತಿ ಪಡೆದ ಮುಖ್ಯಮಂತ್ರಿಗಳು ರಾಜ್ಯದಲ್ಲಿ ಈಗಾಗಲೇ ಎನ್.ಡಿ.ಆರ್.ಎಫ್ ಹಾಗೂ ಎಸ್.ಡಿ.ಆರ್.ಎಫ್ ತಂಡಗಳನ್ನು ನಿಯೋಜಿಸಿದ್ದು, ಜಿಲ್ಲಾಧಿಕಾರಿಗಳು ಈ ತಂಡದೊಂದಿಗೆ ನಿಕಟ ಸಂಪರ್ಕ ಹೊಂದಿ, ತುರ್ತು ಸಂದರ್ಭಗಳಲ್ಲಿ ತ್ವರಿತವಾಗಿ ರಕ್ಷಣಾ ಕಾರ್ಯಾಚರಣೆ ನಡೆಸಲು ಸನ್ನದ್ಧರಾಗಿರಬೇಕು ಎಂದು ಸೂಚಿಸಿದರು.

200 ಕೋಟಿ ರೂ. ಬಿಡುಗಡೆ :
ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಪರಿಹಾರ ಕಾರ್ಯ ಕೈಗೊಳ್ಳಲು ಹಣದ ಕೊರತೆ ಇಲ್ಲ. ಇಂದು 21 ಜಿಲ್ಲೆಗಳಿಗೆ 200 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಜಿಲ್ಲಾಧಿಕಾರಿಗಳು ಜೀವಹಾನಿ, ಮನೆ ಹಾನಿ ಪ್ರಕರಣಗಳಲ್ಲಿ ತ್ವರಿತವಾಗಿ ಪರಿಹಾರ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ವಿವಿಧ ಜಿಲ್ಲೆಗಳ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸುತ್ತಿರುವ ಸಿಎಂ ಬಸವರಾಜ ಬೊಮ್ಮಾಯಿ ಚಿತ್ರ

ಅತಿವೃಷ್ಟಿಯಿಂದ ಹಾನಿಗೊಳಗಾಗಿ ಸಂಪರ್ಕ ಕಡಿತವಾಗುವ ರಸ್ತೆ, ಸೇತುವೆಗಳ ದುರಸ್ತಿಯನ್ನು ಕೂಡಲೇ ಕೈಗೊಂಡು, ಸಂಪರ್ಕ ಮರುಸ್ಥಾಪಿಸಬೇಕು. ಅಂತೆಯೇ ವಿದ್ಯುತ್ ಕಂಬಗಳು, ಟ್ರಾನ್ಸ್ಫಾರ್ಮರ್ಗಳ ಹಾನಿ ಕುರಿತೂ ಸಹ ಜಾಗೃತರಾಗಿ, ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ತ್ವರಿತವಾಗಿ ಮರುಸ್ಥಾಪಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಇದಕ್ಕಾಗಿ ಎಸ್ಕಾಂ ಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಹೆಚ್ಚುವರಿ ವಿದ್ಯುತ್ ಕಂಬಗಳು, ಟ್ರಾನ್ಸ್ ಪಾರ್ಮರ್ ಗಳ ದಾಸ್ತಾನು ಖಾತರಿಪಡಿಸಲು ಸೂಚಿಸಿದರು.

ಬೆಳೆಹಾನಿ ಜಂಟಿ ಸಮೀಕ್ಷೆಯನ್ನು ತ್ವರಿತವಾಗಿ ನಡೆಸಿ, ಬೆಳೆ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಬೇಕು. ಹಾನಿ ಸಮೀಕ್ಷೆ ವಾಸ್ತವಿಕವಾಗಿರಬೇಕು ಎಂದು ಮುಖ್ಯಮಂತ್ರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದರು.

ದಿಢೀರ್ ಪ್ರವಾಹ ಮುನ್ನೆಚ್ಚರಿಕೆ :
ಗದಗ ಜಿಲ್ಲೆಯ ಬೆಣ್ಣಿಹಳ್ಳ, ಹಾವೇರಿ ಜಿಲ್ಲೆಯ ವರದಾ ನದಿ ಮತ್ತು ಇತರ ಕೆಲವು ಪ್ರದೇಶಗಳಲ್ಲಿ ದಿಢೀರ್ ಪ್ರವಾಹ ಉಂಟಾಗುವ ಸ್ಥಳಗಳಲ್ಲಿ ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದರು.

ಅಣೆಕಟ್ಟುಗಳಿಂದ ನೀರು ಬಿಡುಗಡೆ ಮಾಡುವಾಗ ಆಣೆಕಟ್ಟುಗಳ ಕೆಳ ಭಾಗದ ಗ್ರಾಮಸ್ಥರಿಗೆ ಮುನ್ನೆಚ್ಚರಿಕೆ ನೀಡಬೇಕು. ರಾಜ್ಯದ ಹಲವಾರು ಕೆರೆಗಳು ತುಂಬಿದ್ದು, ಅಪಾಯದ ಅಂಚಿನ ಕೆರೆಗಳು ಒಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.

ಭೂಕುಸಿತ :
ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಣ್ಣಿನ ಕುಸಿತ, ಭೂಕುಸಿತದ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ, ಜನರನ್ನು ಕಡ್ಡಾಯವಾಗಿ ಸ್ಥಳಾಂತರಿಸಬೇಕು. ರಸ್ತೆಗಳ ಮೇಲೆ ಭೂಕುಸಿತ ಉಂಟಾದಲ್ಲಿ ತೆರವುಗೊಳಿಸಲು ತಂಡಗಳನ್ನು ದಿನದ 24 ಗಂಟೆಯೂ ಸನ್ನದ್ಧವಾಗಿರಿಸಬೇಕು. ಕಾಳಜಿ ಕೇಂದ್ರಗಳಲ್ಲಿ ಸಂತ್ರಸ್ತರಿಗೆ ಉತ್ತಮ ಆಹಾರ ಒದಗಿಸಬೇಕು. ಕಾಳಜಿ ಕೇಂದ್ರಕ್ಕೆ ಬರದ ನಿರಾಶ್ರಿತರಿಗೆ ಡ್ರೈ ರೇಷನ್ ಕಿಟ್ ಒದಗಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಸಭೆಯಲ್ಲಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಡಾ.ಸಿ.ಎನ್. ಅಶ್ವತ್ಥನಾರಾಯಣ, ನಾರಾಯಣಗೌಡ, ಗೋಪಾಲಯ್ಯ, ಬಿ.ಎ. ಬಸವರಾಜ, ಆರಗ ಜ್ಞಾನೇಂದ್ರ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ರಾಜ್ಯದ ಪ್ರವಾಹ ಪರಿಸ್ಥಿತಿ ಕುರಿತ ಸಭೆಯ ಮುಖ್ಯಾಂಶಗಳು: ಹಾನಿಯ ಪ್ರಮಾಣ (ಜೂನ್ 1 ರಿಂದ ಆಗಸ್ಟ್ 6ರ ವರೆಗೆ)

  1. ಮಾನವ ಜೀವ ಹಾನಿ 70
  2. ಜಾನುವಾರು ಜೀವಹಾನಿ 507
  3. ಸಂಪೂರ್ಣ ಹಾನಿಯಾಗಿರುವ ಮನೆಗಳು 3559
  4. ಭಾಗಶ: ಹಾನಿಯಾಗಿರುವ ಮನೆಗಳು 17212
  5. ಕೃಷಿ ಬೆಳೆ ಹಾನಿ 129087 ಹೆಕ್ಟೇರ್
  6. ತೋಟಗಾರಿಕಾ ಬೆಳೆ ಹಾನಿ 7942 ಹೆಕ್ಟೇರ್
  7. ರಸ್ತೆ 3162 ಕಿ.ಮೀ
  8. ಗ್ರಾಮೀಣ ರಸ್ತೆ 8445 ಕಿ.ಮೀ
  9. ಸೇತುವೆ ಮತ್ತು ಕಲ್ವರ್ಟ್ 1068
  10. ಶಾಲೆಗಳು- 4531
  11. ಅಂಗನವಾಡಿಗಳು 222
  12. ಹಾಳಾಗಿರುವ ವಿದ್ಯುತ್ ಕಂಬಗಳ ಸಂಖ್ಯೆ 16760
  13. ಟ್ಯಾನ್ಸ್ ಫಾರ್ಮರ್ ಗಳು 1469
  14. ಹಾನಿಯಾಗಿರುವ ವೈಯರ್ 409 ಕಿ.ಮೀ
  15. ಹಾನಿಯಾಗಿರುವ ಸಣ್ಣ ನೀರಾವರಿ ಕೆರೆಗಳು 93

ರಕ್ಷಣೆ ಮತ್ತು ಪರಿಹಾರ ಕಾರ್ಯಗಳಿಗೆ ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಬಳಿ ಆಗಸ್ಟ್ 2 ರ ಮಾಹಿತಿಯಂತೆ ಒಟ್ಟು 657 ಕೋಟಿ ರೂ. ಲಭ್ಯವಿತ್ತು. ಇಂದು ರಾಜ್ಯ ಸರ್ಕಾರ 21 ಜಿಲ್ಲೆಗಳಿಗೆ ಒಟ್ಟು 200 ಕೋಟಿ ರೂ. ಬಿಡುಗಡೆ ಮಾಡಿದೆ.

WhatsApp Join our WhatsApp Channel
Previous Post

ಮಾಧ್ಯಮಗಳಿಗೆ ಸಾಮಾಜಿಕ ಹೊಣೆಗಾರಿಕೆ ಮುಖ್ಯ: ಪ್ರೊ.ಸಿ.ಎನ್.ರಾಮಚಂದ್ರನ್ ಅಭಿಮತ

Next Post

ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ : ಜಪಾನ್ ರಾಷ್ಟ್ರದ ಉದ್ಯಮಗಳಿಗೆ ಕರ್ನಾಟಕ ಆಹ್ವಾನ

Next Post

ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ : ಜಪಾನ್ ರಾಷ್ಟ್ರದ ಉದ್ಯಮಗಳಿಗೆ ಕರ್ನಾಟಕ ಆಹ್ವಾನ

ಬಿಡಿಎ ಹಳೆಯ ಬಡಾವಣೆಯಲ್ಲಿ ಮೂಲಸೌಕರ್ಯ ಕುರಿತಂತೆ ಪರಿಶೀಲನೆ ನಡೆಸುತ್ತಿರುವ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಹಾಗೂ ಶಾಸಕ ಎಂ.ಕೃಷ್ಣಪ್ಪ, ಬಿಡಿಎ ಅಧಿಕಾರಿಗಳು ಜೊತೆಯಲ್ಲಿದ್ದಾರೆ.

BDA NEWS | ಬೆಂಗಳೂರಿನಲ್ಲಿ ಅಭಿವೃದ್ಧಿ ಕಾಣದ ಈ ಬಿಡಿಎ ಲೇಔಟ್ ಗಳಿಗೆ ಶುಕ್ರದೆಶೆ...! ; ಸದ್ಯದಲ್ಲೇ ಬಿಡಿಎ ಹಳೆಯ ಬಡಾವಣೆಗಳು ಬಿಬಿಎಂಪಿಗೆ ಹಸ್ತಾಂತರ

Please login to join discussion

Like Us on Facebook

Follow Us on Twitter

Recent News

BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

August 7, 2026

ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

August 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

August 7, 2026

ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

August 7, 2026

BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

August 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group