Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW EXCLUSIVE | ಬಿಬಿಎಂಪಿ ಗುತ್ತಿಗೆದಾರರಿಂದ ಹೊಸ ಬಾಂಬ್ ಸಿಡಿತ : ಪಾಲಿಕೆಯಲ್ಲಿ ಕಾಮಗಾರಿ ಕಡತ ವಿಲೇವಾರಿಗೆ 50 ಪರ್ಸೆಂಟ್ ಕಮಿಷನ್….! ಪತ್ರದಲ್ಲಿ ಬಯಲಾಯ್ತು ಸಂಗತಿ

ಪರ್ಸಂಟೇಜ್ ಕಮಿಷನ್ ಕುರಿತಂತೆ ಹಾಗೂ ಗುತ್ತಿಗೆದಾರರಿಗೆ ಆಗುತ್ತಿರುವ ಕಿರುಕುಳ ಕುರಿತಂತೆ ಬೆಂಗಳೂರು ಮಹಾನಗರ ಪಾಲಿಕೆ ಕಾರ್ಯನಿರತ ಗುತ್ತಿಗೆದಾರರ ಸಂಘ ಮುಖ್ಯ ಆಯುಕ್ತರಿಗೆ ಬರೆದ ಪತ್ರದಲ್ಲೇನಿದೆ? ಇಲ್ಲಿದೆ Exclusive Report

by Bengaluru Wire Desk
August 25, 2022
in Bengaluru Focus, BW Special, Public interest
Reading Time: 2 mins read
1
ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

ಬೆಂಗಳೂರು, ಆ.23 www.bengaluruwire.com : ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ 40 ಪರ್ಸೆಂಟ್ ಕಮಿಷನ್ ಸರ್ಕಾರ ಎಂದು ವಿರೋಧ ಪಕ್ಷದವರು, ರಾಜ್ಯ ಸರ್ಕಾರದ ಗುತ್ತಿಗೆದಾರರು ಆರೋಪಿಸ್ತಿದ್ರು. ಆದ್ರೆ ರಾಜ್ಯ ಮಟ್ಟಕ್ಕಿಂತ ಸ್ಥಳೀಯ ಆಡಳಿತ ಸಂಸ್ಥೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಯಲ್ಲೂ ಕಮಿಷನ್ ಪರ್ಸಂಟೇಜ್ 40ರಿಂದ 50 ಪರ್ಸೆಂಟೇಜ್ ಗೆ ಏರಿಕೆಯಾಗಿದೆಯಂತೆ.

ಅಲ್ಲಿಗೆ ರಾಜ್ಯ ಸರ್ಕಾರದ ಕಾಮಗಾರಿಗಿಂತ ಸ್ಥಳೀಯಾಡಳಿತ ಬಿಬಿಎಂಪಿಯಲ್ಲೇ ಕಾಮಗಾರಿ ಪಡೆಯಲು ಹಾಗೂ ಅದನ್ನು ಮುಗಿಸಿ ಪುನಃ ಹಣ ಪಡೆಯುವ ತನಕ ಶೇ.40 ರಿಂದ 50ರಷ್ಟು ಪರ್ಸಂಟೇಜ್ ಕಮಿಷನ್ ವೆಚ್ಚವಾಗುತ್ತಿದೆ ಎಂದು ಬಿಬಿಎಂಪಿಯ ಗುತ್ತಿಗೆದಾರರು ಆರೋಪಿಸಿದ್ದಾರೆ. ಒಂದು ಕಡೆ ಪರ್ಸೆಂಟೇಜ್ ಜಾಸ್ತಿ ಮತ್ತೊಂದು ಕಡೆ ಬಿಬಿಎಂಪಿಗೆ ಬರುವ ಹೊಸ ಅಧಿಕಾರಿಗಳು ದಿನಕ್ಕೊಂದು ಕಾನೂನು ಜಾರಿಗೆ ತಂದು ಕಾಮಗಾರಿ ಫೈಲ್ ದಾಟುವ ಹಂತಗಳು ಹಿಂದೆ 17 ರಿಂದ 18 ಹಂತಗಳಿದ್ದಿದ್ದು, ಗುತ್ತಿಗೆದಾರರಿಗೆ ಹಣ ಪಾವತಿಗೆ ಮುನ್ನ ಮುಖ್ಯ ಲೆಕ್ಕಾಧಿಕಾರಿಗಳ ಬಿಲ್ ರಿಜಿಸ್ಟರ್ (CBR) ತನಕ 38 ರಿಂದ 39 ಟೇಬಲ್ ಗಳನ್ನು ಈಗ ದಾಟಬೇಕಾಗಿದೆ ಎಂದು ದೂರಿದ್ದಾರೆ.

ಈ ಕುರಿತಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾರ್ಯನಿರತ ಗುತ್ತಿಗೆದಾರರ ಸಂಘ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಮನವಿ ಪತ್ರವನ್ನು ಮಂಗಳವಾರ ನೀಡಿದ್ದು, ಗುತ್ತಿಗೆದಾರರು ಕಾಮಗಾರಿ ಪಡೆಯಲು ಹಾಗೂ ಬಿಲ್ ಪಡೆದುಕೊಳ್ಳಲು ಹೊಸ ಹೊಸ ನಿಯಮಗಳನ್ನು ಮಾಡಿ ಹೆಚ್ಚುವರಿಯಾಗಿ ಕಚೇರಿಗಳನ್ನು ಸೇರ್ಪಡೆ ಮಾಡುತ್ತಿರುವುದರಿಂದ ಟೇಬಲ್ ಗಳ ಸಂಖ್ಯೆ ಹೆಚ್ಚಾಗಿದೆ. ಇದರಿಂದ ಗುತ್ತಿಗೆದಾರರ ಆರೋಪದಂತೆ 40 ಪರ್ಸೆಂಟ್ ಕಮಿಷನ್ 50 ಪರ್ಸೆಂಟ್ ಗೆ ಏರಿದೆ. ಹಾಗಾಗಿ ಆ ಕಡತಗಳನ್ನು ಮಂಡಿಸುವ ಕಚೇರಿಗಳ ಸಂಖ್ಯೆಯನ್ನು ಕಡಿಮೆ ಮಾಡಬೇಕು ಎಂದು ಪಾಲಿಕೆ ಗುತ್ತಿಗೆದಾರರು ಬೆಂಗಳೂರು ದಕ್ಷಿಣ ವಲಯ ಕಚೇರಿಯಲ್ಲಿ ಪ್ರಗತಿ ಪರಿಶೀಲನೆಯಲ್ಲಿ ತೊಡಗಿದ್ದ ಮುಖ್ಯ ಆಯುಕ್ತರನ್ನು ಭೇಟಿ ಮಾಡಿ ಈ ಮನವಿ ಸಲ್ಲಿಸಿದೆ.

ಬಿಬಿಎಂಪಿ ದಕ್ಷಿಣ ವಲಯ ಕಚೇರಿಯಲ್ಲಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರನ್ನು ಪಾಲಿಕೆ ಕಾರ್ಯನಿರತ ತ್ತಿಗೆದಾರರ ಸಂಘದ ನಿಯೋಗ ಮಂಗಳವಾರ ಭೇಟಿಯಾಗಿ ಮನವಿ ಸಲ್ಲಿಸಿತು.

‘ಬಿಬಿಎಂಪಿ ವ್ಯಾಪ್ತಿಯಲ್ಲಿ ಗುತ್ತಿಗೆದಾರರು ನಿರ್ವಹಿಸಿದ ಬಿಬಿಎಂಪಿ ಅನುದಾನದ ಕಾಮಗಾರಿಗಳಿಗೆ ಅಕ್ಟೋಬರ್ 2020ರಿಂದ 3,000 ಕೋಟಿ ರೂ. ಬಿಲ್ ಪಾವತಿ ಬಾಕಿ ಉಳಿದಿದೆ. ಅದೇ ರೀತಿ ಮುಖ್ಯಮಂತ್ರಿಗಳ ನಗರೋತ್ಥಾನ, ನವನಗರೋತ್ಥಾನ ಅನುದಾನ ಕಾಮಗಳ 500 ರಿಂದ 600 ಕೋಟಿ ರೂ. ಬಿಲ್ ಇದೇ ಏಪ್ರಿಲ್ 2022ರಿಂದ ಬಾಕಿಯಿದೆ. ಹೊಸ ಹೊಸ ಕಮಿಷನರ್ ಗಳು ಬಂದಾಗ ಬೇರೆ ಬೇರೆ ನಿಯಮಗಳನ್ನು ಮಾಡಿ, ಹೊಸ ಹೊಸ ಕಚೇರಿಗಳಿಗೆ ಕಡತ ಪರಿಶೀಲಿಸಲು ಆದೇಶ ಹೊರಡಿಸಿದ ಮೇಲಿಂದ ಗುತ್ತಿಗೆದಾರರಿಗೆ ಕಿರುಕುಳ ಹೆಚ್ಚಾಗುತ್ತಿದೆ’ ಎಂದು ಬಿಬಿಎಂಪಿ ಕಾರ್ಯನಿರತ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆ.ಟಿ.ಮಂಜುನಾಥ್ ಬೆಂಗಳೂರು ವೈರ್ ಬಳಿ ತಮ್ಮ ಅಳಲು ತೋಡಿಕೊಂಡಿದ್ದಾರೆ.

‘ಹೊಸ ಹೊಸ ಆದೇಶಗಳಿಂದಾಗಿ ಪ್ರತಿ ಕಚೇರಿಯಲ್ಲೂ ಕಡತಗಳನ್ನು ಸಿದ್ದಪಡಿಸಿ ಮಂಡಿಸುವುದಕ್ಕೆ ಕಮಿಷನ್ ಹೆಚ್ಚುತ್ತಾ ಹೋಗಿ ಮುಖ್ಯಮಂತ್ರಿಗಳ ನಗರೋತ್ಥಾನ, ನವನಗರೋತ್ಥಾನದಂತಹ ಪ್ಯಾಕೇಜ್ ಕಾಮಗಾರಿಗಳ ಕಡತ ವಿಲೇವಾರಿಯಾಗಲು ಒಟ್ಟಾರೆ ಶೇ. 40ರಿಂದ 50ರಷ್ಟು ಪರ್ಸೆಂಟೇಜ್ ನಲ್ಲಿ ಕಮಿಷನ್ ಒಂದೊಂದು ಕಾಮಗಾರಿಗೆ ನೀಡುವಂತಾಗಿದೆ. ಮೊದಲಿಗಿಂತ ಈಗ ಪರ್ಸಂಟೇಜ್ ಜಾಸ್ತಿಯಾಗಿದೆ. ಬಿಬಿಎಂಪಿಯ ಅನುದಾನ ಕಾಮಗಾರಿಗಳ ಪರ್ಸಂಟೇಜ್ 25ರಿಂದ 30ರಷ್ಟು ಕಮಿಷನ್ ನೀಡಬೇಕಿದೆ. ಒಂದು ಕಡತ ವಿಲೇವಾರಿಯಾಗಲು 38 ರಿಂದ 39 ಹಂತಗಳನ್ನು ದಾಟಿ ಬರಬೇಕಿದೆ. ಇದನ್ನು ಕಡಿಮೆ ಮಾಡಬೇಕು ಎಂದು ಮುಖ್ಯ ಆಯುಕ್ತರಿಗೆ ಮಂಗಳವಾರ ಗುತ್ತಿಗೆದಾರರ ಸಂಘ ಮನವಿ ಸಲ್ಲಿಸಿದೆ. ‘ ಎಂದು ಕೆ.ಟಿ.ಮಂಜುನಾಥ್ ವಿವರಿಸಿದ್ದಾರೆ.

ಬೇಡಿಕೆ ಈಡೇರದಿದ್ದರೆ ಕಾಮಗಾರಿ ಸ್ಧಗಿತಗೊಳಿಸಿ ಪ್ರತಿಭಟನೆ :

‘ಇದಕ್ಕೆ ಮುಖ್ಯ ಆಯುಕ್ತರು ಎಲ್ಲಾ ವಲಯದ ಆಯುಕ್ತರು, ಜಂಟಿ ಆಯುಕ್ತರು, ಮುಖ್ಯ ಎಂಜಿನಿಯರ್, ಕಾರ್ಯನಿರ್ವಾಹಕ ಎಂಜಿನಿಯರ್ ಸೇರಿದಂತೆ ಎಲ್ಲಾ ಹಂತದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಒಂದೊಮ್ಮೆ ತಮ್ಮ ಬೇಡಿಕೆ ಈಡೇರಿಸದಿದ್ದಲ್ಲಿ ಎಲ್ಲಾ ಕಾಮಗಾರಿಗಳನ್ನು ಸ್ಥಗಿತಗೊಳಿಸಿ, ಬೀದಿಗಿಳಿದು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದೇವೆ’ ಎಂದು ಅವರು ಹೇಳಿದ್ದಾರೆ.

ಗುತ್ತಿಗೆದಾರರ ಸಂಘ ಮುಖ್ಯ ಆಯುಕ್ತರಿಗೆ ಬರೆದ ಪತ್ರದಲ್ಲೇನಿದೆ ?

“ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಮ್ಮ ಗುತ್ತಿಗೆದಾರರು ಈಗಾಗಲೇ ಬಾಕಿಯಿರುವ 22 ತಿಂಗಳುಗಳ ಬಿಲ್ ಪಾವತಿಯಾಗದೆ ಸಂಗಷ್ಟದಲ್ಲಿ ಸಿಲುಕಿದ್ದಾರೆ. ಆದರೂ ತಾವುಗಳು ಹೊಸ- ಹೊಸ ಆದೇಶಗಳನ್ನು ಹೊರಡಿಸಿರುವುದು ಗುತ್ತಿಗೆದಾರರ ಆರೋಪದಂತೆ 40 ಪರ್ಸೆಂಟೇಜ್ ಕಮಿಷನ್ ನಿಂದ 50 ಪರ್ಸೆಂಟ್ ಕಮಿಷನ್ ಹಂತಕ್ಕೆ ತಲುಪಿರುತ್ತದೆ. ಪ್ರತಿ ಕಚೇರಿಯಲ್ಲೂ ಕಡತಗಳನ್ನು ಸಿದ್ದಪಡಿಸಿ ಮಂಡಿಸುವುದಕ್ಕೆ ಕಮಿಷನ್ ಹೆಚ್ಚುತ್ತಾ ಹೋಗುತ್ತಿದೆ. ಅದಾಗ್ಯೂ ತಾವುಗಳು ಹೊಸ ಹೊಸ ಕಚೇರಿಗಳಿಗೆ ಕಡತಗಳನ್ನು ಪರಿಶೀಲಿಸಲು ಮಂಡಿಸಲು ಆದೇಶಿರುತ್ತೀರಿ.”

“ಪ್ರತಿ ಹಂತದಲ್ಲೂ ಸಹಾಯಕ ಅಭಿಯಂತರರು (AE), ಸಹಾಯಕ ಕಾರ್ಯಪಾಲಕ ಅಭಿಯಂತರರು (AEE), ಕಾರ್ಯಪಾಲಕ ಅಭಿಯಂತರರು (EE), ಮುಖ್ಯ ಅಭಿಯಂತರರು (CE) ಹಾಗೂ ಸಂಬಂಧಪಟ್ಟ ಜನಪ್ರತಿನಿಧಿಗಳು ಕಾಮಗಾರಿಗಳನ್ನು ವೀಕ್ಷಿಸಿ ದೃಢೀಕರಿಸುತ್ತಾರೆ. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕಾಮಗಾರಿಗಳನ್ನು ಪರಿವೀಕ್ಷಿಸಿ ಮತ್ತು ಕಡತಗಳನ್ನು ಪರಿಶೀಲಿಸಿ ಅನುಮೋದಿಸಿದ್ದರೂ ಕೂಡ ಹೆಚ್ಚುವರಿಯಾಗಿ ಬೇರೆ – ಬೇರೆ ಕಚೇರಿಯ ಅಧಿಕಾರಿಗಳಿಂದ ಕಾಮಗಾರಿ ಪರಿವೀಕ್ಷಿಸಲು ಮತ್ತು ಕಡತವನ್ನು ಪರಿಶೀಲಿಸಲು ಆದೇಶಿಸುತ್ತಿರುವುದರಿಂದ ಗುತ್ತಿಗೆದಾರರಿಗೆ ಕಿರುಕುಳ ಹೆಚ್ಚಾಗುತ್ತಿದೆ.”

“ಪಾಲಿಕೆಯ ಮುಖ್ಯ ಆಯುಕ್ತರ ತಾಂತ್ರಿಕ ಜಾಗೃತ ಕೋಶ (TVCC) ವಿಭಾಗದಲ್ಲಿ ಮತ್ತು ಗುಣನಿಯಂತ್ರಣ ವಿಭಾಗದಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ಕೊರತೆಯಿಂದ ಇಡೀ ಬಿಬಿಎಂಪಿಯ ಇಲಾಖೆಗಳ ಕಾಮಗಾರಿಗಳನ್ನು ಪರಿಶೀಲಿಸುವುದು ತಿಂಗಳಾನುಗಟ್ಟಲೆ ಸಮಯ ಬೇಕಾಗುತ್ತದೆ. ಹೀಗಾಗಿ ಗುತ್ತಿಗೆದಾರರಿಗ ಸಕಾಲದಲ್ಲಿ ಬಿ.ಆರ್. (ಬಿಲ್ ರಿಜಿಸ್ಟರ್) ನಮೂದಿಸಲು ತೊಂದರೆಯಾಗುತ್ತದೆ. ಆದ್ದರಿಂದ ತಾವುಗಳು ಈ ಕೂಡಲೇ ಕಡತಗಳನ್ನು ಮಂಡಿಸುವ ಕಚೇರಿಗಳ ಸಂಖ್ಯೆ (TABLES) ಕಡಿಮೆ ಮಾಡಲು ಕೋರಿಕೊಳ್ಳುತ್ತಿದ್ದೇವೆ.”

“ಆದ್ದರಿಂದ ಮೊದಲಿನಂತೆ ಟಿ.ವಿ.ಸಿ.ಸಿ ವಿಭಾಗದವರು ಕಡತವನ್ನು ಪರಿಶೀಲಿಸಿ, ಬಿ.ಆರ್.ನಮೂದಿಸಲು ಎಲ್ಲಾ ಗುತ್ತಿಗೆದಾರರಿಗೆ ಅನುವು ಮಾಡಿಕೊಡಬೇಕು ಎಂದು ಈ ಮೂಲಕ ತಮ್ಮಲ್ಲಿ ಮನವಿ ಮಾಡಿಕೊಳ್ಳುತ್ತಿದ್ದೇವೆ. ತಾವುಗಳು ನಮ್ಮ ಮನವಿಯನ್ನು ಪರಿಗಣಿಸಿ ಹೆಚ್ಚುತ್ತಿರುವ ಕಚೇರಿಯ ಟೇಬಲ್ ಗಳನ್ನು ಕಡಿತಗೊಳಿಸುತ್ತೀರೆಂದು ನಂಬಿರುತ್ತೇವೆ. ಇಲ್ಲದಿದ್ದ ಪಕ್ಷದಲ್ಲಿ ಎಲ್ಲಾ ಕಾಮಗಾರಿಗಳನ್ನು ಸ್ಧಗಿತಗೊಳಿಸಿ ಬೀದಿಗಿಳಿದು ಪ್ರತಿಭಟಿಸುವುದಾಗಿ ಎಲ್ಲಾ ಗುತ್ತಿಗೆದಾರರು ನಿರ್ಧರಿಸಿರುತ್ತಾರೆ.” ಹೀಗಂತ ಸಂಕ್ಷಿಪ್ತವಾಗಿ ತಮ್ಮ ಮನವಿ ಪತ್ರದಲ್ಲಿ ಬಿಬಿಎಂಪಿ ಕಾರ್ಯನಿರತ ಗುತ್ತಿಗೆದಾರರ ಸಂಘ ತಿಳಿಸಿದೆ.

ಪಾಲಿಕೆ ಕಂಪ್ಯೂಟರ್ ಆಪರೇಟರ್ ಗಳಿಗೂ “ಫೀಸ್” – ಸಂಬಳಕ್ಕಿಂತ ಗಿಂಬಳವೇ ಜಾಸ್ತಿ…!

ವಿವಿಧ ಕಚೇರಿಗಳಲ್ಲಿ ಕಡತ ಸಿದ್ಧಪಡಿಸುವ ಅಧಿಕಾರಿ, ಸಿಬ್ಬಂದಿ ಜೊತೆ ಹೊರ ಗುತ್ತಿಗೆಯಲ್ಲಿ ಕಾರ್ಯನಿರ್ವಹಿಸುವ ಕಂಪ್ಯೂಟರ್ ಆಪರೇಪಟರ್ ಗಳು “ಫೀಸ್” ತೆಗೆದುಕೊಳ್ಳದೇ ಫೈಲ್ ಕ್ಲಿಯರ್ ಮಾಡುವುದಿಲ್ಲ. ಅವರಿಗೆ ತಿಂಗಳಿಗೆ 12 ರಿಂದ 15 ಸಾವಿರ ಬರುವ ಸಂಬಂಳಕ್ಕಿಂತ ನಾಲ್ಕೈದು ಪಟ್ಟು ಹಣ ಮಾಡುತ್ತಿದ್ದಾರೆ ಎಂದು ಗುತ್ತಿಗೆದಾರರೊಬ್ಬರು ವಾಸ್ತವ ಬಿಚ್ಚಿಟ್ಟಿದ್ದಾರೆ.

ಸದ್ಯ ಈಗಾಗಲೇ ಪಾಲಿಕೆ ಟೆಂಡರ್ ಪಡೆದುಕೊಂಡ ಖಾಸಗಿ ಯೋಜನೆ ನಿರ್ವಹಣಾ ಸಲಹೆಗಾರರಿಂದ (Project Management Consultant) ಗುತ್ತಿಗೆದಾರರು ನಿರ್ವಹಿಸಿದ ಕಾಮಗಾರಿ ಗುಣಮಟ್ಟ, ಕಾಮಗಾರಿ ಅಳತೆ ಸೇರಿದಂತೆ ಎಲ್ಲಾ ಹಂತಗಳ ಪರಿಶೀಲನೆ ನೆಡೆಸಿ ಪಾಲಿಕೆಗೆ ವರದಿ ಸಿದ್ಧಪಡಿಸಿ ದೃಢೀಕರಿಸುತ್ತದೆ. ಆದರೆ ಮತ್ತೆ ಹೊಸದಾಗಿ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಗುಣಮಟ್ಟ ನಿಯಂತ್ರಣ ವಿಭಾಗದಿಂದಲೂ ವರದಿ ಪಡೆಯಬೇಕು ಎಂದು ಹೊಸ ಆದೇಶ ಮಾಡಲಾಗಿದೆ.

ಇನ್ನೊಂದೆಡೆ ಕಾಮಗಾರಿ ಬಿಲ್ ಸಲ್ಲಿಕೆಯಾದ ನಂತರ ವಿವಿಧ ಕಾಮಗಾರಿಗಳ ಶೇ.10ರಷ್ಟು ಕಾಮಗಾರಿಗಳನ್ನು ಪುನಃ ಪರಿಶೀಲನೆ ನಡೆಸಲಾಗುತ್ತಿದೆ. ಈ ರೀತಿ ಮಾಡಿದರೆ ಗುತ್ತಿಗೆದಾರರ ಕಥೆ ಏನಾಗಬೇಡ. ಶೇ.40 ರಿಂದ 50ರಷ್ಟು ಕಮಿಷನ್ ಹಣವನ್ನು ಕೊಟ್ಟು ಗುಣಮಟ್ಟ ನಿರೀಕ್ಷೆ ಮಾಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಮುಖ್ಯ ಆಯುಕ್ತರನ್ನು ಭೇಟಿ ಮಾಡಿದಾಗ ಗುತ್ತಿಗೆದಾರರೊಬ್ಬರು ಹೀಗೆ ಪ್ರಶ್ನೆ ಮಾಡಿದ್ದಾರೆಂದು ಮೂಲಗಳು ತಿಳಿಸಿವೆ.

ಒಟ್ಟಾರೆ ಬಿಬಿಎಂಪಿಗೆ ಮುಖ್ಯ ಆಯುಕ್ತರಾಗಿ ನಿಯೋಜನೆಗೊಂಡ ನಂತರ ಬಿಬಿಎಂಪಿ ಆಡಳಿತ ಸುಗಮಗೊಳಿಸುವ ವಿಚಾರದಲ್ಲಿ ಹಾಗೂ ಸಾರ್ವಜನಿಕರಿಗೆ ಗುಣಮಟ್ಟದ ನಾಗರೀಕ ಸೌಲಭ್ಯ ಕಲ್ಪಿಸುವಲ್ಲಿ ಸಾಕಷ್ಟು ಸುಧಾರಣಾ ಕ್ರಮ ಕೈಗೊಂಡಿರುವ ತುಷಾರ್ ಗಿರಿನಾಥ್ ಅವರು, ಈ ವಿಚಾರದಲ್ಲಿ ಯಾವ ಕ್ರಮ ಕೈಗೊಳ್ಳುತ್ತಾರೆ ಎಂಬುದು ಸಾಕಷ್ಟು ಕುತೂಹಲ ಮೂಡಿಸಿದೆ.

WhatsApp Join our WhatsApp Channel
Previous Post

#CMBSBommai | ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೂಳಿಮಠ ಇನ್ನಿಲ್ಲ

Next Post

BBMP NEWS | ನಗರದಲ್ಲಿ ಪರಿಸರಸ್ನೇಹಿ ಗಣಪ ಪ್ರತಿಷ್ಠಾಪನೆಗೆ ಅವಕಾಶ ; ಪಿಒಪಿ ಗಣೇಶ ಕೂರಿಸುವಂತಿಲ್ಲ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

Next Post
ಗಣೇಶ ಮೂರ್ತಿಯ ಸಾಂದರ್ಭಿಕ ಚಿತ್ರ (ಸಂಗ್ರಹ)

BBMP NEWS | ನಗರದಲ್ಲಿ ಪರಿಸರಸ್ನೇಹಿ ಗಣಪ ಪ್ರತಿಷ್ಠಾಪನೆಗೆ ಅವಕಾಶ ; ಪಿಒಪಿ ಗಣೇಶ ಕೂರಿಸುವಂತಿಲ್ಲ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

#BeCareful BBMP | ಮೇಲಿಂದ ಕೆಳಗೆ ಬೀಳ್ತಿರಾ ಹುಷಾರ್....! ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿದೆ ಇಂತದ್ದೊಂದು ಖತರ್ನಾಕ್ ಆಫೀಸ್

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group