Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Labour Card KSRTC Bus Pass | ರಾಜ್ಯಾದ್ಯಂತ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ನೀಡುವ ಯೋಜನೆ ಆರಂಭ

ಕಾರ್ಮಿಕರು ಯಾವುದೇ ಜಿಲ್ಲೆಯಲ್ಲಿ ನೋಂದಣಿಯಾಗಿದ್ದರೂ ಸಹ ಅವರು ಇಚ್ಛಿಸುವ ಸ್ಥಳದಿಂದ ಬಸ್ ಪಾಸನ್ನು ಪಡೆಯಲು ಅವಕಾಶ ಕಲ್ಪಿಸಲಾಗಿರುತ್ತೆ.

by Bengaluru Wire Desk
September 26, 2022
in News Wire
Reading Time: 1 min read
1

ಬೆಂಗಳೂರು, ಸೆ.20 www.bengaluruwire.com : ಕಾರ್ಮಿಕ ಇಲಾಖೆ ಮತ್ತು ಅಧೀನದಲ್ಲಿ ಬರುವ ಇತರೆ ಮಂಡಳಿಗಳ ನೋಂದಣಿ ನವೀಕರ ಹಾಗೂ ವಿವಿಧ ಸೌಲಭ್ಯಗಳನ್ನು ವಿತರಿಸಲು ನೂತನ ತಂತ್ರಾಂಶವನ್ನು ರೂಪಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಉದ್ಘಾಟಿಸಿದರು.

ವಿಧಾನಸೌಧದ ಬ್ಯಾಂಕ್ವಿಟ್ ಹಾಲ್ ನಲ್ಲಿ ಈ ನೂತನ ತಂತ್ರಾಂಶಕ್ಕೆ ಚಾಲನೆ, ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ವಿತರಣಾ ಯೋಜನೆಯ ಪ್ರಾರಂಭ ಹಾಗೂ ಕಟ್ಟಡ ಕಾರ್ಮಿಕ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಉದ್ಘಾಟಿಸಿದ ನಂತರ ಮಾತನಾಡಿದ ಅವರು, ಬೆಂಗಳೂರ ವ್ಯಾಪ್ತಿಯಲ್ಲಿ ಕಟ್ಟಡ ಕಾರ್ಮಿಕರಿಗೆ ನೀಡುತ್ತಿದ್ದ ಬಸ್ ಪಾಸ್ ಸೌಲಭ್ಯವನ್ನು ರಾಜ್ಯಾದ್ಯಂತ ಇಂದಿನಿಂದ ವಿಸ್ತರಿಸಲಾಗುತ್ತಿದೆ ಎಂದರು.

ದೇಶದ ಅಭಿವೃದ್ಧಿಗೆ ಕಾರ್ಮಿಕರ ಕೊಡುಗೆ ಅಪಾರವಾದುದು. ಸರ್ಕಾರದ ಬಳಿ ಎಷ್ಟೇ ಹಣವಿದ್ದರೂ, ಕಾರ್ಮಿಕ ಬೆವರು ಹರಿಸಿ ಕಾಮಗಾರಿ ನಡೆಸಿದರಷ್ಟೇ ಆ ಕೆಲಸ ಕಾರ್ಯಗತವಾಗುವುದು. ಕೇವಲ ಹಣವಿದ್ದರೆ ಕೆಲಸ ತನ್ನಿಂದತಾನೇ ಅನುಷ್ಟಾನವಾಗದು. ಇಂತಹ ಕಾರ್ಮಿಕರ ನೆರವಿಗೆ ಸರ್ಕಾರ ಸಾಕಷ್ಟು ಕಾರ್ಯಕ್ರಮಗಳನ್ನು ಕಾರ್ಮಿಕ ಇಲಾಖೆಯ ಮೂಲಕ ಜಾರಿಗೆ ತರಲಾಗುತ್ತಿದೆ. ಕಾರ್ಮಿಕರಿಗೆ ವಿವಿಧ ಧನ ಸಹಾಯದ‌ ಸೌಲಭ್ಯಗಳನ್ನು ತಲುಪಿಸಲು Kbocwwb labour ಆಂಡ್ರಾಯ್ಡ್ ಆಪ್ ಅನುಕೂಲಕಾರಿಯಾಗಿದೆ ಎಂದರು.

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಇದುವರೆಗೆ 37 ಲಕ್ಷ ಕಟ್ಟಡ ಕಾರ್ಮಿಕರು ನೋಂದಾಯಿತರಾಗಿದ್ದಾರೆ. ಇವರುಗಳಿಗೆ ಸದ್ಯ ಶೈಕ್ಷಣಿಕ ಸಹಾಯಧನ ಹೊರತುಪಡಿಸಿ ಮದುವೆ ಸಹಾಯಧನ, ವೈದ್ಯಕೀಯ, ಪಿಂಚಣಿ ಸೌಲಭ್ಯ, ಮಹಿಳಾ ಕಟ್ಟಡ ಕಾರ್ಮಿಕರಿಗೆ ಹೆರಿಗೆ ಸಹಾಯಧನ ಮತ್ತು ತಾಯಿ ಮಗು ಸಹಾಯಹಸ್ತ ಯೋಜನೆ ಸೇರಿದಂತೆ 19 ಸೌಲಭ್ಯಗಳನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಭೌತಿಕವಾಗಿ ಹಾಕಲಾಗುತ್ತಿತ್ತು.

ನೂತನ ತಂತ್ರಾಂಶವು ಕಟ್ಟಡ ಕಾರ್ಮಿಕರಿಗೆ ತ್ವರಿತವಾಗಿ ಸೇವೆಯನ್ನು ನೀಡುವ ಸಲುವಾಗಿ ಹಾಗೂ ಸಹಾಧನವು ನೇರವಾಗಿ ಫಲಾನುಭವಿಗಳ ಖಾತೆಗೆ ನೇರವಾಗಿ (DBT) ತಲುಪಿಸಲು ಈ ಹೊಸ ಸಾಫ್ಟ್ ವೇರ್ ನಿಂದ ಸಾಧ್ಯವಾಗಲಿದೆ. ಅಲ್ಲದೆ ಒಬ್ಬ ಫಲಾನುಭವಿಯು ಒಂದೇ ಸೌಲಭ್ಯವನ್ನು ಎರಡೆರಡು ಬಾರಿ ಪಡೆಯುವುದನ್ನು ತಪ್ಪಿಸುತ್ತದೆ. ಈ ಎಲ್ಲಾ ಅವಕಾಶಗಳು ಹಳೆಯ ಸೇವಾಸಿಂಧು ತಂತ್ರಾಂಶದಲ್ಲಿ ಲಭ್ಯವಿರಲಿಲ್ಲ. ಹೊಸ ಸಾಫ್ಟ್ ವೇರ್ ಈ ಎಲ್ಲಾ ಅನುಕೂಲಗಳಿವೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಕಾರ್ಮಿಕ ಇಲಾಖೆಯ ಅಧೀನದಲ್ಲಿರುವ ಇತರೆ ಮಂಡಳಿಗಳಾದ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಹಾಗೂ ಕಾರ್ಖಾನೆಗಳು, ಬಾಯ್ಲರ್ ಗಳು, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆಗಳ ಅಡಿಯಲ್ಲಿ ನೋಂದಣಿ, ನವೀಕರಣ ಮತ್ತು ವಿವಿಧ ಸೌಲಭ್ಯಗಳನ್ನು ವಿತರಿಸಲು ಈ ನೂತನ ತಂತ್ರಾಂಶವನ್ನು ರೂಪಿಸಲಾಗಿದೆ.

ಆಂಡ್ರಾಯ್ಡ್ ಆಪ್

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಕಾರ್ಮಿಕರ ಮಕ್ಕಳಿಗೆ 2021-22ನೇ ಸಾಲಿನಲ್ಲಿ 4.19 ಲಕ್ಷ ಫಲಾನುಭವಿಗಳ ಖಾತೆಗೆ 654 ಕೋಟಿ ರೂ.ಗಳ ಶೈಕ್ಷಣಿಕ ಸಹಾಯ ಧನವನ್ನು ನೇರ ನಗದು ರೂಪದಲ್ಲಿ‌ ನೀಡಲಾಗಿದೆ. ಇದೇ ಮೊದರಿಯಲ್ಲಿ ಮಂಡಳಿಯು ಉಳಿದ ಸೇವೆಗಳಲ್ಲಿ ಡಿಬಿಟಿ ಮುಖಾಂತರ ಹಣವನ್ನು ಹಸ್ತಾಂತರಿಸಲಿದೆ ಎಂದರು.

ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಬಿಎಂಟಿಸಿ ವ್ಯಾಪ್ತಿಯಿಂದ ರಿಯಾಯಿತಿ ಬಸ್ ಪಾಸ್ ಯೋಜನೆಯನ್ನು ರಾಜ್ಯದಾದ್ಯಂತ ವಿಸ್ತರಿಸಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಏ.16ರಂದು ತಾತ್ವಿಕ ಅನುಮೋದನೆ ನೀಡಿ ಆದೇಶ ಹೊರಡಿಸಿತ್ತು. ಇಂದಿನಿಂದ ಈ ಯೋಜನೆ ಜಾರಿಗೆ ಬಂದಿದ್ದು ಅರ್ಹ ಕಾರ್ಮಿಕರು ತಮ್ಮ ವಾಸ ಸ್ಥಳ ಅಥವಾ ಕೆಲಸ ನಿರ್ವಹಿಸುವ ಸ್ಥಳದಿಂದ 45 ಕಿ.ಮೀ ವ್ಯಾಪ್ತಿಯಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಕೂಲವಾಗುತ್ತದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕೆಎಸ್ ಆರ್ ಟಿಸಿ (KSRTC) ಬಸ್ ಪಾಸ್ ಗಳನ್ನು ಬೆಂಗಳೂರು-ಒನ್, ಕರ್ನಾಟಕ-ಒನ್ ಮತ್ತು ಗ್ರಾಮ-ಒನ್ ಕೇಂದ್ರಗಳ ಸೇವಾಸಿಂಧು ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಿ ಪಡೆಯಬಹುದಾಗಿರುತ್ತದೆ. ಮಂಡಳಿಯ ಫಲಾನುಭವಿಗಳಿಗೆ ವಿತರಿಸಲಾಗುವ ಬಸ್ ಪಾಸ್ ಗಳು ತ್ರೈಮಾಸಿಕ ಅವಧಿಯದಾಗಿದ್ದು, ಅವಧಿ ಮುಕ್ತಾಯದ ನಂತರ ಪುನಃ ಅರ್ಜಿ ಸಲ್ಲಿಸಿ ನವೀಕರಿಸಿಕೊಳ್ಳಬಹುದು ಎಂದು ಕಾರ್ಮಿಕ ಮತ್ತು ಸಕ್ಕರೆ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು.

“2013ರಿಂದ 2018ರವರೆಗೆ 278 ಕೋಟಿ ರೂ. ಮಾತ್ರ ವ್ಯಯಿಸಲಾಗಿತ್ತು. ಆದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಶ್ರಮಿಕರ ಕಲ್ಯಾಣಕ್ಕಾಗಿ 1619 ಕೋಟಿ ರೂ.ಗಳನ್ನು ವ್ಯಯಿಸಲಾಗಿದೆ. ಇದು ರಾಜ್ಯದ ಕಾರ್ಮಿಕ ಇಲಾಖೆಯ ಇತಿಹಾಸದಲ್ಲೇ ಒಂದು ದಾಖಲೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಇಂದು ದೇಶದಲ್ಲೇ ಮೊದಲು ಎಂಬಂತಹ ಮೂರು ಹೊಸ ಕಾರ್ಯಕ್ರಮಗಳನ್ನು ಜಾರಿ ಮಾಡಲಾಗುತ್ತಿದೆ”
-ಶಿವರಾಂ ಹೆಬ್ಬಾರ್, ಕಾರ್ಮಿಕ ಸಚಿವರು

ಮಂಡಳಿಯ ನೋಂದಾಯಿತ ಕಾರ್ಮಿಕರು ಯಾವುದೇ ಜಿಲ್ಲೆಯಲ್ಲಿ ನೋಂದಣಿಯಾಗಿದ್ದರೂ ಸಹ ಅವರು ಇಚ್ಛಿಸುವ ಸ್ಥಳದಿಂದ ಬಸ್ ಪಾಸನ್ನು ಪಡೆಯಲು ಅವಕಾಶ ಕಲ್ಪಿಸಲಾಗಿರುತ್ತೆ.

2021-22ನೇ ಸಾಲಿನ ಎಸ್ ಎಸ್ ಎಲ್ ಸಿ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಕಾರ್ಮಿಕರ ಮಕ್ಕಳು 600 ಮತ್ತು ಅದಕ್ಕಿಂತ ಹೆಚ್ಚು ಅಂಕ ಪಡೆದ ಮಕ್ಕಳಿಗೆ ಪ್ರೋತ್ಸಾಹಧನ ನೀಡಲು ನಿರ್ಣಯಿಸಲಾಗಿತ್ತು. ಕ್ಷೇತ್ರ ಮಟ್ಟದ ಅಧಿಕಾರಿಗಳ ಕಚೇರಿಯಿಂದ ಒಟ್ಟು 2,491 ಅರ್ಜಿಗಳು ಸ್ವೀಕೃತಗೊಂಡಿದೆ. ಆ ಪೈಕಿ 2,307 ಅರ್ಜಿಗಳಿಗೆ ಪ್ರೋತ್ಸಾಹಧನ ಪಡೆಯಲು ಅರ್ಹರಾಗಿದ್ದಾರೆ.

ಕಾರ್ಯಕ್ರಮದಲ್ಲಿ ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಕೆಎಸ್‌ಆರ್‌ಟಿಸಿ ಅಧ್ಯಕ್ಷ ಮತ್ತು ಶಾಸಕ ಕೆ. ಚಂದ್ರಪ್ಪ, ಕಾರ್ಮಿಕ ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್, ಇಲಾಖೆ ಆಯುಕ್ತ ಅಕ್ರಂ ಪಾಷ, ಕಲ್ಯಾಣ ಕರ್ನಾಟಕ ಮಂಡಳಿಯ ಡಾ.ರಾಜ್ ಕುಮಾರ್, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯನಿರ್ವಹಣಾಧಿಕಾರಿ ಮತ್ತು ಕಾರ್ಯದರ್ಶಿ ಗುರು ಪ್ರಸಾದ್ ಎಂ.ಪಿ, ಜಂಟಿ ಕಾರ್ಯದರ್ಶಿ ಶಿವಪುತ್ರ, ಸಚಿವರ ಆಪ್ತ ಕಾರ್ಯದರ್ಶಿ ಮಂಜುನಾಥ್ ಬಳ್ಳಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

JDS HD Kumarswamy | ಎಚ್.ಡಿ.ಕುಮಾರಸ್ವಾಮಿ ಬಿಜೆಪಿ ಸೇರಿಕೊಂಡ್ರಾ?

Next Post

Mysore Dasara-2022 | ಮೈಸೂರು ದಸರಾ ಮಹೋತ್ಸವ-2022 ; ಮುಖ್ಯಮಂತ್ರಿಗಳಿಗೆ ಅಧಿಕೃತ ಆಹ್ವಾನ ನೀಡಿದ ಸಚಿವ ಎಸ್.ಟಿ.ಸೋಮಶೇಖರ್

Next Post

Mysore Dasara-2022 | ಮೈಸೂರು ದಸರಾ ಮಹೋತ್ಸವ-2022 ; ಮುಖ್ಯಮಂತ್ರಿಗಳಿಗೆ ಅಧಿಕೃತ ಆಹ್ವಾನ ನೀಡಿದ ಸಚಿವ ಎಸ್.ಟಿ.ಸೋಮಶೇಖರ್

ಪಂಚಮಸಾಲಿ ಮೀಸಲಾತಿಗೆ ಬಿಎಸ್‌ವೈ ಅಡ್ಡಿ ಪಡಿಸಿಲ್ಲ: ಸಚಿವ ಮುರುಗೇಶ್ ನಿರಾಣಿ

Please login to join discussion

Like Us on Facebook

Follow Us on Twitter

Recent News

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 2, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group