Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

World Tourism Day-2022 | ಅಂತರರಾಷ್ಟ್ರೀಯ ಪ್ರವಾಸೋದ್ಯಮ ನಕ್ಷೆಯಲ್ಲಿ ಕರ್ನಾಟಕ ಶೀಘ್ರ ಸೇರ್ಪಡೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೇಲೂರು, ಹಳೆಬೀಡು, ಸೋಮನಾಥಪುರ ಸುತ್ತಮುತ್ತಲ ಪ್ರವಾಸಿತಾಣಗಳನ್ನೊಳಗೊಂಡ ಮೈಸೂರು ಸರ್ಕೀಟ್, ಬಿಜಾಪುರ ದಿಂದ ಬಾದಾಮಿ ಪಟ್ಟದಕಲ್ಲು ಹಂಪಿ ಇತ್ಯಾದಿಗಳನ್ನು ಒಳಗೊಂಡ ಹಂಪಿ ಸರ್ಕೀಟ್‍ಗಳು ಎರಡು ತಿಂಗಳಲ್ಲಿ ಕಾರ್ಯಾರಂಭ - ಸಿಎಂ

by Bengaluru Wire Desk
September 28, 2022
in News Wire
Reading Time: 2 mins read
0
ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ  ನೊಂದಾಯಿತ ರಾಜ್ಯದ ಪ್ರವಾಸಿ ಮಾರ್ಗದರ್ಶಿಗಳಿಗೆ ಪ್ರೋತ್ಸಾಹಧನವನ್ನು ಸಾಂಕೇತಿಕವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿತರಿಸಿದರು.  ಸಚಿವರಾದ ಆನಂದ್ ಸಿಂಗ್  ಹಾಗೂ ಗೋವಿಂದ ಕಾರಜೋಳ ಚಿತ್ರದಲ್ಲಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ನೊಂದಾಯಿತ ರಾಜ್ಯದ ಪ್ರವಾಸಿ ಮಾರ್ಗದರ್ಶಿಗಳಿಗೆ ಪ್ರೋತ್ಸಾಹಧನವನ್ನು ಸಾಂಕೇತಿಕವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿತರಿಸಿದರು. ಸಚಿವರಾದ ಆನಂದ್ ಸಿಂಗ್ ಹಾಗೂ ಗೋವಿಂದ ಕಾರಜೋಳ ಚಿತ್ರದಲ್ಲಿದ್ದಾರೆ.

ಬೆಂಗಳೂರು, ಸೆ.28 www.bengaluruwire.com : ಬರುವ ಕೆಲವೇ ತಿಂಗಳುಗಳಲ್ಲಿ ಕರ್ನಾಟಕ ಪ್ರವಾಸೋದ್ಯಮ ಅಂತರರಾಷ್ಟ್ರೀಯ ನಕ್ಷೆಯಲ್ಲಿ ಸೇರ್ಪಡೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

ಅವರು ಬುಧವಾರ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ  ವಿಶ್ವ ಪ್ರವಾಸೋದ್ಯಮ ದಿನಾಚರಣೆ-2022ಯ ಅಂಗವಾಗಿ ಆಯೋಜಿಸಿದ್ದ  ನೊಂದಾಯಿತ ರಾಜ್ಯದ ಪ್ರವಾಸಿ ಮಾರ್ಗದರ್ಶಿಗಳಿಗೆ ಪ್ರೋತ್ಸಾಹಧನ ವಿತರಣೆ ಹಾಗೂ ಪ್ರವಾಸೋದ್ಯಮ ನೀತಿ 2020-26ರ (ಪರಿಷ್ಕತ) ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದರು.

ರಾಜ್ಯಕ್ಕೆ ವಾರ್ಷಿಕವಾಗಿ ಆಗಮಿಸುತ್ತಿರುವ 30 ಲಕ್ಷ ಪ್ರವಾಸಿಗರನ್ನು  ಮುಂದಿನ ಮೂರು  ವರ್ಷದಲ್ಲಿ ಒಂದು ಕೋಟಿಗೆ ಮುಟ್ಟಿಸುವ ಕೆಲಸವನ್ನು  ನಾವೆಲ್ಲರೂ ಸೇರಿ ಮಾಡಬೇಕು. ರಾಜ್ಯದಲ್ಲಿ ಪ್ರವಾಸಿಗರ ಹೆಜ್ಜೆಗಳನ್ನು ಹೆಚ್ಚಿಸಬೇಕು. ವಿದೇಶಿಯರನ್ನು ಆಕರ್ಷಿಸಿ, ಸ್ಥಳೀಯರಿಗೆ ಕೆಲಸ ಕೊಡಬೇಕು.  ಪ್ರವಾಸೋದ್ಯಮಕ್ಕೆ ಸೂಕ್ತವಾಗಿರುವ ಹಲವು ಸ್ಥಳಗಳು ಕರ್ನಾಟಕದಲ್ಲಿವೆ. ಕಲಬುರಗಿ, ಬೀದರ್ ಕೋಟೆಗಳು ಬಹಳ ಅದ್ಭುತವಾಗಿದೆ. ಇವೆಲ್ಲಾ ನಮ್ಮ ಆಸ್ತಿ. ಅವುಗಳನ್ನು ಸುಧಾರಣೆ ಮಾಡಿದರೆ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶವಿದೆ. ನಮ್ಮ ಹಿರಿಯರಿಂದ ಬಂದಿರುವುದನ್ನು ಜಗತ್ತಿಗೆ ನಾವು ಪರಿಚಯಿಸಬೇಕು.  ಇದನ್ನು ನಮ್ಮ ಸರ್ಕಾರ ಗುರುತಿಸುವ ಕೆಲಸ ಮಾಡುತ್ತದೆ. ಈ ನಿಟ್ಟಿನಲ್ಲಿ ಸಮಗ್ರವಾಗಿ ಕೆಲಸ ಮಾಡಬೇಕು.

ಪ್ರವಾಸೋದ್ಯಮದೊಂದಿಗೆ ಕಂದಾಯ, ಆಹಾರ, ಲೋಕೋಪಯೋಗಿ ಇಲಾಖೆಗಳು ಒಟ್ಟಾಗಿ ಕೆಲಸ ಮಾಡಿ ಕರ್ನಾಟಕದ ಒಟ್ಟು ಪ್ರವಾಸೋದ್ಯಮ ಸಾಮರ್ಥ್ಯವನ್ನು ಸಂಪೂರ್ಣವಾಗಿ  ಬಳಕೆ ಮಾಡಲಾಗುವುದು.  ಆಗ ಪ್ರವಾಸೋದ್ಯಮ ಸಂಪೂರ್ಣವಾಗಿ ಬಳಕೆಯಾಗಿ ಕರ್ನಾಟಕವನ್ನು ಜಗತ್ರ್ಪಸಿದ್ಧ ಮಾಡಲು ಸಾಧ್ಯವಾಗುತ್ತದೆ. ಆ ನಿಟ್ಟಿನಲ್ಲಿ ನಮ್ಮೆಲ್ಲರ ಪ್ರಯತ್ನವಿರಲಿದೆ ಎಂದರು.

ಕನಕದಾಸರ ಜನ್ಮಸ್ಥಳವೀಗ ಆಕರ್ಷಕ ಪ್ರವಾಸ ಸ್ಥಳವಾಗಿದೆ :

ಶಿಗ್ಗಾಂವಿ  ಕ್ಷೇತ್ರದಲ್ಲಿ ಕನಕದಾಸರು ಹುಟ್ಟಿದ್ದು, ಶಿಶುನಾಳ ಶರೀಫರ ಕರ್ಮಭೂಮಿಯಾಗಿದ್ದರೂ ಅಲ್ಲಿ ಯಾವ ಅಭಿವೃದ್ಧಿಯೂ ಆಗಿರಲಿಲ್ಲ. ಅಲ್ಲಿನ ಪುರಾತತ್ವ ಇಲಾಖೆ ವತಿಯಿಂದ ಉತ್ಖನನ ಮಾಡಿಸಿದ ನಂತರ ಅದು ಒಂದು ಸಣ್ಣ ಅರಮನೆ ಎಂದು ತಿಳಿಸಿದರು. ಅಲ್ಲಿ ಕನಕದಾಸರ ಕೋಟೆ ಮತ್ತು ಅರಮನೆ ಎರಡನ್ನೂ ಕಟ್ಟಲಾಗಿದೆ. 4 ಡಿ ಸ್ಟುಡೀಯೋ ಸೇರಿದಂತೆ ಹಲವು ಉಪಕ್ರಮಗಳನ್ನು ಕೈಗೊಂಡು ಕನಕದಾಸರನ್ನು ಅಲ್ಲಿ ಜೀವಂತವಾಗಿರಿಸಲಾಗಿದೆ. ಈಗ ಸಾವಿರಾರು ಜನ,  ವಿಶೇಷವಾಗಿ ಮಕ್ಕಳು ದೊಡ್ಡ ಪ್ರಮಾಣದಲ್ಲಿ ಅಲ್ಲಿಗೆ ಬರುತ್ತಾರೆ. ಮಹಾರಾಷ್ಟ್ರ, ಆಂಧ್ರ ಎಲ್ಲೆಡೆಗಳಿಂದ ಅಲ್ಲಿಗೆ ಪ್ರವಾಸಿಗರು ಬರುತ್ತಾರೆ ಎಂದರು.

ವಿಧಾನಸೌಧ ಬಾಂಕ್ವೆಟ್ ಹಾಲ್ ನಲ್ಲಿ ಪ್ರವಾಸೋದ್ಯಮ ಇಲಾಖೆ ಕಾರ್ಯಕ್ರಮದಲ್ಲಿ ನೆರದಿದ್ದ ಜನಸ್ತೋಮ

ಸಚಿವ ಆನಂದ್ ಸಿಂಗ್  ಅವರು ಬಂದ ನಂತರ ಹಲವಾರು ಹೊಸ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಯಾಣ, ಚಿಕ್ಕಮಗಳೂರುಗಳಲ್ಲಿ ರೋಪ್ ವೇ,  ಹೋಟೇಲುಗಳನ್ನು ಪುನಶ್ಚೇತನ ಮಾಡುವ ಕೆಲಸಗಳನ್ನು ಮಾಡುತ್ತಿದ್ದಾರೆ.  ಇಲ್ಲಿ ಎರಡು ಸರ್ಕಿಟ್ ಗಳನ್ನು ರೂಪಿಸಲಾಗಿದೆ.  ಸಿ.ಆರ್ ಝೆಡ್ ಸಾಧನೆ ಅದ್ಭುತವಾಗಿದೆ. ಅದರಲ್ಲಿ ಆನಂದ್ ಸಿಂಗ್ ಅವರ  ಪಾತ್ರ ಮುಖ್ಯವಾಗಿದೆ. ಬರುವ ದಿನಗಳಲ್ಲಿ ಇದರ ಉಪಯೋಗ ಪಡೆಯೋಣ.  ಖಾಸಗಿ ಮತ್ತು ಸಾರ್ವಜನಿಕ ಸಹಭಾಗಿತ್ವದಲ್ಲಿ ಪ್ರವಾಸೋದ್ಯಮವನ್ನು ಕೈಗೊಳ್ಳುವ ಕೆಲಸಕ್ಕೆ ಇನ್ನಷ್ಟು ಶಕ್ತಿ ತುಂಬುವ ಕೆಲಸವನ್ನು ಮಾಡಲಾಗುವುದು ಎಂದರು.

ಪ್ರವಾಸಿ ಮಾರ್ಗದರ್ಶಿಗಳಲ್ಲಿ ನಿಷ್ಠೆ –ಪ್ರಾಮಾಣಿಕತೆ ಇರಲಿ :

ಪ್ರವಾಸಿ ಮಾರ್ಗದರ್ಶಿಗಳು ಅತ್ಯಂತ ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕು. ಸುಳ್ಳು ಹೇಳುವುದು, ಬಂದವರಿಗೆ ದಾರಿ ತಪ್ಪಿಸುವುದು ಮಾಡಬಾರದು. ಕರ್ನಾಟಕದ ಪ್ರವಾಸಿ ಮಾರ್ಗದರ್ಶಿಗಳೆಂದರೆ ನಂಬರ್ ಒನ್ ಆಗಬೇಕು.  ವಿಶ್ವಾಸಪೂರ್ವಕವಾಗಿರಬೇಕು. ಅವರು ಸರಿಯಾಗಿ ಮಾರ್ಗದರ್ಶನ ಮಾಡುತ್ತಾರೆ ಎಂಬ ವಿಶ್ವಾಸ ಮೂಡಿಸುವ ರೀತಿಯಲ್ಲಿ ನಿಮ್ಮ ನಡೆ ನುಡಿ ಇರಬೇಕು ಎಂದು ಕಿವಿಮಾತು ಹೇಳಿದರು.

 ಒಟ್ಟಾರೆ ಪ್ರವಾಸೋದ್ಯಮ ಅಧಿಕಾರಿಗಳು ಇನ್ನಷ್ಟು ಚುರುಕಾಗಿ ಕೆಲಸ ಮಾಡಬೇಕು. ನಮ್ಮ ಸಾಮರ್ಥ್ಯವನ್ನು ಪರಿಪೂರ್ಣವಾಗಿ ಬಳಸುವಂತಾಗಬೇಕು.  ಸರ್ಕಾರ ನಿಮ್ಮ ಜೊತೆಗಿದೆ. ಹೋಟೇಲು ಉದ್ಯಮಕ್ಕೆ ಬಹಳ ಅವಕಾಶಗಳಿವೆ. ಆನಂದ್ ಸಿಂಗ್ ಅವರು ಹಂಪಿ, ಬಾದಾಮಿ, ಬೇಲೂರಿನಲ್ಲಿ ತ್ರಿಸ್ಟಾರ್ ಹೋಟೇಲುಗಳನ್ನು ಪ್ರಾರಂಭಿಸಿದ್ದಾರೆ. ಇವುಗಳು ಬಹಳಷ್ಟು ಅಭಿವೃದ್ಧಿಯಾಗುತ್ತಿದ್ದು, ಇದರ ಲಾಭವನ್ನು ಎಲ್ಲರೂ ಪಡೆದುಕೊಳ್ಳಬೇಕು. ನಮ್ಮ  ಕನ್ನಡದ ಹುಡುಗರಿಗೆ ಕೆಲಸ ಸಿಗಬೇಕು. ಪ್ರವಾಸೋದ್ಯಮದಲ್ಲಿ ಕರ್ನಾಟಕ ಜಗತ್ಪ್ರಸಿದ್ಧವಾಗಬೇಕು ಎನ್ನುವುದೇ ನನ್ನ ಅಭಿಲಾಷೆ. ಈ ಬಗ್ಗೆ ಸಂಕಲ್ಪವನ್ನು ಮಾಡಿ ನಾವು ಮುಂದುವರೆಯೋಣ ಎಂದು ಅವರು ತಿಳಿಸಿದರು.

ಪ್ರವಾಸೋದ್ಯಮದಿಂದ ಅತಿ ಹೆಚ್ಚಿನ ಉದ್ಯೋಗ ಸೃಷ್ಟಿ :

ಪ್ರವಾಸೋದ್ಯಮ ಕ್ಷೇತ್ರದಲ್ಲಿ ತಂತ್ರಜ್ಞಾನ ಬದಲಾವಣೆಯನ್ನು ತಂದಿದೆ. ಪ್ರವಾಸಿಗರು ಉತ್ತಮ ವಸತಿ, ಸಾರಿಗೆ, ಆಹಾರ ಸೇರಿದಂತೆ ಉತ್ತಮ ಸೇವೆಗಳನ್ನು ಬಯಸುತ್ತಾರೆ. ಪ್ರವಾಸೋದ್ಯಮದಿಂದ ಅತಿ ಹೆಚ್ಚಿನ ಉದ್ಯೋಗಸೃಷ್ಟಿಯೂ ಸಾಧ್ಯವಾಗುತ್ತಿದೆ.

ಕರ್ನಾಟಕದ ಪ್ರವಾಸೋದ್ಯಮದಲ್ಲಿ ಹಂಪಿ, ಬೇಲೂರು, ಹಳೇಬಿಡು, ಗೋಲಗುಂಬಜ್, ಜೈನ ಬಸದಿಗಳಲ್ಲಿ ಕಲಾ ಜಗತ್ತೇ ಸೃಷ್ಟಿಯಾಗಿದ್ದು, ಇವು ಇಲ್ಲಿನ ಕಲಾ ಶ್ರೀಮಂತಿಕೆ ಹಾಗೂ ಪ್ರವಾಸೋದ್ಯಮದ ಅವಕಾಶಗಳಿಗೆ ಕೇವಲ  ಕೆಲವು ಉದಾಹರಣೆಗಳಾಗಿದೆ. ಈ ಐತಿಹಾಸಿಕ ಹಾಗೂ ಪಾರಂಪರಿಕ ಆಸ್ತಿಯನ್ನು ಸಂರಕ್ಷಿಸುವ ಮೂಲಕ ಪ್ರವಾಸೋದ್ಯಮವನ್ನು ಆಕರ್ಷಿಸಬಹುದು. ರಾಜ್ಯದಲ್ಲಿ ಅದ್ಭುತವಾದ ಐತಿಹಾಸಿಕ ಹಾಗೂ ಪಾರಂಪರಿಕ ಮಹತ್ವದ ಶಿಲ್ಪಗಳು, ಶಾಸನಗಳು, ಕಟ್ಟಡಗಳನ್ನು ಜನರಿಗೆ ಪರಿಚಯಿಸಬೇಕು. ಯೂನೆಸ್ಕೋ ಸಂಸ್ಥೆ ಹಂಪಿಯನ್ನು ಈಗಾಗಲೇ ಪಾರಂಪರಿಕ ಕಟ್ಟಡ ಎಂದು ಗುರುತಿಸಿದೆ.  ಬೇಲೂರು , ಹಳೇಬೀಡು ಕೂಡ ಈ ಪಟ್ಟಿಯಲ್ಲಿ ಸೇರಲಿದೆ. ಬಾದಾಮಿ ಗುಹೆಗಳು ಅಜಂತಾ ಗುಹೆಗಳಿಗಿಂತ ಪುರಾತನ ಹಾಗೂ ಮಹತ್ವದ್ದಾಗಿದೆ. ಆದರೆ ಪ್ರವಾಸಿಗರಿಗೆ ಇದರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಇವುಗಳನ್ನು ಎಲ್ಲ ವ್ಯವಸ್ಥೆಗಳೊಂದಿಗೆ ಸೃಜನಾತ್ಮಕವಾಗಿ ಪ್ರಸಿದ್ಧಿಗೊಳಿಸಬೇಕು ಎಂದರು.

2 ಸರ್ಕೀಟ್ ಗಳನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಏರಿಸಲು ಚಿಂತನೆ :

ರಾಜ್ಯದಲ್ಲಿ 2  ಪ್ರವಾಸೋದ್ಯಮ ಸರ್ಕೀಟ್ ಗಳನ್ನು ಅಂದರೆ ಬೇಲೂರು, ಹಳೆಬೀಡು, ಸೋಮನಾಥಪುರ ಸುತ್ತಮುತ್ತಲ ಪ್ರವಾಸಿತಾಣಗಳನ್ನೊಳಗೊಂಡ ಮೈಸೂರು ಸರ್ಕೀಟ್, ಬಿಜಾಪುರ ದಿಂದ ಬಾದಾಮಿ ಪಟ್ಟದಕಲ್ಲು ಹಂಪಿ ಇತ್ಯಾದಿಗಳನ್ನು ಒಳಗೊಂಡ ಹಂಪಿ ಸರ್ಕೀಟ್‍ಗಳನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಅಭಿವೃದ್ಧಿಪಡಿಸಲು ಸರ್ಕಾರ ಯೋಜನೆ ರೂಪಿಸಿದೆ.  ಈ ಸರ್ಕೀಟ್‍ಗಳಿಗೆ ಪ್ರವಾಸಿಗರು ವೆಬ್‍ಸೈಟ್ ಮೂಲಕ ತಮ್ಮ ಪ್ರವಾಸದ ಸಂಪೂರ್ಣ ವ್ಯವಸ್ಥೆಯನ್ನು ಮಾಡಿಕೊಳ್ಳುವ ಯೋಜನೆಯನ್ನು ರೂಪಿಸಲಾಗುತ್ತಿದ್ದು, ಮುಂದಿನ 2 ತಿಂಗಳ ಒಳಗಾಗಿ ಎರಡು ಸರ್ಕಿಟ್‍ಗಳನ್ನು ಕಾರ್ಯಾರಂಭ ಮಾಡಲಾಗುವುದು.

ಟೆಂಪಲ್ ಟೂರಿಸಂ, ನೈಸರ್ಗಿಕ ಟೂರಿಸಂಗಳಿಗೆ ಪ್ರಾಶಸ್ತ್ಯ ನೀಡಲಾಗುವುದು. ಜೋಗ ಜಲಪಾತ ಪ್ರವಾಸಿ ತಾಣ, ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗಾಗಿ 100 ಕೋಟಿ ರೂ. ಮೀಸಲಿರಿಸಲಾಗಿದ್ದು, 600 ಕೊಠಡಿಗಳ ಪ್ರವಾಸಿ ವಸತಿ ನಿಲಯ ನಿರ್ಮಿಸಲಾಗುತ್ತಿದೆ. ಕರಾವಳಿ ಪ್ರದೇಶದ ಅಭಿವೃದ್ಧಿಗೆ ಪೂರಕವಾಗಿ ಸಿಆರ್‍ ಜೆಡ್ ವಲಯದಲ್ಲಿ ಕೇಂದ್ರ ಸರ್ಕಾರ ವಿನಾಯ್ತಿ ನೀಡಿದ್ದು, ಕರಾವಳಿ ಭಾಗದ ಪ್ರವಾಸೋದ್ಯಮಕ್ಕೆ ದೊಡ್ಡ ಪ್ರಮಾಣದ ಸಹಾಯವಾಗಲಿದೆ. ಕರಾವಳಿ ಪ್ರದೇಶದ ಪ್ರವಾಸೋದ್ಯಮಕ್ಕೆ ಪೂರಕವಾಗಿ ಕರಾವಳಿ ಅಭಿವೃದ್ಧಿ ಯೋಜನೆಯನ್ನು ರೂಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ರಾಜ್ಯದಲ್ಲಿ ಕ್ಯಾರವಾನ್ ವಾಹನಗಳ ಮೂಲಕ ಪ್ರವಾಸ :

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಕ್ಯಾರವಾನ್ ವಾಹನಗಳ ಸೇವೆಗಳಿಗೆ ಸಾಂಕೇತಿಕವಾಗಿ ಚಾಲನೆ ನೀಡಿದರು. ವಿದೇಶಗಳಲ್ಲಿ ಹೆಚ್ಚು ಪ್ರಸಿದ್ಧವಾಗಿರುವ ಇಂತಹ ವಾಹನಗಳನ್ನು ನಮ್ಮ ದೇಶದಲ್ಲಿ ಸಾಮಾನ್ಯವಾಗಿ ಚಲನಚಿತ್ರ ನಟ, ನಟಿಯರು ಬಳಸುತ್ತಾರೆ. ಈ ವಾಹನದಲ್ಲೇ ಉಳಿದುಕೊಳ್ಳಲು, ಅಡುಗೆಮನೆ, ಶೌಚಾಲಯ ಸೇರಿದಂತೆ ಸಕಲ ಸೌಲಭ್ಯಗಳಿರುತ್ತದೆ. ಈ ವಾಹನವನ್ನು ಯಾವುದೇ ಪ್ರವಾಸಿ ತಾಣಗಳಿಗೆ ಬುಕಿಂಗ್ ಮಾಡಿಕೊಂಡು ತೆಗೆದುಕೊಂಡು ಹೋಗಬಹುದು. ಈ ರೀತಿಯ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಬುಧವಾರ ಸಾಂಕೇತಿಕವಾಗಿ ಎರಡು ಖಾಸಗಿ ಕ್ಯಾರವಾನ್ ವಾಹನಗಳಿಗೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಸಂಸದ ಜಿ.ಎಸ್.ಬಸವರಾಜ್, ಪ್ರವಾಸೋದ್ಯಮ ಸಚಿವರಾದ ಆನಂದ್ ಸಿಂಗ್, ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ, ಕಂದಾಯ ಸಚಿವ ಆರ್.ಅಶೋಕ್, ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಎನ್.ವಿ.ಪ್ರಸಾದ್, ಕೆಎಸ್ ಟಿಡಿಸಿ ಅಧ್ಯಕ್ಷರಾದ ಕಾಪು ಸಿದ್ದಲಿಂಗಸ್ವಾಮಿ, ಇಲಾಖೆಯ ನಿರ್ದೇಶಕರಾದ ವೆಂಕಟೇಶ್, ಕೆಎಸ್ ಟಿಡಿಸಿ ವ್ಯವಸ್ಥಾಪಕ ನಿರ್ದೇಶಕ ಜಗದೀಶ್, ಜೆಎಲ್ಆರ್ ವ್ಯವಸ್ಥಾಪಕ ನಿರ್ದೇಶಕ ಮನೋಜ್ ಕುಮಾರ್, ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕರಾಜ ಜನಾರ್ಧನ್ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

PFI BAN | ಪಿಎಫ್ ಐ ಸಂಘಟನೆ ಮೇಲೆ 5 ವರ್ಷ ನಿಷೇಧ ಹೇರಿದ ಕೇಂದ್ರ ಸರ್ಕಾರ

Next Post

BBMP Election 2022 | ಬಿಬಿಎಂಪಿ ವಾರ್ಡ್ ಮೀಸಲಾತಿ ನ.30 ರ ಒಳಗೆ ಪ್ರಕಟಿಸಿ ಡಿ.31ರ ಒಳಗೆ ಚುನಾವಣೆ ನಡೆಸಿ : ಹೈಕೋರ್ಟ್ – ಇಲ್ಲಿದೆ ಕಂಪ್ಲೀಟ್ ನ್ಯೂಸ್

Next Post
ಸಾಂದರ್ಭಿಕ ಚಿತ್ರ

BBMP Election 2022 | ಬಿಬಿಎಂಪಿ ವಾರ್ಡ್ ಮೀಸಲಾತಿ ನ.30 ರ ಒಳಗೆ ಪ್ರಕಟಿಸಿ ಡಿ.31ರ ಒಳಗೆ ಚುನಾವಣೆ ನಡೆಸಿ : ಹೈಕೋರ್ಟ್ - ಇಲ್ಲಿದೆ ಕಂಪ್ಲೀಟ್ ನ್ಯೂಸ್

ಸಾಂದರ್ಭಿಕ ಚಿತ್ರ

HEALTH TIPS | ಚಳಿಗಾಲದಲ್ಲಿ ಇಂತಹ ತಪ್ಪುಗಳನ್ನು ಮಾಡಲು ಹೋಗದಿರಿ : ಆರೋಗ್ಯ ಹದಗೆಡಲಿದೆ ; ಆಯುರ್ವೇದಲ್ಲಿನ ಸರಳ ಪರಿಹಾರವೇನು? ಇಲ್ಲಿದೆ ತಜ್ಞ ವೈದ್ಯರ ಸಲಹೆ

Please login to join discussion

Like Us on Facebook

Follow Us on Twitter

Recent News

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group