Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Kashmir Sri Sharada Temple Idol | ಕಾಶ್ಮೀರ ಗಡಿಯ ಪುರವಾಸಿನಿ ಗುಡಿಗೆ ಶೃಂಗೇರಿ ಶಾರದಾ ವಿಗ್ರಹ ಅ.5ಕ್ಕೆ ಹಸ್ತಾಂತರ

ಕಾಶ್ಮೀರದ ತೀತ್ವಾಲ್ ನಲ್ಲಿನ ಶ್ರೀ ಶಾರದಾ ದೇವಿ ದೇವಸ್ಥಾನ ಕಾಮಗಾರಿ ಶೇ.75ರಷ್ಟು ಪೂರ್ಣ | ನವೆಂಬರ್ ವೇಳೆಗೆ ದೇವಸ್ಥಾನದ ಕಾಮಗಾರಿ ಪೂರ್ಣ | ಶ್ರೀ ಶಾರದಾ ದೇಗುಲಕ್ಕೆ ತೆರಳಲು 300 ಮೀಟರ್ ರಸ್ತೆ ನಿರ್ಮಿಸದ ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಸರ್ಕಾರ | ಶಾರದಾ ಸಂರಕ್ಷಣಾ ಸಮಿತಿ ಮನವಿಗೆ ಸ್ಪಂದಿಸದ ಸರ್ಕಾರ

by Bengaluru Wire Desk
October 5, 2022
in News Wire, Public interest
Reading Time: 2 mins read
0
ಕಾಶ್ಮೀರದ ತೀತ್ವಾಲ್ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ಶಾರದಾ ದೇವಸ್ಥಾನ ಕಾಮಗಾರಿಯ ಚಿತ್ರ

ಕಾಶ್ಮೀರದ ತೀತ್ವಾಲ್ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ಶಾರದಾ ದೇವಸ್ಥಾನ ಕಾಮಗಾರಿಯ ಚಿತ್ರ

ಬೆಂಗಳೂರು, ಅ.1 www.bengaluruwire.com : ಕಾಶ್ಮೀರದ ಗಡಿನಿಯಂತ್ರಣ ರೇಖೆಯ ಕಟ್ಟ ಕಡೆಯ ಹಳ್ಳಿ ತೀತ್ವಾಲ್ ನಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ಶಾರದಾ ದೇವಿಯ ದೇವಸ್ಥಾನಕ್ಕೆ, ಶೃಂಗೇರಿಯ ಶ್ರೀ ಶಾರದಾಪೀಠದಿಂದ ಪಂಚಲೋಹದ ಶಾರಾದಾ ದೇವಿಯ ವಿಗ್ರಹವನ್ನು, ಕಾಶ್ಮೀರ ಶಾರದಾ ಸರ್ವಜ್ಞ ಪೀಠ ಸಂರಕ್ಷಣಾ ಸಮಿತಿ (Save Sharada Committee Kashmir)ಯ ನಿಯೋಗಕ್ಕೆ ಇದೇ ಅ.5ರ ವಿಜಯದಶಮಿಯ ದಿನ ಸಾಂಕೇತಿಕವಾಗಿ ಹಸ್ತಾಂತರಿಸಲಾಗುತ್ತಿದೆ.

ಶೃಂಗೇರಿಯ ಶ್ರೀ ಶಾರದಾ ಪೀಠದ ಜಗದ್ಗುರು ಶ್ರೀ ಭಾರತೀ ತೀರ್ಥ ಮಹಾಸ್ವಾಮಿಗಳು ಕಾಶ್ಮೀರದ ಗಡಿಭಾಗದ ತೀತ್ವಾಲ್ ನಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ಶಾರದಾ ದೇವಿ ದೇವಸ್ಥಾನ ಸೇವ್ ಶಾರದಾ ಸಮಿತಿಯ ಅಧ್ಯಕ್ಷ ರವೀಂದ್ರ ಪಂಡಿತ್ ನೇತೃತ್ವದ ನಿಯೋಗಕ್ಕೆ ಸಾಂಕೇತಿಕವಾಗಿ ಹಸ್ತಾಂತರಿಸಿ ಆಶೀರ್ವಾದ ನೀಡಲಿದ್ದಾರೆ ಎಂದು ಸಮಿತಿ ಬೆಂಗಳೂರು ವೈರ್ ಗೆ ತಿಳಿಸಿದೆ.

ಸಮಿತಿ ಅಧ್ಯಕ್ಷರಾದ ರವೀಂದ್ರ ಪಂಡಿತ್ ಚಿತ್ರ

“ಅ.5ರಂದು ಶೃಂಗೇರಿಯಲ್ಲಿ ಶ್ರೀ ಶಾರಾದಾ ಪೀಠದ ಜಗದ್ಗುರುಗಳು ಈ ಹಿಂದೆ ತಿಳಿಸಿದಂತೆ ಶ್ರೀ ಶಾರಾದಾ ದೇವಿಯ ಪಂಚಲೋಹದ ವಿಗ್ರಹ ಹಾಗೂ ಶ್ರೀ ಶಂಕರಾಚಾರ್ಯರ ಮೂರ್ತಿಗಳನ್ನು ಸಾಂಕೇತಿಕವಾಗಿ ಕಾಶ್ಮೀರ ಶಾರದಾ ಸರ್ವಜ್ಞ ಪೀಠ ಸಂರಕ್ಷಣಾ ಸಮಿತಿಯ ನಿಯೋಗಕ್ಕೆ ಹಸ್ತಾಂತರಿಸಲಿದ್ದಾರೆ. ಈ ವಿಗ್ರಹಗಳನ್ನು ದೇವಸ್ಥಾನದ ಕಾಮಗಾರಿಗಳನ್ನು ಪೂರ್ಣವಾಗುವ ತನಕ ಶೃಂಗೇರಿ ಶಾರದಾಪೀಠದಲ್ಲಿಡಬೇಕಾ? ಅಥವಾ ಬೆಂಗಳೂರಿನಲ್ಲಿರುವ ಕಾಶ್ಮೀರ ಭವನದಲ್ಲಿಡಬೇಕಾ? ಎಂಬ ಬಗ್ಗೆ ನಿರ್ಧಾರವಾಗಿಲ್ಲ. ಜನವರಿ 15ರ ಸಂಕ್ರಮಣದ ನಂತರ ಈ ಮೂರ್ತಿಗಳನ್ನುಕಾಶ್ಮೀರಕ್ಕೆ ಕೊಂಡೊಯ್ಯಲಾಗುತ್ತದೆ. ಮುಂದಿನ ವರ್ಷದ ನವರಾತ್ರಿಯ ಮೊದಲ ದಿನ ದೇವಸ್ಥಾನವನ್ನು ಉದ್ಘಾಟನೆ ಮಾಡಲು ಚಿಂತನೆ ನಡೆಸಲಾಗಿದೆ” ಎಂದು ಸಮಿತಿಯ ಅಧ್ಯಕ್ಷರಾದ ರವೀಂದ್ರ ಪಂಡಿತ್ ಅವರು ಬೆಂಗಳೂರು ವೈರ್ ಗೆ ವಿವರಿಸಿದ್ದಾರೆ.

ಶ್ರೀ ಶಾರದಾ ದೇವಿಯ ಶಿಲೆಯಲ್ಲಿ ನಿರ್ಮಿಸುತ್ತಿರುವ ದೇವಸ್ಥಾನ ಕಾಮಗಾರಿ ಪರಿಸ್ಥಿತಿ ಅನುಕೂಲವಾಗಿದ್ದಲ್ಲಿ ಅಕ್ಟೋಬರ್ ವೇಳೆಗೆ ಪೂರ್ಣವಾಗಲಿದೆ ಎಂದು ಈ ಹಿಂದೆ ಬೆಂಗಳೂರಿನಲ್ಲಿ ಪ್ರತಿಕಾಗೋಷ್ಠಿ ನಡೆಸಿದ್ದ ಕಾಶ್ಮೀರ ಶಾರದಾ ಸರ್ವಜ್ಞ ಪೀಠ ಸಂರಕ್ಷಣಾ ಸಮಿತಿ ತಿಳಿಸಿತ್ತು. ಆದರೆ ಈಗ ನವೆಂಬರ್ ವೇಳೆಗೆ ಶ್ರೀ ಶಾರದಾ ದೇವಿ ದೇವಸ್ಥಾನದ ಕಾಮಗಾರಿ ಪೂರ್ಣವಾಗಲಿದೆ ಎಂದವರು ಹೇಳಿದ್ದಾರೆ.

ಶ್ರೀ ಶಾರದಾ ದೇವಿ ದೇವಸ್ಥಾನ ಕಾಮಗಾರಿ ಶೇ.75ರಷ್ಟು ಪೂರ್ಣ :

  • ಶ್ರೀ ಶಾರದಾ ದೇವಿ ದೇವಸ್ಥಾನ ಕಾಮಗಾರಿಯ ಚಿತ್ರ

“ತೀತ್ವಾಲ್ ನಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ಶಂಕರಾಚಾರ್ಯರು ನಿರ್ಮಿಸಿದ ನಾಲ್ಕು ಪೀಠಗಳನ್ನು ಪ್ರತಿನಿಧಿಸುವ 4 ದ್ವಾರಗಳನ್ನು ಹೊಂದಿರುವ ದೇವಸ್ಥಾನದ ಕಾಮಗಾರಿ ಶೇ.75ರಷ್ಟು ಪೂರ್ಣವಾಗಿದೆ. ಮುಖ್ಯ ದ್ವಾರಕ್ಕೆ ಉತ್ತಮ ಗುಣಮಟ್ಟದ ಬಾಗಿಲುಗಳನ್ನು ಅಳವಡಿಸಲಾಗಿದೆ. ಉಳಿದಂತೆ 3 ಬಾಗಿಲುಗಳನ್ನು ಅಳವಡಿಸುವ, ಗ್ರಾನೈಟ್ ನೆಲಹಾಸು, ಮೇಲ್ಛಾವಣಿ, ದೇವಸ್ಥಾನದ ಹೊರಗಿನ ಸೌಂದರ್ಯೀಕರಣ, ಗೇಟು ಮತ್ತು ಕಾಂಪೌಡ್ ನಿರ್ಮಾಣ ಕಾರ್ಯ ಬಾಕಿ ಉಳಿದಿದೆ. ದೇವಸ್ಥಾನದ ಪಕ್ಕದಲ್ಲಿ ಸಿಖ್ಖರ ಗುರುದ್ವಾರ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಶಾರದಾ ದೇವಸ್ಥಾನದ ಕಾಮಗಾರಿ ನವೆಂಬರ್ ನಲ್ಲಿ ಪೂರ್ಣಗೊಳ್ಳಲಿದೆ” ಎಂದು ರವೀಂದ್ರ ಪಂಡಿತ್ ಅವರು ತಿಳಿಸಿದ್ದಾರೆ.

ಶ್ರೀ ಶಾರದಾ ದೇವಸ್ಥಾನಕ್ಕೆ ತೆರಳಲು ರಸ್ತೆ ನಿರ್ಮಿಸದ ಸ್ಥಳೀಯಾಡಳಿತ :

ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶದ ಸರ್ಕಾರಕ್ಕೆ ತೀತ್ವಾಲ್ ನಲ್ಲಿನ ಮುಖ್ಯರಸ್ತೆಯಿಂದ ಶಾರದಾ ದೇವಸ್ಥಾನದ ತನಕ 300 ಮೀಟರ್ ರಸ್ತೆ ನಿರ್ಮಿಸುವಂತೆ ಕಾಶ್ಮೀರ ಶಾರದಾ ಸರ್ವಜ್ಞ ಪೀಠ ಸಂರಕ್ಷಣಾ ಸಮಿತಿ ಹಲವು ಬಾರಿ ಮನವಿ ಸಲ್ಲಿಸಿತ್ತು. ಜಮ್ಮು ಮತ್ತು ಕಾಶ್ಮೀರ ಸರ್ಕಾರ 65 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಕಾಮಗಾರಿಗೆ ಸಮಗ್ರ ಯೋಜನಾ ವರದಿಯನ್ನು ತಯಾರಿಸಿಟ್ಟಿದೆ. ಆದರೆ ಈತನಕ ರಸ್ತೆ ಕಾಮಗಾರಿ ಆರಂಭಿಸಿಲ್ಲ. ಜಗತ್ತಿನಾದ್ಯಂತ ಶ್ರೀ ಶಾರದಾ ದೇವಿಯ ದೇವಸ್ಥಾನ ನಿರ್ಮಾಣಕ್ಕೆ ಸಾಕಷ್ಟು ಬೆಂಬಲ ವ್ಯಕ್ತವಾದರೂ, ಸ್ಥಳೀಯ ಸರ್ಕಾರ ಮಾತ್ರ ತಮ್ಮ ಮನವಿಗೆ ಸ್ಪಂದಿಸುತ್ತಿಲ್ಲ ಎಂದು ಸಮಿತಿ ಅಧ್ಯಕ್ಷರು ಬೇಸರ ವ್ಯಕ್ತಪಡಿಸಿದ್ದಾರೆ.

ದೇವಸ್ಥಾನ ನಿರ್ಮಾಣಕ್ಕೆ 2ನೇ ಡಿಸೆಂಬರ್ 2021ರಂದು ಭೂಮಿ ಪೂಜೆ ನೆರವೇರಿಸಿ, ಈ ವರ್ಷದ 26ನೇ ಮಾರ್ಚ್ ನಿಂದ ವಾಸ್ತವವಾಗಿ ಶ್ರೀ ದೇವರ ದೇಗುಲ ನಿರ್ಮಾಣ ಕಾಮಗಾರಿ ಆರಂಭಿಸಲಾಗಿತ್ತು. ಬೆಂಗಳೂರಿನ ಹೊರವಲಯದ ಸೀಗೇಹಳ್ಳಿಯಲ್ಲಿ 12*12 ಅಡಿ ವಿಸ್ತೀರ್ಣದ ದೇವಸ್ಥಾನಕ್ಕೆ ಅಗತ್ಯವಾದ ಕಲ್ಲಿನ ಕಂಬಗಳು, ಹಾಗೂ ಕಲ್ಲಿನ ಚಪ್ಪಡಿಗಳು ಹಾಗೂ ಕೆತ್ತನೆಯಾದ ಕಂಬಗಳನ್ನು ಇಲ್ಲಿಂದಲೇ ಟ್ರಕ್ ನಲ್ಲಿ ಹರಸಾಹಸ ಪಟ್ಟು ತೀತ್ವಾಲ್ ನ ದೇವಸ್ಥಾನ ನಿರ್ಮಾಣ ಸ್ಥಳಕ್ಕೆ ಕೊಂಡೊಯ್ಯಲಾಗಿತ್ತು. ಸಾಗಣೆಗೆ ಅನುಕೂಲವಾಗುವಂತೆ ಕಲ್ಲಿನ ನಿರ್ಮಾಣಗಳನ್ನು 6-7 ಅಡಿಗಳಾಗಿ ವಿಭಜಿಸಲಾಗಿತ್ತು.

ಪಿಒಕೆ ಕಾಶ್ಮೀರದಲ್ಲಿ ತೀರ್ಥಯಾತ್ರೆ ಉದ್ದೇಶ :

1947ರ ಪೂರ್ವದಲ್ಲಿ ಭಾರತ – ಪಾಕಿಸ್ತಾನ ವಿಭಜನೆಗೆ ಮುಂಚೆ ಶ್ರೀ ಶಾರದಾ ದೇವಿ ದೇವಸ್ಥಾನಕ್ಕೆ ಪ್ರತಿವರ್ಷ ಹಿಂದೂಗಳು ಯಾತ್ರೆ ಕೈಗೊಳ್ಳುತ್ತಿದ್ದರು. ವಿಭಜನೆಯ ಬಳಿಕ ದೇವಸ್ಥಾನ ಸಂಪೂರ್ಣವಾಗಿ ನಾಶವಾಗಿ ಭಾರತದಿಂದ ಭಕ್ತಾದಿಗಳು ತೆರಳುತ್ತಿದ್ದ ಯಾತ್ರೆಯು ನಿಂತು ಹೋಗಿತ್ತು. ಹೀಗಾಗಿ ಪುನಃ ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಶ್ರೀ ಶಾರದಾ ದೇವಸ್ಥಾನವಿರುವ ಸ್ಥಳಕ್ಕೆ ಪುನಃ ಯಾತ್ರೆ ಆರಂಭಿಸಲು ಅನುವಾಗುವಂತೆ, ಈ ಹಿಂದೆ ತೀರ್ಥಯಾತ್ರೆ ಪ್ರಾರಂಭವಾಗುತ್ತಿದ್ದ ತೀತ್ವಾಲ್ ಪ್ರದೇಶದ ಆ ಬೇಸ್ ಕ್ಯಾಂಪ್ ನಲ್ಲಿಯೇ ಶಾರದಾ ದೇವಸ್ಥಾನ ನಿರ್ಮಿಸಲಾಗುತ್ತಿದೆ.

WhatsApp Join our WhatsApp Channel
Previous Post

HEALTH TIPS | ಚಳಿಗಾಲದಲ್ಲಿ ಇಂತಹ ತಪ್ಪುಗಳನ್ನು ಮಾಡಲು ಹೋಗದಿರಿ : ಆರೋಗ್ಯ ಹದಗೆಡಲಿದೆ ; ಆಯುರ್ವೇದಲ್ಲಿನ ಸರಳ ಪರಿಹಾರವೇನು? ಇಲ್ಲಿದೆ ತಜ್ಞ ವೈದ್ಯರ ಸಲಹೆ

Next Post

ಇಲಾಖೆ ಇತಿಹಾಸದಲ್ಲೇ ಪ್ರಥಮ ಬಾರಿಗೆ ರಜತ ಕಮಲ ಪ್ರಶಸ್ತಿ ಸ್ವೀಕರಿಸಿದ ರಾಜ್ಯ ವಾರ್ತಾ ಇಲಾಖೆ : ಸಿಎಂ ಬೊಮ್ಮಾಯಿ ಶ್ಲಾಘನೆ

Next Post
ವಾರ್ತಾ ಇಲಾಖೆ ನವದೆಹಲಿಯಲ್ಲಿ ರಾಷ್ಟ್ರಪತಿಗಳಿಂದ ಸ್ವೀಕರಿಸಿದ ರಜತ ಕಮಲ ಪ್ರಶಸ್ತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪ್ರದರ್ಶಿಸುತ್ತಿರುವ ಇಲಾಖೆ ಆಯುಕ್ತ ಡಾ.ಹರ್ಷ ಪಿ.ಎಸ್

ಇಲಾಖೆ ಇತಿಹಾಸದಲ್ಲೇ ಪ್ರಥಮ ಬಾರಿಗೆ ರಜತ ಕಮಲ ಪ್ರಶಸ್ತಿ ಸ್ವೀಕರಿಸಿದ ರಾಜ್ಯ ವಾರ್ತಾ ಇಲಾಖೆ : ಸಿಎಂ ಬೊಮ್ಮಾಯಿ ಶ್ಲಾಘನೆ

ಬದನವಾಳು ಗ್ರಾಮದಲ್ಲಿ ಖಾದಿ ಗ್ರಾಮೋದ್ಯೋಗ ಕೇಂದ್ರಕ್ಕೆ ಭೇಟಿ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇಯ್ಕೆ ಮಾಡುತ್ತಿರುವುದನ್ನು ಪರಿಶೀಲಿಸಿದರು. ಕಾಂಗ್ರೆಸ್ ಮುಖಂಡರಾದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಜೊತೆಗಿದ್ದರು.

ಗಾಂಧೀಜಿ ಬಂದಿದ್ದ ಬದನವಾಳು ಖಾದಿ ಕೇಂದ್ರಕ್ಕೆ ರಾಹುಲ್ ಭೇಟಿ : ಹತ್ಯಾಕಾಂಡ ನಡೆದ 3 ದಶಕಗಳ ಬಳಿಕ ಎರಡು ಸಮುದಾಯಗಳ ಜೊತೆ ಭೋಜನ ಸವಿದ ಕಾಂಗ್ರೆಸ್ ನಾಯಕ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group