Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

ಗಾಂಧೀಜಿ ಬಂದಿದ್ದ ಬದನವಾಳು ಖಾದಿ ಕೇಂದ್ರಕ್ಕೆ ರಾಹುಲ್ ಭೇಟಿ : ಹತ್ಯಾಕಾಂಡ ನಡೆದ 3 ದಶಕಗಳ ಬಳಿಕ ಎರಡು ಸಮುದಾಯಗಳ ಜೊತೆ ಭೋಜನ ಸವಿದ ಕಾಂಗ್ರೆಸ್ ನಾಯಕ

ಭಾರತ ಐಕ್ಯತಾ ಯಾತ್ರೆಯ 25ನೇ ದಿನ ಗಾಂಧಿ ಜಯಂತಿ ಹಿನ್ನಲೆಯಲ್ಲಿ ಬದನವಾಳು ಗ್ರಾಮಕ್ಕೆ ಭೇಟಿ ನೀಡಿ ಹಲವು ಕಾರ್ಯಕ್ರಮಗಳಲ್ಲಿ ರಾಹುಲ್ ಗಾಂಧಿ ಪಾಲ್ಗೊಂಡರು.

by Bengaluru Wire Desk
October 2, 2022
in News Wire
Reading Time: 2 mins read
0
ಬದನವಾಳು ಗ್ರಾಮದಲ್ಲಿ ಖಾದಿ ಗ್ರಾಮೋದ್ಯೋಗ ಕೇಂದ್ರಕ್ಕೆ ಭೇಟಿ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇಯ್ಕೆ ಮಾಡುತ್ತಿರುವುದನ್ನು ಪರಿಶೀಲಿಸಿದರು. ಕಾಂಗ್ರೆಸ್ ಮುಖಂಡರಾದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಜೊತೆಗಿದ್ದರು.

ಬದನವಾಳು ಗ್ರಾಮದಲ್ಲಿ ಖಾದಿ ಗ್ರಾಮೋದ್ಯೋಗ ಕೇಂದ್ರಕ್ಕೆ ಭೇಟಿ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇಯ್ಕೆ ಮಾಡುತ್ತಿರುವುದನ್ನು ಪರಿಶೀಲಿಸಿದರು. ಕಾಂಗ್ರೆಸ್ ಮುಖಂಡರಾದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಜೊತೆಗಿದ್ದರು.

ನಂಜನಗೂಡು, ಅ.02 www.bengaluruwire.com : ಭಾರತ ಐಕ್ಯತಾ ಯಾತ್ರೆಯಲ್ಲಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಗಾಂಧಿ ಜಯಂತಿ ಹಿನ್ನಲೆಯಲ್ಲಿ ಭಾನುವಾರ ಇಲ್ಲಿನ ಬದನವಾಳು ಗ್ರಾಮದಲ್ಲಿನ ಕರ್ನಾಟಕ ರಾಜ್ಯ ಖಾದಿ ಗ್ರಾಮೋದ್ಯೋಗ ಮಂಡಳಿ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿದರು.

ಭಾರತ್ ಜೋಡೋ ಪಾದಯಾತ್ರೆಗೆ ಗಾಂಧಿ ಜಯಂತಿ ಹಿನ್ನಲೆಯಲ್ಲಿ  ಬೆಳಗ್ಗೆ 7:30 ರಿಂದ ಮಧ್ಯಾಹ್ನ 3ರವರೆಗೆ ವಿರಾಮ ನೀಡಿ ಬದನವಾಳುನಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಇದೇ ಸಂದರ್ಭದಲ್ಲಿ ಗಾಂಧೀಜಿ ಪ್ರತಿಮೆಗೆ ಹಾರ ಹಾಕಿ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಅವರು, ಮಹಾತ್ಮಾ ಗಾಂಧಿ ಅವರು ನಮ್ಮ ಸಂವಿಧಾನಿಕ ಹಕ್ಕಿಗಾಗಿ ತ್ಯಾಗ ಬಲಿದಾನ ನೀಡಿದ್ದು, ಇಂದು ಆ ಹಕ್ಕುಗಳು ಅಪಾಯಕ್ಕೆ ಸಿಲುಕಿವೆ ಎಂಬುದು ಬಹುತೇಕರಿಗೆ ಮನದಟ್ಟಾಗಿದೆ ಎಂದು ರಾಹುಲ್ ಗಾಂಧಿ ಹೇಳಿದರು.

ಭಾರತ ಜೋಡೋ ಯಾತ್ರೆಯ 25ನೇ ದಿನವಾದ ಇಂದು ನಾವು ಗಾಂಧಿ ಅವರ ಸ್ಮರಣೆ ಮಾಡುತ್ತಿದ್ದು, ಈ ಯಾತ್ರೆ ಗಾಂಧಿ ಅವರ ಅಹಿಂಸೆ, ಏಕತೆ, ಸಮಾನತೆ ಹಾಗೂ ನ್ಯಾಯದ ಮಾರ್ಗದಲ್ಲಿ ಸಾಗುತ್ತಿದೆ. ಈ ಯಾತ್ರೆಯಲ್ಲಿ ಅಪಾರ ಪ್ರಮಾಣದಲ್ಲಿ ಪುರುಷರು, ಮಹಿಳೆಯರು, ಮಕ್ಕಳು ಭಾಗವಹಿಸಿದ್ದಾರೆ. ನಮ್ಮ ಯಾತ್ರೆ ಮೈಸೂರಿನಿಂದ ಕಾಶ್ಮೀರದವರೆಗೆ ಸಾಗುತ್ತಿದ್ದಂತೆ ಎಲ್ಲರೂ ಈ ಯಾತ್ರೆಯಲ್ಲಿ ಅಹಿಂಸಾ ಹಾಗೂ ಸದ್ಭಾವನ ಮನೋಭಾವದಿಂದ ನಮ್ಮೊಡನೆ ಹೆಜ್ಜೆ ಹಾಕಬೇಕು ಎಂದು ಮನವಿ ಮಾಡಿಕೊಳ್ಳುತ್ತೇನೆ ಎಂದರು.

ಗಾಂಧೀಜಿ ಕೊಂದವರ ಸಿದ್ಧಾಂತದ ವಿರುದ್ಧ ಹೋರಾಟ :

ಮಹಾತ್ಮ ಗಾಂಧಿ ಅವರ 153ನೇ ಜಯಂತೋತ್ಸವ ಹಿನ್ನೆಲೆಯಲ್ಲಿ ಇಂದು ನಾವೆಲ್ಲರೂ ಬದನವಾಳುವಿನ ಖಾದಿ ಗ್ರಾಮೋದ್ಯೋಗ ಕೇಂದ್ರದಲ್ಲಿ ಸೇರಿದ್ದೇವೆ. ಮಹಾತ್ಮ ಗಾಂಧಿ ಅವರು 1927ರಲ್ಲಿ ಈ ಕೇಂದ್ರಕ್ಕೆ ಭೇಟಿ ನೀಡಿದ್ದು, ಈ ಕೇಂದ್ರದಲ್ಲಿ ಭಾರತ ಮಾತೆಯ ಶ್ರೇಷ್ಠ ಪುತ್ರನಿಗೆ ನಮನ ಸಲ್ಲಿಸುತ್ತಿದ್ದೇವೆ. ಬ್ರಿಟೀಷ್ ರಾಜ್ ವ್ಯವಸ್ಥೆ ವಿರುದ್ಧ ಗಾಂಧಿ ಅವರ ಹೋರಾಟದಂತೆ, ಗಾಂಧಿ ಅವರನ್ನು ಕೊಂದವರ ಸಿದ್ಧಾಂತದ ವಿರುದ್ಧ ನಾವು ಇಂದು ಹೋರಾಟ ಮಾಡುತ್ತಿದ್ದೇವೆ. ಈ ಸಿದ್ಧಾಂತದ ಪರಿಣಾಮ ಕಳೆದ ಎಂಟು ವರ್ಷಗಳಿಂದ ದೇಶದಲ್ಲಿ ಅಸಮಾನತೆ, ಸಮಾಜ ವಿಭಜನೆ ಹಾಗೂ ಕಷ್ಟಪಟ್ಟು ಪಡೆದ ಸ್ವಾತಂತ್ರ್ಯದ ಹರಣವಾಗುತ್ತಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಈ ಹಿಂಸಾತ್ಮಕ ರಾಜಕೀಯ, ಅಸತ್ಯದ ವಿರುದ್ಧ ಭಾರತ ಐಕ್ಯತಾ ಯಾತ್ರೆ ಮೂಲಕ ಅಹಿಂಸೆ ಮತ್ತು ಸ್ವರಾಜ್ಯದ ಸಂದೇಶವನ್ನು ಪಸರಿಸಲಾಗುತ್ತಿದೆ. ಸ್ವರಾಜ್ಯಕ್ಕೆ ಹಲವು ಅರ್ಥಗಳಿವೆ. ಅಂದರೆ ಭಯದಿಂದ ಮುಕ್ತಿಗೊಳ್ಳುವುದು. ನಮ್ಮ ರಾಜ್ಯಗಳು ತಮಗಿರುವ ಸಂವಿಧಾನಿಕ ಸ್ವಾಂತ್ರ್ಯವನ್ನು ಅನುಭವಿಸಿ, ನಮ್ಮ ಹಳ್ಳಿಗಳು ಪಂಚಾಯತ್ ರಾಜ್ ವ್ಯವಸ್ಥೆಯನ್ನು ಹೊಂದುವ ಸ್ವಾಂತ್ರ್ಯವಾಗಿದೆ. ನಮ್ಮ ರೈತರು, ಯುವಕರು, ಸಣ್ಣ ಮತ್ತು ಮಧ್ಯಮ ವ್ಯಾಪಾರಸ್ಥರು ಇದನ್ನೇ ಬಯಸುತ್ತಿದ್ದಾರೆ.

ಅಷ್ಟೇ ಅಲ್ಲ ಈ ಯಾತ್ರೆಯಲ್ಲಿ 3600 ಕಿ.ಮೀ ಸಾಗುತ್ತಿರುವ ಯಾತ್ರಿಗಳು ಹಾಗೂ ಅಲ್ಪಾವಧಿಯಲ್ಲಿ ಸಾಗುತ್ತಿರುವ ಲಕ್ಷಾಂತರ ಜನರ ಗೆಲುವಾಗಿದೆ. ಈ ಯಾತ್ರೆಯು ಭಯ, ದ್ವೇಷ ಹಾಗೂ ವಿಭಜನೆ ರಾಜಕೀಯದ ವಿರುದ್ಧ ದೇಶದ ಜನರು ಗಟ್ಟಿ ಧ್ವನಿ ಎತ್ತುವ ಯಾತ್ರೆಯಾಗಿದೆ. ಅಧಿಕಾರದಲ್ಲಿರುವವರಿಗೆ ಗಾಂಧಿ ಅವರ ಪರಂಪರೆ ಬಗ್ಗೆ ಮಾತನಾಡುವುದು ಸುಲಭವಾಗಬಹುದು. ಆದರೆ ಅವರ ಹಾದಿಯಲ್ಲಿ ಸಾಗುವುದು ಬಹಳ ಕಷ್ಟವಾಗಲಿದೆ ಎಂದು ರಾಹುಲ್ ಗಾಂಧಿ ಅಭಿಪ್ರಾಯಪಟ್ಟರು.

ಬದನವಾಳು ಎರಡು ಸಮುದಾಯಗಳ ಜೊತೆ ರಾಹುಲ್ ಭೋಜನ :

ಬದನವಾಳು ಗ್ರಾಮದಲ್ಲಿ ಎರಡು ಸಮುದಾಯಗಳೊಂದಿಗೆ ಕುಳಿತು ಊಟ ಮಾಡುತ್ತಿರುವ ರಾಹುಲ್ ಗಾಂಧಿ

ಗಾಂಧಿ ಜಯಂತಿ ಆಚರಣೆಯ ಹಿನ್ನಲೆಯಲ್ಲಿ ಬದನವಾಳಿನಲ್ಲಿ ರಾಹುಲ್ ಗಾಂಧಿ ಕಾಂಗ್ರೆಸ್ ಮುಖಂಡರೊಂದಿಗೆ ಸೇರಿ ಸಸಿ ನೆಟ್ಟರು. ಇದೇ ಸಂದರ್ಭದಲ್ಲಿ ಗ್ರಾಮದ ಯುವಕರೊಂದಿಗೆ ಸೇರಿ ಗ್ರಾಮದಲ್ಲಿ ಹೆಜ್ಜೆ ಹಾಕಿದರು. 1993ರಲ್ಲಿ ಬದನವಾಳು ಗ್ರಾಮದಲ್ಲಿ ದೇವಸ್ಥಾನ ಪ್ರವೇಶ ಸಂಬಂಧ ನಡೆದ ಹತ್ಯಾಕಾಂಡದ ನಂತರ ಎರಡೂ ಸಮುದಾಯಗಳು 29 ವರ್ಷಗಳಲ್ಲಿ ಎಂದೂ ಕೂಡ ಒಟ್ಟಿಗೆ ಕೂತು ಊಟ ಮಾಡಿರಲಿಲ್ಲ. ಆದರೆ ಬದನವಾಳು ಗ್ರಾಮದ ಎರಡೂ ಸಮುದಾಯಗಳ ಮಕ್ಕಳು ಸೇರಿದಂತೆ ಈ ಸಮುದಾಯಗಳ ಜೊತೆ ಕುಳಿತು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಊಟ ಮಾಡಿದರು.

ಮೂರು ದಶಕಗಳಲ್ಲಿ ಪ್ರಪ್ರಥಮ ಬಾರಿಗೆ ಈ ಎರಡೂ ಸಮುದಾಯಗಳು ಒಟ್ಟಿಗೆ ಸೌಹಾರ್ದಯುತವಾಗಿ ಸಮಾನವಾಗಿ ಕುಳಿತು ಊಟ ಮಾಡಿದ್ದು ಅಭೂತಪೂರ್ವ ಘಟನೆಗೆ ಸಾಕ್ಷಿಯಾಯಿತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಾದ ಕೆ ಸಿ ವೇಣುಗೋಪಾಲ್, ರಣದೀಪ್ ಸುರ್ಜೇವಾಲಾ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಹಾಗೂ ಹಲವಾರು ಮುಖಂಡರು ಈ ಸೌಹಾರ್ದಯುತ ಸಂದರ್ಭದಲ್ಲಿ ಜೊತೆಯಾಗಿದ್ದರು.

ಬದನವಾಳು ಗ್ರಾಮದ ವಿಶೇಷತೆ :

ಬದನವಾಳು ಖಾದಿ ಕೇಂದ್ರದ ಆವರಣದಲ್ಲಿ 1927 ಇಸವಿಯಲ್ಲಿ ಭೇಟಿ ನೀಡಿದ್ದ ಮಹಾತ್ಮಗಾಂಧಿಜಿ ಅವರು ‘ಬದನವಾಳು ನೂಲುವ ಪ್ರಾಂತ್ಯ’ ಎಂಬ ಕಲ್ಲನ್ನು ಶಿಲಾನ್ಯಾಸ ಮಾಡಿರುವ ಕುರುಹು ಈಗಲೂ ಇದೆ. ಸ್ವಾತಂತ್ರ್ಯ ಪೂರ್ವದಲ್ಲಿ ಈ ಖಾದಿ ಕೇಂದ್ರದಲ್ಲಿ ಬಟ್ಟೆ, ಅವಲಕ್ಕಿ, ಎಣ್ಣೆ, ಬೆಂಕಿಪಟ್ಟಣ, ಕಾಗದ ಸೇರಿದಂತೆ ಇತರೆ ಉತ್ಪನ್ನಗಳನ್ನು ತಯಾರಿಸಲಾಗುತ್ತಿತ್ತು. ಹೀಗಾಗಿ 1932ರಲ್ಲಿ ಗಾಂಧೀಜಿ ಮತ್ತೊಮ್ಮೆ ಇಲ್ಲಿಗೆ ಭೇಟಿ ನೀಡಿ ಇಲ್ಲಿನ ಚಟುವಟಿಕೆಗಳನ್ನು ಪರಿಶೀಲಿಸಿದ್ದರು. ಇಂದಿಗೂ ಈ ಗ್ರಾಮದಲ್ಲಿ ನೂಲು ಉತ್ಪಾದನೆ ಮತ್ತು ಖಾದಿ ಬಟ್ಟೆ ತಯಾರಿಕೆ ನಡೆಯುತ್ತಿದ್ದು, 80ಕ್ಕೂ ಹೆಚ್ಚು ಜನ ಉದ್ಯೋಗಾವಕಾಶ ಪಡೆದುಕೊಂಡಿದ್ದಾರೆ. ಇಲ್ಲಿನ ಖಾದಿ ಗ್ರಾಮೋದ್ಯೋಗ ಕೇಂದ್ರದ ಪುನಶ್ವೇತನಕ್ಕೆ ಬಹು ಹಿಂದಿನಿಂದಲೂ ಸ್ಥಳೀಯರು ಒತ್ತಡ ಹೇರುತ್ತಾ ಬಂದಿದ್ದಾರೆ.

WhatsApp Join our WhatsApp Channel
Previous Post

ಇಲಾಖೆ ಇತಿಹಾಸದಲ್ಲೇ ಪ್ರಥಮ ಬಾರಿಗೆ ರಜತ ಕಮಲ ಪ್ರಶಸ್ತಿ ಸ್ವೀಕರಿಸಿದ ರಾಜ್ಯ ವಾರ್ತಾ ಇಲಾಖೆ : ಸಿಎಂ ಬೊಮ್ಮಾಯಿ ಶ್ಲಾಘನೆ

Next Post

ಗಾಂಧಿ ಜಯಂತಿ ಹಿನ್ನಲೆ : ಕೆಎಸ್ ಆರ್ ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ವಿವಿಧ ಸ್ವಚ್ಛತೆ ಕಾರ್ಯಕ್ರಮಗಳ ಆಯೋಜನೆ

Next Post
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧದ ಬಗ್ಗೆ ನೈಋತ್ಯ ರೈಲ್ವೆ ಇಲಾಖೆಯಿಂದ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಗಾಂಧಿ ಜಯಂತಿ ಹಿನ್ನಲೆ : ಕೆಎಸ್ ಆರ್ ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ವಿವಿಧ ಸ್ವಚ್ಛತೆ ಕಾರ್ಯಕ್ರಮಗಳ ಆಯೋಜನೆ

#MysoreDasara2022 | ಮೈಸೂರು ದಸರಾ ಮಹೋತ್ಸವದಲ್ಲಿ ಬಗೆ ಬಗೆಯ ಆಕರ್ಷಕ ಶ್ವಾನಗಳ ಪ್ರದರ್ಶನ ; ಎಲ್ಲರ ಗಮನ ಸೆಳೆದ ಚಾರ್ಲಿ 777

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group