Monday, August 3, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

KASHMIR SHARADA TEMPLE | ಕಾಶ್ಮೀರದ ಗಡಿ ದೇವಸ್ಥಾನಕ್ಕೆ ಶೃಂಗೇರಿ ಪೀಠದಿಂದ ಪಂಚಲೋಹ ಶಾರದಾ ವಿಗ್ರಹ ಹಸ್ತಾಂತರ

ಕಾಶ್ಮೀರದ ಶಾರದಾ ಸಂರಕ್ಷಣಾ ಸಮಿತಿಯವರಿಗೆ ಆಶೀರ್ವವಾದ ಮಾಡಿ 100 ಕೆಜಿ ತೂಕದ 3 ಅಡಿಯ ಸುಂದರ ಶಾರದಾ ವಿಗ್ರಹವನ್ನು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಶೃಂಗೇರಿ ಮಠದ ಜಗದ್ಗುರುಗಳು ಹಸ್ತಾಂತರಿಸಿದರು.

by Bengaluru Wire Desk
October 5, 2022
in News Wire, Public interest
Reading Time: 2 mins read
0
ಕಾಶ್ಮೀರದ ತೀತ್ವಾಲ್ ನ ನೂತನ ಶಾರದಾ ದೇವಸ್ಥಾನಕ್ಕೆ ಶೃಂಗೇರಿ ಮಠದಿಂದ ನೀಡುತ್ತಿರುವ ಶಾರದಾ ದೇವಿ ಪಂಚಲೋಹ ವಿಗ್ರಹಕ್ಕೆ ಪೂಜೆ ಸಲ್ಲಿಸುತ್ತಿರುವ ಜಗದ್ಗುರು ಶ್ರೀ ಭಾರತಿ ತೀರ್ಥ ಸ್ವಾಮಿಗಳು. ಚಿತ್ರಕೃಪೆ : ಶೃಂಗೇರಿ ಮಠ

ಕಾಶ್ಮೀರದ ತೀತ್ವಾಲ್ ನ ನೂತನ ಶಾರದಾ ದೇವಸ್ಥಾನಕ್ಕೆ ಶೃಂಗೇರಿ ಮಠದಿಂದ ನೀಡುತ್ತಿರುವ ಶಾರದಾ ದೇವಿ ಪಂಚಲೋಹ ವಿಗ್ರಹಕ್ಕೆ ಪೂಜೆ ಸಲ್ಲಿಸುತ್ತಿರುವ ಜಗದ್ಗುರು ಶ್ರೀ ಭಾರತಿ ತೀರ್ಥ ಸ್ವಾಮಿಗಳು. ಚಿತ್ರಕೃಪೆ : ಶೃಂಗೇರಿ ಮಠ

ಶೃಂಗೇರಿ, ಅ.5 www.bengaluruwire : ಕಾಶ್ಮೀರ ನಿಯಂತ್ರಣ ರೇಖೆ ತೀತ್ವಾಲ್‌ನಲ್ಲಿ ನಿರ್ಮಾಣ ಹಂತದಲ್ಲಿರುವ ಶಾರದಾ ಯಾತ್ರೆ ದೇವಸ್ಥಾನಕ್ಕಾಗಿ ವಿಜಯದಶಮಿಯ ದಿನವಾದ ಬುಧವಾರ ಇಲ್ಲಿ ನಡೆದ ವಿಶೇಷ ಧಾರ್ಮಿಕ ಕಾರ್ಯಕ್ರಮದಲ್ಲಿ ಶೃಂಗೇರಿ ಶಾರದಾ ಪೀಠದ ಹಿರಿಯ ಶ್ರೀಗಳಾದ ಶ್ರೀ ಭಾರತೀ ತೀರ್ಥ ಸ್ವಾಮಿಜಿ ಹಾಗೂ ಕಿರಿಯ ಶ್ರೀಗಳಾದ ಶ್ರೀ ವಿಧುಶೇಖರ ಭಾರತಿ ಸ್ವಾಮಿಜಿಯವರು ಶಾರದಾ ಮೂರ್ತಿಯನ್ನು ಕಾಶ್ಮೀರ ಉಳಿಸಿ ಶಾರದಾ ಸಮಿತಿಯವರಿಗೆ ಆಶೀರ್ವದಿಸಿ ಹಸ್ತಾಂತರಿಸಿದರು.

ವಿಜಯದಶಮಿಯ ಶುಭದಿನ ದಂದು ಬೆಳಗ್ಗೆ ಶೃಂಗೇರಿಯಲ್ಲಿ ನಡೆದ ಪವಿತ್ರ ಕಾರ್ಯಕ್ರಮದಲ್ಲಿ 100 ಕೆಜಿ ತೂಕದ ಈ 3 ಅಡಿ ತೂಕದ ಸುಂದರ ಶಾರದಾ ದೇವಿಯ ಮೂರ್ತಿಗೆ ಉಭಯ ಶ್ರೀಗಳು ಪೂಜೆ ನೆರವೇರಿಸಿದರು. ಬಳಿಕ ಶ್ರೀ ವಿಧುಶೇಖರ ಭಾರತಿ ಸ್ವಾಮಿಗಳು, ಬಳಿಕ ಸೇವ್ ಶಾರದಾ ಸಮಿತಿ ಅಧ್ಯಕ್ಷ ರವೀಂದರ್ ಪಂಡಿತ ಅವರ ನೇತೃತ್ವದ ನಿಯೋಗಕ್ಕೆ ಮೂರ್ತಿಯನ್ನು ನೀಡಿದರು. ಮುಂದಿನ ವರ್ಷದ ಆರಂಭದಲ್ಲಿ ತೀತ್ವಾಲ್ ಗೆ ಈ ಮೂರ್ತಿಯನ್ನು ಯಾತ್ರೆಯಲ್ಲಿ ಕೊಂಡೊಯ್ದು, ಅಲ್ಲಿನ  ಹೊಸ ಶಾರದಾ ಯಾತ್ರಾ ದೇವಸ್ಥಾನದಲ್ಲಿ ಸ್ಥಾಪಿಸಲು ನಿರ್ಧರಿಸಲಾಗಿದೆ. ಪಂಚಲೋಹದ ಶಾರದಾ ವಿಗ್ರಹ, ಅದರ ಪೀಠ ಹಾಗೂ ಪ್ರಭಾವಳಿ ಸೇರಿದಂತೆ ಒಟ್ಟು 400 ಕೆಜಿ ತೂಕವನ್ನು ಹೊಂದಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಶಾರದಾ ಉಳಿಸಿ ಸಮಿತಿ ಸಂಸ್ಥಾಪಕ ರವೀಂದರ್ ಪಂಡಿತ್, 1947 ರ ತೀತ್ವಾಲ್‌ನಲ್ಲಿ ಕಳೆದುಹೋದ ಪರಂಪರೆಯನ್ನು ಮರಳಿ ಪಡೆಯಲು ಶೃಂಗೇರಿ ಮಠವು ತಮ್ಮ ಸಮಿತಿಗೆ ಬೆಂಬಲ ನೀಡಿದಕ್ಕಾಗಿ ತಾವು ತುಂಬಾ ಕೃತಜ್ಞನಾಗಿದ್ದೇನೆ ಎಂದು ಹೇಳಿದರು.

ಇದೊಂದು ಐತಿಹಾಸಿಕ ಕ್ಷಣ :

“1947 ರಲ್ಲಿ ತೀತ್ವಾಲ್‌ನಲ್ಲಿ ದಾಳಿಯ ಸಮಯದಲ್ಲಿ ಇಲ್ಲಿನ ಧರ್ಮಶಾಲಾ ಮತ್ತು ಸಿಖ್ ಗುರುದ್ವಾರ ಸಂಪೂರ್ಣವಾಗಿ ದಹಿಸಲ್ಪಟ್ಟಿತ್ತು. 2021 ರ ಸೆಪ್ಟೆಂಬರ್‌ನಲ್ಲಿ ನಮ್ಮ ವಾರ್ಷಿಕ ಯಾತ್ರೆಯಲ್ಲಿ ನಾವು ಸ್ಥಳೀಯರಿಂದ ದೇವಸ್ಥಾನಕ್ಕೆ ಭೂಮಿಯನ್ನು ಪಡೆದುಕೊಂಡಿದ್ದೆವು.  ಸ್ವಾತಂತ್ರ್ಯ ಪೂರ್ವದಲ್ಲಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ಶಾರದಾ ಪೀಠವು ಸೇರ್ಪಡೆಯಾಗಿತ್ತು. ಹಾಗಾಗಿ ಅಧಿಕೃತ ಚಾರ್ರಿ ಮುಬಾರಕ್, ಆ ದಿನಗಳಲ್ಲಿ ತೀತ್ವಾಲ್‌ನಿಂದ ಚಿಲ್ಹಾನಾ ಮೂಲಕ ಆಗ ಶಾರದಾ ಪೀಠಕ್ಕೆ ಹೋಗುತ್ತಿದ್ದರು.” ಎಂದು ತಿಳಿಸಿದರು.

ಈಗ ತೀತ್ವಾಲ್ ನಲ್ಲಿಯೇ ಶಾರದಾ ಯಾತ್ರೆಯ ಪರಿಕ್ರಮ ಪ್ರಾರಂಭವಾಗುವ ಸ್ಥಳದಲ್ಲಿಯೇ ಶಾರದಾ ದೇವಿ ದೇವಸ್ಥಾನ ನಿರ್ಮಿಸುತ್ತಿದ್ದು, ಆ ದೇವಸ್ಥಾನಕ್ಕೆ ಶೃಂಗೇರಿ ಪೀಠದಿಂದ ಪಂಚಲೋಹದ ವಿಗ್ರಹ ಪಡೆಯುತ್ತಿರುವುದು ಒಂದು ಐತಿಹಾಸಿಕ ಕ್ಷಣವಾಗಿದೆ ಎಂದು ರವೀಂದರ್ ಪಂಡಿತ ಹೇಳಿದರು.

ಶಾರದಾ ದೇವಿ ಪಂಚಲೋಹ ವಿಗ್ರಹಕ್ಕೆ ಪೂಜೆ ಸಲ್ಲಿಸುತ್ತಿರುವ ಶ್ರೀ ವಿಧುಶೇಖರ ಭಾರತೀ ಶ್ರೀಗಳು

ಪಾರಂಪರಿಕ ದೇವಾಲಯದ ಕಾಮಗಾರಿಯು ಈ ನವೆಂಬರ್‌ನಲ್ಲಿ ಪೂರ್ಣಗೊಳ್ಳುವ ಸಾಧ್ಯತೆಯಿದೆ. ಹಾಗೂ ಪ್ರತಿಷ್ಠಾಪನೆ ಮತ್ತು ಅಂತಿಮ ಉದ್ಘಾಟನೆಗಾಗಿ ಮೂರ್ತಿಯನ್ನು ಮುಂದಿನ ವರ್ಷದ ಆರಂಭದಲ್ಲಿ ತೀತ್ವಾಲ್‌ಗೆ ಕೊಂಡೊಯ್ಯಲಾಗುತ್ತದೆ. ಏತನ್ಮಧ್ಯೆ, ಸಮಿತಿಯು ಸಿಖ್ ಗುರುದ್ವಾರವನ್ನು ನಿರ್ಮಿಸುತ್ತಿದೆ.  ಅದರ ಕೆಲಸವು ಬಹುತೇಕ ಪೂರ್ಣಗೊಂಡಿದೆ ಎಂದು ಮಾಹಿತಿ ನೀಡಿದರು.

ಮುಂದಿನ ವರ್ಷ ನೂತನ ದೇವಸ್ಥಾನದ ಕುಂಭಾಭಿಷೇಕ :

ಶೃಂಗೇರಿ ಮಠದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ವಿ.ಆರ್.ಗೌರಿಶಂಕರ ಅವರು ಮಾತನಾಡಿ, ಹೊಸ ಶಾರದಾ ದೇವಿ ದೇವಸ್ಥಾನ ನಿರ್ಮಾಣವಾಗುತ್ತಿರುವುದು ಸನಾತನ ಧರ್ಮದ ಅನುಯಾಯಿಗಳಿಗೆ ಹೆಮ್ಮೆಯ ವಿಚಾರವಾಗಿದೆ. ಸನಾತನ ಧರ್ಮವನ್ನು ಅನುಸರಿಸುವ ಪ್ರತಿಯೊಬ್ಬರು ಈ ಪ್ರಮುಖ ಯೋಜನೆಗೆ ಬೆಂಬಲ ನೀಡಬೇಕಾಗಿರುವುದು ಎಲ್ಲರ ಆದ್ಯ ಕರ್ತವ್ಯವಾಗಿದೆ. 1200 ವರ್ಷಗಳ ಹಿಂದೆ ಆದಿ ಶಂಕರಾಚಾರ್ಯರು ಈಗಿನ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಶ್ರೀ ಶಾರದಾ ಸರ್ವಜ್ಞ ಪೀಠಕ್ಕೆ ಭೇಟಿ ನೀಡಿ ಅವರೋಹಣ ನಡೆಸಿದರು. ಹಿಂದುಗಳ ಪವಿತ್ರ ಸ್ಥಳವಾದ ಶ್ರೀ ಸರ್ವಜ್ಞ ಪೀಠಕ್ಕೆ ನಿರಂತರವಾಗಿ ಯಾತ್ರೆ ಆರಂಭಿಸುವ ಬಗ್ಗೆ ಪ್ರಯತ್ನಗಳು ನಡೆದಿದೆ. ಶೃಂಗೇರಿ ಜಗದ್ಗುರುಗಳ ಆಶೀರ್ವಾದಿಂದ ಮುಂದಿನ ವರ್ಷ ನೂತನ ದೇವಸ್ಥಾನದ ಕುಂಭಾಭಿಷೇಕ ಕಾರ್ಯಕ್ರಮ ನೆರವೇರಲಿದೆ ಎಂದು ತಿಳಿಸಿದ್ದಾರೆ.

ಶಾರದಾ ಯಾತ್ರೆ ಪುನಃ ಆರಂಭಿಸುವ ಉದ್ದೇಶ :

ಶೃಂಗೇರಿ ಮಠದ ಶ್ರೀಗಳಿಂದ ಕಾಶ್ಮೀರದ ಶಾರದಾ ಸಂರಕ್ಷಣಾ ಸಮಿತಿಯವರಿಗೆ ಶಾರದಾ ವಿಗ್ರಹ ಹಸ್ತಾಂತರಿಸಿದ ಕ್ಷಣ

ಕಾಶ್ಮೀರದ ಶಾರದಾ ಸಂರಕ್ಷಣಾ ಸಮಿತಿಯ ಸಂಚಾಲಕ ಹಾಗೂ ಹಿರಿಯ ಪತ್ರಕರ್ತ ಮಂಜುನಾಥ ಶರ್ಮ ಮಾತನಾಡಿ, ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಇದ್ದ ಐತಿಹಾಸಿಕ ಶ್ರೀ ಶಾರದಾ ದೇವಿ ದೇವಸ್ಥಾನ ಆಕ್ರಮಣಕಾರರ ದಾಳಿಗೆ ಭಗ್ನಗೊಂಡ ಬಳಿಕ, ಆ ತಾಯಿಗೆ ನೆಲೆ ಇಲ್ಲದೆ ಪೂಜೆಯು ನಿಂತು ಹೋಗಿತ್ತು. ಹಾಗಾಗಿ ಅಲ್ಲಿನ ಪರಂಪರೆಯನ್ನು ಪುನಃ ಸ್ಥಾಪಿಸುವ ನಿಟ್ಟಿನಲ್ಲಿ ಕಾಶ್ಮೀರದ ಗಡಿನಿಯಂತ್ರಣ ರೇಖೆಯ ಗಡಿ ಗ್ರಾಮ ತೀತ್ವಾಲ್ ನಲ್ಲಿ ಶಾರದಾ ದೇವಸ್ಥಾನ ನಿರ್ಮಾಣ ಮಾಡುವ ಯೋಜನೆ ಬಗ್ಗೆ ಶೃಂಗೇರಿ ಮಠದ ಉಭಯ ಶ್ರೀಗಳು ಸಮ್ಮತಿ ಸೂಚಿಸಿ, ತಮ್ಮ ಬೆಂಬಲವನ್ನು ಘೋಷಿಸಿದರು. ಅದಾದ ಬಳಿಕ ಮಠದ ಭಕ್ತರು, ದೇವಿಯ ಅನುಯಾಯಿಗಳ ನೆರವಿನಿಂದ ಕೇವಲ 5 ತಿಂಗಳ ದಾಖಲೆ ಅವಧಿಯಲ್ಲಿ ದೇವಸ್ಥಾನದ ಕಲ್ಲಿನ ಕಟ್ಟಡದ ನಿರ್ಮಾಣ ಕಾಮಗಾರಿ ಮುಗಿಸಿ, ಮೇಲ್ಛಾವಣಿ ಕೆಲಸ ಭರದಿಂದ ನಡೆಯುತ್ತಿದೆ ಎಂದು ವಿವರಿಸಿದರು.

ದೇವಸ್ಥಾನ ಕಾಮಗಾರಿಗೆ ಸಣ್ಣ ಮೊತ್ತದ ದೇಣಿಗೆ ಸಂಗ್ರಹಕ್ಕೂ ಒತ್ತು :

ಈ ದೇವಸ್ಥಾನಕ್ಕೆ ನಾಲ್ಕು ಬಾಗಿಲುಗಳಿದ್ದು, ಇದು ಸನಾತನ ಧರ್ಮದಲ್ಲಿನ ನಾಲ್ಕು ವೇದಗಳ ಸಂಕೇತವಾಗಿದೆ. ವಿಶೇಷವಾಗಿ ದಾನಿಗಳಿಂದಲೇ ನಿರ್ಮಾಣವಾಗುತ್ತಿರುವ ದೇವಸ್ಥಾನಕ್ಕೆ ಉದಾರ ದೇಣಿಗೆಯ ಅವಶ್ಯಕತೆಯಿದ್ದು, ವಿದ್ಯಾ ದೇವತೆ ಸರಸ್ವತಿ ಮಾತೆಗೆ ಒಂದು ದೇಗುಲ ನಿರ್ಮಿಸುವ ಸದುದ್ದೇಶವಿದೆ. ಹೀಗಾಗಿ ದೊಡ್ಡ ಮೊತ್ತದ ಜೊತೆಗೆ ಸಣ್ಣ ದೇಣಿಗೆ ಮಾಡಲು ಒತ್ತು ನೀಡಲಾಗಿದೆ. ತೀತ್ವಾಲ್ ಶಾರದಾ ದೇವಿ ದೇವಸ್ಥಾನದಲ್ಲಿ ಇನ್ನು ಮರದ ಬಾಗಿಲು ಕೆಲಸ, ಅರ್ಚಕರಿಗೆ ಮನೆ, ಯಾತ್ರಿಗಳಿಗೆ ಧರ್ಮಶಾಲೆ, ನೈವೇದ್ಯ ಸಿದ್ಧತೆಗೆ ಪಾಕಶಾಲೆ ಇತ್ಯಾದಿ ಕೆಲಸಗಳು ಬಾಕಿಯಿದೆ. ಈಗಲೂ ದಾನಿಗಳು ಮುಂದೆ ಬಂದು ಶಾರದಾ ದೇವಸ್ಥಾನ ನಿರ್ಮಾಣಕ್ಕೆ ಕಾಣಿಕೆ ಸಲ್ಲಿಸಬಹುದು ಎಂದು ಮಂಜುನಾಥ್ ಶರ್ಮ ವಿನಂತಿಸಿದ್ದಾರೆ.

WhatsApp Join our WhatsApp Channel
Previous Post

‘ನಾದದ ನವನೀತ’ ಸಾಕ್ಷ್ಯಾಚಿತ್ರ ಪ್ರಶಸ್ತಿ ಕುರಿತ ವಿವಾದಕ್ಕೆ ಖ್ಯಾತ ನಿರ್ದೇಶಕ ಗಿರೀಶ್ ಕಾಸರವಳ್ಳಿ ತೆರೆ

Next Post

#KantaraMovie | ಆರು ದಿನಗಳಲ್ಲೇ ‘ಕಾಂತಾರ’ ಸಿನಿಮಾ ಗಳಿಸಿದ್ದೆಷ್ಟು? ಎಷ್ಟು ಭಾಷೆಗಳಲ್ಲಿ ಸೆನ್ಸರ್ ಮಂಡಳಿಗೆ ಹೋಗಿದೆ? ಇಲ್ಲಿದೆ Special Report.

Next Post

#KantaraMovie | ಆರು ದಿನಗಳಲ್ಲೇ 'ಕಾಂತಾರ' ಸಿನಿಮಾ ಗಳಿಸಿದ್ದೆಷ್ಟು? ಎಷ್ಟು ಭಾಷೆಗಳಲ್ಲಿ ಸೆನ್ಸರ್ ಮಂಡಳಿಗೆ ಹೋಗಿದೆ? ಇಲ್ಲಿದೆ Special Report.

ಸಾಂದರ್ಭಿಕ ಚಿತ್ರ

BWSSB NEWS | ಬೆಂಗಳೂರಿನ ಈ ಭಾಗಗಳಲ್ಲಿ ನಾಳೆ ಕಾವೇರಿ ನೀರು ಪೂರೈಕೆ ಬಂದ್....!

Please login to join discussion

Like Us on Facebook

Follow Us on Twitter

Recent News

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 2, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group