Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home BW Special

#KantaraMovie | ಆರು ದಿನಗಳಲ್ಲೇ ‘ಕಾಂತಾರ’ ಸಿನಿಮಾ ಗಳಿಸಿದ್ದೆಷ್ಟು? ಎಷ್ಟು ಭಾಷೆಗಳಲ್ಲಿ ಸೆನ್ಸರ್ ಮಂಡಳಿಗೆ ಹೋಗಿದೆ? ಇಲ್ಲಿದೆ Special Report.

ಕನ್ನಡ ಭಾಷೆಯ 'ಕಾಂತಾರ' ಚಲನಚಿತ್ರ ದಕ್ಷಿಣ ಭಾರತದ 353 ಫಿಲಮ್ ಥಿಯೇಟರ್ ಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಸದ್ಯದಲ್ಲೆ ಅಮೆಜಾನ್ ಒಟಿಟಿ ಪ್ಲಾಟ್ ಫಾರಮ್ ನಲ್ಲೂ ಲಭ್ಯವಾಗುವ ನಿರೀಕ್ಷೆಯಿದೆ

by Bengaluru Wire Desk
October 6, 2022
in BW Special, Public interest
Reading Time: 1 min read
0

ಬೆಂಗಳೂರು, ಅ.6 www.bengaluruwire.com : ಸ್ಯಾಂಡಲ್ ವುಡ್ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುತ್ತಿರುವ ರಿಷಬ್‌ ಶೆಟ್ಟಿ ನಿರ್ದೇಶಿಸಿ ನಟಿಸಿರುವ ‘ಕಾಂತಾರ’ ಚಲನಚಿತ್ರ ಸೆ.30ರಂದು ಬಿಡುಗಡೆಯಾಗಿ ಕೇವಲ 6 ದಿನಗಳಲ್ಲೇ 80 ಕೋಟಿ ರೂ. ಕಲೆಕ್ಷನ್ ಆಗಿದೆ. ಚಿತ್ರಪ್ರೇಮಿಗಳಿಂದ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಎಲ್ಲರ ಮನೆಗೆದ್ದಿದೆ.

ಅ.7ರ ಶುಕ್ರವಾರಕ್ಕೆ ಫಿಲಮ್ ರಿಲೀಸ್ ಆಗಿ ಒಂದ ವಾರ ಮುಗಿಯುವುದರ ಒಳಗಾಗಿ ಇಷ್ಟು ದೊಡ್ಡ ಮೊತ್ತ ಸಂಗ್ರಹವಾಗಿದೆ. ನವರಾತ್ರಿಯ ಸಾಲು ಸಾಲು ರಜೆಗಳಿಂದಾಗಿ ಕಲೆಕ್ಷನ್ ಕೂಡ ಹೆಚ್ಚಾಗಿದೆ. ಕನ್ನಡ ಭಾಷೆಯ ‘ಕಾಂತಾರ’ ಚಲನಚಿತ್ರ ರಾಜ್ಯದ 300 ಥಿಯೇಟರ್, ಮುಂಬೈನ 33, ಕೇರಳ ಹಾಗೂ ತಮಿಳುನಾಡಿನಲ್ಲಿ ತಲಾ 10 ಸಿನಿಮಾ ಮಂದಿರಗಳಲ್ಲಿ ತೆರೆ ಕಂಡಿದೆ. ಕನ್ನಡ ಭಾಷೆಯಲ್ಲಿನ ಈ ಸಿನಿಮಾವೊಂದರಿಂದಲೇ ಬಾಕ್ಸ್ ಆಫೀಸ್ ಕಲೆಕ್ಷನ್ 200 ಕೋಟಿ ರೂ. ಗಡಿ ದಾಟಬಹುದೆಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

ಕರಾವಳಿಯ ಧಾರ್ಮಿಕ ಹಾಗೂ ಸಂಸ್ಕೃತಿಯ ಪ್ರತೀಕವಾಗಿರುವ ದೈವದ ಕೋಲವನ್ನು ಬಹಳ ಪರಿಣಾಮಕಾರಿಯಾಗಿ ತೋರಿಸುವ ಚಿತ್ರ ಹಿಂದಿ, ಮಲೆಯಾಳಂ, ತೆಲುಗು, ತಮಿಳು ಸೇರಿ ನಾಲ್ಕು ಭಾಷೆಗಳಲ್ಲಿ ಬರಲಿದೆ. ತೆಲಗು ಮತ್ತು ಹಿಂದಿ ಭಾಷೆಗೆ ಡಬ್ ಆದ ‘ಕಾಂತಾರ’ ಸಿನಿಮಾ ಕೇಂದ್ರ ಸೆನ್ಸರ್ ಮಂಡಳಿಗೆ ಹೋಗಿದ್ದು, ಸೆನ್ಸರ್ ಪ್ರಮಾಣಪತ್ರ ಬರಬೇಕಿದೆಯಷ್ಟೆ. ಇನ್ನು ತಮಿಳು ಹಾಗೂ ಮಲಯಾಳಮ್ ಭಾಷೆಯ ಚಿತ್ರಗಳು ಸದ್ಯದಲ್ಲಿಯೇ ಸೆನ್ಸರ್ ಮಂಡಳಿಗೆ ಕಳುಹಿಸಲಾಗುತ್ತಿದೆ ಎಂದು ಬೆಂಗಳೂರು ವೈರ್ ಗೆ ಮೂಲಗಳು ತಿಳಿಸಿವೆ.

ಅಮೆಜಾನ್ ಒಟಿಟಿ ಫ್ಲಾಟ್ ಫಾರಮ್ ಗಳಲ್ಲೂ ಸಿನಿಮಾ ವಿತರಣೆಗೆ ಹೊಂಬಾಳೆ ಪ್ರೊಡಕ್ಷನ್ ಹೌಸ್ ಮಾತುಕತೆ ನಡೆಸಿದ್ದು, ಒಟಿಟಿಯಲ್ಲೂ ಚಿತ್ರಪ್ರೇಮಿಗಳು ಈ ಸಿನಿಮಾವನ್ನು‌ ನೋಡಬಹುದಾಗಿದೆ.

“ಕಾಂತಾರ” ಪದದ ಅರ್ಥ ಏನಂದರೆ ನಿಗೂಢ ಕಾಡು. ಕಾಂತಾರ ಸಿನಿಮಾ ಮಾಡುವುದೇ ಒಂದು ಸವಾಲು ಆಗಿತ್ತು. ಅದರಲ್ಲೂ ನಾಡಿನ ನಂಬಿಕೆ, ಆಚಾರ, ವಿಚಾರಗಳಿಗೆ, ದೈವರಾಧನೆಗೆ ಎಲ್ಲೂ ಧಕ್ಕೆಯಾಗದಂತೆ, ಅದರ ಶ್ರೇಷ್ಠತೆ, ಪಾವಿತ್ರ್ಯತೆಯನ್ನು ಕಾಪಾಡಿಕೊಂಡು ಸಿನಿಮಾ ಮಾಡುವುದು ಅಷ್ಟು ಸುಲಭದ ಮಾತಾಗಿರಲಿಲ್ಲ. ಅದನ್ನು ನಿಭಾಯಿಸುವುದರಲ್ಲಿ ಚಿತ್ರತಂಡ ಗೆಲುವು ಸಾಧಿಸಿದೆ.

ಇದನ್ನೂ ಓದಿ : HEALTH TIPS | ಚಳಿಗಾಲದಲ್ಲಿ ಇಂತಹ ತಪ್ಪುಗಳನ್ನು ಮಾಡಲು ಹೋಗದಿರಿ : ಆರೋಗ್ಯ ಹದಗೆಡಲಿದೆ ; ಆಯುರ್ವೇದಲ್ಲಿನ ಸರಳ ಪರಿಹಾರವೇನು? ಇಲ್ಲಿದೆ ತಜ್ಞ ವೈದ್ಯರ ಸಲಹೆ

ಈ ಸಿನಿಮಾ ಕುರಿತಂತೆ ಇತ್ತೀಚೆಗೆ‌ ಮಾಧ್ಯಮಗಳೊಂದಿಗೆ ಮುಕ್ತವಾಗಿ ಮಾತನಾಡಿರುವ ನಟ ರಿಷಬ್ ಶೆಟ್ಟಿ, ತಾವು ಸಣ್ಣ ವಯಸ್ಸಿಂದಲೂ ದೈವ, ದೇವರುಗಳ ಬಗ್ಗೆ ಭಕ್ತಿ ಇಟ್ಟುಕೊಂಡವನು. ಅವುಗಳನ್ನು ಆರಾಧಿಸುತ್ತಾ ಬಂದವನು. ದೈವರಾಧನೆ ಜತೆಗೆ ಬೆಳೆದವನು. ದೈವಗಳ ಕೃಪೆಯಿಂದ ಎಲ್ಲರ ಸಹಕಾರದಿಂದ ‘ಕಾಂತಾರ’ ಸಿನಿಮಾ ಸಾಕಾರಗೊಂಡಿದೆ. ಈ ಸಿನಿಮಾ ನಾವು ಮಾಡಿದ್ದು ಎಂದು ನಾನು ಹೇಳುವುದಿಲ್ಲ. ನಾವು ನಂಬಿರುವ ದೈವಗಳೇ ಮಾಡಿಸಿದ್ದು ಎಂದಷ್ಟೆ ಹೇಳಬಲ್ಲೆ ಎಂದು ಭಾವುಕತೆಯಿಂದ ತಿಳಿಸಿದ್ದರು.

ಈ ಸಿನಿಮಾ ದೈವ ನರ್ತಕ ಕುಟುಂಬಕ್ಕೆ ಅರ್ಪಣೆ: ಇಡೀ ಚಲನಚಿತ್ರವನ್ನು ದೈವ ನರ್ತಕರು ಹಾಗೂ ಅವರ ಕುಟುಂಬಕ್ಕೆ ಸಮರ್ಪಿಸಿದ್ದೇನೆ. ದೈವದ ಸೇವೆ ಮಾಡುವಂತದ್ದು ವಿಶೇಷ ಮತ್ತು ಪುಣ್ಯದ ಕಾರ್ಯ. ಕಾಂತಾರ ಚಿತ್ರ ಹೊರರಾಜ್ಯ ಹಾಗೂ ವಿದೇಶಗಳಲ್ಲೂ ಸದ್ದು ಮಾಡಿದೆ. ಆನೇಕ ವರ್ಷಗಳಿಂದ ಊರಿಗೆ ಬಾರದ, ದೈವಗಳ ಕೋಲ, ನೇಮಗಳಲ್ಲಿ ಪಾಲ್ಗೊಳ್ಳದ ಹಲವಾರು ಮಂದಿ ಇದೀಗ ಊರಿಗೆ ಬರಬೇಕು, ನಮ್ಮ ಮನೆತನದ, ಊರಿನ ಕೋಲ, ನೇಮಗಳಲ್ಲಿ ಪಾಲ್ಗೊಳುವಂತೆ ಪ್ರೇರೇಪಣೆ ಬಂದಿರುವುದಾಗಿ ದೂರವಾಣಿ ಕರೆ, ಮೆಸೇಜ್‌ಗಳಲ್ಲಿ ವ್ಯಕ್ತಪಡಿಸುತ್ತಿದ್ದಾರೆ. ಅಷ್ಟರ ಮಟ್ಟಿಗೆ ಅವರಿಗೆಲ್ಲ ‘ಕಾಂತಾರ’ ಸಿನಿಮಾ ಪ್ರೇರಣೆ ನೀಡಿದೆ ಎಂದಿದ್ದಾರೆ.

ಈ ಚಿತ್ರದ ನಾಯಕಿ ಸಪ್ತಮಿ ಗೌಡಗೆ ನಟಿಸುವ ವೇಳೆ ಕೋಲ, ನೇಮಗಳ ಬಗ್ಗೆ ತಿಳಿದಿರಲಿಲ್ಲ. ಆದರೆ ಚಿತ್ರದಲ್ಲಿ ಪಾತ್ರ ಮಾಡುವ ಸಂದರ್ಭದಲ್ಲಿ ಇದರ ಬಗ್ಗೆ ತಿಳಿದುಕೊಂಡು ಅದರಲ್ಲಿನ ಆಚಾರ, ವಿಚಾರ, ನಂಬಿಕೆಗಳನ್ನು ಚಾಚೂ ತಪ್ಪದೆ ಶ್ರದ್ಧೆಯಿಂದ ಪಾತ್ರ ನಿರ್ವಹಿಸಿದ್ದಾರಂತೆ. ಇನ್ನೂ ಮುಂದೆಯೂ ತಮಗೆ ಅವಕಾಶ ಸಿಕ್ಕಾಗಲೆಲ್ಲಾ ಕರಾವಳಿಯ ಕೋಲ, ನೇಮಗಳಲ್ಲಿ ಭಾಗವಹಿಸುತ್ತೇನೆ ಎಂದಿದ್ದಾರೆ.

ಹೊಂಬಾಳೆ ಪ್ರೊಡಕ್ಷನ್ ನಿಂದ ಕಾಂತಾರ-2..?
ಕಾಂತಾರ ಚಲನಚಿತ್ರ ಅದ್ಭುತ ಯಶಸ್ಸು ಕಾಣುತ್ತಿರುವಂತೆಯೇ ಇದೀಗ ಕಾಂತಾರ-2 ಚಿತ್ರ ಬರಲಿದೆಯೇ ಎಂಬ ಕುತೂಹಲ‌ ಚಿತ್ರರಸಿಕರನ್ನು ಕಾಡುತ್ತಿದೆ. ಆದರೆ ಈತನಕ ‘ಕಾಂತಾರ-2 ಹೆಸರಿನ ಟೈಟಲ್ ನಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನೋಂದಾಯಿಸಿಲ್ಲ ಎಂದು ತಿಳಿದುಬಂದಿದೆ.

ಕಾಂತಾರ-2 ಸಿನಿಮಾ ಕುರಿತ ಕುತೂಹಲವನ್ನು ಹಾಗೆಯೇ ಉಳಿಸಿಕೊಂಡಿರುವ ಚಿತ್ರದ ನಾಯಕ, ನಿರ್ದೇಶಕ ರಿಷಬ್‌ ಶೆಟ್ಟಿ, ಕಾಂತಾರ ಸಿನಿಮಾ ರಿಲೀಸ್ ಮಾಡಿದ್ದೇವೆ. ನಮ್ಮ ರಾಜ್ಯ ಮಾತ್ರವಲ್ಲದೆ ದೇಶ ವಿದೇಶಗಳಲ್ಲೂ ಚಿತ್ರಕ್ಕೆ ಅದ್ಭುತ ಸ್ಪಂದನೆ ವ್ಯಕ್ತವಾಗಿದೆ. ಕಾಂತಾರ-2 ಸಿನಿಮಾ ಬಗ್ಗೆ ಈಗ ಏನನ್ನೂ ಹೇಳಲಾರೆ. ಇದನ್ನು ದೈವೇಚ್ಛೆಗೆ ಬಿಟ್ಟಿದ್ದೇನೆ. ದೈವದ ಇಚ್ಛೆ ಇದ್ದರೆ ಬರಬಹುದು ಎಂದ ಹೇಳುವ ಮೂಲಕ ಸಾಧ್ಯತೆಗಳನ್ನು ಮುಕ್ತವಾಗಿ ತೆರೆದಿಟ್ಟಿದ್ದಾರೆ. ಒಟ್ಟಿನಲ್ಲಿ ದಕ್ಷಿಣ ಭಾರತದ ನಾಲ್ಕು ಭಾಷೆಗಳಿಂದ ಕಾಂತಾರ ಹವಾ ಹಾಗೂ ಕನ್ನಡ ಚಿತ್ರರಂಗದ ಹೆಸರು ಮತ್ತಷ್ಟು ಹೆಚ್ಚಾಗಲಿದೆ.

WhatsApp Join our WhatsApp Channel
Previous Post

KASHMIR SHARADA TEMPLE | ಕಾಶ್ಮೀರದ ಗಡಿ ದೇವಸ್ಥಾನಕ್ಕೆ ಶೃಂಗೇರಿ ಪೀಠದಿಂದ ಪಂಚಲೋಹ ಶಾರದಾ ವಿಗ್ರಹ ಹಸ್ತಾಂತರ

Next Post

BWSSB NEWS | ಬೆಂಗಳೂರಿನ ಈ ಭಾಗಗಳಲ್ಲಿ ನಾಳೆ ಕಾವೇರಿ ನೀರು ಪೂರೈಕೆ ಬಂದ್….!

Next Post
ಸಾಂದರ್ಭಿಕ ಚಿತ್ರ

BWSSB NEWS | ಬೆಂಗಳೂರಿನ ಈ ಭಾಗಗಳಲ್ಲಿ ನಾಳೆ ಕಾವೇರಿ ನೀರು ಪೂರೈಕೆ ಬಂದ್....!

ಸರತಿ ಸಾಲಿನಲ್ಲಿ ದೇವರ ದರ್ಶನಕ್ಕೆ ನಿಂತಿರುವ ಭಕ್ತರು (ಸಾಂದರ್ಭಿಕ ಚಿತ್ರ)

TTD Venkateshwara Temple | ತಿರುಪತಿಗೆ ಭೇಟಿ ನೀಡುವ ಭಕ್ತರ ಸಂಖ್ಯೆಯಲ್ಲಿ ಹೆಚ್ಚಳ : ವೆಂಕಟೇಶ್ವರನ ಸಾಮಾನ್ಯ ದರ್ಶನಕ್ಕೆ ಕಾಯಬೇಕು 30 ಗಂಟೆ?

Please login to join discussion

Like Us on Facebook

Follow Us on Twitter

Recent News

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group