Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

UK PM #RishiSunak | ಬೆಂಗಳೂರಿನ ವಿದ್ಯಾರ್ಥಿ ಭವನ್ ಮಸಾಲೆ ದೋಸೆ ರುಚಿ ಸವಿದಿದ್ದ ಬ್ರಿಟನ್ ನೂತನ ಪ್ರಧಾನಿ ರಿಷಿ ಸುನಕ್…!

ಬ್ರಿಟನ್ ಆರ್ಥಿಕ ಪರಿಸ್ಥಿತಿ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಪ್ರಧಾನಿ ಹುದ್ದೆಯನ್ನು ಚಾಕಚಕ್ಯತೆಯಿಂದ ನಿಭಿಯಿಸುವ ಸವಾಲು ರಿಷಿ ಸುನಕ್ ಅವರ ಮೇಲಿದೆ ಎನ್ನಾತ್ತಾರೆ ರಾಜಕೀಯ ವಿಶ್ಲೇಷಕರು

by Bengaluru Wire Desk
October 25, 2022
in Bengaluru Focus, News Wire
Reading Time: 1 min read
0

ಲಂಡನ್/ಬೆಂಗಳೂರು, ಅ.25 www.bengaluruwir.com : ಬ್ರಿಟನ್ ಪ್ರಧಾನಿ ಹುದ್ದೆಯ ಜವಾಬ್ದಾರಿ ಭಾರತೀಯ ಮೂಲದ ರಿಷಿ ಸುನಕ್ (42) ಹೆಗಲೇರಿದೆ. ಆ ಮೂಲಕ 200 ವರ್ಷಗಳ ಕಾಲ ಭಾರತವನ್ನು ಆಳಿದ್ದ ಬ್ರಿಟನ್‌ನ ಅಧಿಪತ್ಯ ಇದೀಗ ಭಾರತೀಯರೊಬ್ಬರ ತೆಕ್ಕೆಗೆ ಬಂದಿದೆ. ಆ ಮೂಲಕ ಕರ್ನಾಟಕದ ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಅಳಿಯರಾದ ರಿಷಿ ಸುನಕ್ ಬ್ರಿಟನ್ ಚಕ್ರಾಧಿಪತ್ಯವನ್ನು ವಹಿಸಿಕೊಂಡಿದ್ದಾರೆ. ಈ ಮೂಲಕ ಕಳೆದ 200 ವರ್ಷಗಳಲ್ಲೇ ಪ್ರಧಾನಿ ಹುದ್ದೆಗೇರಿದ ಅತಿ ಕಿರಿಯ ಪ್ರಧಾನಿಯಾಗಿದ್ದಾರೆ.

ನೂತನ ಪ್ರಧಾನಿ ರಿಷಿ ಸುನಕ್ ಅವರ ಪತ್ನಿ ಅಕ್ಷತಾ ಮೂರ್ತಿ ಇದೀಗ ಬ್ರಿಟನ್ ನ ಮೊದಲ ಮಹಿಳೆ ಅದು ಬೆಂಗಳೂರಿನವರು ಎಂಬ ಖುಷಿ ಬೆಂಗಳೂರಿನ ಐಟಿ ಕ್ಷೇತ್ರದ ಎಂಜಿನಿಯರ್ ಗಳಿಗೆ ಸಾಕಷ್ಟು ಖುಷಿಗೆ ಕಾರಣವಾಗಿದೆ. ಇನ್ಫೋಸಿಸ್ ನಾರಾಯಣ ಮೂರ್ತಿ ತಮ್ಮ ಅಳಿಯ ರಿಷಿ ಸುನಕ್ ಬ್ರಿಟನ್ ಅತಿದೊಡ್ಡ ಹುದ್ದೆಯನ್ನು ಪಡೆದಿರುವುದಕ್ಕೆ ಅವರನ್ನು ಅಭಿನಂದಿಸಿದ್ದಾರೆ. ಈ ಮಧ್ಯೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ ಮತ್ತು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾರತ ಮೂಲದ ನೂತನ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರಿಗೆ ಶುಭಾಶಯ ಕೋರಿದ್ದಾರೆ.

ಬೆಂಗಳೂರಿನ ವಿದ್ಯಾರ್ಥಿಭವನ್ ಟು ಬ್ರಿಟನ್ ನಂಟು :

ಈ ಹಿಂದೆ ರಿಷಿ ಸುನಕ್ ಬೆಂಗಳೂರಿಗೆ ಬಂದಿದ್ದಾಗ ತಮ್ಮ ಪತ್ನಿ ಅಕ್ಷತಾ ಮೂರ್ತಿ ಜೊತೆಗೆ ಸಿಲಿಕಾನ್ ಸಿಟಿಯ ಬಸವನಗುಡಿ ಗಾಂಧಿಬಜಾರ್ ನಲ್ಲಿರುವ ವಿದ್ಯಾರ್ಥಿಭವನ್ ಹೋಟೆಲ್ ಗೆ ಬಂದು ಇಲ್ಲಿನ ಮಾಸಾಲೆ ದೋಸೆ ಸವಿದು, ಇದಕ್ಕೆ ಫಿದಾ ಆಗಿದ್ದರು. ಈ ವಿಷಯವನ್ನು ವಿದ್ಯಾರ್ಥಿಭವನ್ ಹೋಟೆಲ್ ನವರು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಭಾರತ ಮೂಲದ ರಿಷಿ ಸುನಕ್ ಬ್ರಿಟನ್ ಪ್ರಧಾನಿ ಹುದ್ದೆಗೆ ಏರುತ್ತಿರುವ ಅತಿ ಕಿರಿಯ ವಯಸ್ಸಿನ ವ್ಯಕ್ತಿ. ಅವರಿಗೆ ಶುಭವಾಗಲಿ ಎಂದು ಹಾರೈಸಿದೆ. ಅಲ್ಲದೆ ವಿದ್ಯಾರ್ಥಿ ಭವನ್ ಹೋಟೆಲ್ ಗೆ ರಿಷಿ ಬಂದು ಹೋಗಿದ್ದರ ಫೋಟೋವನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದೆ.

ಈ ಕುರಿತಂತೆ ವಿದ್ಯಾರ್ಥಿಭವನ್ ಹೋಟೆಲ್ ಮಾಲೀಕರಾದ ಅರುಣ್ ಅಡಿಗ ಬೆಂಗಳೂರು ವೈರ್ ಜೊತೆ ಮಾತನಾಡಿ ಹೇಳಿದ್ದು ಹೀಗೆ :

“ಬ್ರಿಟನ್ ನೂತನ ಪ್ರಧಾನಿ ರಿಷಿ ಸುನಕ್ 2019ರಲ್ಲಿ ಪತ್ನಿ ಅಕ್ಷತಾಮೂರ್ತಿ, ಅವರ ಮಕ್ಕಳು ಹಾಗೂ ಇನ್ಫೋಸಿಸ್ ನಾರಾಯಣಮೂರ್ತಿ ದಂಪತಿಗಳೊಂದಿಗೆ ವಿದ್ಯಾರ್ಥಿ ಭವನ್ ಹೋಟೆಲ್ ಗೆ ಬಂದು ಮಸಾಲೆ ದೋಸೆ ಸವಿದಿದ್ದರು. ಹಾಗೂ ಈ ವರ್ಷದ ಜುಲೈ ನಲ್ಲಿ ನಾರಾಯಣಮೂರ್ತಿ ದಂಪತಿಗಳು, ತಮ್ಮ ಬೀಗರಾದ ರಿಷಿ ಸುನಕ್ ತಂದೆ- ತಾಯಿಯರನ್ನು ನಮ್ಮ ಹೋಟೆಲ್ ಗೆ ಕರೆದುಕೊಂಡು ಬಂದಿದ್ದರು. ಸುಧಾಮೂರ್ತಿ ಮತ್ತು ನಾರಾಯಣಮೂರ್ತಿಯವರು ನಮ್ಮ ಹೋಟೆಲ್ ಗೆ ಯಾವಾಗಲೂ ಬಂದು ಹೋಗುತ್ತಾರೆ. ಅವರು ನಮ್ಮ ಖಾಯಂ ಗ್ರಾಹಕರು ಎಂಬುದೇ ನಮಗೊಂದು ಖುಷಿ.”

ರಿಷಿ ಸುನಕ್ ಪೂರ್ವಿಕರು ಮೂಲತಃ ಪಂಜಾಬ್ ಪ್ರಾಂತ್ಯದವರು :

ಯುಕೆ ಪ್ರಧಾನಿ ರಿಷಿ ಸುನಕ್ ಪತ್ನಿ ಮತ್ತು ಇಬ್ಬರು ಪುತ್ರಿಯರ ಜೊತೆಗಿನ ಫೋಟೊ (ಕೃಪೆ : ಟ್ವಿಟರ್ ಮತ್ತು ಇನ್ ಸ್ಟಾಗ್ರಾಂ)

ಸುನಕ್ ಪೋಷಕರು ಮೂಲತಃ ಪಂಜಾಬ್ ಮೂಲದವರು. ಅಂದರೆ ಸುನಕ್ ಅಜ್ಜ- ಅಜ್ಜಿ ಹಿಂದಿನ ಬ್ರಿಟಿಷ್ ಭಾರತವದರು. ಅಂದರೆ ಸುನಕ್ ಪೂರ್ವಿಕರ ಹೂಟ್ಟೂರು ಗುಜರನ್ ವಾಲ ಎಂಬದಾಗಿತ್ತು. ಆ ಸ್ಥಳವೀಗ ಈಗಿನ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿದೆ. ಸುನಕ್ ಪೋಷಕರು ವೃತ್ತಿಯಲ್ಲಿ ಔಷಧ ವ್ಯಾಪಾರಿಗಳು. 1960ರಲ್ಲಿ ಪೂರ್ವ ಆಫ್ರಿಕಾಗೆ ವಲಸೆ ಹೋದ ಈ ಕುಟುಂಬ, ತದನಂತರ ಬ್ರಿಟನ್‌ಗೆ ವಲಸೆ ಹೋಗಿದ್ದರು. 1980ರಲ್ಲಿ ಇಂಗ್ಲೆಂಡ್‌ನ ಸೌತ್ ಹ್ಯಾಂಪ್ಟನ್‌ನಲ್ಲಿ ಜನಿಸಿದ ರುಷಿ, 2009ರಲ್ಲಿ ಇನ್ಫೋಸಿಸ್ ಸಂಸ್ಥಾಪಕ ನಾರಾಯಮಮೂರ್ತಿ ಮಗಳು ಅಕ್ಷತಾ ಮೂರ್ತಿ ಅವರನ್ನು ವಿವಾಹವಾಗಿದ್ದರು. ಅವರಿಗೆ ಅನುಷ್ಕಾ ಮತ್ತು ಕೃಷ್ಣಾ ಎಂಬಿಬ್ಬರು ಹೆಣ್ಣು ಮಕ್ಕಳಿದ್ದಾರೆ.

ರಿಷಿ ಪ್ರಧಾನಿ ಹುದ್ದೆ ಗೆಲವಿನ ಹಿಂದಿನ ಹಾದಿ ಹೀಗಿದೆ :

ಬ್ರಿಟನ್ ನ ಉನ್ನಸ್ಥಾನಕ್ಕೇರಿ ಹೊಸ ಇತಿಹಾಸ ಸೃಷ್ಟಿಸಿದ ಬಿಳಿಯನಲ್ಲದ ಮೊದಲ ವ್ಯಕ್ತಿ ಎಂಬ ಕೀರ್ತಿಗೆ ರಿಷಿ ಸುನಕ್ ಪಾತ್ರರಾಗಿದ್ದಾರೆ. ಅಲ್ಲದೆ ಬ್ರಿಟನ್ ಆಡಳಿತರೂಢ ಕನ್ಸರ್ವೇಟಿವ್ ಪಕ್ಷದ ನಾಯಕತ್ವವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಸ್ಪರ್ಧೆಯಿಂದ ಹಿಂದೆ ಸರಿಯುವ ಹೊತ್ತಿನಲ್ಲೇ ಈ ನಾಯಕತ್ವ ರಿಷಿ ಸುನಕ್ ಪಾಲಾಗುತ್ತದೆ ಎಂದು ಬಹುತೇಕ ನಿರ್ಧಾರವಾಗಿತ್ತು. ಆ ಸಂದರ್ಭದಲ್ಲಿ ಪೆನಿ ಮರ್ಡಂಟ್ ಮಾತ್ರ ಕಣದಲ್ಲಿ ಸ್ಪರ್ಧೆಯಲ್ಲಿದ್ದರು. ಆದರೆ ಅವರು ನಾಮಪತ್ರಕ್ಕೆ ಅಗತ್ಯವಾಗಿದ್ದ ನೂರು ಸಂಸದರ ಬೆಂಬಲ ಪಡೆಯುವಲ್ಲಿ ವಿಫಲರಾದರು. ಆ ಬಳಿಕವಷ್ಟೆ ರಿಷಿ ಅವರ ಗೆಲವನ್ನು ಘೋಷಿಸಲಾಯಿತು.

ಬೋರಿಸ್ ಜಾನ್ಸನ್ ಜುಲೈ ತಿಂಗಳಿನಲ್ಲಿ ಪ್ರಧಾನಿ ಹುದ್ದೆಗೆ ರಾಜಿನಾಮೆ ಕೊಟ್ಟ ನಂತರ, ಪ್ರಧಾನಿ ಪಟ್ಟಕ್ಕೆ ನಡೆದ ಸ್ಪರ್ಧೆಯಲ್ಲಿ ಲಿಜ್ ಟ್ರಸ್ ಗೆಲುವು ಸಾಧಿಸಿ ಪ್ರಧಾನಿ ಹುದ್ದೆಗೇರಿದ್ದರು. ಈ ಸಂದರ್ಭದಲ್ಲಿ ರಿಷಿ ಸುನಕ್ ಕೂಡ ಈ ಹುದ್ದೆಗೆ ಸ್ಪರ್ಧಿಸಿದ್ದರು ರಿಜ್ ಟ್ರಸ್ ಎದುರು ಸೋತಿದ್ದರು. ಈ ಮಧ್ಯೆ ಕೇವಲ 44 ದಿನಗಳಲ್ಲಿಯೇ ಲಿಜ್ ಟ್ರಸ್ ರಾಜಿನಾಮೆ ಘೋಷಣೆ ಮಾಡಿದ್ದರಿಂದ ಕನ್ಸರ್ವೇಟಿವ್ ಪಕ್ಷದ ನಾಯಕತ್ವ ಮತ್ತು ಪ್ರಧಾನಮಂತ್ರಿ ಹುದ್ದೆಗೆ ಅರ್ಹರನ್ನು ಆಯ್ಕೆ ಮಾಡಬೇಕಿತ್ತು.

ಇದೇ ರಿಷಿ ಸುನಕ್ ಅವರು ಪ್ರಧಾನಿ ಪಟ್ಟ ಪಡೆಯಲು ಸುಸಂದರ್ಭ ಒದಗಿ ಬರುವ ಪ್ರಮುಖ ತಿರುವಾಗಿತ್ತು. ಬೋರಿಸ್ ಜಾನ್ಸನ್ ಸಚಿವ ಸಂಪುಟದಲ್ಲಿ ಹಣಕಾಸು ಸಚಿವರಾಗಿದ್ದ ರಿಷಿ, ಬೋರಿಸ್ ವಿರುದ್ಧ ಈ ಹಿಂದೆ ಬಂಡಾಯ ಸಾರಿದ್ದರಿಂದ ಅವರು ಪ್ರಧಾನಿ ಹುದ್ದೆ ಕಳೆದುಕೊಳ್ಳುವಂತೆ ಮಾಡಿತ್ತು. ಇದೀಗ ರಿಷಿ ಸುನಕ್ ಸುಮಾರು 200 ಸಂಸದರ ಬೆಂಬಲ ಪಡೆದು ಪ್ರಧಾನಿಯಾಗಿದ್ದಾರೆ.

ಬ್ರಿಟನ್ ನೂತನ ಪ್ರಧಾನಿ ರಿಷಿ ಸುನಕ್ ಚಿತ್ರ

ಸಂಕಷ್ಟದಲ್ಲಿರುವ ಬ್ರಿಟನ್ ಆರ್ಥಿಕತೆ ಮೇಲುತ್ತುವ ಅನಿವಾರ್ಯತೆ- ದೊಡ್ಡ ಸವಾಲು :

ಬ್ರಿಟನ್ ಪ್ರಸ್ತುತ ಆರ್ಥಿಕವಾಗಿ ಸಾಕಷ್ಟು ಸಂಕಷ್ಟ ಎದುರಿಸುತ್ತಿದ್ದು, ಇಲ್ಲಿನ ಹಣದುಬ್ಬರ ಏರುತ್ತಿದೆ. ಕೊರತೆ ಬಜೆಟ್ ಪರಿಸ್ಥಿತಿಯಿಂದಾಗಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಬ್ರಿಟನ್ ಹಣಕಾಸು ವಿಶ್ವಾಸಾರ್ಹತೆಯೂ ಕಡಿಮೆಯಾಗಿದೆ. ಈ ವಿಶ್ವಾಸಾರ್ಹತೆಯನ್ನು ಮರು ಸ್ಥಾಪಿಸುವುದು ನೂತನ ಭಾರತೀಯ ಮೂಲದ ಪ್ರಧಾನಿಗೆ ದೊಡ್ಡ ಜವಾಬ್ದಾರಿ ಹಾಗೂ ಆದ್ಯತೆಯ ಮೇಲೆ ಇದನ್ನು ನಿಭಾಯಿಸಬೇಕಾದ ಅನಿವಾರ್ಯತೆಯಿದೆ. ನಿರ್ಗಮಿತ ಪ್ರಧಾನಿ ಲಿಜ್ ಟ್ರಸ್ ಅವರ ಕಳಪೆ ಆರ್ಥಿಕ ನೀತಿಯು ಬ್ರಿಟನ್ನಿನ ಬಾಂಡ್ ಮಾರ್ಕೇಟ್ ಕುಸಿಯುವಂತೆ ಮಾಡಿತ್ತು. ಇದಲ್ಲದೆ ತೆರಿಗೆ ಕಡಿತ ಮಾಡುವ ಅವರ ತೀರ್ಮಾನವು ಬ್ರಿಟನ್ ಅನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿತ್ತು. ಸದ್ಯ ಹೊಸ ಪ್ರಧಾನಿ ರಿಷಿ ಸುನಿಕ್ ಅವರಿಗೂ ಈ ಸಂದರ್ಭದಲ್ಲಿ ತೆರಿಗೆ ಕಡಿತ ಮಾಡದೆ ಅನ್ಯ ಮಾರ್ಗವಿಲ್ಲ. ಇದರ ಜೊತೆ ಜೊತೆಗೆ ಸರ್ಕಾರಿ ವೆಚ್ಚವನ್ನು ಕಡಿಮೆ ಮಾಡಬೇಕಿದೆ. ಇದೆಲ್ಲವೂ ಕಠಿಣ ನಿರ್ಧಾರವಾದ್ದರಿಂದ ಯಾವುದೇ ರಾಜಕೀಯ ತಿರುವು, ಬೆಳವಣಿಗೆಗಳು ಏರ್ಪಡುವ ಸಾಧ್ಯತೆಯಿದೆ ಎಂದು ಬ್ರಿಟನ್ ರಾಜಕೀಯ ವಿಶ್ಲೇಷಕರು ತಿಳಿಸಿದ್ದಾರೆ. ಒಟ್ಟಿನಲ್ಲಿ ಇಂತಹ ಕ್ಲಿಷ್ಟ ಪರಿಸ್ಥಿತಿಯಲ್ಲಿ ಪ್ರಧಾನಿ ಹುದ್ದೆಗೇರಿರುವ ರಿಷಿ ಸುನಕ್ ಅವರು ಈ ಸವಾಲುಗಳನ್ನೆಲ್ಲಾ ಹೇಗೆ ಎದುರಿಸುತ್ತಾರೆ ಎಂಬುದು ಸದ್ಯದ ಪ್ರಶ್ನೆ.

WhatsApp Join our WhatsApp Channel
Previous Post

Health Tips | ಆಗಾಗ ಅಜೀರ್ಣ, ಹೊಟ್ಟೆಭಾರ ಸಮಸ್ಯೆ ಎದುರಿಸ್ತಿದ್ದೀರಾ? ಇಂತಹ ಹಲವು ತೊಂದರೆಗಳಿಗೆ ಉಪವಾಸವೇ ಮದ್ದು..! ಉಪವಾಸದಿಂದಾಗುವ ಲಾಭಗಳೇನು ಗೊತ್ತಾ?

Next Post

Defense News | ಹುತಾತ್ಮ ಯೋಧ ಸಂದೀಪ್ ಉನ್ನಿಕೃಷ್ಣನ್ ಪೋಷಕರನ್ನು ಭೇಟಿ ಮಾಡಿದ ಭಾರತೀಯ ಸೇನೆಯ ಆರ್ಟಿಲರಿ ಸೆಂಟರ್ ಸೈನಿಕರು

Next Post
ಹುತಾತ್ಮ ಯೋಧ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಅವರ ಪೋಷಕರನ್ನು ಭೇಟಿ ಮಾಡಿದ ಭಾರತೀಯ ಸೇನೆಯ ಫಿರಂಗಿ ಶಸ್ತ್ರಾಸ್ತ್ರ ಕೇಂದ್ರದ ಮೋಟಾರ್ ಸೈಕಲ್ ಯಾತ್ರೆಯಲ್ಲಿ ಭಾಗವಹಿಸಿದ್ದ ತಂಡ

Defense News | ಹುತಾತ್ಮ ಯೋಧ ಸಂದೀಪ್ ಉನ್ನಿಕೃಷ್ಣನ್ ಪೋಷಕರನ್ನು ಭೇಟಿ ಮಾಡಿದ ಭಾರತೀಯ ಸೇನೆಯ ಆರ್ಟಿಲರಿ ಸೆಂಟರ್ ಸೈನಿಕರು

ವರ್ತೂರು ಹಾಳಾದ ರಸ್ತೆಯಲ್ಲಿ ಶಾಲಾ ಬಸ್ಸೊಂದು ಸಂಚರಿಸುವಾಗ  ಚಕ್ರವು ಹಳ್ಳದಲ್ಲಿ ಹೂತು ಅಪಘಾತವಾಗಿ ಶಾಲಾ ಮಕ್ಕಳನ್ನು ರಕ್ಷಿಸಲಾಗಿತ್ತು. (ಸಾಂದರ್ಭಿಕ ಚಿತ್ರ)

BW SPECIAL | Bangalore Bad Roads | ಬೆಂಗಳೂರಿನ ಕೆಟ್ಟ ರಸ್ತೆಗಳಿಗೆ ಕಾರಣರಾದ ನರಕಾಸುರರು ಇಲ್ಲಿದ್ದಾರೆ....! With CAG Report Evidence

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group