Thursday, August 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

  • Bengaluru Focus

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

  • Bengaluru Focus

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Bangalore Roads | ಪಾದರಾಯನಪುರ ರಸ್ತೆ ಅಗಲೀಕರಣ : ಇನ್ನು ಒಂದು ತಿಂಗಳಲ್ಲಿ 240 ಕೋಟಿ ರೂ. ವೆಚ್ಚದ ಕಾಮಗಾರಿ ಆರಂಭ

ವಸತಿ ಸಚಿವ ವಿ.ಸೋಮಣ್ಣ ಅಧ್ಯಕ್ಷತೆಯಲ್ಲಿ ನಗರದಲ್ಲಿ ಸೋಮವಾರ ನಡೆದ ಸಭೆಯಲ್ಲಿ ನಿರ್ಧಾರ | ಸಿರ್ಸಿ ವೃತ್ತದಿಂದ ವಿಜಯನಗರ ಪೈಪ್ ಲೈನ್ ವರೆಗೆ ಒಟ್ಟು 1.8 ಕಿ.ಮೀ ಉದ್ದದ ರಸ್ತೆ ಅಗಲೀಕರಣ | ಮುಖ್ಯ ರಸ್ತೆ 24 ಮೀಟರ್ ಗೆ ಅಗಲೀಕರಣ | ಕಾಮಗಾರಿಗೆ 1,63,190 ಚ.ಅಡಿ ಜಾಗದ ಅವಶ್ಯಕತೆ ಆ ಪೈಕಿ 1,13,875 ಚ.ಅಡಿ (140 ಆಸ್ತಿಗಳು) ಖಾಸಗಿ ಸ್ವತ್ತು

by Bengaluru Wire Desk
December 5, 2022
in Bengaluru Focus
Reading Time: 2 mins read
0
ಪಾದರಾಯನಪುರ ರಸ್ತೆಯ ವಾಹನ ದಟ್ಟಣೆ ಸಾಂದರ್ಭಿಕ ಚಿತ್ರ

ಪಾದರಾಯನಪುರ ರಸ್ತೆಯ ವಾಹನ ದಟ್ಟಣೆ ಸಾಂದರ್ಭಿಕ ಚಿತ್ರ

ಬೆಂಗಳೂರು, ಡಿ.5 www.bengaluruwire.com : ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಬಿಬಿಎಂಪಿ ಪಶ್ಚಿಮ ವಲಯದ ವಾಹನ ಸವಾರರಿಗೆ ಅಗತ್ಯವಾಗಿದ್ದ ನಗರದ ಪಾದರಾಯನಪುರ ಮುಖ್ಯ ರಸ್ತೆಯ ಅಗಲೀಕರಣ ಕಾಮಗಾರಿಯನ್ನು ಸುಮಾರು 240 ಕೋಟಿ ರೂ. ವೆಚ್ಚದಲ್ಲಿ ಶೀಘ್ರದಲ್ಲೇ ಪ್ರಾರಂಭಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದೆಂದು ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ವಿ.ಸೋಮಣ್ಣ ರವರು ತಿಳಿಸಿದರು.

ಪಾದರಾಯನಪುರ ಮುಖ್ಯ ರಸ್ತೆ ಅಗಲೀಕರಣ ಕುರಿತಂತೆ ಇಂದು ವಿಧಾನಸೌಧದ 3ನೇ ಮಹಡಿಯ ಸಮಿತಿ ಕೊಠಡಿ-313ರಲ್ಲಿ ನಡೆದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿರ್ಸಿ ವೃತ್ತ(ಬಿನ್ನಿಮಿಲ್ ಟ್ಯಾಂಕ್ ಬಂಡ್ ರಸ್ತೆ)ದಿಂದ ವಿಜಯನಗರ ಪೈಪ್ ಲೈನ್ ವರೆಗೆ ಒಟ್ಟು 1.8 ಕಿ.ಮೀ ಉದ್ದದ ಪಾದರಾಯನಪುರ ಮುಖ್ಯ ರಸ್ತೆಯನ್ನು ಅಗಲೀಕರಣ ಮಾಡುವ ಸಲುವಾಗಿ ಪಾಲಿಕೆಯ ಅಭಿಯಂತರರು, ನಗರ ಯೋಜನೆ ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಗಳ ಜೊತೆ ಸಭೆ ನಡೆಸಲಾಯಿತು ಎಂದು ಹೇಳಿದರು.

ಪಾದರಾಯನಪುರ ರಸ್ತೆ ಅಗಲೀಕರಣದಲ್ಲಿ ಯಾವುದೇ ಧಾರ್ಮಿಕ ಸ್ಥಳಗಳಿಗೆ ಧಕ್ಕೆಯಾಗದಂತೆ ವಿಸ್ತೃತ ಯೋಜನಾ ವರದಿಯನ್ನು ಸಿದ್ದಪಡಿಸಲಾಗಿದೆ. ರಸ್ತೆ ಅಗಲೀಕರಣ ಮಾಡುವ ವಿಚಾರವಾಗಿ 2017ರಲ್ಲಿ ಟಿಡಿಆರ್ ನೀಡಲು ಸ್ಥಳೀಯರಲ್ಲಿ ಒಪ್ಪಿಸಲಾಗಿತ್ತು. ಆದರೆ ಟಿಡಿಆರ್ ಬಗ್ಗೆ ಜನರಲ್ಲಿ ಸಾಕಷ್ಟು ಗೊಂದಲಗಳಿರುವುದರಿಂದ ಸುಪ್ರೀಂ ಕೋರ್ಟ್ ನ ಸೂಚನೆಯ ಮೇರೆಗೆ ಪ್ರಸ್ತುತವಿರುವ ದರದಂತೆ ಸ್ಥಳೀಯರಿಗೆ ಪರಿಹಾರದ ಮೊತ್ತವನ್ನು ನೀಡಲಾಗುವುದು ಎಂದರು.

ಬಡ ವರ್ಗದ ಜನ ವಾಸಿಸುವ ಸ್ಥಳದಲ್ಲಿ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಬೇಕಾದರೆ ಹಾಗೂ ನಾಗರಿಕತೆಯನ್ನು ಹೆಚ್ಚಿನ ಮಟ್ಟಕ್ಕೆ ಕೊಂಡಯ್ಯಬೇಕಾದರೆ ರಸ್ತೆಗಳು ಹಾಗೂ ಮೂಲಭೂತಸೌಕರ್ಯ ಅತ್ಯಗತ್ಯವಾಗಿರುತ್ತದೆ. ಈ ನಿಟ್ಟಿನಲ್ಲಿ ಪಾದರಾಯನಪುರ ರಸ್ತೆ ಅಗಲೀಕರಣ ಮಾಡಿದಲ್ಲಿ ಸ್ಥಳೀಯ ಪ್ರದೇಶ ಸಾಕಷ್ಟು ಅಭಿವೃದ್ಧಿಯಾಗಲಿದೆ. ಇದರಿಂದ ಚಾಮರಾಜಪೇಟೆ, ವಿಜಯನಗರ ಹಾಗೂ ಗೋವಿಂದರಾಜನಗರದ ಸುತ್ತಮುತ್ತಲಿನ ಜನಕ್ಕೆ ಸಾಕಷ್ಟು ಅನುಕೂಲವಾಗಲಿದೆ ಎಂದು ಹೇಳಿದರು.

ಒಂದು ತಿಂಗಳಲ್ಲಿ ಎಲ್ಲಾ ಪ್ರಕ್ರಿಯೆ ಪೂರ್ಣ:

ಪಾದರಾಯನಪುರ ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಪ್ರಕ್ರಿಯೆಗಳನ್ನು ಒಂದು ತಿಂಗಳಲ್ಲಿ ಪೂರ್ಣಗೊಳಿಸಿ ಕೆಲಸ ಪ್ರಾರಂಭಿಸಲಾಗುವುದು. ಆ ಬಳಿಕ ಖಾಸಗಿ ಸ್ವತ್ತುಗಳ ಮಾಲೀಕರಿಗೆ ಸೂಕ್ತ ಪರಿಹಾರವನ್ನು ಹಂತ-ಹಂತವಾಗಿ ನೀಡಲಾಗುವುದು ಎಂದು ಹೇಳಿದರು.

ರಸ್ತೆ ಅಗಲೀಕರಣದ ವಿವರ:

ಸಿರ್ಸಿ ವೃತ್ತದಿಂದ ವಿಜಯನಗರ ಪೈಪ್ ಲೈನ್ ವರೆಗೆ ರಸ್ತೆ ಅಗಲೀಕರಣ ಕಾಮಗಾರಿ ಮಾರ್ಗದ ನಕ್ಷೆ

ಚಾಮರಾಜಪೇಟೆ ವ್ಯಾಪ್ತಿಯ ಸಿರ್ಸಿ ವೃತ್ತ(ಬಿನ್ನಿಮಿಲ್ ಟ್ಯಾಂಕ್ ಬಂಡ್ ರಸ್ತೆ)ದಿಂದ ವಿಜಯನಗರ ಪೈಪ್ ಲೈನ್ ವರೆಗೆ ಒಟ್ಟು 1.8 ಕಿ.ಮೀ ಉದ್ದದ ಪಾದರಾಯನಪುರ ಮುಖ್ಯ ರಸ್ತೆಯನ್ನು 24 ಮೀಟರ್ ಗೆ ಅಗಲೀಕರಣ ಮಾಡುವ ಸಲುವಾಗಿ ಒಟ್ಟಾರೆ 1,63,190 ಚ.ಅಡಿ ಜಾಗದ ಅವಶ್ಯಕತೆಯಿದೆ. ಅದರಲ್ಲಿ 1,13,875 ಚ.ಅಡಿ(ಸುಮಾರು 140 ಆಸ್ತಿಗಳು) ಖಾಸಗಿ ಸ್ವತ್ತುಗಳು ಬರಲಿದ್ದು, ಅದಕ್ಕಾಗಿ 140 ಕೋಟಿ ರೂ. ಪರಿಹಾರ ನೀಡಬೇಕಿದೆ. ಉಳಿದಂತೆ ಬಿಬಿಎಂಪಿ, ಕೆಪಿಟಿಸಿಎಲ್, ಜಲಮಂಡಳಿ, ಪೊಲೀಸ್ ಇಲಾಖೆಯ ಸರ್ಕಾರಿ ಜಾಗವಿದ್ದು, ರಸ್ತೆ ಅಗಲೀಕರಣಕ್ಕೆ ಸುಮಾರು 240 ಕೋಟಿ ರೂ. ವೆಚ್ಚವಾಗಲಿದೆ.

ರಸ್ತೆ ಮಾರ್ಗದಲ್ಲಿ 1 ರೈಲ್ವೆ ಒವರ್ ಬ್ರಿಡ್ಜ್, 1 ರಾಜಕಾಲುವೆ ಬ್ರಿಡ್ಜ್ ಹಾಗೂ 2 ಕಲ್ವರ್ಟ್ ಗಳು ಬರಲಿವೆ. ರಸ್ತೆಯ ಎರಡೂ ಬದಿ 1.50 ಮೀಟರ್ ಮಳೆ ನೀರು ಕಾಲುವೆ ಹಾಗೂ 2.50 ಮೀಟರ್ ಪಾದಚಾರಿ ಮಾರ್ಗ ಬರಲಿದ್ದು, ಸಮಗ್ರವಾಗಿ ರಸ್ತೆ ಅಭಿವೃದ್ಧಿಪಡಿಸಲಾಗುತ್ತದೆ.

ಸಭೆಯಲ್ಲಿ ಸ್ಥಳೀಯ ಶಾಸಕರಾದ ಜಮೀರ್ ಅಹ್ಮದ್ ಖಾನ್, ವಲಯ ಜಂಟಿ ಆಯುಕ್ತರಾದ ಯೋಗೇಶ್, ಪ್ರಧಾನ ಅಭಿಯಂತರರಾದ ಪ್ರಹ್ಲಾದ್, ವಲಯ ಮುಖ್ಯ ಅಭಿಯಂತರರಾದ ದೊಡ್ಡಯ್ಯ, ಪಾಲಿಕೆಯ ಅಭಿಯಂತರರು, ನಗರ ಯೋಜನೆ ವಿಭಾಗದ ಅಧಿಕಾರಿಗಳು, ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

#BirdWildlife | ದಾಂಡೇಲಿ ಮಳೆ ಕಾಡುಗಳಲ್ಲಿನ ವಿಶಿಷ್ಟ ಬಾನಾಡಿ ಲೋಕ…!

Next Post

#AirShow2023 | ಏರ್ ಶೋ 2023 : ರಕ್ಷಣಾ ಸಚಿವಾಲಯದ ಅಧಿಕಾರಿಗಳಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ – ಏರ್ ಶೋ ಕುರಿತು ಚರ್ಚೆ

Next Post
ರಕ್ಷಣಾ ಸಚಿವಾಲಯದ ಅಧಿಕಾರಿಗಳು ನಗರದಲ್ಲಿ ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮುಂಬರುವ ಏರ್ ಶೋ2023ರ ಪ್ರದರ್ಶನದ ಕುರಿತು ಚರ್ಚೆ ನಡೆಸಿದರು.

#AirShow2023 | ಏರ್ ಶೋ 2023 : ರಕ್ಷಣಾ ಸಚಿವಾಲಯದ ಅಧಿಕಾರಿಗಳಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ – ಏರ್ ಶೋ ಕುರಿತು ಚರ್ಚೆ

Crime News | ಬೆಂಗಳೂರಿನಲ್ಲಿ ಕಲ್ಲು ಎತ್ತಿ ಹಾಕಿ ವ್ಯಕ್ತಿಯೋರ್ವನ ಬರ್ಬರ ಹತ್ಯೆ : ಸಿಸಿಟಿವಿಯಲ್ಲಿ ಸೆರೆಯಾಯ್ತು ಕೃತ್ಯ

Please login to join discussion

Like Us on Facebook

Follow Us on Twitter

Recent News

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026

ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

August 19, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026

ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

August 19, 2026

Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

August 18, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group