Thursday, August 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

  • Bengaluru Focus

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    Karnataka Housing Board | ಗೃಹ ಮಂಡಳಿ ನೂತನ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

  • Bengaluru Focus

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

    Breaking News | ​ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಮೂವರು ಅಧಿಕಾರಿಗಳ ಅಮಾನತು

    ಕೌಶಲ್ಯ ಕರ್ನಾಟಕ: ವಿಶ್ವ ಯುವ ಕೌಶಲ್ಯ ದಿನಾಚರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇಡಿ ಶಾಕ್: ರಾಜ್ಯದ 21 ಕಡೆ ಏಕಕಾಲದಲ್ಲಿ ಮೆಗಾ ದಾಳಿ

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Vaikunta Ekadasi | ಬೆಂಗಳೂರಿನ ಹಲವು ಕಡೆ ಅದ್ಧೂರಿ ವೈಕುಂಠ ಏಕಾದಶಿ ಆಚರಣೆ : ಪ್ರಮುಖ ದೇವಸ್ಥಾನಗಳ ಅಲಂಕಾರ ಹೇಗಿತ್ತು? ಇಲ್ಲಿದೆ ಚಿತ್ರ ಸಹಿತ ಮಾಹಿತಿ

ಮಾರ್ಗಶಿರ ತಿಂಗಳ ಶುಕ್ಲ ಪಕ್ಷದ ಏಕಾದಶಿಯನ್ನು ಮೋಕ್ಷದ ಏಕಾದಶಿ ಅಥವಾ ವೈಕುಂಠ ಏಕಾದಶಿ ಎಂದು ಹಿಂದು ಪುರಾಣಗಳಲ್ಲಿ ಉಲ್ಲೇಖವಿದೆ.

by Bengaluru Wire Desk
January 2, 2023
in Bengaluru Focus, News Wire, Photo Gallery
Reading Time: 2 mins read
0
ಇಸ್ಕಾನ್ ದೇವಾಲಯದಲ್ಲಿ ಶ್ರೀ ವೆಂಕಟೇಶ್ವರನಿಗೆ ವೈಕುಂಠ ಏಕಾದಶಿಯ ಪ್ರಯುಕ್ತ ಮಾಡಿರುವ ಹೂವಿನ ಅಲಂಕಾರದ ಚಿತ್ರ

ಇಸ್ಕಾನ್ ದೇವಾಲಯದಲ್ಲಿ ಶ್ರೀ ವೆಂಕಟೇಶ್ವರನಿಗೆ ವೈಕುಂಠ ಏಕಾದಶಿಯ ಪ್ರಯುಕ್ತ ಮಾಡಿರುವ ಹೂವಿನ ಅಲಂಕಾರದ ಚಿತ್ರ

ಬೆಂಗಳೂರು, ಜ.2 www.bengaluruwire.com : ವೈಕುಂಠ ಏಕಾದಶಿಯ ಪ್ರಯುಕ್ತ ಸೋಮವಾರ ನಗರದಲ್ಲಿರುವ ಮಲ್ಲೇಶ್ವರ ಟಿಟಿಡಿ, ಇಸ್ಕಾನ್ ಸೇರಿದಂತೆ ನಾನಾ ವೆಂಕಟೇಶ್ವರ ದೇವಾಲಯಗಳಲ್ಲಿ ಬೆಳಗಿನ ಜಾವದಿಂದಲೇ ಶ್ರೀ ವೆಂಕಟೇಶ್ವರನ ದರ್ಶನಕ್ಕೆ ಜನರು ಮಾರುದ್ದ ಸರತಿ ಸಾಲಿನಲ್ಲಿ ನಿಂತು ಭಗವಾನ್ ಮಹಾವಿಷ್ಣುವಿನ ದರ್ಶನ ಮಾಡಿ ಶ್ರೀದೇವರನ್ನು ಕಣ್ತುಂಬಿಕೊಂಡರು.

ಮಾರ್ಗಶಿರ್ಷ ತಿಂಗಳ ಶುಕ್ಲ ಪಕ್ಷದ ಏಕಾದಶಿಯನ್ನು ಮೋಕ್ಷದ ಏಕಾದಶಿ ಅಥವಾ ವೈಕುಂಠ ಏಕಾದಶಿ ಎಂದು ಹಿಂದು ಪುರಾಣಗಳಲ್ಲಿ ಉಲ್ಲೇಖವಿದೆ. ಹೀಗಾಗಿ ಇಂದಿನ ದಿನ ಬ್ರಾಹ್ಮೀ ಮುಹೂರ್ತದಲ್ಲಿ ವೆಂಕಟೇಶ್ವರನ ದರ್ಶನ ಮಾಡಲು ಬೆಳಗ್ಗೆ 3 ಗಂಟೆಯಿಂದಲೇ ನಗರದ ಹಲವು ದೇವಸ್ಥಾನಗಳಲ್ಲಿ ಭಕ್ತರು ಆಗಮಿಸಿದ್ದರು. ಈ ಹಿಂದಿನ ಎರಡು ವರ್ಷಗಳಲ್ಲಿ ಕರೋನಾ ಸೋಂಕು ವ್ಯಾಪಕವಾಗಿ ಹರಡಿದ ಕಾರಣಕ್ಕೆ ವೈಕುಂಠ ಏಕಾದಶಿಯಂದು ಭಕ್ತರ ಸಂಖ್ಯೆ ಸಾಕಷ್ಟು ಕಡಿಮೆಯಿತ್ತು. ಆದರೆ ಈ ಬಾರಿ ಹಲವು ದೇವಸ್ಥಾನಗಳಲ್ಲಿ ಮುಂಜಾನೆಯಿಂದಲೇ ಭಕ್ತರು ಸಡಗರದಿಂದ ದೇವರ ದರ್ಶನಕ್ಕೆ ಕಾತುರರಾಗಿ ಕಾಯುತ್ತಿದ್ದರು.

  • ಇಸ್ಕಾನ್ ನಲ್ಲಿರುವ ಶ್ರೀ ವೆಂಕಟೇಶ್ವರನಿಗೆ ಅಲಂಕಾರ ಮಾಡಿರುವ ಚಿತ್ರ
  • ಬೆಂಗಳೂರಿನ ಕೋಟೆ ವೆಂಕಟೇರಮಣ ದೇವಸ್ಥಾನದಲ್ಲಿ ಶ್ರೀ ಮಹಾವಿಷ್ಣುವಿಗೆ ಮಾಡಿರುವ ಅಲಂಕಾರ
  • ಕೆಂಗೇರಿ ಉಪನಗರದ ಗಣೇಶನ ದೇವಸ್ಥಾನದಲ್ಲಿ ವೆಂಕಟೇಶ್ವರನಿಗೆ ಆರತಿ ಮಾಡುತ್ತಿರುವ ವೈಭವದ ಗಳಿಗೆಯ ಚಿತ್ರ
  • ತಿರುಪತಿಯ ಶ್ರೀ ವೆಂಕಟೇಶ್ವರ ದೇವಸ್ಥಾನದ ಮುಂಭಾಗ ತರಹೇವಾರಿ ಹೂವುಗಳಿಂದ ಅಲಂಕಾರ ಮಾಡಿರುವುದು (ಚಿತ್ರಕೃಪೆ : ಟಿಟಿಡಿ)
  • ಮಲ್ಲೇಶ್ವರದಲ್ಲಿನ ಟಿಟಿಡಿ ಶ್ರೀ ವೆಂಕಟೇಶ್ವರ ದೇವಸ್ಥಾನವನ್ನು ಹಲವು ಬಗೆಯ ಹೂವುಗಳಿಂದ ಅಲಂಕರಿಸಿರುವುದು. ಮುಂಜಾನೆಯಿಂದಲೇ ಭಕ್ತರ ದಂಡು ಇಲ್ಲಿ ಹರಿದು ಬಂದಿದೆ.

ವೈಕುಂಠ ಏಕಾದಶಿಯ ಹಿನ್ನಲೆಯಲ್ಲಿ ಮಲ್ಲೇಶ್ವರದಲ್ಲಿರುವ ಟಿಟಿಡಿ ವೆಂಕಟೇಶ್ವರನ ದೇವಸ್ಥಾನದಲ್ಲಿ ವೇದಪಾರಾಯಣ, ನಾದಸ್ವರ, ವಿಷ್ಣುಸಹಸ್ರ ಪಾರಾಯಣ, ಸಂಗೀತ, ಭಜನೆ, ಹರಿಕಥೆ, ಭರತನಾಟ್ಯ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ಬೆಂಗಳೂರಿನ ಇಸ್ಕಾನ್ ನಲ್ಲಿನ ಶ್ರೀನಿವಾಸ ಗೋವಿಂದ ದೇವಸ್ಥಾನದಲ್ಲಿ ವೈಕುಂಠ ಏಕಾದಶಿಯ ದಿನದಂದು ಬೆಳಗ್ಗೆ 3 ಗಂಟೆಯಿಂದಲೇ ಗೋವಿಂದನಿಗೆ ಸುಪ್ರಭಾತ ಸೇವೆ, ಮಂಗಳಾರತಿ, ಬೆಳಗಿನ ಜಾವ 3.45ರಿಂದ 5 ಗಂಟೆಯವರೆಗೆ ಶ್ರೀನಿವಾಸ ಗೋವಿಂದ ಅಭಿಷೇಕ, 5 ರಿಂದ 5.45ರ ತನಕ ಲಕ್ಷ್ಮಿನಾರಾಯಣ ಅಲಂಕಾರ ಮಾಡಿದ ಉತ್ಸವ ಮೂರ್ತಿಯನ್ನು ವೈಕುಂಠ ದ್ವಾರದ ತನಕ ಮೆರವಣಿಗೆಯನ್ನು ಕೊಂಡೊಯ್ಯಲಾಗಿತ್ತು. ಆನಂತರ ವೈಕುಂಠ ದ್ವಾರ ಕಾರ್ಯಕ್ರಮಗಳು ಜರುಗಿದವು.

ತಿರುಪತಿ ಶ್ರೀ ವೆಂಕಟೇಶ್ವರನ ಸನ್ನಿಧಾನಕ್ಕೆ ಟಿಟಿಡಿ ಸದಸ್ಯ ಹಾಗೂ ಶಾಸಕ ಎಸ್.ಆರ್.ವಿಶ್ವನಾಥ್ ಮಂಗಳವಾರ ಕುಟುಂಬ ಸಮೇತರಾಗಿ ತೆರಳಿ ದರ್ಶನ ಪಡದ ಚಿತ್ರ. ಹಿಂಭಾಗದಲ್ಲಿರುವುದು ದೇವಸ್ಥಾನದ ಚಿನ್ನದ ರಥ

ವೈಕುಂಠದ ಸ್ವರ್ಗದ ಬಾಗಿಲು ತೆಗೆಯುವ ದಿನವಾದ ವೈಕುಂಠ ಏಕಾದಶಿಯ ದಿನದಂದು ಉಪವಾಸ ಮಾಡಿ, ದೇವರನ್ನು ಭಕ್ತಿಯಿಂದ ಪೂಜಿಸುವುದರಿಂದ ಮೋಕ್ಷ ಪ್ರಾಪ್ತಿಯಾಗುತ್ತದೆ ಎಂಬ ಬಲವಾದ ನಂಬಿಕೆ ಹಿಂದುಗಳಲ್ಲಿದೆ. ವೈಕುಂಠ ಏಕಾದಶಿಯ ದಿನ ಬಾಲಾಜಿಯ ದರ್ಶನ ಮಾಡಿ, ವೈಕುಂಠ ದ್ವಾರದ ಮೂಲಕ ಹೊರಗೆ ಬರುವುದರಿಂದ ಏಳು ಜನ್ಮದಲ್ಲಿ ಮಾಡಿದ ಪಾಪಗಳೂ ಪರಿಹಾರವಾಗುತ್ತದೆ. ಅಲ್ಲದೇ, ಈ ದಿನ ಶ್ರೀನಿವಾಸ ಉತ್ಸವ ಮೂರ್ತಿಯ ಜೋಕಾಲಿಗೆ ಭಕ್ತರು ತಮ್ಮ ತಲೆಯನ್ನು ತಾಕಿಸಿ ಬರುತ್ತಾರೆ. ಇದಕ್ಕೆ ಕಾರಣ ತಮಗೆ ಸಾಕಷ್ಟು ಒಳಿತಾಗುತ್ತದೆ ಎಂದು ಹೇಳುತ್ತಾರೆ ಪುರೋಹಿತರು. ವೈಕುಂಠ ಏಕಾದಶಿ ದಿನದಂದು ಶ್ರೀ ಮನ್ ಮಹಾವಿಷ್ಣು ತನ್ನ ಗರುಡ ವಾಹನದ ಮೇಲೆ ಕೂತು ಮೂರು ಕೋಟಿ ದೇವತೆಗಳೊಂದಿಗೆ ಭೂಲೋಕಕ್ಕೆ ಇಳಿದು ಬಂದು ಭಕ್ತರಿಗೆ ದರ್ಶನ ನೀಡುತ್ತಾನೆ ಎಂಬ ಪ್ರತೀತಿಯಿದೆ.

ಬೆಂಗಳೂರಿನಲ್ಲಿ ವೈಕುಂಠ ಏಕಾದಶಿ ದಿನವಾದ ಸೋಮವಾರ ಪದ್ಮನಾಭ ನಗರದಲ್ಲಿರುವ ದೇವಗಿರಿ ದೇವಸ್ಥಾನ, ಕೆ.ಆರ್.ಮಾರ್ಕೇಟ್ ಬಳಿಯಿರುವ ಕೋಟೆ ವೆಂಕಟರಮಣ ದೇವಸ್ಥಾನ, ಶ್ರೀನಗರದಲ್ಲಿರುವ ವೆಂಕಟೇಶ್ವರನ ದೇವಸ್ಥಾನ, ಕೆಂಗೇರಿ ಉಪನಗರದ ಗಣೇಶ ದೇವಸ್ಥಾನದಲ್ಲಿನ ವೆಂಕಟೇಶ್ವರ ಸೇರಿದಂತೆ ನಾನಾ ದೇವಸ್ಥಾನಗಳಲ್ಲಿ ಶ್ರೀಮನ್ ಮಹಾವಿಷ್ಣುವಿನ ಮೂರ್ತಿಗೆ ವೈಭದ ಅಲಂಕಾರ ಮಾಡಿ ಸಿಂಗರಿಸಲಾಗಿತ್ತು. ಇನ್ನು ತಿರುಪತಿಯ ತಿರುಮಲ ದೇವಸ್ಥಾನದಲ್ಲಿ ಜ.2ರ ವೈಕುಂಠ ಏಕಾದಶಿಯ ದಿನದಿಂದು ಬೆಳಗಿನ ಜಾವ 1.30ರಿಂದಲೇ ವೈಕುಂಠ ದ್ವಾರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸರ್ವ ದರ್ಶನ ಟಿಕೇಟ್ ಪಡೆದುಕೊಂಡವರಿಗೆ ವೈಕುಂಠ ದ್ವಾರ ದರ್ಶನಕ್ಕೆ ವಿಶೇಷ ಅವಕಾಶ ಒದಗಿಸಲಾಗಿದೆ. ಜ.11ರ ವರೆಗೆ ಈ ವಿಶೇಷ ದರ್ಶನ ವ್ಯವಸ್ಥೆಯನ್ನು ತಿರುಪತಿ ತಿರುಮಲ ದೇವಸ್ಥಾನ ಟ್ರಸ್ಟ್ (TTD) ಆಯೋಜನೆ ಮಾಡಿದೆ.

WhatsApp Join our WhatsApp Channel
Previous Post

#Viral Video | ರೇಷ್ಮೆ ಸೀರೆಯನ್ನು ನೋಡಿರುತ್ತೀರಿ, ರೇಷ್ಮೆಯ ರೀತಿಯ ಕೂದಲನ್ನು ಹೊಂದಿದ ಈ ಸಿಂಹದ ವೈರಲ್ ವಿಡಿಯೋ ನೋಡಿ…!

Next Post

Online Gaming | ಆನ್ ಲೈನ್ ಗೇಮಿಂಗ್ ಗೆ ಕೇಂದ್ರ ಸರ್ಕಾರದ ಅಂಕುಶ….!

Next Post
ಮಬೈಲ್ ಗೇಮಿಂಗ್ ಆಟದ ಸಾಂದರ್ಭಿಕ ಚಿತ್ರ

Online Gaming | ಆನ್ ಲೈನ್ ಗೇಮಿಂಗ್ ಗೆ ಕೇಂದ್ರ ಸರ್ಕಾರದ ಅಂಕುಶ....!

ಕೋರಮಂಗಲ ಈಜಿಪುರ ಮೇಲ್ಸೇತುವೆ ಕಾಮಗಾರಿ ಸ್ಧಗಿತಗೊಂಡಿರುವ ಸಾಂದರ್ಭಿಕ ಚಿತ್ರ

#Ejipura Flyover | ಅರ್ಧಕ್ಕೆ ನಿಂತಿದ್ದ ಈಜಿಪುರ ಫ್ಲೈ ಓವರ್ ಮುಂದಿನ ವರ್ಷಕ್ಕೆ ರೆಡಿ....!

Please login to join discussion

Like Us on Facebook

Follow Us on Twitter

Recent News

ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

August 20, 2026

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

August 20, 2026

GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

August 19, 2026

ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

August 19, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group