Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

#Film News | ಇವನು ‘ನಮ್ ಏರಿಯಾ ಹೀರೋ’; ಸಿನಿಮಾ ಫೀಲಿಂಗ್ ಕೊಡುವ ಕಿರುಚಿತ್ರದಲ್ಲಿ ಯುವಪಡೆಯದ್ದೇ ಕಾರುಬಾರು

ಈ ಶಾರ್ಟ್ ಫಿಲಮ್ ಕೇವಲ 15.54 ನಿಮಿಷದ ಅವಧಿಯದ್ದಾದರೂ, 2.30 ನಿಮಿಷ ಒಂದು ಹಾಡನ್ನು ಈ ಕಿರುಚಿತ್ರ ಹೊಂದಿರೋದು ವಿಶೇಷ.

by Bengaluru Wire Desk
February 7, 2023
in News Wire, Video
Reading Time: 1 min read
1

ಬೆಂಗಳೂರು, ಫೆ.4 www.bengaluruwire.com : ಬಾಲಿವುಡ್, ಸ್ಯಾಂಡಲ್ ವುಡ್ ಸೇರಿದಂತೆ ಹಲವು ಭಾಷೆಗಳಲ್ಲಿ ದೊಡ್ಡ ಪರದೆಯ ಮೇಲೆ ಹೊಸ ಹೊಸ ಚಲನಚಿತ್ರಗಳು ಬರ್ತಾನೆ ಇರುತ್ತೆ. ಅದರ ಮಧ್ಯೆ ವಿಭಿನ್ನ ಕಥೆ, ಪ್ರಯೋಗದ ಮೂಲಕ ಚಿತ್ರರಸಿಕರನ್ನು ಸೆಳೆಯುವ ಸಿನಿಮಾಗಳು ತೆರೆ ಕಾಣುತ್ತವೆ. ಕಿರುಚಿತ್ರಗಳು ಈ ವಿಚಾರದಲ್ಲಿ ಹಿಂದೆ ಬಿದ್ದಿಲ್ಲ.

ಸೋಶಿಯಲ್ ಮೀಡಿಯಾ ತನ್ನ ಪ್ರಭಾವ ಹೆಚ್ಚಿಸಿಕೊಂಡ ಮೇಲಂತೂ ಹೊಸ ಹೊಸ ಕಿರುಚಿತ್ರಗಳು ಜನರ ಮನಸ್ಸನ್ನು ಸೆಳೆಯುತ್ತಿದೆ. ಆ ಮೂಲಕ ಕಿರುಚಿತ್ರಗಳಿಂದ ದೊಡ್ಡ ಪರದೆಯ ಚಲನಚಿತ್ರಗಳಿಗೆ ಹೊಸ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ. ಇದೀಗ ಫೆ.3ರಂದು ಯೂಟ್ಯೂಬ್ ನಲ್ಲಿ ವಿ.ಎಸ್.ಎಂಟರ್ ಪ್ರೈಸಸ್ ಬ್ಯಾನರ್ ಅಡಿಯಲ್ಲಿ ‘ನಮ್ ಏರಿಯಾ ಹೀರೋ’ ಕಿರುಚಿತ್ರ ತೆರೆ ಕಂಡಿದೆ. ಹೀಗೆ ತೆರೆಕಂಡ ನಂತರ ಫೆ.4ರ ಮಧ್ಯಾಹ್ನದ ವೇಳೆಗಾಗಲೇ 27,608 ಮಂದಿ ಈ ಕಿರುಚಿತ್ರವನ್ನು ನೋಡಿದ್ದಾರೆ.

ಒಬ್ಬ ಸಾಮಾನ್ಯ ವರ್ಗದ ಯುವಕನೊಬ್ಬ ತಾನು ಸಿನಿಮಾ ರಂಗದಲ್ಲಿ ಹೀರೋ ಆಗಿ ಮಿಂಚಬೇಕು ಎಂದು ಆಸೆಯಿಟ್ಟುಕೊಂಡು ಪ್ರಯತ್ನ ನಡೆಸುತ್ತಿರುವಾಗಲೇ ಪ್ರೀತಿಯ ಮೋಹದಲ್ಲಿ ಸಿಲುಕಿಯೂ ಕೊನೆಗೂ ಒಂದೆಡೇ ಪ್ರೀತಿ ಮತ್ತೊಂದು ಕಡೆ ತನ್ನ ನಟನಾಗುವ ಕನಸು ಎರಡೂ ನನಸಾಗಿ ಯಶಸ್ವಿಯಾಗುವ ಕಥಾ ಹಂದರವನ್ನು ಈ ಚಿತ್ರ ಹೊಂದಿದೆ. ಈ ಶಾರ್ಟ್ ಫಿಲಮ್ ಕೇವಲ 15.54 ನಿಮಿಷದ ಅವಧಿಯದ್ದಾದರೂ, 2.30 ನಿಮಿಷ ಒಂದು ಹಾಡನ್ನು ಈ ಕಿರುಚಿತ್ರ ಹೊಂದಿರೋದು ವಿಶೇಷ. ಇದೇ ಮೊದಲ ಬಾರಿಗೆ ಶಾರ್ಟ್ ಫಿಲಂನಲ್ಲಿ ಇಂತಹ ಪ್ರಯತ್ನ ನಡೆಸಲಾಗಿದೆ ಎಂದು ಚಿತ್ರ ನಿರ್ಮಿಸಿದ ತಂಡ ಹೇಳಿಕೊಂಡಿದೆ.

ಈ ಚಿತ್ರದ ನಾಯಕ ನಟನಾಗಿ ದಿನೇಶ್, ಕಿರುಚಿತ್ರದ ನಟಿಯಾಗಿ ರೂಪಶೆಟ್ಟಿ ಅಭಿನಯಿಸಿದ್ದಾರೆ. ‘ನಮ್ ಏರಿಯಾ ಹೀರೋ’ ಕಿರುಚಿತ್ರಕ್ಕೆ ದಿಲೀಪ್ ನಿರ್ದೇಶಕರಾಗಿ, ಮಂಜುಳಾ ವಸಂತ್ ನಿರ್ಮಾಪಕರಾಗಿದ್ದರೆ, ಉಪ ನಿರ್ದೇಶಕ ರೋಹಿತ್ ಶಂಕರ್, ಕೊರಿಯೋಗ್ರಫರ್ ರಾಜ್ ಕಿಶೋರ್ ತಮ್ಮ ಕಾರ್ಯವನ್ನು ನಿರ್ವಹಿಸಿದ್ದಾರೆ. ಅವತಾರ್ ಸ್ಟುಡಿಯೋದಲ್ಲಿ ಡಬ್ಬಿಂಗ್ ನಡೆಸಲಾಗಿದೆ.

ಉಳಿದಂತೆ ತಾರಾಗಣದಲ್ಲಿ, ದಿಲೀಪ್, ಗುರು, ನಿತಿನ್, ಬಸವರಾಜ್, ರಮೇಶ್, ಶಶಿ, ವರುಣ, ವಿಷ್ಣು, ಅಭಿಷೇಕ್, ಸುಮನ್ ಮತ್ತಿತರರು ಅಭಿನಯಿಸಿದ್ದಾರೆ. ಪ್ರತಿಯೊಬ್ಬರೂ ತಮ್ಮ ಪಾತ್ರಗಳಲ್ಲಿ ತನ್ಮಯತೆಯಿಂದ ಅಭಿಯನಯಿಸಿ, ಒಂದು ದೊಡ್ಡ ಪರದೆಯ ಸಿನಿಮಾದಲ್ಲಿ ಕೆಲಸ ಮಾಡಿದಂತೆ ನಟಿಸಿದ್ದಾರೆ. ಎಲ್ಲೂ ಕೂಡ ನೋಡುಗರಿಗೆ ಇದೊಂದು ಕಿರುಚಿತ್ರ ಅಂತ ಅನಿಸದಂತೆ ಈ ಚಿತ್ರವನ್ನು ಅಚ್ಚುಕಟ್ಟಾಗಿ ಮಾಡಿ ಮುಗಿಸಿದ್ದಾರೆ.

ಫೆ.3ರಂದು ಸಂಜೆ 5 ಗಂಟೆಗೆ ನಿಂಗರಾಜ್ ಸಿಂಗಡಿ ಯೂಟ್ಯೂಬ್ ಚಾನಲ್ (Youtube) ನಲ್ಲಿ ‘ನಮ್ ಏರಿಯಾ ಹೀರೋ’ ಕಿರುಚಿತ್ರ ಅಪಲೋಡ್ ಆಗಿದೆ. ಇತ್ತೀಚೆಗೆ ನಡೆದ ಪ್ರಿಮಿಯರ್ ಶೋನಲ್ಲಿ ಕಲಾವಿದರು, ಚಿತ್ರರಸಿಕರು ಈ ಕಿರುಚಿತ್ರದ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಅಂದಹಾಗೆ ‘ನಮ್ ಏರಿಯಾ ಹೀರೋ’ ಕಿರುಚಿತ್ರದ ನಾಯಕ ದಿನೇಶ್ ಅಲಿಯಾಸ್ ದಿನಿ ಮೂಲತಃ ನೆಲಮಂಗದವರು. ಬಿಇ ಮೆಕಾನಿಕಲ್ ಎಂಜಿನಿಯರಿಂಗ್ ಓದು ಮುಗಿಸುವ ಹಂತದಲ್ಲಿ ಸಿನಿಮಾ ರಂಗದಲ್ಲಿ ನಾಯಕನಾಗಬೇಕು ಎಂದು ಕನಸು ಹೊತ್ತುಕೊಂಡು ಬಂದವರು. ಈಗಾಗಲೇ ಬಿಸ್ಕೇಟ್, ಚಾಕ್ಲೇಟ್ ಹಲ್ವಾ, ಚುರ್ ಮುರಿಯಂತಹ ಕಿರುಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಈ ಕಿರುಚಿತ್ರಗಳೆಲ್ಲವೂ ಯುಟ್ಯೂಬ್, ಫೇಸ್ ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸದ್ದು ಮಾಡಿತ್ತು. ಇವುಗಳು ಹಾಸ್ಯಪ್ರಧಾನವಾಗಿದ್ದರೆ, ‘ನಮ್ ಏರಿಯಾ ಹೀರೋ’ ಕಿರುಚಿತ್ರ ಪೂರ್ಣ ಪ್ರಮಾಣದ ಚಲನಚಿತ್ರದ ರೀತಿಯಲ್ಲಿ ಚಿತ್ರ ನಿರ್ಮಿಸುವ ಪ್ರಯತ್ನ ನಡೆಸಿದ್ದಾರೆ. ಈ ಚಿತ್ರದ ಪೋಸ್ಟರ್ ಅನ್ನು ಇತ್ತೀಚೆಗೆ 20ಕ್ಕೂ ಅಧಿಕ ಸೆಲೆಬ್ರೆಟಿಗಳು ಬಿಡುಗಡೆ ಮಾಡಿ, ತಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ ಗಳಲ್ಲಿ ಹಾಕಿಕೊಳ್ಳುವ ಮೂಲಕ ಸಿನಿಮಾಗೆ ಬೆಂಬಲ ನೀಡಿದ್ದರು.

“ಬೆಂಗಳೂರು ವೈರ್” ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ Subscribe ಆಗಲು Facebook, Telegram, Twitter, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

#Airshow2023 Tickets | ಏರ್ ಶೋಗೆ ಸುಲಭವಾಗಿ ಟಿಕೆಟ್ ಪಡೆಯುವುದು ಹೇಗೆ? ವೈಮಾನಿಕ ಪ್ರದರ್ಶನ ಸಮಯವೇನು? ಇಲ್ಲಿದೆ ಪೂರ್ಣ ಮಾಹಿತಿ

Next Post

#BMTCBUS | ರಾಜ್ಯ ಸರ್ಕಾರದ ಬಜೆಟ್ ನಲ್ಲಿ ಬಿಎಂಟಿಸಿ ಸಂಸ್ಥೆಗೆ ಹೆಚ್ಚಿನ ಅನುದಾನಕ್ಕಾಗಿ ಸಾರ್ವಜನಿಕರ ಆಗ್ರಹ

Next Post
ಬಿಎಂಟಿಸಿ ಬಸ್ ಸಾಂದರ್ಭಿಕ ಚಿತ್ರ

#BMTCBUS | ರಾಜ್ಯ ಸರ್ಕಾರದ ಬಜೆಟ್ ನಲ್ಲಿ ಬಿಎಂಟಿಸಿ ಸಂಸ್ಥೆಗೆ ಹೆಚ್ಚಿನ ಅನುದಾನಕ್ಕಾಗಿ ಸಾರ್ವಜನಿಕರ ಆಗ್ರಹ

ಕಲಾವಿದ ಕೆ.ಸೋಮಶೇಖರ್ ರಚಿಸಿದ ನಾಡದೇವತೆಯ ಚಿತ್ರವನ್ನು ರಾಜ್ಯ ಸರ್ಕಾರ ಅಧಿಕೃತವೆಂದು ಆದೇಶಿಸಿದೆ.

Nadadevate | ನಾಡಿಗೊಂದೇ ಕನ್ನಡಾಂಬೆಯ ಭಾವಚಿತ್ರ : ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

Please login to join discussion

Like Us on Facebook

Follow Us on Twitter

Recent News

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 2, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group