Friday, June 12, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

  • Bengaluru Focus

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

  • Bengaluru Focus

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home BW Special

BW EXCLUSIVE INTERVIEW | Karnataka Assembly Election 2023 |‘ಈ ಬಾರಿಯ ಚುನಾವಣೆಯಲ್ಲಿ M3 ಹೊಸ ವಿದ್ಯುನ್ಮಾನ ಯಂತ್ರಗಳ ಬಳಕೆ’ : ಸಿಇಒ ಮನೋಜ್ ಕುಮಾರ್ ಮೀನಾ

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು ಬಹುತೇಕ ಅಂತಿಮ ಹಂತ ತಲುಪಲಿದೆ | “ಚಿಲುಮೆ” ಸಂಸ್ಥೆಯ ಲೋಪದ ಕುರಿತ ದೂರಿನ ಬಗ್ಗೆ ಪ್ರಾದೇಶಿಕ ಆಯುಕ್ತರು ತನಿಖೆ ಪೂರ್ಣಗೊಳಿಸಿ ವರದಿ ನೀಡಿದ್ದಾರೆ | ಶೇ.70 ಕ್ಕಿಂತ ಹೆಚ್ಚಿನ ಮತದಾರರು ಆಧಾರ್‌ ನೊಂದಿಗೆ ಚುನಾವಣಾ ಗುರುತಿನ ಚೀಟಿ ಜೋಡಣೆ ಮಾಡಿದ್ದಾರೆ

by Bengaluru Wire Desk
February 27, 2023
in BW Special, Public interest
Reading Time: 2 mins read
0
ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ

ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ

ಬೆಂಗಳೂರು, ಫೆ.27 www.bengaluruwire.com :  ಇನ್ನು ಕೆಲವೇ ದಿನಗಳಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೆ ಸಂಬಂಧಿಸಿದಂತೆ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರನ್ನು ‘ಬೆಂಗಳೂರು ವೈರ್’ ಎಕ್ಸ್ ಕ್ಲೂಸಿವ್ ಸಂದರ್ಶನ ಮಾಡಿದ್ದು, ಅವರು ಮುಂಬರುವ ವಿಧಾನಸಭಾ ಚುನಾವಣೆ 2023ರ ಬಗ್ಗೆ ಯಾವೆಲ್ಲಾ ಸಿದ್ಧತೆಗಳನ್ನು ಚುನಾವಣಾ ಆಯೋಗ ಕೈಗೊಂಡಿದೆ ಎಂಬುದರ ಬಗ್ಗೆ, ಚುನಾವಣಾ ಅಕ್ರಮ ನಿಯಂತ್ರಣ, ಪಾರದರ್ಶಕ ಚುನಾವಣೆ, ಮತಯಂತ್ರ ನಿರ್ವಹಣೆ, ಮತದಾನ ಕೇಂದ್ರಗಳ ಸೌಕರ್ಯ, ಭದ್ರತೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ‘ಬೆಂಗಳೂರು ವೈರ್’ ಜೊತೆ ಮುಕ್ತ ಮಾತುಕತೆ ನಡೆಸಿದ್ದಾರೆ.

• ಮುಂಬರುವ ವಿಧಾನಸಭಾ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ಯಾವ ರೀತಿ ಸಜ್ಜಾಗಿದೆ?

ಉತ್ತರ: ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು ಬಹುತೇಕ ಅಂತಿಮ ಹಂತ ತಲುಪಲಿದೆ. ವಿದ್ಯುನ್ಮಾನ ಮತ ಯಂತ್ರಗಳ ಶೇಖರಣೆ ಹಾಗೂ ಮತಗಟ್ಟೆಗಳ ಅಂತಿಮ ಪಟ್ಟಿ ತಯಾರಾಗುತ್ತಿದ್ದು ಮತಗಟ್ಟೆಗೆ ಅವಶ್ಯವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕ್ರಮಕೈಗೊಳ್ಳಲಾಗುತ್ತಿದೆ. ಈ ಕುರಿತು ಪ್ರಾಥಮಿಕ ಹಂತದ ಪೂರ್ವ ತಯಾರಿಗಾಗಿ ನಿರಂತರವಾಗಿ ಜಿಲ್ಲಾ ಚುನಾವಣಾಧಿಕಾರಿಗಳೊಂದಿಗೆ ಸಭೆಗಳನ್ನು ಹಮ್ಮಿಕೊಳ್ಳಲಾಗುತ್ತದೆ.

• ಯಾವಾಗ ಚುನಾವಣಾ ದಿನಾಂಕ ಘೋಷಣೆಯಾಗುವ ಸಾಧ್ಯತೆಯಿದೆ?

ಉತ್ತರ: ಚುನಾವಣೆಯನ್ನು ಘೋಷಿಸುವ ಹಾಗೂ ದಿನಾಂಕ ಗೊತ್ತುಪಡಿಸುವ ಅಧಿಕಾರ ಭಾರತ ಚುನಾವಣಾ ಆಯೋಗದ ವ್ಯಾಪ್ತಿಗೆ ಒಳಪಟ್ಟಿರುತ್ತದೆ. ಈ ಕುರಿತು ಅವರು ಘೋಷಿಸುವ ದಿನಾಂಕಗಳನ್ನು ಪಾಲಿಸುವುದು ನಮ್ಮ ಕರ್ತವ್ಯವಾಗಿರುತ್ತದೆ.

• ಚುನಾವಣಾ ಪೂರ್ವ ಹಾಗೂ ಚುನಾವಣಾ ಅಕ್ರಮಗಳನ್ನು ನಿಯಂತ್ರಿಸಲು ಯಾವ ಕ್ರಮ ಕೈಗೊಳ್ಳಲಾಗಿದೆ?

ಉತ್ತರ: ಈಗಾಗಲೇ ಚುನಾವಣಾ ಪೂರ್ವ ತಯಾರಿ ಸಂದರ್ಭದಲ್ಲಿ ಮತದಾರರಿಗೆ ಒಡ್ಡುತ್ತಿರುವ ಆಮಿಷಗಳ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾದ ಸುದ್ಧಿಗಳ ಬಗ್ಗೆ ಸೂಕ್ತ ಕ್ರಮಕೈಗೊಳ್ಳಲು ಸಂಬಂಧಿಸಿದ ಜಾರಿ ನಿರ್ದೇಶನ ಇಲಾಖೆಗಳಿಗೆ ಸೂಚಿಸಲಾಗಿದ್ದು, ಅವರು ತಮ್ಮ ವ್ಯಾಪ್ತಿಯ ದೂರುಗಳಿಗೆ ಸಂಬಂಧಿಸಿದಂತೆ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ. ಸಂಬಂಧಿಸಿದ ಇಲಾಖೆಗಳ ಉನ್ನತ ಅಧಿಕಾರಿಗಳೊಂದಿಗೆ ಸಭೆಗಳನ್ನು ಹಮ್ಮಿಕೊಳ್ಳಲಾಗಿದ್ದು ಈ ಕುರಿತಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

• ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮ ಆರೋಪ ಪ್ರಕರಣದ ತನಿಖೆ ಯಾವ ರೀತಿ ನಡೆಯುತ್ತಿದೆ?

ಉತ್ತರ: ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧಿಸಿದಂತೆ ಲೋಪಗಳ ಕುರಿತು ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರು ನೀಡಿರುವ ದೂರುಗಳ ಕುರಿತು ಕ್ರಮಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇತ್ತೀಚಿಗೆ ನಡೆದ “ಚಿಲುಮೆ” ಸಂಸ್ಥೆಯ ಲೋಪದ ಕುರಿತ ದೂರಿನ ಬಗ್ಗೆ ಪ್ರಾದೇಶಿಕ ಆಯುಕ್ತರು ತನಿಖೆ ಪೂರ್ಣಗೊಳಿಸಿ ವರದಿ ನೀಡಿದ್ದು ಮತದಾರರ ಪಟ್ಟಿಯಲ್ಲಿ ಯಾವುದೇ ಲೋಪ ಆಗಿಲ್ಲ ಎಂದು ಹೇಳಿದ್ದಾರೆ. ಈ ಕುರಿತು SVEEP ಹೆಸರಿನಲ್ಲಿ ಮತದಾರರ ಮಾಹಿತಿ ಸಂಗ್ರಹಿಸುವ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸಬೇಕೆಂದು ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ.

• ಈ ಬಾರಿಯ ಚುನಾವಣೆಗೂ ಹಾಗೂ ಕಳೆದ ಬಾರಿ ಚುನಾವಣೆ ನಡೆಸುತ್ತಿರುವುದಕ್ಕೂ ತಂತ್ರಜ್ಞಾನ ಅಳವಡಿಕೆ ದೃಷ್ಟಿಯಿಂದ ಹೇಗೆ ವಿಭಿನ್ನವಾಗಿದೆ?

ಉತ್ತರ: ಪ್ರಸಕ್ತ ತಂತ್ರಜ್ಞಾನದ ಯುಗದಲ್ಲಿ ಮತದಾನದ ಜಾಗೃತಿ ಕುರಿತು ಹಾಗೂ ಯುವ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಳ್ಳಲು ಉದ್ದೇಶಿಸಲಾಗಿದೆ. ಕಳೆದ ಬಾರಿ ಬಳಸಲಾಗಿದ್ದ C-Vigial Appನ್ನು ಈ ಬಾರಿ ಸಹ ಬಳಸಲು ನಿರ್ಧರಿಸಲಾಗಿದ್ದು ಇದರಿಂದ ಸಾರ್ವಜನಿಕರು ಭ್ರಷ್ಟಾಚಾರ ಕಂಡುಬಂದಲ್ಲಿ ಛಾಯಾ ಚಿತ್ರ ಅಥವಾ ವಿಡಿಯೋ ಚಿತ್ರೀಕರಿಸುವ ಮೂಲಕ ನೇರವಾಗಿ ಆಯೋಗಕ್ಕೆ ದೂರು ಸಲ್ಲಿಸಬಹುದಾಗಿದೆ. ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಮತದಾರರಿಗಾಗಿ ತಮ್ಮ ಮತಗಟ್ಟೆಯ ಹೆಸರು, ಮಾಹಿತಿ, ವಿಳಾಸ ಸೇರಿದಂತೆ ಇತರೆ  ಮಾಹಿತಿಯನ್ನು ಒದಗಿಸಲು ಹೊಸ “ಮತದಾರ” ಆಂಡ್ರಾಯ್ಡ್ ಮೊಬೈಲ್ Appನ್ನು ಸಿದ್ಧಪಡಿಸಲಾಗಿರುತ್ತದೆ.

• ಚುನಾವಣಾ ಗುರುತಿನ ಚೀಟಿಯೊಂದಿಗೆ ಆಧಾರ್ ಕಾರ್ಡ್ ಜೋಡಣೆ ಪ್ರಗತಿ ರಾಜ್ಯದಲ್ಲಿ ಹೇಗಾಗಿದೆ? ಮತದಾರರಿಂದ ಯಾವ ರೀತಿ ಪ್ರತಿಕ್ರಿಯೆ ವ್ಯಕ್ತವಾಗಿದೆ?

ಸಾಂದರ್ಭಿಕ ಚಿತ್ರ

ಉತ್ತರ: ಚುನಾವಣಾ ಗುರುತಿನ ಚೀಟಿಯೊಂದಿಗೆ ಆಧಾರ್ ಕಾರ್ಡ್ ಜೋಡಣೆ ಪ್ರಗತಿ ಉತ್ತಮವಾಗಿದ್ದು ರಾಜ್ಯದಲ್ಲಿ ಈಗಾಗಲೇ  ಶೇ.70 ಕ್ಕಿಂತ ಹೆಚ್ಚಿನ ಮತದಾರರು ತಮ್ಮ ಆಧಾರ್‌ ನೊಂದಿಗೆ ಚುನಾವಣಾ ಗುರುತಿನ ಚೀಟಿಯನ್ನು ಜೋಡಣೆ ಮಾಡಿರುತ್ತಾರೆ. ಇದರಿಂದ ಒಬ್ಬರೇ ಎರಡು ಕಡೆಗಳಲ್ಲಿ ಹೆಸರನ್ನು ಹೊಂದಿರುವುದನ್ನು ತಡೆಯಬಹುದಾಗಿರುತ್ತದೆ. ಮತದಾರರಿಂದ ಈ ಬಗ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

• ರಾಜ್ಯದಲ್ಲಿ ಒಟ್ಟು ಎಷ್ಟು ಮತಗಟ್ಟೆಗಳಿವೆ? ಆ ಮತಗಟ್ಟೆ ಕೇಂದ್ರಗಳ ಪರಿಶೀಲನಾ ಕಾರ್ಯ ಯಾವ ರೀತಿ ನಡೆದಿದೆ? ಅಲ್ಲಿ ಯಾವ ಸೌಲಭ್ಯಗಳು ಮತದಾರರಿಗೆ ಲಭ್ಯವಾಗಲಿದೆ?

ಉತ್ತರ: ರಾಜ್ಯದಲ್ಲಿ ಒಟ್ಟು 58,282 ಮತಗಟ್ಟೆಗಳಿದ್ದು ಮತದಾನದ ದಿನದಂದು ಸಾರ್ವಜನಿಕರಿಗೆ ಕುಡಿಯುವ ನೀರು, ಶೌಚಾಲಯ, ದಿವ್ಯಾಂಗ ಮತ್ತು ಹಿರಿಯ ಮತದಾರರಿಗಾಗಿ ವಾಹನ ವ್ಯವಸ್ಥೆ, ನಿರೀಕ್ಷಣಾ ಕೊಠಡಿ ಸೇರಿದಂತೆ ಇತರೆ ಪ್ರಾಥಮಿಕ ಸೌಲಭ್ಯಗಳನ್ನು ಒದಗಿಸಲು ಕ್ರಮಕೈಗೊಳ್ಳಲಾಗುತ್ತಿದ್ದು ಈ ಬಾರಿಯ ಚುನಾವಣೆಯಲ್ಲಿ ಮತದಾರರನ್ನು ಮತಗಟ್ಟೆಗೆ ಆಹ್ವಾನಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

• ಈ ಬಾರಿ ಯಾವ ರೀತಿಯ ಮತಯಂತ್ರಗಳನ್ನು ಬಳಸಲಾಗುತ್ತಿದೆ? ಅವುಗಳ ಕಾರ್ಯ ನಿರ್ವಹಣೆ, ಪರಿಶೀಲನಾ ಕಾರ್ಯ ಹೇಗೆ ನಡೆಯುತ್ತಿದೆ?

ಉತ್ತರ: ಈ ಬಾರಿಯ ಚುನಾವಣೆಯಲ್ಲಿ M3 ಹೊಸ ವಿದ್ಯುನ್ಮಾನ ಯಂತ್ರಗಳನ್ನು ಬಳಸಲು ಉದ್ದೇಶಿಸಲಾಗಿದ್ದು ಹೈದ್ರಬಾದಿನ ಎಲೆಕ್ಟ್ರಾನಿಕ್ಸ್ ಕಾರ್ಪೋರೇಷನ್‌ ಆಫ್‌ ಇಂಡಿಯಾ ಲಿಮಿಟೆಡ್(‌ECIL) ಈ ಮತಯಂತ್ರಗಳನ್ನು ತಯಾರಿಸಿದ್ದು ಈಗಾಗಲೇ 27 ಜಿಲ್ಲೆಗಳಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಮೊದಲ ಹಂತದ ಪರಿಶೀಲನೆ ಪೂರ್ಣಗೊಂಡಿದ್ದು ಇನ್ನುಳಿದ ಜಿಲ್ಲೆಗಳಲ್ಲಿ ಈ ಪ್ರಕ್ರಿಯೆ ಚಾಲನೆಯಲ್ಲಿದೆ.

ಎಂ3 ಮಾದರಿಯ ಮತಯಂತ್ರದ ಸಾಂದರ್ಭಿಕ ಚಿತ್ರ

• ಪಾರದರ್ಶಕ ಹಾಗೂ ನ್ಯಾಯಯುತ ಚುನಾವಣೆಗೆ ಭದ್ರತಾ ಕಾರ್ಯ ಹೇಗೆ ಕೈಗೊಳ್ಳಲಾಗುತ್ತಿದೆ? ಕೇಂದ್ರ ಸೇನಾಪಡೆಗಳ ನಿಯೋಜನೆ ಯಾವ ಹಂತದಲ್ಲಾಗುತ್ತದೆ?

ಉತ್ತರ: ರಾಜ್ಯದಲ್ಲಿ ನಡೆಯುವ ಪ್ರತಿ ಸಾರ್ವತ್ರಿಕ ಚುನಾವಣೆಗಳ ಸಂದರ್ಭದಲ್ಲಿ ಚುನಾವಣಾ ಭದ್ರತೆಗಾಗಿ ಕೇಂದ್ರಿಯ ಭದ್ರತಾ ಪಡೆಗಳ ಸೇವೆಯನ್ನು ಪಡೆಯುವುದು ಅವಶ್ಯಕವಾಗಿರುತ್ತದೆ. ಈ ಬಾರಿ ಸಹ ಬೇಡಿಕೆ ಸಲ್ಲಿಸಲಾಗಿದ್ದು ಕೇಂದ್ರ ಗೃಹ ಸಚಿವಾಲಯ ಚುನಾವಣೆ ಅವಧಿಯಲ್ಲಿ ಎಷ್ಟು ಪಡೆಗಳನ್ನು ನಿಯೋಜಿಸಬೇಕು ಎಂಬುದನ್ನು ಪರಿಶೀಲಿಸಿ ನಿರ್ಧಾರ ಕೈಗೊಳ್ಳಲಿದೆ.

• ಇತರ ಪಕ್ಷ ಅಥವಾ ವ್ಯಕ್ತಿಗಳ ಪರ ಕೆಲಸ ಮಾಡುವ ಅಧಿಕಾರಿಗಳನ್ನು ಹೇಗೆ ನಿಯಂತ್ರಿಸಲಾಗುತ್ತೆ? ಒಂದು ವೇಳೆ ಆರೋಪ ಬಂದಲ್ಲಿ ಅವರ ವಿರುದ್ಧ ಯಾವ ರೀತಿ ಕ್ರಮ ಕೈಗೊಳ್ಳಲಾಗುತ್ತದೆ? 

ಉತ್ತರ: ಈಗಾಗಲೇ ಸ್ವಂತ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಗೂ ಮೂರು ವರ್ಷಕ್ಕಿಂತ ಹೆಚ್ಚಿನ ಅವಧಿಯಲ್ಲಿ ಒಂದೇ ಕಡೆ ಸೇವೆ ಸಲ್ಲಿಸಿರುವ ಅಧಿಕಾರಗಳನ್ನು ಗುರುತಿಸಿ ವರ್ಗಾವಣೆಗೆ ಕ್ರಮ ಕೈಕೊಳ್ಳಲಾಗಿದೆ. ಸರ್ಕಾರಿ ಅಧಿಕಾರಿ, ಸಿಬ್ಬಂದಿ ಚುನಾವಣಾ ಅಕ್ರಮದಲ್ಲಿ ಭಾಗಿಯಾದ ಅಥವಾ ಪಕ್ಷಪಾತದಿಂದ ಕೂಡಿದ ದೂರುಗಳು ಬಂದಲ್ಲಿ ಸರ್ಕಾರ ಹಂತದಲ್ಲಿ ಪರಿಶೀಲಿಸಿ ಕ್ರಮಕೈಕೊಳ್ಳಲಾಗುವುದು.

• ಮತ ಚಲಾವಣೆ ಪ್ರಮಾಣ ಹೆಚ್ಚಾಗಲು ರಾಜ್ಯ ಚುನಾವಣಾ ಆಯೋಗ ಒಟ್ಟಾರೆ ಯಾವ ಕ್ರಮ ಕೈಗೊಂಡಿದೆ? ಕಡಿಮೆ ಮತದಾನವಾಗುವ ಕಡೆ ಚುನಾವಣಾ ಆಯೋಗ ವಿಶೇಷ ಗಮನ ಹರಿಸಿದೆಯಾ?

ಉತ್ತರ: ರಾಜ್ಯದಲ್ಲಿ ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ನಡೆದ ಮತದಾನದ ವಿಧಾನಸಭಾ ಕ್ಷೇತ್ರವಾರು ಮತದಾನವನ್ನು ಪರಿಶೀಲಿಸಲಾಗಿದ್ದು ಕಡಿಮೆ ಮತದಾನವಾಗಿರುವ ವಿಧಾನಸಭಾ ಕ್ಷೇತ್ರದೊಳಗೆ ಕಡಿಮೆ ಮತದಾನವಾಗಿರುವ ಮತಗಟ್ಟೆಗಳನ್ನು ಗುರುತಿಸಿ ಕಾರಣಗಳನ್ನು ಹುಡುಕಿ ಪರಿಹಾರವನ್ನು ಕಂಡುಕೊಳ್ಳುವ ಮೂಲಕ ಈ ಬಾರಿಯ ಚುನಾವಣೆಯಲ್ಲಿ ಹೆಚ್ಚಿನ ಮತದಾರರು ಭಾಗವಹಿಸುವಂತೆ ಕ್ರಮಕೈಕೊಳ್ಳಲಾಗುತ್ತದೆ. ಅದಕ್ಕಾಗಿ ಮತಗಟ್ಟೆಗಳ ಮೂಲಸೌಕರ್ಯ ಅಭಿವೃದ್ಧಿ, ಮತದಾರರ ಪಟ್ಟಿಯ ಬಗ್ಗೆ ಜಾಗೃತಿ, ಮತದಾನದ ಒಂದು ವಾರದ ಮುಂಚಿತವಾಗಿ ವೋಟರ್‌ ಸ್ಲಿಪ್‌ಗಳ ವಿತರಣೆಗಾಗಿ ಕ್ರಮ ಕೈಕೊಳ್ಳಲಾಗಿದೆ.

• ಹೊಸ ಮತದಾರರು ಈ ಬಾರಿ ಎಷ್ಟಿದ್ದಾರೆ? ಮತದಾನಕ್ಕೆ ಅವರನ್ನು  ಸೆಳೆಯಲು ಆಯೋಗ  ಕ್ರಮವಹಿಸಿದೆಯಾ?

ಉತ್ತರ: ಈವರೆಗೆ ರಾಜ್ಯದಲ್ಲಿ ಹೊಸದಾಗಿ 18 ರಿಂದ 19 ವರ್ಷದೊಳಗಿನ ಏಳು (7) ಲಕ್ಷ ಯುವ ಮತದಾರರು ಇಲ್ಲಿಯವರೆಗೆ ನೊಂದಾಯಿಸಿಕೊಳ್ಳಲಾಗಿದ್ದು ಇನ್ನೂ 40,000ಕ್ಕಿಂತ ಹೆಚ್ಚಿನ ಅರ್ಜಿಗಳ ವಿಲೇವಾರಿ ಬಾಕಿ ಇದ್ದು ಹೊಸ ಮತದಾರರು ಸಂಖ್ಯೆ ಹೆಚ್ಚಾಗಬಹುದು ಎಂಬ ನಿರೀಕ್ಷೆಯಲ್ಲಿದ್ದೇವೆ. ಭಾರತ ಚುನಾವಣಾ ಆಯೋಗವು ಇತ್ತೀಚಿಗೆ ವರ್ಷಕ್ಕೆ ನಾಲ್ಕು ಬಾರಿ ಹಾಗೂ 17 ವರ್ಷ ತುಂಬಿದವರು ಸಹ ನೋಂದಾಯಿಸಿಕೊಳ್ಳಲು ಅವಕಾಶ ನೀಡಿದೆ. ಇದಕ್ಕಾಗಿ Voter Helpline App ಸಿದ್ಧಪಡಿಸಲಾಗಿದ್ದು Online ಮೂಲಕವೇ ಸಾರ್ವಜನಿಕರು ತಮ್ಮ ಹೆಸರು ಸೇರಿಸುವಿಕೆ, ವರ್ಗಾಯಿಸುವಿಕೆ ಅಥವಾ ವಿಳಾಸ ಬದಲಾವಣೆ ಮಾಡಬಹುದಾಗಿದೆ.

WhatsApp Join our WhatsApp Channel
Previous Post

Shivamogga Airport Inauguration | ಶಿವಮೊಗ್ಗ ವಿಮಾನ ನಿಲ್ದಾಣ ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಿ ನರೇಂದ್ರ ಮೋದಿ

Next Post

ಪ್ರತಿನಿತ್ಯ ನರಿ ಮುಖ ನೋಡಿದ್ರೆ ಒಳ್ಳೇದು ಅಂತ ಈ ಭೂಪ ಆ ವನ್ಯಪ್ರಾಣಿಯನ್ನೇ ತಂದು ಸಾಕಿದ್ದ….!

Next Post

ಪ್ರತಿನಿತ್ಯ ನರಿ ಮುಖ ನೋಡಿದ್ರೆ ಒಳ್ಳೇದು ಅಂತ ಈ ಭೂಪ ಆ ವನ್ಯಪ್ರಾಣಿಯನ್ನೇ ತಂದು ಸಾಕಿದ್ದ….!

ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

LPG Cylinder Price | ಇಂದಿನಿಂದ ಎಲ್ ಪಿಜಿ ಸಿಲೆಂಡರ್ ದುಬಾರಿ : ಬೆಂಗಳೂರಿನಲ್ಲಿ ಕಳೆದ 6 ವರ್ಷದಲ್ಲಿ ಗ್ಯಾಸ್ ರೇಟ್ ಎಷ್ಟು ಹೆಚ್ಚಾಗಿದೆ ಗೊತ್ತಾ?

Please login to join discussion

Like Us on Facebook

Follow Us on Twitter

Recent News

ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

June 12, 2026

ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

June 12, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

June 12, 2026

ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

June 12, 2026

ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

June 11, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group