Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Bangalore Chandni Chowk | ಐತಿಹಾಸಿಕ ಸ್ಥಳ ಚಾಂದಿನಿ ಚೌಕ್ ಗೆ ಹೊಸ ಲುಕ್ : ಇಂದು ಶಿವಾಜಿನಗರ ಹಬ್ಬ

by Bengaluru Wire Desk
March 18, 2023
in Bengaluru Focus, Public interest
Reading Time: 1 min read
0
ನವೀಕೃತಗೊಂಡಿರುವ ಚಾಂದಿನಿ ಚೌಕದ ಸ್ಥಳದ ಚಿತ್ರ

ನವೀಕೃತಗೊಂಡಿರುವ ಚಾಂದಿನಿ ಚೌಕದ ಸ್ಥಳದ ಚಿತ್ರ

ಬೆಂಗಳೂರು, ಮಾ.18 www.bengaluruwire.com : ಗೊಬ್ಬು ನಾರುತ್ತಿದ್ದ, ಮೂಗಿ ಹಿಡಿದುಕೊಂಡೇ ಸಾಗಬೇಕಿದ್ದ ಆ ಸ್ಥಳವೀಗ ಸಂಪೂರ್ಣ ಬದಲಾಗಿದೆ. ಹೌದು ಶಿವಾಜಿನಗರದ ಐತಿಹಾಸಿಕ ಚಾಂದಿನಿ ಚೌಕ್ ಜಾಗವೀಗ ನಗರದ ಪ್ರವಾಸಿ ಹಾಗೂ ಜನರು ಒಂದೆಡೆ ಸೇರುವ ತಾಣವಾಗಿ ಬದಲಾಗಿದೆ. ಏಳು ಕೋಟಿ ರೂ. ವೆಚ್ಚದಲ್ಲಿ ಐತಿಹಾಸಿಕ ಸ್ಥಳವನ್ನು ನವೀಕರಿಸಿದ್ದು ಇದೇ ಸ್ಥಳದಲ್ಲಿ ಶನಿವಾರ ಸಂಜೆ ಶಿವಾಜಿನಗರ ಹಬ್ಬ ನಡೆಯುತ್ತಿದೆ.

ಸುಣ್ಣ- ಬಣ್ಣ ಬಳಿದು, ವಿದ್ಯುತ್ ದೀಪಗಳಿಂದ ಸಂಜೆಯ ಕತ್ತಲಲ್ಲಿ ಬೆಳಗುತ್ತಿರುವ ಶಿವಾಜಿನಗರ ರಸಲ್ ಮಾರುಕಟ್ಟೆ ಚಿತ್ರ

ಶಿವಾಜಿನಗರದ ಹೃದಯಭಾಗದಲ್ಲಿರುವ 200 ವರ್ಷಗಳಷ್ಟು ಹಳೆಯದಾದ ಚಾಂದಿನಿ ಚೌಕ್ ಶಿಥಿಲಾವಸ್ಥೆ ತಲುಪಿತ್ತು. 100 ವರ್ಷಗಳಷ್ಟು ಹಳೆಯದಾದ ರಸೆಲ್ ಮಾರ್ಕೆಟ್, 200 ವರ್ಷಗಳಷ್ಟು ಹಳೆಯದಾದ ಸೇಂಟ್ ಮೇರಿಸ್ ಬೆಸಿಲಿಕಾ ಮತ್ತು 250 ವರ್ಷಗಳ ಹಿಂದಿನ ಬಾವಿ ಕಸದಿಂದ ತುಂಬಿಹೋಗಿತ್ತು. ಅಲ್ಲಿ ಪ್ರತಿನಿತ್ಯ ಜನರು ಮೂಗು ಹಿಡಿದೇ ನಡೆದು ಹೋಗುವಷ್ಟು ಕಸಗಳಿಂದ ತುಂಬಿ ಹೋಗಿತ್ತು. ಮೂಲ ಸೌಕರ್ಯ ಕೊರತೆ ಎದುರಿಸುತ್ತಿದ್ದುದ್ದರಿಂದ ಇವುಗಳ ಪುನಶ್ಚೇತನ ಕಾರ್ಯ ಅಗತ್ಯವಿತ್ತು.

ಅವುಗಳ್ನು ಸ್ಮಾರ್ಟ್ ಸಿಟಿ ಯೋಜನೆಯಡಿ, ಶಾಸಕರ ಪ್ರದೇಶಾಭಿವೃದ್ಧಿ ನಿಧಿ ಮತ್ತು ಬಿಬಿಎಂಪಿ ಅನುದಾನದಡಿ ಮೂಲಕ ಸುಮಾರು 7 ಕೋಟಿ ಖರ್ಚು ಮಾಡಲಾಗಿದ್ದು, ಚಾಂದಿನಿ ಚೌಕ್ ಈಗ ಸಂಪೂರ್ಣ ಬದಲಾಗಿ ಹೊಸತನದೊಂದಿಗೆ ಜನರನ್ನು ಹಾಗೂ ಪ್ರವಾಸಿಗರನ್ನು ಕೈಬೀಸಿ ಕರೆಯುವಷ್ಟು ಸುಸಜ್ಜಿತವಾಗಿ ಬದಲಾಗಿದೆ. 120 ಮೀಟರ್ ಉದ್ದ ಹಾಗೂ 13 ಮೀಟರ್ ಅಗಲದ ಜಾಗದಲ್ಲಿ 8 ಪ್ಲಾಜಾಗಳನ್ನು ನಿರ್ಮಿಸಲಾಗಿದೆ. ಸೇಂಟ್ ಮೇರಿ ಬೆಸಿಲಿಕಾ ಚರ್ಚ್ ಎದುರಿನ ಮೊದಲ ಪ್ಲಾಜಾದಲ್ಲಿ ಎರಡು ಕಾರಂಜಿಗಳನ್ನು ನಿರ್ಮಿಸಲಾಗಿದೆ.

ಹೊಸದಾಗಿ ವಿನ್ಯಾಸಗೊಳಿಸಲಾದ ಪ್ಲಾಜಾವು ಹಚ್ಚ ಹಸಿರಿನಿಂದ ಕೂಡಿದೆ, ಕಾರಂಜಿಗಳು, ಆಸನ ವ್ಯವಸ್ಥೆಗಳು, ಹೊಸ ಶೌಚಾಲಯಗಳು, ವಾಹನ ನಿಲುಗಡೆ ಪ್ರದೇಶ ಮತ್ತು ಅಲಂಕಾರಿಕ ವಿದ್ಯುತ್ ದೀಪಗಳೊಂದಿಗೆ ಪ್ರವಾಸಿಗರಿಗೆ ವಿಶ್ರಾಂತಿಯ ಸಮಯ ಕಳೆಯಲು ನೆಮ್ಮದಿಯ ವಾತಾವರಣ ಕಲ್ಪಿಸಲಾಗಿದೆ. 35 ಸಿಸಿಟಿವಿ ಕ್ಯಾಮರಾಗಳನ್ನು ಭದ್ರತೆಗಾಗಿ ಅಳವಡಿಸಲಾಗಿದೆ. ಇನ್ನೊಂದೆಡೆ 50 ಅಡಿ ಎತ್ತರದ ಗಡಿಯಾರ ಗೋಪುರವನ್ನೂ ಸಹ ನಿರ್ಮಿಸಲಾಗಿದೆ. ಇನ್ನು 250 ವರ್ಷಕ್ಕೂ ಹಳೆದಾದ ಬಾವಿಯ ಸುತ್ತಲೂ ಜನರು ಕುಳಿತುಕೊಳ್ಳುವಂತೆ ವ್ಯವಸ್ಥೆ ಮಾಡಲಾಗಿದೆ. ಯಾವುದೇ ರೀತಿಯ ಅವಘಡವಾಗದಂತೆ ಬಾವಿಯ 2 ಅಡಿ ಆಳದಲ್ಲಿ ಗ್ರಿಲ್ ಅಳವಡಿಸಲಾಗಿದೆ. ಬಹುತೇಕ ಕಾಮಗಾರಿಗಳನ್ನು ಪೂರ್ಣವಾಗಿದ್ದು, ಇನ್ನು ಕೆಲವು ಮೂರು ನಾಲ್ಕು ದಿನಗಳಲ್ಲಿ ಮುಗಿಯಲಿದೆ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದನ್ನು ಉದ್ಘಾಟಿಸಲಿದ್ದಾರೆ ಎನ್ನಲಾಗಿದೆ.

ಶಿವಾಜಿನಗರದ ಚಾಂದಿನ ಚೌಕ್ ಬಳಿ ನವೀಕೃತಗೊಂಡಿರುವ ಪ್ರದೇಶ

ಶಿವಾಜಿ ನಗರ ಹಬ್ಬ ಶನಿವಾರ ಸಂಜೆ 4 ರಿಂದ ಆರಂಭ :

ಶಿವಾಜಿನಗರ ಹಬ್ಬವು ನಗರದ ವೈವಿಧ್ಯತೆಯನ್ನು ಸಂಭ್ರಮಿಸುವ ಮತ್ತು ವಿವಿಧ ಸಮುದಾಯಗಳ ಜನರನ್ನು ಒಟ್ಟುಗೂಡಿಸುವ ಸಾಂಸ್ಕೃತಿಕ ಹಬ್ಬವಾಗಿದೆ. ಈ ಕಾರ್ಯಕ್ರಮವು ಪ್ರಸಿದ್ಧ ಕಲಾವಿದರಿಂದ ಕಲಾ ಪ್ರದರ್ಶನ, ಆಹಾರ ಮಳಿಗೆಗಳು ಮತ್ತು ಇತರ ಸಾಂಸ್ಕೃತಿಕ ಚಟುವಟಿಕೆಗಳನ್ನು ಒಳಗೊಂಡಿದೆ. ಹೊಸ ಮತ್ತು ನವೀಕರಿಸಿದ ಚಾಂದಿನಿ ಚೌಕ್‌ನ ಲೋಕಾರ್ಪಣೆ ಕೂಡ ಈ ಹಬ್ಬದ ಪ್ರಮುಖ ಆಕರ್ಷಣೆಯಲ್ಲಿ ಒಂದಾಗಿದೆ. ಇಂತಹ ವಿಭಿನ್ನಮಯ ಶಿವಾಜಿನಗರ ಹಬ್ಬಕ್ಕಾಗಿ ಶುಕ್ರವಾರದಿಂದಲೇ ತಯಾರಿ ನಡೆಸಲಾಗಿತ್ತು. ಶಿವಾಜಿನಗರದ ಚಾಂದಿನಿ ಚೌಕ್‌ನಲ್ಲಿ ವಾರ್ಷಿಕೋತ್ಸವ ಸಮಾರಂಭದವು ಸಂಜೆ 4 ರಿಂದ ಆರಂಭಗೊಳ್ಳಲಿದೆ ಮತ್ತು ಮಕ್ಕಳಿಗಾಗಿ ವಿವಿಧ ಮನೋರಂಜನಾ ಚಟುವಟಿಕೆಗಳನ್ನು ಒಳಗೊಂಡಿರಲಿದೆ. ಸಂಜೆ 7 ರಿಂದ ಸಂಗೀತ ಸಂಜೆಯನ್ನು ಕೂಡ ಏರ್ಪಡಿಸಲಾಗಿದೆ.

ಸ್ಮಾರ್ಟ್ ಸಿಟಿ, ಬಿಬಿಎಂಪಿ ಹಾಗೂ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಡಿ ಅಭಿವೃದ್ಧಿಪಡಿಸಿರುವ 250 ವರ್ಷಗಳ ಹಿಂದಿನ ಬಾವಿ

‘ಶಿವಾಜಿನಗರದ ಈ ಐತಿಹಾಸಿಕ ಸ್ಥಳವು ಹಲವು ವರ್ಷಗಳಿಂದ ಅಭಿವೃದ್ಧಿಯನ್ನು ಕಂಡಿರಲಿಲ್ಲ. ನಗರದ ಇಂತಹ ಪ್ರಮುಖ ಸ್ಥಳಕ್ಕೆ ವಿಶೇಷ ಕಾಳಜಿ ವಹಿಸಿ ಹೊಸ ಮೆರಗು ನೀಡಲಾಗಿದೆ. ಮಳೆ ನೀರು, ರಸ್ತೆ ಹಾಗೂ ಅಂಗಡಿಗಳಿಗೆ ಹರಿಯದೇ ಸರಾಗವಾಗಿ ಮಳೆ ನೀರು ಚರಂಡಿಗೆ ಹೋಗುವಂತೆ ಮೂಲಭೂತ ಸೌಕರ್ಯ ಕಲ್ಪಿಸಲಾಗಿದೆ. ಹೊಸದಾಗಿ ನವೀಕರಿಸಿದ ಚಾಂದಿನಿ ಚೌಕ್ ಸ್ಥಳದಲ್ಲಿ ಇಂದು ಶಿವಾಜಿನಗರ ಹಬ್ಬವನ್ನು ಆಚರಿಸುತ್ತಿದ್ದೇವೆ’ ಎಂದು ಶಾಸಕ ರಿಜ್ವಾನ್ ಅರ್ಷದ್ ಹೇಳಿದ್ದಾರೆ.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

Weather News | ಬೆಂಗಳೂರು ಸೇರಿದಂತೆ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆ : ಇಲ್ಲಿದೆ ಡಿಟೇಲ್ಸ್

Next Post

Viral Video News | ಗ್ರಾಮಸ್ಥರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಆ ಸಲಗ ಹಠಾತ್ ನೆಲಕ್ಕುರಳಿತ್ತು!! ಆ ಕರುಣಾಜನಕ ದೃಶ್ಯದ ವಿಡಿಯೋ ವೈರಲ್

Next Post
ವಿದ್ಯುತ್ ಅಪಘಾತದಲ್ಲಿ ಮೃತಪಟ್ಟ ಸಲಗ

Viral Video News | ಗ್ರಾಮಸ್ಥರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಆ ಸಲಗ ಹಠಾತ್ ನೆಲಕ್ಕುರಳಿತ್ತು!! ಆ ಕರುಣಾಜನಕ ದೃಶ್ಯದ ವಿಡಿಯೋ ವೈರಲ್

Obscene Content On OTT |"ಒಟಿಟಿ ಪ್ಲಾಟ್‌ಫಾರ್ಮ್‌ಗಳಲ್ಲಿ ಸೃಜನಶೀಲತೆ ಹೆಸರಲ್ಲಿ ಅಶ್ಲೀಲ ದೂರು ಗಂಭೀರ ಪರಿಗಣನೆ"

Please login to join discussion

Like Us on Facebook

Follow Us on Twitter

Recent News

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group