Tuesday, April 28, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home BW Special

Temple News | ಬಾರ್ಕೂರಿನ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮರಥೋತ್ಸವ ಹಿನ್ನಲೆ : ಭಕ್ತರಿಂದ ಬೆಳ್ಳಿ ಪಲ್ಲಕ್ಕಿ ಸಮರ್ಪಣೆ

ಇದೇ ತಿಂಗಳ ಮಾ.29ರಂದು ಕೋಟೇಕೇರಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮರಥೋತ್ಸವ | ಸುಮಾರು 18 ಸೀಮೆಯ ಜನರ ಆರಾಧ್ಯ ದೇವರು | ವೇದಮೂರ್ತಿ ಬಿ.ಹೃಷಿಕೇಶ ಬಾಯರಿ ಮನೆಯವರಿಂದ ದೇವಳಕ್ಕೆ ರಜತ ಪಲ್ಲಕ್ಕಿ ಸೇವಾ ರೂಪದಲ್ಲಿ ಸಲ್ಲಿಕೆ

by Bengaluru Wire Desk
March 20, 2023
in BW Special, News Wire
Reading Time: 2 mins read
0

ಉಡುಪಿ, ಮಾ.20 www.bengaluruwire.com : ಕರಾವಳಿಯಲ್ಲಿನ ಬ್ರಹ್ಮಾವರ ತಾಲ್ಲೂಕಿನ ಬಾರಕೂರಿನ ಪುರಾಣ ಕಾಲದ ಕೋಟೇಕೇರಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮರಥೋತ್ಸವ ಇದೇ ತಿಂಗಳ ಮಾ.29 ರಂದು ನಡೆಯಲಿದೆ. ಇದಕ್ಕು ಮುನ್ನ, ಶ್ರೀ‌ ದೇವಸ್ಥಾನಕ್ಕೆ ನೂತನ ರಜತ ಪಲ್ಲಕ್ಕಿ ಸಮರ್ಪಣೆ ಮಾಡಲಾಯಿತು.

ದೇವಾಲಯಗಳ ಪಟ್ಟಣ ಎಂದೇ ಕರೆಯಲ್ಪಡುವ ಬಾರಕೂರು ಸಂಸ್ಥಾನದಲ್ಲಿ 365 ದೇವಸ್ಥಾನಗಳಿದ್ದು ವಿಶಿಷ್ಟವಾದ ವಾಸ್ತುಶಿಲ್ಪವನ್ನು ಹೊಂದಿದ್ದು, ವರ್ಷದ ಎಲ್ಲ ದಿನವೂ ಇಲ್ಲಿ ಪೂಜೆಯಾಗುತ್ತಿತ್ತು. ಬಾರ್ಕೂರಿನ ದೇವಾಲಯಗಳು ಇಳಿಜಾರಾದ ಟೆರಾಕೋಟಾ ಹೆಂಚಿನ ಛಾವಣಿಗಳು ಕೇರಳದ ದೇವಾಲಯಗಳನ್ನು ಹೋಲುತ್ತವೆ, ಆದರೆ ಅವುಗಳು ಗೋಪುರಗಳನ್ನು ಹೊಂದಿಲ್ಲ, ಇದು ದ್ರಾವಿಡ ಶೈಲಿಯ ದಕ್ಷಿಣ ಭಾರತದ ದೇವಾಲಯಗಳ ಸಾಮಾನ್ಯ ಲಕ್ಷಣವಾಗಿದೆ. ಇಂತಹ ಊರಿನಲ್ಲಿ ಪುರಾಣ ಕಾಲದ ಕೋಟೇಕೇರಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಪ್ರಮುಖವಾದುದು. ಇಲ್ಲಿನ ಬ್ರಹ್ಮರಥೋತ್ಸವವನ್ನು ಬಾರಕೂರಿನ ಊರ ಹಬ್ಬವಾಗಿ ಸ್ಥಳೀಯರು ಆಚರಿಸುತ್ತಾರೆ.

ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಒಂದೇ ಪಾಣಿಪೀಠದಲ್ಲಿ ಸ್ಥಾಪಿಸಲ್ಪಟ್ಟಿರುವ ಪಂಚಲಿಂಗಗಳು

ಇದೇ ಪ್ರಥಮ ಬಾರಿಗೆ ಬಾರ್ಕೂರಿನ ಹಿರಿಯ ಪುರೋಹಿತರಾದ ವೇದಮೂರ್ತಿ ಬಿ.ಹೃಷಿಕೇಶ ಬಾಯರಿ ಹಾಗೂ ಅವರ ಮನೆಯವರು ಇತಿಹಾಸ ಪ್ರಸಿದ್ಧ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಮಾ.19ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸಿ ಬೆಳ್ಳಿ ಪಲ್ಲಕ್ಕಿಯನ್ನು ಸೇವಾ ರೂಪದಲ್ಲಿ ಮಾ.19ರಂದು  ಸಮರ್ಪಿಸಿದ್ದಾರೆ.

ಸೇವಾ ರೂಪದಲ್ಲಿ ದೇವಸ್ಥಾನಕ್ಕೆ ಬೆಳ್ಳಿ ಪಲ್ಲಕ್ಕಿ ಸಮರ್ಪಿಸಿದ ವೇದಮೂರ್ತಿ ಬಿ.ಹೃಷಿಕೇಶ ಬಾಯರಿ (ಎಡದಿಂದ ಮೊದಲನೆಯವರು)

ದೇವಸ್ಥಾನದ ಸ್ಥಳ ಪುರಾಣವೇನು? :
ಪುರಾಣಕಾಲದಲ್ಲಿ ಮಾರ್ಕಾಂಡೇಯ ಮುನಿಗಳು ಭೂ ಸಂಚಾರದಲ್ಲಿರುವಾಗ ಶಿವನ ತಪಸ್ಸಿಗೆ ಯೋಗ್ಯ ಸ್ಥಳದ ಅನ್ವೇಷಣೆಯಲ್ಲಿರುವಾಗ ಉತ್ತರಗಾಮಿನಿ ಸೀತಾ ನದಿಯ ತಟ ಬಾರಕನ್ಯಾಪರ ಪ್ರಶಸ್ತ ಸ್ಥಳ ಎಂದು ಅಶರೀರವಾಣಿ ಕೇಳಿಬಂತು. ಅದರಂತೆ ಈಗಿನ ಈ ಬಾರಕೂರಿನಲ್ಲಿ ತಪಸ್ಸನ್ನು ಮಾಡಿ ಈಶ್ವರನನ್ನು ಭೂಮಿಗೆ ಬರುವಂತೆ ಮಾಡಿದರು.

ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಹೊರ ನೋಟ

ಮಾರ್ಕಾಂಡೇಯರಿಗೆ ಒಲಿದ ಶಿವ ಶ್ರೀ ಪಂಚಲಿಂಗೇಶ್ವರನಾಗಿ ಪ್ರತಿಷ್ಠಿತನಾದನೆಂದು ಪ್ರತೀತಿ ಇದೆ. ಪಾರ್ವತಿ ಸಹಿತನಾದ ಶ್ರೀ ಶಿವನು ಇಲ್ಲಿ ಒಂದೇ ಪಾಣಿ ಪೀಠದಲ್ಲಿ 5 ಲಿಂಗಗಳಲ್ಲಿ ಅವಿರ್ಭೂತನಾಗಿದ್ದಾನೆ. 1. ವಾಮದೇವ 2. ಸದ್ಯೋಜಾತ 3. ಈಶಾನಾ 4. ತತ್ಪುರುಷ 5. ಅಘೋರ ಎಂಬ ಐದು ಹೆಸರುಗಳಿಂದ ಪ್ರತಿಷ್ಠಿತನಾಗಿ ಭಕ್ತರನ್ನು ಅನುಗ್ರಹಿಸುತ್ತಿದ್ದಾನೆ.

ಪುರಾಣ ಕಾಲದಿಂದ ಕಲಿಯುಗದವರೆಗೆ ಇಲ್ಲಿ ಆಳ್ವಿಕೆ ಮಾಡಿದ ಹಲವು ಚಕ್ರವರ್ತಿಗಳು, ಮಹಾರಾಜರು  ಬಾರಕೂರನ್ನು ರಾಜಧಾನಿಯಾಗಿ ಮಾಡಿಕೊಂಡು ಪಂಚಲಿಂಗೇಶ್ವರನನ್ನು ಸಂಸ್ಥಾನದ ಪ್ರಮುಖ ದೇವರಾಗಿ ಸೀಮೆಯ ಒಡೆಯನಾಗಿ ಪೂಜೆ ಮಾಡುತ್ತಾ ಬಂದರು. ದ್ವಾಪರಾಯುಗದಲ್ಲಿ ಧರ್ಮರಾಯನು ಕೂಡಾ ಪೂಜಿಸಿದ ಬಗ್ಗೆ ಕಥೆಗಳಲ್ಲಿ ಉಲ್ಲೇಖಗಳಿವೆ. ತುಳುನಾಡಿನ ಅಳಿಯಕಟ್ಟಳೆ ಪರಂಪರೆಯ ಕೊನೆಯಲ್ಲಿ ವಿಜಯನಗರದ ಅರಸರು, ಅಳುಪರು, ಪಂಚಲಿಂಗೇಶ್ವರನನ್ನು ಆರಾಧಿಸಿ ರಾಜ್ಯಭಾರ ಮಾಡಿದರು.

ರಜತ ಪಲ್ಲಕ್ಕಿ ಹಸ್ತಾಂತರಕ್ಕೂ ಮುನ್ನ ಮಾ.19ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು.

ಸುಮಾರು 18 ಸೀಮೆಯ ಜನರ ಆರಾಧ್ಯ ದೇವರು :
ಸುಮಾರು 18 ಸೀಮೆ (ಹಳ್ಳಿಯ) ಜನರ ಆರಾಧ್ಯ ದೇವರಾದ ಶ್ರೀ ಪಂಚಲಿಂಗೇಶ್ವರ ಸ್ವಾಮಿಯ ಉತ್ಸವದ ದಿನದಂದು ಬಿಲ್ಲ ಸೀಮೆಯಿಂದ-ವಡೇರ ಹೋಬಳಿ ಬೈಂದೂರಿನವರೆಗೆ ಸಾಮಂತರನ್ನು ಪ್ರಸಾದ ಸ್ವೀಕಾರಕ್ಕಾಗಿ ಆಮಂತ್ರಿಸುವ ಪದ್ಧತಿ ಇಂದು ಕೂಡಾ ಚಾಲ್ತಿಯಲ್ಲಿದೆ. ಕಣ್ಣೂರು, ಹೊಸಾಳ, ಹನೇಹಳ್ಳಿ, ಹೇರಾಡಿ, ಪಾಂಡೇಶ್ವರ, ಹಂದಾಡಿ, ಐರೋಡಿ, ಬಾಳೇಕುದ್ರು, ಚಾಂತಾರು, ಯಡ್ತಾಡಿ, ಕಾವಡಿ, ಕೋಡಿ- ಕನ್ಯಾನ, ಕುಮ್ರಗೋಡು ಯಡಬೆಟ್ಟು-ಕಚ್ಚೂರು ಹೆಬ್ರಿ-ಪೆರ್ಡೂರು ಶಿವಪುರ-ಸೂರಾಲು, ಅಲ್ಲಾರು ಮುಂತಾದ ಅನುಪಾಸಿನ ಹಳ್ಳಿಗಳಿಂದ (ಪತಿ ಮನೆಯಿಂದ ಕಾಣಿಕೆ ನೀಡಿ) ಶಿವಾನುಗ್ರಹಕ್ಕೆ ಪಾತ್ರರಾಗುತ್ತಿದ್ದರು.

ಯಾವೆಲ್ಲ ರೀತಿಯ ಧಾರ್ಮಿಕ ಕೈಂಕರ್ಯಗಳು ನಡೆಯಲಿದೆ?:
ಅಭಿಷೇಕ ಪ್ರಿಯನಾದ ಈಶ್ವರನಿಗೆ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿನಿತ್ಯ ತ್ರಿಕಾಲಪೂಜೆ ಆಚರಣೆ ಇದ್ದು, ಯುಗಾದಿ, ಸಿಂಹ ಮಾಸದಲ್ಲಿ ಸೋಣೆ ಆರತಿ, ಕಾರ್ತಿಕ ಮಾಸದಲ್ಲಿ ದೀಪೋತ್ಸವ, ಧನುರ್ಮಾಸದಲ್ಲಿ ಧನು ಪೂಜೆ, ಮಕರ ಸಂಕ್ರಾಂತಿ, ಶಿವರಾತ್ರಿ ಹಾಗೂ ವಾರ್ಷಿಕ ರಥೋತ್ಸವ ಪ್ರಮುಖ ಉತ್ಸವವಾಗಿರುತ್ತದೆ. ರುದಾಭಿಷೇಕ, ಬಿಲ್ವಾರ್ಚನೆ,
ಏಕಾದಶರುದ್ರ, ಕಿರಿರಂಗ ಪೂಜೆ, ಓಲಿರಂಗ ಪೂಜೆ, ಶತರುದ್ರಾಭಿಷೇಕ ಪ್ರಮುಖ ಸೇವೆಯಾಗಿರುತ್ತದೆ.

ಮಾ.19ರಂದು ಸಂಜೆ ಬಾರಕೂರಿನ ಕಲ್ಲು ಚಪ್ಪರದಿಂದ ರಥಬೀದಿಯಲ್ಲಿ ಬೆಳ್ಳಿ ಪಲ್ಲಕ್ಕಿಯಲ್ಲಿ ಶ್ರೀ ಪಂಚಲಿಂಗೇಶ್ವರ ಪಲ್ಲಕ್ಕಿ ಉತ್ಸವ ನೆರವೇರಿತು.

ಗರ್ಭಗುಡಿಯ ಒಳಗೆ 5 ಲಿಂಗಗಳಿದ್ದರೂ ಭಕ್ತರಿಗೆ 3 ಲಿಂಗಗಳು ಮಾತ್ರ ಗೋಚರಿಸುತ್ತವೆ. ಗರ್ಭಗುಡಿಯ ಹೊರ ಭಾಗದಲ್ಲಿ ಶ್ರೀ ಗಣಪತಿ ಹಾಗೂ ಲಕ್ಷ್ಮೀನಾರಾಯಣ ಸ್ವಾಮಿಯ ವಿಗ್ರಹಗಳದ್ದು, ಈಶ್ವರನ ಜತೆಯಲ್ಲಿ ವಿಷ್ಣು ಕೂಡಾ ಬಂದು ನೆಲೆಸಿದನೆಂಬ ಪುರಾಣ ಕಥೆ ಇದೆ.

ಬಾರ್ಕೂರು ಅಲುಪ ಸಾಮ್ರಾಜ್ಯದ ಪ್ರಾಚೀನ ರಾಜಧಾನಿಯಾಗಿತ್ತು. ಇದನ್ನು ಬಾರಹಕನ್ಯಾಪುರ ಎಂದು ಕರೆಯಲಾಗುತ್ತಿತ್ತು ಮತ್ತು ನಂತರ ಬರಕ್ಕನೂರು ಎಂದು ಕರೆಯಲಾಯಿತು. ಇಲ್ಲಿನ ಅರಸರನ್ನು ತುಳುವ ಅರಸರು ಎನ್ನಲಾಗುತ್ತಿತ್ತು. ಅವರು ತುಳು ಭಾಷೆಯನ್ನು ಮಾತನಾಡುತ್ತಿದ್ದರು. ಬಾರ್ಕೂರಿನಲ್ಲಿ ಕಂಡುಬರುವ ಅನೇಕ ಪ್ರಾಚೀನ ಶಾಸನಗಳು ತುಳು ಭಾಷೆಯಲ್ಲಿವೆ. ಇವು ತುಳುನಾಡಿನ ಇತಿಹಾಸದ ಅವಿಭಾಜ್ಯ ಅಂಗಗಳಾಗಿವೆ.

WhatsApp Join our WhatsApp Channel
Previous Post

Obscene Content On OTT |”ಒಟಿಟಿ ಪ್ಲಾಟ್‌ಫಾರ್ಮ್‌ಗಳಲ್ಲಿ ಸೃಜನಶೀಲತೆ ಹೆಸರಲ್ಲಿ ಅಶ್ಲೀಲ ದೂರು ಗಂಭೀರ ಪರಿಗಣನೆ”

Next Post

Injaz International Scam | ಇಂಜಾಜ್ ಇಂಟರ್ ನ್ಯಾಷನಲ್ ಬಹುಕೋಟಿ ಹಗರಣ : ಇ.ಡಿ.ಯಿಂದ 20.16 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

Next Post
ಜಾರಿ ನಿರ್ದೇಶನಾಲಯದ ಲಾಂಛನ

Injaz International Scam | ಇಂಜಾಜ್ ಇಂಟರ್ ನ್ಯಾಷನಲ್ ಬಹುಕೋಟಿ ಹಗರಣ : ಇ.ಡಿ.ಯಿಂದ 20.16 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

ಬೆಂಗಳೂರಿನ ಹೆಸರಘಟ್ಟ ಕೆರೆಯ ಚಿತ್ರ

BW Special | 75 Heritage Water Sites | ದೇಶದ 75 ಪಾರಂಪರಿಕ ಜಲಮೂಲ ಪಟ್ಟಿ : ಹೆಸರಘಟ್ಟ ಕೆರೆ ಸೇರಿ ರಾಜ್ಯದ 5 ಜಲತಾಣಗಳಿಗೆ ಪಟ್ಟ

Please login to join discussion

Like Us on Facebook

Follow Us on Twitter

Recent News

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group