Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

ಆರ್ಥಿಕ, ಸಾಮಾಜಿಕ ವಿಚಾರಕ್ಕಿಂತ ರಾಜಕೀಯ ಪ್ರಜಾಪ್ರಭುತ್ವದ ಬಗ್ಗೆ ಹೆಚ್ಚು ಚರ್ಚೆಯಾಗುತ್ತಿರುವುದು ದುರ್ದೈವ ; ನ್ಯಾ.ನಾಗಮೋಹನ್ ದಾಸ್

by Bengaluru Wire Desk
April 21, 2023
in News Wire
Reading Time: 1 min read
0

ಬೆಂಗಳೂರು, ಏ.21 www.bengaluruwire.com : ಸಾರ್ವತ್ರಿಕ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಶುಕ್ರವಾರ ‘ಚುನಾವಣೆ-ಪತ್ರಕರ್ತರು ಮತ್ತು ಸಾಮಾಜಿಕ ಜವಾಬ್ದಾರಿ’ ಎಂಬ ವಿಷಯದ ಬಗ್ಗೆ ಸಂವಾದ ಕಾರ್ಯಕ್ರಮ ನಡೆಯಿತು.

ವಿಧಾನಸಭೆ ಚುನಾವಣೆ ಹೊತ್ತಿನಲ್ಲಿ ಪತ್ರಕರ್ತರು ಎದುರಿಸುತ್ತಿರುವ ಸವಾಲುಗಳ ಬಗ್ಗೆಯೂ ನಗರದ ಕೆಯುಡಬ್ಲ್ಯೂಜೆ ಸಭಾಂಗಣದಲ್ಲಿ ಚರ್ಚೆ ಏರ್ಪಡಿಸಲಾಗಿತ್ತು.

ಹೈಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ಎಚ್.ಎನ್‌. ನಾಗಮೋಹನದಾಸ್ ಅವರು ಪ್ರಧಾನ ಭಾಷಣ ಮಾಡುತ್ತಾ, ದೇಶದಲ್ಲಿ ಪಾಳೆಗಾರಿಕೆ ತೆಗೆದು ಹಾಕಿ ಪ್ರಜಾಪ್ರಭುತ್ವವನ್ನು ಸ್ಥಾಪನೆ ಮಾಡಲಾಗಿದೆ. ಕಳೆದ 73 ವರ್ಷದಲ್ಲಿ ನಾವು ಮಾಡಿದ ದೊಡ್ಡ ತಪ್ಪು ರಾಜಕೀಯ ಪ್ರಜಾಪ್ರಭುತ್ವದ ವಿಚಾರದ ಬಗ್ಗೆ ಮಾತ್ರ ಚರ್ಚೆ ಮಾಡುತ್ತಿದ್ದೇವೆ. ಆದರೆ ದೇಶದ ಸಂವಿಧಾನದಲ್ಲಿ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಪ್ರಜಾಪ್ರಭುತ್ವ ಎಂಬ ಮೂರು ಅಂಶಗಳಿವೆ. ಉಳಿದವುಗಳ ಬಗ್ಗೆ ಹೆಚ್ಚು ಚರ್ಚೆಯಾಗುತ್ತಿಲ್ಲ. ಬರೀ ರಾಜಕೀಯ ವಿಚಾರವೇ ಪ್ರಧಾನವಾಗಿದೆ. ರೈತರ ಆತ್ಮಹತ್ಯೆ, ಇಂಧನ ದರ ಏರಿಕೆ, ಬೆಳೆ ಮತ್ತಿತರ ದೈನಂದಿನ ವಿಚಾರಗಳು ಮುನ್ನಲೆಗೆ ಬರುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕೊಪ್ಪಳ ವಿಶ್ವವಿದ್ಯಾಲಯ ಕುಲಪತಿಗಳಾದ ಡಾ.ಬಿ.ಕೆ.ರವಿ ಅವರನ್ನು ಇದೇ ಸಂದರ್ಭದಲ್ಲಿ ಕೆಯುಡಬ್ಲ್ಯುಜೆ ಮೂಲಕ ಆತ್ಮೀಯವಾಗಿ ಸನ್ಮಾನಿಸಲಾಯಿತು.

ಪ್ರಜಾಪ್ರಭುತ್ವದಲ್ಲಿ ಚುನಾವಣೆಯಲ್ಲಿ ಅರಿತು ನಾಗರೀಕರು  ಮಾಧ್ಯಮಗಳಿಂದ ಮಾಹಿತಿ ಪಡೆದು ಜಾಗೃತರಾಗಿ ಮತದಾನ ಮಾಡುತ್ತಾರೆ. ಅಷ್ಟರ ಮಟ್ಟಿಗೆ ಮಾಧ್ಯಮಗಳು ಜನರಿಗೆ ಚರ್ಚೆ ಮಾಡಲು, ಮಾಹಿತಿ ನೀಡಲು ಅನುಕೂಲ ಕಲ್ಪಿಸಿವೆ. ಚುನಾವಣೆ ಸಂದರ್ಭದಲ್ಲಿ ನಿರುದ್ಯೋಗ, ಬೆಲೆ ಏರಿಕೆ, ಕೃಷಿ ಬಿಕ್ಕಟ್ಟಯ, ರೈತರು, ಕಾರ್ಮಿಕರು, ಆರ್ಥಿಕತೆ, ಜನರ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕು. ಈ ನಿಟ್ಟಿನಲ್ಲಿ ಮಾಧ್ಯಮಗಳು ಜನರು ಮತ್ತು ಸರ್ಕಾರದ ಮಧ್ಯೆ ಸೇತುವೆಯಂತೆ ಕೆಲಸ ಮಾಡಬೇಕಿದೆ ಎಂದು ಅಭಿಪ್ರಾಯಪಟ್ಟರು.

ವಾರ್ತಾ ಇಲಾಖೆಯ ನಿರ್ದೇಶಕರಾದ ಡಿ.ಪಿ.ಮುರುಳೀಧರ್, ಉಪ ನಿರ್ದೇಶಕರಾದ ಕೆ.ಪಿ.ಪುಟ್ಟಸ್ವಾಮಯ್ಯ ಅವರನ್ನು ಸನ್ಮಾಸಿಲಾಯಿತು.

ರಾಜ್ಯದಲ್ಲಿ ಪ್ರತಿಯೊಬ್ಬರು ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಒಂದು ಲಕ್ಷ ರೂ. ನಂತೆ ವರ್ಷಕ್ಕೆ ಒಟ್ಟಾರೆ ರಾಜ್ಯದ ಜನರು ಏಳೂವರೆ ಲಕ್ಷ ಕೋಟಿ ರೂ. ನಂತೆ ತೆರಿಗೆ ಕಟ್ಟುತ್ತಾರೆ. ಆದರೆ ದುರ್ದೈವದ ಸಂಗತಿ ಎಂದರೆ ರಾಜ್ಯದ ಬಜೆಟ್ ಗಾತ್ರ ಎರಡೂವರೆ ಲಕ್ಷ ರೂ. ದಾಟಿಲ್ಲ. ಯಾವ ಪಕ್ಷವೂ ತನ್ನ ಪ್ರಣಾಳಿಕೆಯಲ್ಲಿ ಸಾಲ, ತೆರಿಗೆ ಹಾಕುವಿಕೆ ಬಗ್ಗೆ ವಾಸ್ತವವಾಗಿ ತಿಳಿಸಿಲ್ಲ. ಜನರ ಅಭಿಪ್ರಾಯವನ್ನು ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ರಾಜಕೀಯ ಪಕ್ಷಗಳ‌ ಮೇಲೆ ಒತ್ತಡ ಹಾಕುವ ಕೆಲಸ ಮಾಧ್ಯಮ ಮಾಡಬೇಕಿದೆ ಎಂದು‌ ನ್ಯಾ. ಎಚ್.ಎನ್‌. ನಾಗಮೋಹನದಾಸ್ ಹೇಳಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೊಪ್ಪಳ ವಿಶ್ವವಿದ್ಯಾಲಯ ಕುಲಪತಿಗಳಾದ ಡಾ.ಬಿ.ಕೆ.ರವಿ, ಪತ್ರಕರ್ತರಾದವರು ತಮ್ಮ ಸ್ವಂತ ಜ್ಞಾನದ ಮೇಲೆ ಅವಲಂಬಿತರಾಗಿರಬೇಕೇ ವಿನಃ ತಂತ್ರಜ್ಞಾನದ ಮೇಲೆ ಅವಲಂಬಿತರಾಗಿರಬಾರದು. ಯಾವ ಮಾಧ್ಯಮ ಜನರ ನಂಬಿಕೆ ಉಳಸಿಕೊಳ್ಳುವುದೋ ಅಲ್ಲಿಯವರೆಗೆ ಆ ಮಾಧ್ಯಮ ಉಳಿದುಕೊಳ್ಳುವುದು. ಪ್ರಜಾಪ್ರಭುತ್ವದ ಹಬ್ಬವಾದ ಈ ವಿಧಾನಸಭಾ ಚುನಾವಣೆಯಲ್ಲಿ ಜನರು ಹೆಚ್ಚು‌ ಮತದಾನ ಮಾಡುವ ಮೂಲಕ‌ ತಮ್ಮ ಹಕ್ಕು ಚಲಾಯಿಸಬೇಕು. ಆರೋಗ್ಯಕಾರಿ ಮಾಧ್ಯಮದಿಂದ ಆರೋಗ್ಯಕಾರಿ ಸಮಾಜ ನಿರ್ಮಾಣ ಸಾಧ್ಯ ಎಂದು ಅವರು ತಿಳಿಸಿದರು.

ಹಿರಿಯ ಪತ್ರಕರ್ತ ಮುಂಜಾನೆ ಸತ್ಯ ಅವರನ್ನು ಕೆಯುಡಬ್ಲ್ಯುಜೆ ಪಿ.ಆರ್.ರಾಮಯ್ಯ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಮೈಸೂರಿನಲ್ಲಿ‌ ನಡೆದ ಕೆಯುಡಬ್ಲ್ಯುಜೆ ಪಿ.ಆರ್.ರಾಮಯ್ಯ ಪ್ರಶಸ್ತಿಯನ್ನು ಕಾರಣಾಂತರಗಳಿಂದ ಪ್ರಶಸ್ತಿ ಪಡೆಯಲು ಸಾಧ್ಯವಾಗದ ಕಾರಣ ಹಿರಿಯ ಪತ್ರಕರ್ತರಾದ ಮುಂಜಾನೆ ಸತ್ಯ ಅವರಿಗೆ ಇಂದು ಪ್ರಶಸ್ತಿ ನೀಡಲಾಯಿತು. ನಂತರ ತಮ್ಮ ಸುಧೀರ್ಘ ಪತ್ರಕರ್ತ ಜೀವನದ ಅನುಭವವನ್ನು ಹಂಚಿಕೊಂಡರು.

ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ವಾರ್ತಾ ಇಲಾಖೆ ನಿರ್ದೇಶಕರಾದ ಡಿ.ಪಿ.ಮುರುಳೀಧರ್, ಉಪ ನಿರ್ದೇಶಕರಾದ ಕೆ.ಪಿ.ಪುಟ್ಟಸ್ವಾಮಯ್ಯ ಅವರನ್ನು ಕೆಯುಡಬ್ಲ್ಯುಜೆ ಮೂಲಕ ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಕೆಯುಡಬ್ಲ್ಯೂಜೆ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ಮತ್ತಿತರು ಪಾಲ್ಗೊಂಡಿದ್ದರು. ಕೆಯುಡಬ್ಲ್ಯುಜೆ ಅಧ್ಯಕ್ಷರಾದ ಶಿವಾನಂದ ತಗಡೂರ್ ನೇತೃತ್ವದಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಇಂದಿಗೆ ಒಂದು ವರ್ಷವಾಗಿದೆ.

WhatsApp Join our WhatsApp Channel
Previous Post

Karnataka Elections 2023 | ಅಸೆಂಬ್ಲಿ ಚುನಾವಣೆಗೆ ಒಟ್ಟಾರೆ 3,632 ಅಭ್ಯರ್ಥಿಗಳಿಂದ 5102 ನಾಮಪತ್ರ ಸಲ್ಲಿಕೆ : ಶೇ.91.60 ಪುರುಷ ಅಭ್ಯರ್ಥಿಗಳದ್ದೇ ಕಾರುಬಾರು

Next Post

Election News | ಸಾರಿಗೆ ಅಧಿಕಾರಿಗಳ ಗೊಂದಲ : ರಾಜ್ಯ ಎಂಸಿಎಂಸಿ ಸದಸ್ಯ ಕಾರ್ಯದರ್ಶಿ ಚುನಾವಣಾ ವಾಹನ ವಶ!!

Next Post

Election News | ಸಾರಿಗೆ ಅಧಿಕಾರಿಗಳ ಗೊಂದಲ : ರಾಜ್ಯ ಎಂಸಿಎಂಸಿ ಸದಸ್ಯ ಕಾರ್ಯದರ್ಶಿ ಚುನಾವಣಾ ವಾಹನ ವಶ!!

ವಿದ್ಯುತ್ ಸರಬರಾಜು ಮಾಡುವ ದೊಡ್ಡ ದೊಡ್ಡ ಸಂಪರ್ಕ ಮಾರ್ಗಗಳ ಸಾಂದರ್ಭಿಕ ಚಿತ್ರ

BW SPECIAL | Power Demand | ತಾಪಮಾನ ಹೆಚ್ಚಳ : ಬೆಸ್ಕಾಂ ವಿದ್ಯುತ್ ಬೇಡಿಕೆ ಬಳಕೆಯೂ ಜೋರು - ಕರೆಂಟ್ ಸರಾಸರಿ ಬೇಡಿಕೆ 7,282 ಮೆಗಾವ್ಯಾಟ್ ಏರಿಕೆ

Please login to join discussion

Like Us on Facebook

Follow Us on Twitter

Recent News

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 2, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group