Wednesday, June 17, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Bengaluruwire BIG IMPACT | ಬಿಬಿಎಂಪಿ ಕಾಯ್ದೆ-2020 ಅಧಿಕಾರ ಪ್ರತ್ಯಾಯೋಜನೆಗೆ ತುರ್ತು ಸಭೆ ಕರೆದ ಮುಖ್ಯ ಆಯುಕ್ತ ಗೌರವ್ ಗುಪ್ತಾ

by Bengaluru Wire Desk
January 12, 2023
in Bengaluru Focus, BW Special
Reading Time: 1 min read
0

ಬೆಂಗಳೂರು, (www.bengaluruwire.com) : “ಆಟಕ್ಕುಂಟು ಲೆಕ್ಕಕ್ಕಿಲ್ಲ ಬಿಬಿಎಂಪಿ ಕಾಯ್ದೆ-2020” ಎಂಬ ಶೀರ್ಷಿಕೆ ಅಡಿಯಲ್ಲಿ “ಬೆಂಗಳೂರು ವೈರ್” ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾಯ್ದೆ- 2020 ಜಾರಿಗೆ ಬಂದು ನಾಲ್ಕು ತಿಂಗಳ ಮೇಲಾದರೂ ವಿವಿಧ ಇಲಾಖೆಗಳಲ್ಲಿ ಅಧಿಕಾರ ಪ್ರತ್ಯಾಯೋಜನೆ (Delegation of Powers) ಆಗಿಲ್ಲ ಎಂದು ಆ.8 ರಂದು ವಿಸ್ತ್ರತ ವರದಿ ಪ್ರಕಟಿಸಿತ್ತು. ಈ ವರದಿಯಿಂದ ಎಚ್ಚೆತ್ತ ಪಾಲಿಕೆ ಆ.9ರಂದು ಮುಖ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಆದಷ್ಟು ಶೀಘ್ರವಾಗಿ ನೂತನ ಕಾಯ್ದೆಯಡಿ ವಿವಿಧ ಹಂತದ ಅಧಿಕಾರಿಗಳಿಗೆ ಅಧಿಕಾರ ಪ್ರತ್ಯಾಯೋಜನೆ ಮಾಡಲು ನಿರ್ಧರಿಸಿದೆ. ಇದು “ಬೆಂಗಳೂರು ವೈರ್” ಇಂಪ್ಯಾಕ್ಟ್.

ನೂತನ ಬಿಬಿಎಂಪಿ ಕಾಯ್ದೆ-2020ರಂತೆ ಪಾಲಿಕೆಯ ವಿವಿಧ ಇಲಾಖೆಗಳಲ್ಲಿ ಹಲವು ಹಂತದ ಅಧಿಕಾರಿಗಳಿಗೆ ಸೂಕ್ತ ರೀತಿಯಲ್ಲಿ ಅಧಿಕಾರ ಹಂಚಿಕೆ ಮಾಡದಿದ್ದರೆ, ಹೇಗೆ ನಗರದ ಅಭಿವೃದ್ಧಿ ಹಾಗೂ ಪಾಲಿಕೆ ಆಡಳಿತದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ ಎಂದು ಕಾಯ್ದೆಯ ವಿವಿಧ ಸೆಕ್ಷನ್ ಗಳನ್ನು ಉಲ್ಲೇಖಿಸಿ ನಿಖರವಾಗಿ ಆ.8ರ ಭಾನುವಾರ ವರದಿ ಮಾಡಿತ್ತು.

ಈ ವರದಿಯನ್ನು ಗಂಭೀರವಾಗಿ ಪರಿಗಣಿಸಿದ ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಸೋಮವಾರ ಮಧ್ಯಾಹ್ನ ನಂತರ ಕೇಂದ್ರ ಕಚೇರಿಯಲ್ಲಿ ತುರ್ತು ಸಭೆ ಕರೆದು, ಮುಖ್ಯ ಆಯುಕ್ತರು, ವಲಯ ಆಯುಕ್ತರಿಂದ ತಮ್ಮ ಕೆಳಹಂತದ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಅಧಿಕಾರ ಪ್ರತ್ಯೋಯೋಚನೆಯನ್ನು ಆದಷ್ಟು ಶೀಘ್ರವಾಗಿ ಅನುಷ್ಠಾನ ಮಾಡಲು ಕ್ರಮ ಕೈಗೊಳ್ಳುವಂತೆ ಕಟ್ಟಪ್ಪಣೆ ಮಾಡಿದರು.

ಆದ್ಯತೆ ಆಧಾರದ ಕೇಂದ್ರ ಕಚೇರಿಯಲ್ಲಿರುವ ಬೃಹತ್ ನೀರುಗಾಲುವೆ, ರಸ್ತೆ ಮತ್ತು ಮೂಲಭೂತ ಸೌಕರ್ಯ, ಘನತ್ಯಾಜ್ಯ ವಿಲೇವಾರಿ, ಆರೋಗ್ಯ, ನಗರ ಯೋಜನೆ ಮತ್ತಿತರ ಇಲಾಖೆಗಳು ಹಾಗೂ ವಲಯ ಮಟ್ಟದಲ್ಲಿ ವಿವಿಧ ಇಲಾಖೆಗಳಲ್ಲಿ ಅಧಿಕಾರ ಪ್ರತ್ಯಾಯೋಜನೆ ತುರ್ತಾಗಿ ನೀಡಬೇಕಾಗಿರುವ ಹುದ್ದೆಗಳನ್ನು ಪಟ್ಟಿ ಮಾಡಿ ಕೇಂದ್ರ ಕಚೇರಿಯ ಆಡಳಿತ ವಿಭಾಗಕ್ಕೆ ನೀಡುವಂತೆ ಮುಖ್ಯ ಆಯುಕ್ತರು ಸಭೆಯಲ್ಲಿ ಸೂಚನೆ ನೀಡಿದ್ದಾರೆ ಎಂದು ಉನ್ನತ ಮೂಲಗಳು “ಬೆಂಗಳೂರು ವೈರ್” ಖಚಿತಪಡಿಸಿವೆ.

ಇದನ್ನೂ ಓದಿ : BW SPECIAL | BBMP IMPACT-2020 | ಆಟಕ್ಕುಂಟು ಲೆಕ್ಕಕ್ಕಿಲ್ಲ ಬಿಬಿಎಂಪಿ ಕಾಯ್ದೆ- 2020…..!

ಇನ್ನೊಂದೆಡೆ ಈತನಕ ಬಿಬಿಎಂಪಿಯಲ್ಲಿರುವ ಕಾನೂನು ವಿಭಾಗ ತನ್ನ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಅಧಿಕಾರ ಪ್ರತ್ಯಾಯೋಜನೆ ವಿಚಾರದಲ್ಲಿ ತನ್ನ ಅಭಿಪ್ರಾಯ ನೀಡಲು ಹಿಂದೆ ಮುಂದೆ ನೋಡುತ್ತಾ ಕಡತವನ್ನು ಆಡಳಿತ ಶಾಖೆ ವರ್ಗಾಯಿಸಿ ಕೈತೊಳೆದುಕೊಂಡಿದ್ದನ್ನು “ಆಟಕ್ಕುಂಟು ಲೆಕ್ಕಕ್ಕಿಲ್ಲ ಬಿಬಿಎಂಪಿ ಕಾಯ್ದೆ-2020” ವಿಶೇಷ ವರದಿಯಲ್ಲಿ ತಿಳಿಸಿತ್ತು. ಅಲ್ಲದೆ ನೂತನ ಬಿಬಿಎಂಪಿ ಕಾಯ್ದೆ-2020ರಲ್ಲಿ ನೂತನ ಕಾಯ್ದೆ ಅನ್ವಯಿಸುವಿಕೆ, ಬೈಲಾ ರಚನೆ ಮತ್ತಿತರ ವಿಷಯಗಳಲ್ಲಿ ಪಾಲಿಕೆಗೆ ನೆರವಾಗುವ ಬಾದ್ಯತೆ ಬಗ್ಗೆ ವರದಿಯಲ್ಲಿ ಬಿಚ್ಚಿಟ್ಟಿತ್ತು. ಈ ಹಿನ್ನಲೆಯಲ್ಲಿ ಈ ವಿಚಾರವೂ ಸಭೆಯಲ್ಲಿ ಚರ್ಚೆಗೆ ಬಂದಿದ್ದು, ವಿವಿಧ ಹಂತದ ಅಧಿಕಾರ ಹಂಚಿಕೆ ಬಗ್ಗೆ ಕಾನೂನು ವಿಭಾಗದಿಂದಲೂ ಕರಡು ಸಿದ್ದಪಡಿಸಿ ಸಲ್ಲಿಸುವಂತೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸೂಚಿಸಿದ್ದಾರೆ.

ಈ ಮಧ್ಯೆ “ಬೆಂಗಳೂರು ವೈರ್”  ಆ.8ರಂದು ವರದಿ ಪ್ರಕಟಿಸಿದ ನಂತರ ಎಚ್ಚೆತ್ತುಕೊಂಡು ಆ.9ರಂದು ಪಾಲಿಕೆ ನೂತನ ಕಾಯ್ದೆಯಡಿ ಪ್ರದತ್ತವಾದ ಅಧಿಕಾರ ಬಳಸಿಕೊಂಡು ಎಂಟು ವಲಯಗಳ ಪೈಕಿ, ಬೆಂಗಳೂರು ದಕ್ಷಿಣ ವಲಯ ಆಯುಕ್ತರೂ ಆಗಿರುವ ಹಣಕಾಸು ವಿಶೇಷ ಆಯುಕ್ತರಾದ ತುಳಸಿ ಮದ್ದಿನೇನಿ ಬಿಬಿಎಂಪಿ ಆಕ್ಟ್-2020ರ ಕಲಂ 74(ಡಿ) ಅಡಿ ನಗರ ಯೋಜನೆ ವಿಭಾಗದಲ್ಲಿನ ಮೂವರು ನಗರ ಯೋಜನೆ ಸಹಾಯಕ ನಿರ್ದೇಶಕರಿಗೆ ಕಟ್ಟಡ ನಕ್ಷೆ ಮಂಜೂರಾತಿ, ನಕ್ಷೆ ಮಂಜೂರಾತಿ ತಿರಸ್ಕರಿಸುವ ಅಧಿಕಾರ, ಸಮಜಾಯುಷಿ ನೀಡುವಂತೆ ಕಾಲಮಿತಿ ನಿಗಧಿಪಡಿಸಿ ನೋಟಿಸ್ ನೀಡುವುದು ಹಾಗೂ ವಿಚಾರಣೆಯ ನಂತರ ಧೃಢೀಕೃತಗೊಳಿಸಲಾಗುವ ಆದೇಶ ಜಾರಿಗೊಳಿಸುವ ಅಧಿಕಾರವನ್ನು ಆ.9ರಿಂದಲೇ ಜಾರಿಗೆ ಬರುವಂತೆ ಅಧಿಕಾರ ಪ್ರತ್ಯಾಯೋಜಿಸಿ ಆದೇಶ ಹೊರಡಿಸಿದ್ದಾರೆ.  

ನಗರ ಸ್ಥಳೀಯ ಆಡಳಿತ ವಿಕೇಂದ್ರೀಕರಣ ದೃಷ್ಟಿಯಿಂದ ಜಾರಿಗೆ ಬಂದ ಬಿಬಿಎಂಪಿ ಕಾಯ್ದೆ-2020 ಮೂಲ ಆಶಯದಂತೆ ಕಾರ್ಯನಿರ್ವಹಿಸಬೇಕು ಎನ್ನುವ ದೃಷ್ಟಿ ಹಾಗೂ ಸಾಮಾಜಿಕ ಕಳಕಳಿಯಿಂದ “ಬೆಂಗಳೂರು ವೈರ್” ಸ್ವತಂತ್ರ ಮತ್ತು ವಾಸ್ತವ ಸುದ್ದಿ ಉದ್ದೇಶ ಇಟ್ಟುಕೊಂಡು ಈ ವರದಿಯನ್ನು ಪ್ರಕಟ ಮಾಡಿತ್ತು. ಈ ವರದಿ ಪ್ರಕಟವಾದ ಬಳಿಕ ಮುಖ್ಯ ಆಯುಕ್ತರು ತುರ್ತು ಸಭೆಯ ನಡೆಸಿದರು. 8 ವಲಯಗಳ ಪೈಕಿ ದಕ್ಷಿಣ ವಲಯ ಆಯುಕ್ತರು ತಮ್ಮ ಅಧಿಕಾರ ಚಲಾಯಿಸಿ ಡೆಲಿಗೇಷನ್ ಆಫ್ ಪವರ್ ಹಂಚಿಕೆ ಮಾಡಿದರು. ಅದೇ ರೀತಿ ಉಳಿದ ವಲಯಗಳ ಆಯುಕ್ತರು ಶೀಘ್ರದಲ್ಲೇ ಅಧಿಕಾರ ಪ್ರತ್ಯಾಯೋಜನೆ ಮಾಡಲಿದ್ದಾರೆ ಎಂದು “ಬೆಂಗಳೂರು ವೈರ್” ಗೆ ಮಾಹಿತಿ ಲಭ್ಯವಾಗಿದೆ.

WhatsApp Join our WhatsApp Channel
Previous Post

ಸರ್ಕಾರಿ ಇಲಾಖೆಗಳ ಸಭೆಯಲ್ಲಿ ಹೂಗುಚ್ಛ, ಹಾರ- ತುರಾಯಿ ನಿಷೇಧ : ಕನ್ನಡ ಪುಸ್ತಕ ನೀಡಲು ಆದೇಶಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Next Post

Namma Metro News | ನಾಯಂಡನಹಳ್ಳಿ – ಕೆಂಗೇರಿ ನೂತನ ಮೆಟ್ರೋ ಮಾರ್ಗದಲ್ಲಿ ರೈಲ್ವೆ ಸುರಕ್ಷತಾ ಆಯುಕ್ತರಿಂದ ಪರಿಶೀಲನೆ

Next Post

Namma Metro News | ನಾಯಂಡನಹಳ್ಳಿ - ಕೆಂಗೇರಿ ನೂತನ ಮೆಟ್ರೋ ಮಾರ್ಗದಲ್ಲಿ ರೈಲ್ವೆ ಸುರಕ್ಷತಾ ಆಯುಕ್ತರಿಂದ ಪರಿಶೀಲನೆ

75ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಭರಪೂರ ಸಿದ್ಧತೆ

Please login to join discussion

Like Us on Facebook

Follow Us on Twitter

Recent News

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group