Tuesday, April 28, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Bengaluruwire BIG IMPACT | ಬಿಬಿಎಂಪಿ ಕಾಯ್ದೆ-2020 ಅಧಿಕಾರ ಪ್ರತ್ಯಾಯೋಜನೆಗೆ ತುರ್ತು ಸಭೆ ಕರೆದ ಮುಖ್ಯ ಆಯುಕ್ತ ಗೌರವ್ ಗುಪ್ತಾ

by Bengaluru Wire Desk
January 12, 2023
in Bengaluru Focus, BW Special
Reading Time: 1 min read
0

ಬೆಂಗಳೂರು, (www.bengaluruwire.com) : “ಆಟಕ್ಕುಂಟು ಲೆಕ್ಕಕ್ಕಿಲ್ಲ ಬಿಬಿಎಂಪಿ ಕಾಯ್ದೆ-2020” ಎಂಬ ಶೀರ್ಷಿಕೆ ಅಡಿಯಲ್ಲಿ “ಬೆಂಗಳೂರು ವೈರ್” ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾಯ್ದೆ- 2020 ಜಾರಿಗೆ ಬಂದು ನಾಲ್ಕು ತಿಂಗಳ ಮೇಲಾದರೂ ವಿವಿಧ ಇಲಾಖೆಗಳಲ್ಲಿ ಅಧಿಕಾರ ಪ್ರತ್ಯಾಯೋಜನೆ (Delegation of Powers) ಆಗಿಲ್ಲ ಎಂದು ಆ.8 ರಂದು ವಿಸ್ತ್ರತ ವರದಿ ಪ್ರಕಟಿಸಿತ್ತು. ಈ ವರದಿಯಿಂದ ಎಚ್ಚೆತ್ತ ಪಾಲಿಕೆ ಆ.9ರಂದು ಮುಖ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಆದಷ್ಟು ಶೀಘ್ರವಾಗಿ ನೂತನ ಕಾಯ್ದೆಯಡಿ ವಿವಿಧ ಹಂತದ ಅಧಿಕಾರಿಗಳಿಗೆ ಅಧಿಕಾರ ಪ್ರತ್ಯಾಯೋಜನೆ ಮಾಡಲು ನಿರ್ಧರಿಸಿದೆ. ಇದು “ಬೆಂಗಳೂರು ವೈರ್” ಇಂಪ್ಯಾಕ್ಟ್.

ನೂತನ ಬಿಬಿಎಂಪಿ ಕಾಯ್ದೆ-2020ರಂತೆ ಪಾಲಿಕೆಯ ವಿವಿಧ ಇಲಾಖೆಗಳಲ್ಲಿ ಹಲವು ಹಂತದ ಅಧಿಕಾರಿಗಳಿಗೆ ಸೂಕ್ತ ರೀತಿಯಲ್ಲಿ ಅಧಿಕಾರ ಹಂಚಿಕೆ ಮಾಡದಿದ್ದರೆ, ಹೇಗೆ ನಗರದ ಅಭಿವೃದ್ಧಿ ಹಾಗೂ ಪಾಲಿಕೆ ಆಡಳಿತದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ ಎಂದು ಕಾಯ್ದೆಯ ವಿವಿಧ ಸೆಕ್ಷನ್ ಗಳನ್ನು ಉಲ್ಲೇಖಿಸಿ ನಿಖರವಾಗಿ ಆ.8ರ ಭಾನುವಾರ ವರದಿ ಮಾಡಿತ್ತು.

ಈ ವರದಿಯನ್ನು ಗಂಭೀರವಾಗಿ ಪರಿಗಣಿಸಿದ ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಸೋಮವಾರ ಮಧ್ಯಾಹ್ನ ನಂತರ ಕೇಂದ್ರ ಕಚೇರಿಯಲ್ಲಿ ತುರ್ತು ಸಭೆ ಕರೆದು, ಮುಖ್ಯ ಆಯುಕ್ತರು, ವಲಯ ಆಯುಕ್ತರಿಂದ ತಮ್ಮ ಕೆಳಹಂತದ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಅಧಿಕಾರ ಪ್ರತ್ಯೋಯೋಚನೆಯನ್ನು ಆದಷ್ಟು ಶೀಘ್ರವಾಗಿ ಅನುಷ್ಠಾನ ಮಾಡಲು ಕ್ರಮ ಕೈಗೊಳ್ಳುವಂತೆ ಕಟ್ಟಪ್ಪಣೆ ಮಾಡಿದರು.

ಆದ್ಯತೆ ಆಧಾರದ ಕೇಂದ್ರ ಕಚೇರಿಯಲ್ಲಿರುವ ಬೃಹತ್ ನೀರುಗಾಲುವೆ, ರಸ್ತೆ ಮತ್ತು ಮೂಲಭೂತ ಸೌಕರ್ಯ, ಘನತ್ಯಾಜ್ಯ ವಿಲೇವಾರಿ, ಆರೋಗ್ಯ, ನಗರ ಯೋಜನೆ ಮತ್ತಿತರ ಇಲಾಖೆಗಳು ಹಾಗೂ ವಲಯ ಮಟ್ಟದಲ್ಲಿ ವಿವಿಧ ಇಲಾಖೆಗಳಲ್ಲಿ ಅಧಿಕಾರ ಪ್ರತ್ಯಾಯೋಜನೆ ತುರ್ತಾಗಿ ನೀಡಬೇಕಾಗಿರುವ ಹುದ್ದೆಗಳನ್ನು ಪಟ್ಟಿ ಮಾಡಿ ಕೇಂದ್ರ ಕಚೇರಿಯ ಆಡಳಿತ ವಿಭಾಗಕ್ಕೆ ನೀಡುವಂತೆ ಮುಖ್ಯ ಆಯುಕ್ತರು ಸಭೆಯಲ್ಲಿ ಸೂಚನೆ ನೀಡಿದ್ದಾರೆ ಎಂದು ಉನ್ನತ ಮೂಲಗಳು “ಬೆಂಗಳೂರು ವೈರ್” ಖಚಿತಪಡಿಸಿವೆ.

ಇದನ್ನೂ ಓದಿ : BW SPECIAL | BBMP IMPACT-2020 | ಆಟಕ್ಕುಂಟು ಲೆಕ್ಕಕ್ಕಿಲ್ಲ ಬಿಬಿಎಂಪಿ ಕಾಯ್ದೆ- 2020…..!

ಇನ್ನೊಂದೆಡೆ ಈತನಕ ಬಿಬಿಎಂಪಿಯಲ್ಲಿರುವ ಕಾನೂನು ವಿಭಾಗ ತನ್ನ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಅಧಿಕಾರ ಪ್ರತ್ಯಾಯೋಜನೆ ವಿಚಾರದಲ್ಲಿ ತನ್ನ ಅಭಿಪ್ರಾಯ ನೀಡಲು ಹಿಂದೆ ಮುಂದೆ ನೋಡುತ್ತಾ ಕಡತವನ್ನು ಆಡಳಿತ ಶಾಖೆ ವರ್ಗಾಯಿಸಿ ಕೈತೊಳೆದುಕೊಂಡಿದ್ದನ್ನು “ಆಟಕ್ಕುಂಟು ಲೆಕ್ಕಕ್ಕಿಲ್ಲ ಬಿಬಿಎಂಪಿ ಕಾಯ್ದೆ-2020” ವಿಶೇಷ ವರದಿಯಲ್ಲಿ ತಿಳಿಸಿತ್ತು. ಅಲ್ಲದೆ ನೂತನ ಬಿಬಿಎಂಪಿ ಕಾಯ್ದೆ-2020ರಲ್ಲಿ ನೂತನ ಕಾಯ್ದೆ ಅನ್ವಯಿಸುವಿಕೆ, ಬೈಲಾ ರಚನೆ ಮತ್ತಿತರ ವಿಷಯಗಳಲ್ಲಿ ಪಾಲಿಕೆಗೆ ನೆರವಾಗುವ ಬಾದ್ಯತೆ ಬಗ್ಗೆ ವರದಿಯಲ್ಲಿ ಬಿಚ್ಚಿಟ್ಟಿತ್ತು. ಈ ಹಿನ್ನಲೆಯಲ್ಲಿ ಈ ವಿಚಾರವೂ ಸಭೆಯಲ್ಲಿ ಚರ್ಚೆಗೆ ಬಂದಿದ್ದು, ವಿವಿಧ ಹಂತದ ಅಧಿಕಾರ ಹಂಚಿಕೆ ಬಗ್ಗೆ ಕಾನೂನು ವಿಭಾಗದಿಂದಲೂ ಕರಡು ಸಿದ್ದಪಡಿಸಿ ಸಲ್ಲಿಸುವಂತೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸೂಚಿಸಿದ್ದಾರೆ.

ಈ ಮಧ್ಯೆ “ಬೆಂಗಳೂರು ವೈರ್”  ಆ.8ರಂದು ವರದಿ ಪ್ರಕಟಿಸಿದ ನಂತರ ಎಚ್ಚೆತ್ತುಕೊಂಡು ಆ.9ರಂದು ಪಾಲಿಕೆ ನೂತನ ಕಾಯ್ದೆಯಡಿ ಪ್ರದತ್ತವಾದ ಅಧಿಕಾರ ಬಳಸಿಕೊಂಡು ಎಂಟು ವಲಯಗಳ ಪೈಕಿ, ಬೆಂಗಳೂರು ದಕ್ಷಿಣ ವಲಯ ಆಯುಕ್ತರೂ ಆಗಿರುವ ಹಣಕಾಸು ವಿಶೇಷ ಆಯುಕ್ತರಾದ ತುಳಸಿ ಮದ್ದಿನೇನಿ ಬಿಬಿಎಂಪಿ ಆಕ್ಟ್-2020ರ ಕಲಂ 74(ಡಿ) ಅಡಿ ನಗರ ಯೋಜನೆ ವಿಭಾಗದಲ್ಲಿನ ಮೂವರು ನಗರ ಯೋಜನೆ ಸಹಾಯಕ ನಿರ್ದೇಶಕರಿಗೆ ಕಟ್ಟಡ ನಕ್ಷೆ ಮಂಜೂರಾತಿ, ನಕ್ಷೆ ಮಂಜೂರಾತಿ ತಿರಸ್ಕರಿಸುವ ಅಧಿಕಾರ, ಸಮಜಾಯುಷಿ ನೀಡುವಂತೆ ಕಾಲಮಿತಿ ನಿಗಧಿಪಡಿಸಿ ನೋಟಿಸ್ ನೀಡುವುದು ಹಾಗೂ ವಿಚಾರಣೆಯ ನಂತರ ಧೃಢೀಕೃತಗೊಳಿಸಲಾಗುವ ಆದೇಶ ಜಾರಿಗೊಳಿಸುವ ಅಧಿಕಾರವನ್ನು ಆ.9ರಿಂದಲೇ ಜಾರಿಗೆ ಬರುವಂತೆ ಅಧಿಕಾರ ಪ್ರತ್ಯಾಯೋಜಿಸಿ ಆದೇಶ ಹೊರಡಿಸಿದ್ದಾರೆ.  

ನಗರ ಸ್ಥಳೀಯ ಆಡಳಿತ ವಿಕೇಂದ್ರೀಕರಣ ದೃಷ್ಟಿಯಿಂದ ಜಾರಿಗೆ ಬಂದ ಬಿಬಿಎಂಪಿ ಕಾಯ್ದೆ-2020 ಮೂಲ ಆಶಯದಂತೆ ಕಾರ್ಯನಿರ್ವಹಿಸಬೇಕು ಎನ್ನುವ ದೃಷ್ಟಿ ಹಾಗೂ ಸಾಮಾಜಿಕ ಕಳಕಳಿಯಿಂದ “ಬೆಂಗಳೂರು ವೈರ್” ಸ್ವತಂತ್ರ ಮತ್ತು ವಾಸ್ತವ ಸುದ್ದಿ ಉದ್ದೇಶ ಇಟ್ಟುಕೊಂಡು ಈ ವರದಿಯನ್ನು ಪ್ರಕಟ ಮಾಡಿತ್ತು. ಈ ವರದಿ ಪ್ರಕಟವಾದ ಬಳಿಕ ಮುಖ್ಯ ಆಯುಕ್ತರು ತುರ್ತು ಸಭೆಯ ನಡೆಸಿದರು. 8 ವಲಯಗಳ ಪೈಕಿ ದಕ್ಷಿಣ ವಲಯ ಆಯುಕ್ತರು ತಮ್ಮ ಅಧಿಕಾರ ಚಲಾಯಿಸಿ ಡೆಲಿಗೇಷನ್ ಆಫ್ ಪವರ್ ಹಂಚಿಕೆ ಮಾಡಿದರು. ಅದೇ ರೀತಿ ಉಳಿದ ವಲಯಗಳ ಆಯುಕ್ತರು ಶೀಘ್ರದಲ್ಲೇ ಅಧಿಕಾರ ಪ್ರತ್ಯಾಯೋಜನೆ ಮಾಡಲಿದ್ದಾರೆ ಎಂದು “ಬೆಂಗಳೂರು ವೈರ್” ಗೆ ಮಾಹಿತಿ ಲಭ್ಯವಾಗಿದೆ.

WhatsApp Join our WhatsApp Channel
Previous Post

ಸರ್ಕಾರಿ ಇಲಾಖೆಗಳ ಸಭೆಯಲ್ಲಿ ಹೂಗುಚ್ಛ, ಹಾರ- ತುರಾಯಿ ನಿಷೇಧ : ಕನ್ನಡ ಪುಸ್ತಕ ನೀಡಲು ಆದೇಶಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Next Post

Namma Metro News | ನಾಯಂಡನಹಳ್ಳಿ – ಕೆಂಗೇರಿ ನೂತನ ಮೆಟ್ರೋ ಮಾರ್ಗದಲ್ಲಿ ರೈಲ್ವೆ ಸುರಕ್ಷತಾ ಆಯುಕ್ತರಿಂದ ಪರಿಶೀಲನೆ

Next Post

Namma Metro News | ನಾಯಂಡನಹಳ್ಳಿ - ಕೆಂಗೇರಿ ನೂತನ ಮೆಟ್ರೋ ಮಾರ್ಗದಲ್ಲಿ ರೈಲ್ವೆ ಸುರಕ್ಷತಾ ಆಯುಕ್ತರಿಂದ ಪರಿಶೀಲನೆ

75ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಭರಪೂರ ಸಿದ್ಧತೆ

Please login to join discussion

Like Us on Facebook

Follow Us on Twitter

Recent News

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group