Friday, July 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

    ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

    Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

    Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

  • Bengaluru Focus

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ ₹5,000 ದಂಡ ಏರಿಕೆ ಮಾಡಿ, ನಿಯಮ ಬಿಗಿಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಪತ್ರ

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

    Namma Metro Green Train

    Namma Metro News | ನಮ್ಮ ಮೆಟ್ರೋ ಹಸಿರು ಮಾರ್ಗ: ವಿದ್ಯುತ್ ವ್ಯತ್ಯಯ ಸರಿಪಡಿಸಿದ ಬೆನ್ನಲ್ಲೇ ಸೇವೆ ಪುನರಾರಂಭ

    BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

    ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

    Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

    Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

  • Bengaluru Focus

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ ₹5,000 ದಂಡ ಏರಿಕೆ ಮಾಡಿ, ನಿಯಮ ಬಿಗಿಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಪತ್ರ

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

    Namma Metro Green Train

    Namma Metro News | ನಮ್ಮ ಮೆಟ್ರೋ ಹಸಿರು ಮಾರ್ಗ: ವಿದ್ಯುತ್ ವ್ಯತ್ಯಯ ಸರಿಪಡಿಸಿದ ಬೆನ್ನಲ್ಲೇ ಸೇವೆ ಪುನರಾರಂಭ

    BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Bengaluruwire BIG IMPACT | ಬಿಬಿಎಂಪಿ ಕಾಯ್ದೆ-2020 ಅಧಿಕಾರ ಪ್ರತ್ಯಾಯೋಜನೆಗೆ ತುರ್ತು ಸಭೆ ಕರೆದ ಮುಖ್ಯ ಆಯುಕ್ತ ಗೌರವ್ ಗುಪ್ತಾ

by Bengaluru Wire Desk
January 12, 2023
in Bengaluru Focus, BW Special
Reading Time: 1 min read
0

ಬೆಂಗಳೂರು, (www.bengaluruwire.com) : “ಆಟಕ್ಕುಂಟು ಲೆಕ್ಕಕ್ಕಿಲ್ಲ ಬಿಬಿಎಂಪಿ ಕಾಯ್ದೆ-2020” ಎಂಬ ಶೀರ್ಷಿಕೆ ಅಡಿಯಲ್ಲಿ “ಬೆಂಗಳೂರು ವೈರ್” ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾಯ್ದೆ- 2020 ಜಾರಿಗೆ ಬಂದು ನಾಲ್ಕು ತಿಂಗಳ ಮೇಲಾದರೂ ವಿವಿಧ ಇಲಾಖೆಗಳಲ್ಲಿ ಅಧಿಕಾರ ಪ್ರತ್ಯಾಯೋಜನೆ (Delegation of Powers) ಆಗಿಲ್ಲ ಎಂದು ಆ.8 ರಂದು ವಿಸ್ತ್ರತ ವರದಿ ಪ್ರಕಟಿಸಿತ್ತು. ಈ ವರದಿಯಿಂದ ಎಚ್ಚೆತ್ತ ಪಾಲಿಕೆ ಆ.9ರಂದು ಮುಖ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಆದಷ್ಟು ಶೀಘ್ರವಾಗಿ ನೂತನ ಕಾಯ್ದೆಯಡಿ ವಿವಿಧ ಹಂತದ ಅಧಿಕಾರಿಗಳಿಗೆ ಅಧಿಕಾರ ಪ್ರತ್ಯಾಯೋಜನೆ ಮಾಡಲು ನಿರ್ಧರಿಸಿದೆ. ಇದು “ಬೆಂಗಳೂರು ವೈರ್” ಇಂಪ್ಯಾಕ್ಟ್.

ನೂತನ ಬಿಬಿಎಂಪಿ ಕಾಯ್ದೆ-2020ರಂತೆ ಪಾಲಿಕೆಯ ವಿವಿಧ ಇಲಾಖೆಗಳಲ್ಲಿ ಹಲವು ಹಂತದ ಅಧಿಕಾರಿಗಳಿಗೆ ಸೂಕ್ತ ರೀತಿಯಲ್ಲಿ ಅಧಿಕಾರ ಹಂಚಿಕೆ ಮಾಡದಿದ್ದರೆ, ಹೇಗೆ ನಗರದ ಅಭಿವೃದ್ಧಿ ಹಾಗೂ ಪಾಲಿಕೆ ಆಡಳಿತದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ ಎಂದು ಕಾಯ್ದೆಯ ವಿವಿಧ ಸೆಕ್ಷನ್ ಗಳನ್ನು ಉಲ್ಲೇಖಿಸಿ ನಿಖರವಾಗಿ ಆ.8ರ ಭಾನುವಾರ ವರದಿ ಮಾಡಿತ್ತು.

ಈ ವರದಿಯನ್ನು ಗಂಭೀರವಾಗಿ ಪರಿಗಣಿಸಿದ ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಸೋಮವಾರ ಮಧ್ಯಾಹ್ನ ನಂತರ ಕೇಂದ್ರ ಕಚೇರಿಯಲ್ಲಿ ತುರ್ತು ಸಭೆ ಕರೆದು, ಮುಖ್ಯ ಆಯುಕ್ತರು, ವಲಯ ಆಯುಕ್ತರಿಂದ ತಮ್ಮ ಕೆಳಹಂತದ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಅಧಿಕಾರ ಪ್ರತ್ಯೋಯೋಚನೆಯನ್ನು ಆದಷ್ಟು ಶೀಘ್ರವಾಗಿ ಅನುಷ್ಠಾನ ಮಾಡಲು ಕ್ರಮ ಕೈಗೊಳ್ಳುವಂತೆ ಕಟ್ಟಪ್ಪಣೆ ಮಾಡಿದರು.

ಆದ್ಯತೆ ಆಧಾರದ ಕೇಂದ್ರ ಕಚೇರಿಯಲ್ಲಿರುವ ಬೃಹತ್ ನೀರುಗಾಲುವೆ, ರಸ್ತೆ ಮತ್ತು ಮೂಲಭೂತ ಸೌಕರ್ಯ, ಘನತ್ಯಾಜ್ಯ ವಿಲೇವಾರಿ, ಆರೋಗ್ಯ, ನಗರ ಯೋಜನೆ ಮತ್ತಿತರ ಇಲಾಖೆಗಳು ಹಾಗೂ ವಲಯ ಮಟ್ಟದಲ್ಲಿ ವಿವಿಧ ಇಲಾಖೆಗಳಲ್ಲಿ ಅಧಿಕಾರ ಪ್ರತ್ಯಾಯೋಜನೆ ತುರ್ತಾಗಿ ನೀಡಬೇಕಾಗಿರುವ ಹುದ್ದೆಗಳನ್ನು ಪಟ್ಟಿ ಮಾಡಿ ಕೇಂದ್ರ ಕಚೇರಿಯ ಆಡಳಿತ ವಿಭಾಗಕ್ಕೆ ನೀಡುವಂತೆ ಮುಖ್ಯ ಆಯುಕ್ತರು ಸಭೆಯಲ್ಲಿ ಸೂಚನೆ ನೀಡಿದ್ದಾರೆ ಎಂದು ಉನ್ನತ ಮೂಲಗಳು “ಬೆಂಗಳೂರು ವೈರ್” ಖಚಿತಪಡಿಸಿವೆ.

ಇದನ್ನೂ ಓದಿ : BW SPECIAL | BBMP IMPACT-2020 | ಆಟಕ್ಕುಂಟು ಲೆಕ್ಕಕ್ಕಿಲ್ಲ ಬಿಬಿಎಂಪಿ ಕಾಯ್ದೆ- 2020…..!

ಇನ್ನೊಂದೆಡೆ ಈತನಕ ಬಿಬಿಎಂಪಿಯಲ್ಲಿರುವ ಕಾನೂನು ವಿಭಾಗ ತನ್ನ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಅಧಿಕಾರ ಪ್ರತ್ಯಾಯೋಜನೆ ವಿಚಾರದಲ್ಲಿ ತನ್ನ ಅಭಿಪ್ರಾಯ ನೀಡಲು ಹಿಂದೆ ಮುಂದೆ ನೋಡುತ್ತಾ ಕಡತವನ್ನು ಆಡಳಿತ ಶಾಖೆ ವರ್ಗಾಯಿಸಿ ಕೈತೊಳೆದುಕೊಂಡಿದ್ದನ್ನು “ಆಟಕ್ಕುಂಟು ಲೆಕ್ಕಕ್ಕಿಲ್ಲ ಬಿಬಿಎಂಪಿ ಕಾಯ್ದೆ-2020” ವಿಶೇಷ ವರದಿಯಲ್ಲಿ ತಿಳಿಸಿತ್ತು. ಅಲ್ಲದೆ ನೂತನ ಬಿಬಿಎಂಪಿ ಕಾಯ್ದೆ-2020ರಲ್ಲಿ ನೂತನ ಕಾಯ್ದೆ ಅನ್ವಯಿಸುವಿಕೆ, ಬೈಲಾ ರಚನೆ ಮತ್ತಿತರ ವಿಷಯಗಳಲ್ಲಿ ಪಾಲಿಕೆಗೆ ನೆರವಾಗುವ ಬಾದ್ಯತೆ ಬಗ್ಗೆ ವರದಿಯಲ್ಲಿ ಬಿಚ್ಚಿಟ್ಟಿತ್ತು. ಈ ಹಿನ್ನಲೆಯಲ್ಲಿ ಈ ವಿಚಾರವೂ ಸಭೆಯಲ್ಲಿ ಚರ್ಚೆಗೆ ಬಂದಿದ್ದು, ವಿವಿಧ ಹಂತದ ಅಧಿಕಾರ ಹಂಚಿಕೆ ಬಗ್ಗೆ ಕಾನೂನು ವಿಭಾಗದಿಂದಲೂ ಕರಡು ಸಿದ್ದಪಡಿಸಿ ಸಲ್ಲಿಸುವಂತೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸೂಚಿಸಿದ್ದಾರೆ.

ಈ ಮಧ್ಯೆ “ಬೆಂಗಳೂರು ವೈರ್”  ಆ.8ರಂದು ವರದಿ ಪ್ರಕಟಿಸಿದ ನಂತರ ಎಚ್ಚೆತ್ತುಕೊಂಡು ಆ.9ರಂದು ಪಾಲಿಕೆ ನೂತನ ಕಾಯ್ದೆಯಡಿ ಪ್ರದತ್ತವಾದ ಅಧಿಕಾರ ಬಳಸಿಕೊಂಡು ಎಂಟು ವಲಯಗಳ ಪೈಕಿ, ಬೆಂಗಳೂರು ದಕ್ಷಿಣ ವಲಯ ಆಯುಕ್ತರೂ ಆಗಿರುವ ಹಣಕಾಸು ವಿಶೇಷ ಆಯುಕ್ತರಾದ ತುಳಸಿ ಮದ್ದಿನೇನಿ ಬಿಬಿಎಂಪಿ ಆಕ್ಟ್-2020ರ ಕಲಂ 74(ಡಿ) ಅಡಿ ನಗರ ಯೋಜನೆ ವಿಭಾಗದಲ್ಲಿನ ಮೂವರು ನಗರ ಯೋಜನೆ ಸಹಾಯಕ ನಿರ್ದೇಶಕರಿಗೆ ಕಟ್ಟಡ ನಕ್ಷೆ ಮಂಜೂರಾತಿ, ನಕ್ಷೆ ಮಂಜೂರಾತಿ ತಿರಸ್ಕರಿಸುವ ಅಧಿಕಾರ, ಸಮಜಾಯುಷಿ ನೀಡುವಂತೆ ಕಾಲಮಿತಿ ನಿಗಧಿಪಡಿಸಿ ನೋಟಿಸ್ ನೀಡುವುದು ಹಾಗೂ ವಿಚಾರಣೆಯ ನಂತರ ಧೃಢೀಕೃತಗೊಳಿಸಲಾಗುವ ಆದೇಶ ಜಾರಿಗೊಳಿಸುವ ಅಧಿಕಾರವನ್ನು ಆ.9ರಿಂದಲೇ ಜಾರಿಗೆ ಬರುವಂತೆ ಅಧಿಕಾರ ಪ್ರತ್ಯಾಯೋಜಿಸಿ ಆದೇಶ ಹೊರಡಿಸಿದ್ದಾರೆ.  

ನಗರ ಸ್ಥಳೀಯ ಆಡಳಿತ ವಿಕೇಂದ್ರೀಕರಣ ದೃಷ್ಟಿಯಿಂದ ಜಾರಿಗೆ ಬಂದ ಬಿಬಿಎಂಪಿ ಕಾಯ್ದೆ-2020 ಮೂಲ ಆಶಯದಂತೆ ಕಾರ್ಯನಿರ್ವಹಿಸಬೇಕು ಎನ್ನುವ ದೃಷ್ಟಿ ಹಾಗೂ ಸಾಮಾಜಿಕ ಕಳಕಳಿಯಿಂದ “ಬೆಂಗಳೂರು ವೈರ್” ಸ್ವತಂತ್ರ ಮತ್ತು ವಾಸ್ತವ ಸುದ್ದಿ ಉದ್ದೇಶ ಇಟ್ಟುಕೊಂಡು ಈ ವರದಿಯನ್ನು ಪ್ರಕಟ ಮಾಡಿತ್ತು. ಈ ವರದಿ ಪ್ರಕಟವಾದ ಬಳಿಕ ಮುಖ್ಯ ಆಯುಕ್ತರು ತುರ್ತು ಸಭೆಯ ನಡೆಸಿದರು. 8 ವಲಯಗಳ ಪೈಕಿ ದಕ್ಷಿಣ ವಲಯ ಆಯುಕ್ತರು ತಮ್ಮ ಅಧಿಕಾರ ಚಲಾಯಿಸಿ ಡೆಲಿಗೇಷನ್ ಆಫ್ ಪವರ್ ಹಂಚಿಕೆ ಮಾಡಿದರು. ಅದೇ ರೀತಿ ಉಳಿದ ವಲಯಗಳ ಆಯುಕ್ತರು ಶೀಘ್ರದಲ್ಲೇ ಅಧಿಕಾರ ಪ್ರತ್ಯಾಯೋಜನೆ ಮಾಡಲಿದ್ದಾರೆ ಎಂದು “ಬೆಂಗಳೂರು ವೈರ್” ಗೆ ಮಾಹಿತಿ ಲಭ್ಯವಾಗಿದೆ.

WhatsApp Join our WhatsApp Channel
Previous Post

ಸರ್ಕಾರಿ ಇಲಾಖೆಗಳ ಸಭೆಯಲ್ಲಿ ಹೂಗುಚ್ಛ, ಹಾರ- ತುರಾಯಿ ನಿಷೇಧ : ಕನ್ನಡ ಪುಸ್ತಕ ನೀಡಲು ಆದೇಶಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Next Post

Namma Metro News | ನಾಯಂಡನಹಳ್ಳಿ – ಕೆಂಗೇರಿ ನೂತನ ಮೆಟ್ರೋ ಮಾರ್ಗದಲ್ಲಿ ರೈಲ್ವೆ ಸುರಕ್ಷತಾ ಆಯುಕ್ತರಿಂದ ಪರಿಶೀಲನೆ

Next Post

Namma Metro News | ನಾಯಂಡನಹಳ್ಳಿ - ಕೆಂಗೇರಿ ನೂತನ ಮೆಟ್ರೋ ಮಾರ್ಗದಲ್ಲಿ ರೈಲ್ವೆ ಸುರಕ್ಷತಾ ಆಯುಕ್ತರಿಂದ ಪರಿಶೀಲನೆ

75ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಭರಪೂರ ಸಿದ್ಧತೆ

Please login to join discussion

Like Us on Facebook

Follow Us on Twitter

Recent News

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

July 23, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

July 23, 2026

ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

July 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group